Home ರಾಜ್ಯ ಬೆಳಗಾವಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವ್ಯಚ್ಯ ಪದ ಬಳಕೆ ಅದೊಂದು ಕೆಟ್ಟ ಘಳಿಗೆ ಎಂದ ಸಿ.ಟಿ ರವಿ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವ್ಯಚ್ಯ ಪದ ಬಳಕೆ ಅದೊಂದು ಕೆಟ್ಟ ಘಳಿಗೆ ಎಂದ ಸಿ.ಟಿ ರವಿ

ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವ್ಯಚ್ಯ ಪದ ಬಳಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಿಟಿ ರವಿ ಪ್ರತಿಕ್ರಿಯಿಸಿದ್ದು, ಅದೊಂದು ಕೆಟ್ಟ ಘಳಿಗೆ ಎಂದು ಹೇಳಿದರು.ಚಳಿಗಾಲದ ಅಧಿವೇಶನದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ ಸಿಟಿ ರವಿ ತಮ್ಮ ಪತ್ನಿಯೊಂದಿಗೆ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ಬಗ್ಗೆ ಮಾತನಾಡಿದ ಸಿಟಿ ರವಿ, ಡಿಸೆಂಬರ್ ನಲ್ಲಿ ನಡೆದ ಘಟನೆಯ ಹಿನ್ನೆಲೆ ಕಾರ್ಯಕರ್ತರು ಹರಕೆಯನ್ನು ಹೊತ್ತಿದ್ರು. ದಕ್ಷಿಣ ಕಪಿಲೇಶ್ವರ ದೇವಾಲಯದಲ್ಲಿ ಜಲಾಭಿಷೇಕ ಮಾಡಿದ್ದೇನೆ. ನನ್ನೊಳಿಗಿನ ಕೆಟ್ಟ ಗುಣಗಳು ದೂರವಾಗಲಿ. ನಮ್ಮಿಂದ ಯಾರಿಗೂ ಕೆಟ್ಟದ್ದು ಆಗೋದು ಬೇಡ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದರು.ಅಲ್ಲದೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಪದದಲ್ಲಿ ನಿಂದಿಸಿರುವುದು ಅದೊಂದು ಕೆಟ್ಟ ಘಳಿಗೆ ಅದರ ವಿಷಯವಾಗಿ ಮಾತಾಡಲ್ಲ, ಎಲ್ಲರಿಗೂ ಒಳ್ಳೆಯದಾಗಲಿ ಎಂದಷ್ಟೇ ಹೇಳುತ್ತೇನೆ ಎಂದು ಸಿಟಿ ರವಿ ಹೇಳಿದರು.

You cannot copy content of this page

Exit mobile version