ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆದಿರುವ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ರಾಜ್ಯದ ನಿಲುವನ್ನು ಸ್ಪಷ್ಟಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಗಡಿ ವಿವಾದದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದಿದ್ದಾರೆ, ಅಲ್ಲಿ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ. ರಾಜ್ಯ ಪುನರ್ವಿಂಗಡಣೆ ಕಾಯ್ದೆಯ ನಂತರ ಇಲ್ಲಿಯವರೆಗೆ ನಡೆದಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ನಾನು ವಿವರಗಳನ್ನು ಹಂಚಿಕೊಳ್ಳುತ್ತೇನೆ- ಸದ್ಯಕ್ಕೆ ಪ್ರಕರಣವು ಸುಪ್ರೀಂ ಕೋರ್ಟ್ ಮುಂದೆ ಇದೆ. ಈ ಹಿನ್ನಲೆಯಲ್ಲಿ ಬುಧವಾರ ಸಂಜೆ ನವದೆಹಲಿಯಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಗಡಿ ವಿವಾದವು ಕಳೆದ ವಾರ ತೀವ್ರಗೊಂಡಿತ್ತು, ಎರಡೂ ಕಡೆಯ ವಾಹನಗಳನ್ನು ಗುರಿಯಾಗಿಸಲಾಯಿತು, ಎರಡೂ ರಾಜ್ಯಗಳ ನಾಯಕರು ಮತ್ತು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣದ ನಡುವೆ ಕನ್ನಡ ಮತ್ತು ಮರಾಠಿ ಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.ಇದಾದ ನಂತರ, ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ದೂರವಾಣಿಯಲ್ಲಿ ಪರಸ್ಪರ ಮಾತನಾಡಿ, ಎರಡೂ ಕಡೆ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡಿದ್ದರು.