Home ಬ್ರೇಕಿಂಗ್ ಸುದ್ದಿ ರಾಮೇಶ್ವರಂ ಕೆಫೆ ಪ್ರಕರಣ : ಬಾಂಬರ್ ನ ರೇಖಾಚಿತ್ರ ಬಿಡುಗಡೆ ಮಾಡಿದ NIA

ರಾಮೇಶ್ವರಂ ಕೆಫೆ ಪ್ರಕರಣ : ಬಾಂಬರ್ ನ ರೇಖಾಚಿತ್ರ ಬಿಡುಗಡೆ ಮಾಡಿದ NIA

0

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ NIA ತನಿಖೆ ನಡೆಸುತ್ತಿದೆ. ಪ್ರಕರಣದ ಸಂಬಂಧ ಈಗ NIA ಪ್ರಮುಖ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.

ಈ ನಡುವೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ನ ಪತ್ತೆಗಾಗಿ ಈಗಾಗಲೇ ಪೊಲೀಸರು ತೀವ್ರ ತನಿಖೆಯಲ್ಲಿ ತೊಡಗಿದ್ದಾರೆ. ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದೆ. ನಿನ್ನೆಯಷ್ಟೇ ಶಂಕಿತ ಬಾಂಬರ್​ ಓಡಾಡಿದ ಸಿಸಿ ಟಿವಿ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್‌ ನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

You cannot copy content of this page

Exit mobile version