Thursday, June 26, 2025

ಸತ್ಯ | ನ್ಯಾಯ |ಧರ್ಮ

2022 ರ ಪ್ರಕರಣ ; ಸಿಎಂ, ಡಿಸಿಎಂ ಗೆ ಸಮನ್ಸ್ ಜಾರಿ

ಕಾನೂನು ಬಾಹಿರ ಪ್ರತಿಭಟನೆ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹೂಡಿದ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರ ಮೇಲೂ ಸಮನ್ಸ್ ಜಾರಿ ಮಾಡಲಾಗಿದೆ.

ವಿಲ್ಸನ್ ಗಾರ್ಡನ್ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ACMM ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಯ ಕಾನೂನುಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೆಸ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ಎಸಿಎಂಎಂ ಸಮನ್ಸ್ ನೀಡಲಾಗಿದ್ದು, ಆಗಸ್ಟ್ 29 ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರಿಗೂ ಇದೀಗ ಸಮನ್ಸ್ ನೀಡಲಾಗಿದೆ.

2022 ರಲ್ಲಿ ಕಾಂಗ್ರೆಸ್ ಪ್ರತಿ ಪಕ್ಷದಲ್ಲಿ ಇದ್ದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 102 ಜನರ ಮೇಲೆ ಕೇಸ್ ದಾಖಲಾಗಿತ್ತು. ಹೀಗಾಗಿ ಇಂದು ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯ ಖುದ್ದು ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 102 ಜನರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page