Monday, June 23, 2025

ಸತ್ಯ | ನ್ಯಾಯ |ಧರ್ಮ

ಮಣಿಪುರದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳ ಬರ್ಬರ ಹತ್ಯೆ

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಗಲಭೆ ಸಮಯದಲ್ಲಿ ನಡೆದ ದೌರ್ಜನ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಕೆಲ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸದ್ಯ ಅವರ ಮೃತ ದೇಹಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಳೆದ ವಾರ, ಗಲಭೆಗಳು ಮತ್ತು ಆಂದೋಲನಗಳ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಿತು. ಇಂಟರ್ನೆಟೆ ಸೇವೆ ಚಾಲೂ ಆಗುತ್ತಿದ್ದಂತೆ ಸೋಮವಾರದಿಂದ ಈ ಫೋಟೋಗಳು ವೈರಲ್ ಆಗಿವೆ. ಇಬ್ಬರು ವಿದ್ಯಾರ್ಥಿಗಳನ್ನು ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಅಪಹರಿಸಿ ಕೊಂದಿರುವುದಾಗಿ ಸುದ್ದಿಯಾಗುತ್ತಿದೆ. ಒಂದು ಫೋಟೋದಲ್ಲಿ, ವಿದ್ಯಾರ್ಥಿಗಳನ್ನು ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ, ಅವರ ಹಿಂದೆ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದಾರೆ. ವಿದ್ಯಾರ್ಥಿಗಳ ಮೃತದೇಹಗಳನ್ನು ಪೊದೆಗಳ ಮಧ್ಯೆ ಎಸೆದಿರುವ ಮತ್ತೊಂದು ಫೋಟೋ ಕೂಡ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಕೊಲೆಯಾದ ವಿದ್ಯಾರ್ಥಿಗಳನ್ನು 17 ವರ್ಷದ ಬಾಲಕಿ ಮತ್ತು 20 ವರ್ಷದ ಮೈಟಿ ಸಮುದಾಯದ ಹುಡುಗ ಎಂದು ಗುರುತಿಸಲಾಗಿದೆ. ಜುಲೈ 6ರಿಂದ ಇಬ್ಬರೂ ನಾಪತ್ತೆಯಾಗಿದ್ದಾರೆ. ಜುಲೈ 6ರಂದು ನಿರ್ಬಂಧಗಳನ್ನು ಸಡಿಲಿಸಿದ್ದರಿಂದ, ಹುಡುಗಿ NEET ಕೋಚಿಂಗ್‌ಗಾಗಿ ಮನೆಯಿಂದ ಹೊರಟಿದ್ದಳು. ಪರಿಸ್ಥಿತಿ ಶಾಂತವಾಗಿದೆ ಎಂದು ಭಾವಿಸಿದ ಅವಳು ನಂತರ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಲಾಂಗ್ ಡ್ರೈವ್‌ಗೆ ಹೋದಳು. ಅಂದಿನಿಂದ, ಅವರ ಯಾವುದೇ ಸುದ್ದಿ ಇದ್ದಿರಲಿಲ್ಲ. ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಆ ಸಮಯದಲ್ಲಿ ಅವರು ಇಂಫಾಲ್ ಬಳಿಯ ನಂಬೋಲ್ ಕಡೆಗೆ ಹೋಗಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ ಎಂದು ಪೊಲೀಸರು ಬಹಿರಂಗಪಡಿಸಿದರು. ಈಗ ಶಸ್ತ್ರಸಜ್ಜಿತ ವ್ಯಕ್ತಿಗಳು ಅವರನ್ನು ಅಪಹರಿಸಿ ಕೊಂದಿರಬಹುದು ಎಂದು ನಂಬಲಾಗಿದೆ.

ಏತನ್ಮಧ್ಯೆ, ಘಟನೆಯ ಕುರಿತು ಸಿಬಿಐ ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದೆ ಎಂದು ಮಣಿಪುರ ಸರ್ಕಾರ ತನ್ನ ಹೇಳಿಕೆಯಲ್ಲಿ ಬಹಿರಂಗಪಡಿಸಿದೆ. ಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮತ್ತೊಂದೆಡೆ ಕುಕಿ ಸಮುದಾಯಕ್ಕೆ ಸೇರಿದ ಪುಂಡರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page