ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆಗಿನ ಮಹತ್ವದ ಸಭೆಯಲ್ಲಿ ಜಾತಿಗಣತಿ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಜಾತಿಗಣತಿ ನಡೆದು 9 ರಿಂದ 10 ವರ್ಷ ಕಳೆದಿದೆ. ಹೀಗಾಗಿ ಈಗ ಜಾತಿಗಣತಿ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಒಳಗೊಂಡ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಾತಿ ಜಾತಿಗಣತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಜಾತಿಗಣತಿ ವರದಿ ವಿಚಾರವಾಗಿ ಜೂನ್ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಜಾತಿಗಣತಿಯಲ್ಲಿ ಅಂಕಿ-ಸಂಖ್ಯೆಗಳನ್ನು ಪುನರ್ ಪರಿಶೀಲಿಸುವಂತೆ ಸೂಚನೆ ನೀಡಿದ್ದೇವೆ. ಈ ವಿಚಾರಗಳನ್ನು ಬಿಟ್ಟು ಬೇರೆ ಯಾವುದೇ ವಿಚಾರವನ್ನು ಚರ್ಚೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.