ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಛೇರಿ ಮತ್ತು ಮುಖ್ಯಮಂತ್ರಿಗಳ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಇ ಮೇಲ್ ಮೂಲಕ ಬಾಂಬ್ ದಾಳಿಯ ಸಂದೇಶ ಬರುತ್ತಿದ್ದಂತೆ, ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ದೌಡಾಯಿಸಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿ ಮಾಡುವುದಾಗಿ ಬಾಂಬ್ ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ. ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಸಂದೇಶ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಟ್ರಿಯ ದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಮ್ ಸಲ್ಫರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್ಪೋರ್ಟ್ ಕಛೇರಿ ಮತ್ತು ಸಿಎಂ ಮನೆಗೆ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುತ್ತೇವೆ. ಸವುಕ್ಕು ಶಂಕರ್ ಮತ್ತು ಕಸಬ್ (ತಾಜ್ ಅಟ್ಯಾಕ್)ನನ್ನು ಗಲ್ಲಿಗೇರಿಸಿದ್ದಕ್ಕೆ ಇದು ಪ್ರತಿಕಾರ ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.