ಹಾಸನ: ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಶ್ರೀನಗರ ನಿವಾಸಿ ಆದಿಲ್ ಪಾಷಾ (29), ಅಂಬೇಡ್ಕರ್ ನಗರ ನಿವಾಸಿ ಮಹಮದ್ ಸಬ್ರಿಜ್ ಕಾಲು ಹಾಗೂ ಹಳೇಬೀಡು ತರಗಿನ ಪೇಟೆ ಗೋವಿಂದ (40) ಬಂಧಿತ ಆರೋಪಿಗಳು.
ಏನಿದು ಪ್ರಕರಣ-1?
ಫೆ. 3 ರಂದು ಹಾಸನದ ದೇವೇಗೌಡ ನಗರದ ಬಸ್ಸು ನಿಲ್ದಾಣದ ಹತ್ತಿರ ಇಬ್ಬರು ವ್ಯಕ್ತಿಗಳು ಗಾಂಜಾವನ್ನು ತರುತ್ತಿದ್ದಾರೆಂದು ಹಾಸನ ನಗರ ಠಾಣೆಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆದಿಲ್ ಆದಿಲ್ ಪಾಷಾ ಹಾಗೂ ಮಹಮದ್ ಸಬ್ರಿಜ್ ಕಾಲುನನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 1301 ಗ್ರಾಂ ತೂಕವುಳ್ಳ ಅಂದಾಜು ಬೆಲೆ 2,08,500 ರೂ. ಬೆಲೆಬಾಳುವ ಗಾಂಜಾಸೊಪ್ಪು ಹಾಗು ಒಂದು ಓಪೋ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಾಸನದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ 2:
ಹಗರೆ-ಹಳೇಬೀಡು ರಸ್ತೆ ಪುಷ್ಪಗಿರಿ ಬೆಟ್ಟದ ಹತ್ತಿರ ಬಂಡಾರಿಕಟ್ಟೆ ಬಸ್ ನಿಲ್ದಾಣದಲ್ಲಿ ಒಂದು ಪ್ಲಾಸ್ಟಿಕ್ ಕವರ್ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹಳೇಬೀಡು ಠಾಣೆ ಪೊಲೀಸರು ದಾಳಿ ನಡೆಸಿ ಬಸ್ ನಿಲ್ದಾಣದೊಳಗೆ ಕುಳಿತುಕೊಂಡಿದ್ದ ಹಳೇಬೀಡಿನ ನಯನ ಕ್ಷತ್ರಿಯ ಕಟಿಂಗ್ ಶಾಪ್ನಲ್ಲಿ ಕೆಲಸ ಮಾಡಿಕೊಂಡಿದ್ದ ತರಗಿನಪೇಟೆ ನಿವಾಸಿ ಗೋವಿಂದನ ಬಳಿಯಿದ್ದ ೫೧೦ ಗ್ರಾಂ ತೂಕವುಳ್ಳ ಗಾಂಜಾ ಸೊಪ್ಪನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.
