<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ &#8211; Peepal Media</title>
	<atom:link href="https://peepalmedia.com/category/%E0%B2%9F%E0%B3%8D%E0%B2%B0%E0%B3%86%E0%B2%82%E0%B2%A1%E0%B2%BF%E0%B2%82%E0%B2%97%E0%B3%8D-%E0%B2%B8%E0%B3%81%E0%B2%A6%E0%B3%8D%E0%B2%A6%E0%B2%BF-%E0%B2%B5%E0%B3%88%E0%B2%B0%E0%B2%B2%E0%B3%8D/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 17 Oct 2025 09:17:20 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕೊಟ್ಟ ಮಾತಿಗೆ ತಪ್ಪಲು ನಾನು ಮೋದಿ ಅಲ್ಲ &#8211; ಸಿಎಂ ಸಿದ್ದರಾಮಯ್ಯ</title>
		<link>https://peepalmedia.com/i-am-not-modi-to-break-my-word-cm-siddaramaiah/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Oct 2025 09:17:20 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[news]]></category>
		<category><![CDATA[peepal]]></category>
		<guid isPermaLink="false">https://peepalmedia.com/?p=67998</guid>

					<description><![CDATA[ಮೈಸೂರು :&#160; ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು,&#160; ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು ಕೊಟ್ಟ [&#8230;]]]></description>
										<content:encoded><![CDATA[
<p>ಮೈಸೂರು :&nbsp; ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು,&nbsp; ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು.</p>



<p>ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು</p>



<p>ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು.</p>



<p>ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು.</p>



<p>ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು.</p>



<p>ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದ ಸಿಎಂ ಸಿದ್ದರಾಮಯ್ಯ ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ&nbsp;ಎಂದರು.</p>
]]></content:encoded>
					
		
		
			</item>
		<item>
		<title>ಹುಲಿ ಸೆರೆಗೆಂದು ಕೂಂಬಿಂಗ್ ವೇಳೆ ಯುವಕನ ಮೇಲೆ ವ್ಯಾಘ್ರ ಅಟ್ಯಾಕ್‌ ಮುಖ ಛಿದ್ರ</title>
		<link>https://peepalmedia.com/tiger-attacks-young-man-leaving-him-with-face-lacerations/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Oct 2025 08:49:18 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[news]]></category>
		<category><![CDATA[peepal]]></category>
		<guid isPermaLink="false">https://peepalmedia.com/?p=67991</guid>

					<description><![CDATA[ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿ (Tiger) ಸೆರೆಗೆಂದು ಕೂಂಬಿಂಗ್ ನಡೆಸುತ್ತಿದ್ದಾಗ ಹತ್ತಿರದಲ್ಲೇ ಹತ್ತಿ ಬಿಡಿಸುತ್ತಿದ್ದ ರೈತನ (Farmer) ಮೇಲೆ ವ್ಯಾಘ್ರ ಅಟ್ಯಾಕ್‌ ಮಾಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ತೀವ್ರ ದಾಳಿಯಿಂದಾಗಿ ರೈತನ ಮುಖ ಛಿದ್ರಛಿದ್ರವಾಗಿದೆ. ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರದಲ್ಲಿ ನಡೆದಿದೆ. ಮೈಸೂರು ದಸರಾದ ಜನಪ್ರಿಯ ಆನೆ ಭೀಮನನ್ನು ಬಳಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಲ್ಲೇ ಹತ್ತಿರದ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ಮಾದೇಗೌಡನ ಮೇಲೆ [&#8230;]]]></description>
										<content:encoded><![CDATA[
<p>ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿ (Tiger) ಸೆರೆಗೆಂದು ಕೂಂಬಿಂಗ್ ನಡೆಸುತ್ತಿದ್ದಾಗ ಹತ್ತಿರದಲ್ಲೇ ಹತ್ತಿ ಬಿಡಿಸುತ್ತಿದ್ದ ರೈತನ (Farmer) ಮೇಲೆ ವ್ಯಾಘ್ರ ಅಟ್ಯಾಕ್‌ ಮಾಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ತೀವ್ರ ದಾಳಿಯಿಂದಾಗಿ ರೈತನ ಮುಖ ಛಿದ್ರಛಿದ್ರವಾಗಿದೆ.</p>



<p>ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರದಲ್ಲಿ ನಡೆದಿದೆ. ಮೈಸೂರು ದಸರಾದ ಜನಪ್ರಿಯ ಆನೆ ಭೀಮನನ್ನು ಬಳಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಲ್ಲೇ ಹತ್ತಿರದ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ಮಾದೇಗೌಡನ ಮೇಲೆ ವ್ಯಾಘ್ರ ಎರಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಮೈಸೂರಿಗೆ ರವಾನೆ ಮಾಡಲಾಗಿದೆ.</p>



