Tuesday, January 13, 2026

ಸತ್ಯ | ನ್ಯಾಯ |ಧರ್ಮ

ಒಳಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ ; ನೇಮಕಾತಿ ಪ್ರಕ್ರಿಯೆಗೆ ತಡೆ

ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಹು ಬೇಡಿಕೆಯ ಮತ್ತು ಅಷ್ಟೇ ನಿರೀಕ್ಷೆ ಇಟ್ಟುಕೊಂಡಿದ್ದ ಒಳಮೀಸಲಾತಿ ಜಾರಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂತಹದ್ದೊಂದು ಮಹತ್ವದ ನಿರ್ಧಾರದ ಮೂಲಕ ಅಂತಿಮವಾಗಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿದ್ದರಾಮ್ಯಯ ಸಚಿವ ಸಂಪುಟ ತೀರ್ಮಾನ ಮಾಡಿದೆ.

ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಆಯೋಗಕ್ಕೆ ಮೂರು ತಿಂಗಳ ಗಡುವು ನೀಡಿ, ಮೂರು ತಿಂಗಳೊಳಗಾಗಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಹೀಗಾಗಿ ಮುಂದಿನ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದ್ದು, ಇಂದಿನಿಂದ ಯಾವುದೇ ನೇಮಕಾತಿ ನೋಟಿಫಿಕೇಶನ್ ಆದ್ರೆ ಆಯೋಗದರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page