Monday, January 26, 2026

ಸತ್ಯ | ನ್ಯಾಯ |ಧರ್ಮ

ಗಾಂಧೀಜಿ, ಪೊಲೀಸ್ ಅಧಿಕಾರಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಯತಿ ನರಸಿಂಹಾನಂದನ ಮೇಲೆ ಕೇಸ್ ದಾಖಲು

ಗಾಜಿಯಾಬಾದ್: ಗಾಂಧೀಜಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಡಿಯೋಗಳನ್ನು ಆಧರಿಸಿ ದಾಸ್ನಾ ದೇವಾಲಯದ ಅರ್ಚಕ ಯತಿ ನರಸಿಂಹಾನಂದ ಗಿರಿ ಸ್ವಾಮೀಜಿಯ ವಿರುದ್ಧ ಮಾರ್ಚ್ 22, ಶನಿವಾರ ಅಧಿಕೃತವಾಗಿ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ನರಸಿಂಹಾನಂದ ಗಿರಿ ಸ್ವಾಮೀಜಿ ವಿರುದ್ಧ ಉಪ ಪೊಲೀಸ್ ಆಯುಕ್ತ ಸುರೇಂದ್ರ ನಾಥ್ ತಿವಾರಿ ಅವರು ವೇವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ಹೇಳಿಕೆಗಳು ಕೋಮು ಸಾಮರಸ್ಯ ಕೆರಳಿಸುವ ಉದ್ದೇಶವನ್ನು ಹೊಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅರ್ಚಕ ಯತಿ ನರಸಿಂಹಾನಂದ ಮಹಾತ್ಮ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಮೂಲಕ ಕ್ರಿಮಿನಲ್ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತ ಸುರೇಂದ್ರನಾಥ್ ತಿವಾರಿ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸ್ವಾಮೀಜಿ ಅವರು ಮಾತನಾಡಿರುವ ವಿಡಿಯೊದಲ್ಲಿ ಗಾಜಿಯಾಬಾದ್ ಪೊಲೀಸ್ ಆಯುಕ್ತ ಮತ್ತು ಲೋನಿಯ ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದೂ ಸುರೇಂದ್ರ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page