<p>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ನುಗು ವನ್ಯಜೀವಿ ವಲಯದ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಕಳೆದ ವಾರದಿಂದ ಹುಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದರಿಂದಾಗಿ ಗ್ರಾಮಸ್ಥರು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆ 4-5 ದಿನಗಳಿಂದ ಹುಲಿ ಸೆರೆಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿತ್ತು. ಇದಲ್ಲದೆ ಬೋನ್ ಇರಿಸಿತ್ತು.</p>



<p>ಗುರುವಾರ ಮತ್ತೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವಾಗ ಹುಲಿಯು ಗ್ರಾಮದ ಬೋಳೆಗೌಡನಕಟ್ಟೆ ಕೆರೆ ಬಳಿ ಅವಿತು ಕುಳಿತಿತ್ತು. ಇದನ್ನು ಕಂಡ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಬಳಿ ಯಾರು ಹೋಗದಂತೆ ಎಚ್ಚರಿಕೆ ನೀಡಿದ್ದರು. ಆದರೆ ಹುಲಿ ಗಾಬರಿಗೊಂಡು ಕುಮಾರ್ ಎಂಬುವರ ತೋಟದ ಕಡೆಗೆ ಓಡಿದೆ. ನಂತರ ಅಲ್ಲಿಂದ ನುಗು ಅರಣ್ಯದ ಕಡೆಗೆ ಓಡಿ ಹೋಗಿ ಪೊದೆಯಲ್ಲಿ ಅವಿತು ಕುಳಿತಿತ್ತು.</p>



<p>ಹುಲಿ ಸೆರೆಗೆ ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾಗ ಹೆದರಿ ಪೊದೆಯಿಂದ ಆಚೆ ಬಂದ ಹುಲಿ ಕಾಡಿನತ್ತ ಓಡಿದೆ. ಆಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹದೇವ್ ಅವರ ಮೇಲೆ ದಾಳಿ ಮಾಡಿದೆ. ಮಹದೇವ್‌ ಅವರ ಮುಖ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ತೀವ್ರ ರಕ್ತಸ್ರಾವದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿನಿಯರ ಬಟ್ಟೆ ಬದಲಾಯಿಸು ವಿಡಿಯೋ ಚಿತ್ರೀಕರಣ 3 ವಿದ್ಯಾರ್ಥಿಳು ಅಂದರ್</title>
		<link>https://peepalmedia.com/video-recording-of-changing-clothes-of-female-students/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Oct 2025 08:44:42 +0000</pubDate>
				<category><![CDATA[ಅಪರಾಧ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಮೀಡಿಯಾ]]></category>
		<guid isPermaLink="false">https://peepalmedia.com/?p=67987</guid>

					<description><![CDATA[ಮಧ್ಯಪ್ರದೇಶದ (Madhya Pradesh) ಮಂದೌರ್ ಜಿಲ್ಲೆಯ ಸರ್ಕಾರಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನಲೆ ತರಗತಿಯಲ್ಲಿ ಬಟ್ಟೆ (Crime) ಬದಲಾಯಿಸುತ್ತಿದ್ದಾಗ ಹುಡುಗಿಯರ ವಿಡಿಯೋ (Obscene Video) ರೆಕಾರ್ಡ್ ಮಾಡಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂದೌರ್ ಜಿಲ್ಲೆಯ ಭಾನಪುರ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನಲೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸಿಕೊಳ್ಳುತ್ತಿದ್ದರು. ಈ ಬಗ್ಗೆ ತಿಳಿದ ನಾಲ್ವರು ವಿದ್ಯಾರ್ಥಿಗಳು ಶಾಲಾ ಕೊಠಡಿಯ ಬಾಗಿಲಿನ ಮೇಲಿದ್ದ ಸಣ್ಣ ಜಾಗದಿಂದ ವಿಡಿಯೋ ಮಾಡಿದ್ದಾರೆ. ಅಲ್ಲದೇ ಒಬ್ಬರ ಮೇಲೆ ಒಬ್ಬರು ಹತ್ತಿ ಬಟ್ಟೆ [&#8230;]]]></description>
										<content:encoded><![CDATA[
<p>ಮಧ್ಯಪ್ರದೇಶದ (Madhya Pradesh) ಮಂದೌರ್ ಜಿಲ್ಲೆಯ ಸರ್ಕಾರಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನಲೆ ತರಗತಿಯಲ್ಲಿ ಬಟ್ಟೆ (Crime) ಬದಲಾಯಿಸುತ್ತಿದ್ದಾಗ ಹುಡುಗಿಯರ ವಿಡಿಯೋ (Obscene Video) ರೆಕಾರ್ಡ್ ಮಾಡಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>



<p>ಮಂದೌರ್ ಜಿಲ್ಲೆಯ ಭಾನಪುರ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನಲೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸಿಕೊಳ್ಳುತ್ತಿದ್ದರು. ಈ ಬಗ್ಗೆ ತಿಳಿದ ನಾಲ್ವರು ವಿದ್ಯಾರ್ಥಿಗಳು ಶಾಲಾ ಕೊಠಡಿಯ ಬಾಗಿಲಿನ ಮೇಲಿದ್ದ ಸಣ್ಣ ಜಾಗದಿಂದ ವಿಡಿಯೋ ಮಾಡಿದ್ದಾರೆ.</p>



