Sunday, June 22, 2025

ಸತ್ಯ | ನ್ಯಾಯ |ಧರ್ಮ

ಕಾಸಿಗಾಗಿ ಸೀಟು ಹಗರಣ: ಚೈತ್ರಾ ಕುಂದಾಪುರ ಪ್ರಕರಣದ ಕುರಿತು ಮೊದಲ ಸಲ ಪ್ರತಿಕ್ರಿಯಿಸಿದ ಬಿಜೆಪಿ

ನಮ್ಮ ಪಕ್ಷಕ್ಕೂ ಚೈತ್ರಾ ಕುಂದಾಪುರ ಎನ್ನುವವರಿಗೂ ಸಂಬಂಧವಿಲ್ಲವೆಂದ ಮಾಜಿ ಸಿ ಎಮ್

ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಕಠಿಣ ಶಿಕ್ಷೆ ಆಗಲಿ, ಸ್ವಾಮೀಜಿ ಅಲ್ಪ ಯಾರೇ ಇದ್ದರೂ ಅವರ ಬಂಧನ ಆಗಬೇಕು” ಎಂದರು.

“ಟಿಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇದೆಯೆಂದು ಅರ್ಥವಲ್ಲ. ತನಿಖೆ ಆಗಲಿ, ಆ ದೊಡ್ಡ ದೊಡ್ಡವರು ಯಾರು ಎನ್ನುವುದು ಹೊರಬರಲಿ” ಎಂದು ಬೊಮ್ಮಾಯಿವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page