Home ಅಪರಾಧ ತಮಿಳುನಾಡು: ಬಿಎಸ್ಪಿ ಅಧ್ಯಕ್ಷನ ಬರ್ಬರ ಹತ್ಯೆ

ತಮಿಳುನಾಡು: ಬಿಎಸ್ಪಿ ಅಧ್ಯಕ್ಷನ ಬರ್ಬರ ಹತ್ಯೆ

0

ಚೆನ್ನೈ, ಜುಲೈ 5: ತಮಿಳುನಾಡು ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಶುಕ್ರವಾರ ಸೇಂಬಿಯಂ ಪ್ರದೇಶದಲ್ಲಿ ಆರ್ಮ್‌ಸ್ಟ್ರಾಂಗ್ ಅವರ ಮನೆಯ ಬಳಿ ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರು ಮಂದಿ ವ್ಯಕ್ತಿಗಳು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಏತನ್ಮಧ್ಯೆ, ಕಳೆದ ವರ್ಷ‌ ನಡೆದ ದರೋಡೆಕೋರ ಆರ್ಕಾಟ್ ಸುರೇಶ್ ಹತ್ಯೆಗೆ ಪ್ರತೀಕಾರವಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತೀವ್ರವಾಗಿ ಖಂಡಿಸಿದ್ದಾರೆ.

You cannot copy content of this page

Exit mobile version