<p>ಅಲ್ಲದೇ ಒಬ್ಬರ ಮೇಲೆ ಒಬ್ಬರು ಹತ್ತಿ ಬಟ್ಟೆ ಬದಲಾಯಿಸಿಕೊಳ್ಳುತ್ತಿರುವುದನ್ನು ನೋಡಿದ್ದಾರೆ. ಇದೀಗ ವಿದ್ಯಾರ್ಥಿಗಳ ಈ ಕೃತ್ಯದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಲೇಜಿನ ಪ್ರಿನ್ಸಿಪಾಲ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.  ಸದ್ಯ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರನ್ನು ಬಂಧಿಸಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಇನ್ನು ಬಂಧಿತರೆಲ್ಲರೂ 20 ರಿಂದ 22 ವರ್ಷ ವಯಸ್ಸಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದ್ದು,  ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>
]]></content:encoded>
					
		
		
			</item>
		<item>
		<title> ಪ್ರಿಯಾಂಕ್‌ ಖರ್ಗೆಗೆ ಜೀವಬೆದರಿಕೆ ಆರೋಪಿ ಅರೆಸ್ಟ್‌ – ಗೃಹಸಚಿವ ಪರಮೇಶ್ವರ್</title>
		<link>https://peepalmedia.com/accused-of-threatening-life-to-priyank-kharge-arrested-home-minister/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Oct 2025 08:36:08 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ತುಮಕೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[ರಾಜ್ಯ]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=67975</guid>

					<description><![CDATA[ತುಮಕೂರು : ಸಚಿವ ಪ್ರಿಯಾಂಕ್ ಖರ್ಗೆಗೆ‌ (Priyank Kharge) ಅವರಿಗೆ ಬೆದರಿಕೆ (Threat) ಹಾಕಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಲಾಗಿದ್ದು, ಇಲ್ಲಿಗೆ ತರಲಾಗಿದೆ. ಆರೋಪಿ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ‌ ಅವರಿಗೆ ಬೆದರಿಕೆ ಹಾಕಿದ ವಿಚಾರ ತುಂಬಾ ಗಂಭೀರವಾದುದು. ಈ ಹಿನ್ನೆಲೆ ಅವರ ಭದ್ರತೆಯನ್ನು ಹೆಚ್ಚಿಸುತ್ತೇವೆ. ಆರೋಪಿ ಹಿಂದೆ ಯಾರಾದರೂ ಇದ್ದಾರ [&#8230;]]]></description>
										<content:encoded><![CDATA[
<p><strong>ತುಮಕೂರು :</strong> ಸಚಿವ ಪ್ರಿಯಾಂಕ್ ಖರ್ಗೆಗೆ‌ (Priyank Kharge) ಅವರಿಗೆ ಬೆದರಿಕೆ (Threat) ಹಾಕಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಲಾಗಿದ್ದು, ಇಲ್ಲಿಗೆ ತರಲಾಗಿದೆ. ಆರೋಪಿ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಹೇಳಿಕೆ ನೀಡಿದ್ದಾರೆ.</p>



<p>ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ‌ ಅವರಿಗೆ ಬೆದರಿಕೆ ಹಾಕಿದ ವಿಚಾರ ತುಂಬಾ ಗಂಭೀರವಾದುದು. ಈ ಹಿನ್ನೆಲೆ ಅವರ ಭದ್ರತೆಯನ್ನು ಹೆಚ್ಚಿಸುತ್ತೇವೆ. ಆರೋಪಿ ಹಿಂದೆ ಯಾರಾದರೂ ಇದ್ದಾರ ಇಲ್ಲವಾ ಎಂದು ಅಧಿಕಾರಿಗಳು ತನಿಖೆ ಮಾಡಲಿದ್ದಾರೆ ಎಂದು ತಿಳಿಸಿದರು.</p>



<p>ಸರ್ಕಾರಿ ಜಾಗದಲ್ಲಿ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯ. ಯಾವುದೇ ಸಂಘ ಸಂಸ್ಥೆಗಳು ಖಾಸಗಿಯಾಗಿ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಪಡೆಯಬೇಕು. ಈ ಆದೇಶ 2013 ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಮಾಡಲಾಗಿದೆ. ನಾವು ಅದನ್ನು ಇಂಪ್ಲಿಮೆಂಟ್ ಮಾಡಿರಲಿಲ್ಲ. ಇತ್ತೀಚೆಗೆ ಕೆಲವು ಸಂಘಟನೆಗಳು ಸರ್ಕಾರಿ ಸ್ಥಳ ದುರುಪಯೋಗ ಮಾಡಿಕೊಳ್ಳುತ್ತ ಇರುವುದು ಕಂಡು ಬಂದಿದೆ. ಹಾಗಾಗಿ ನಿನ್ನೆ ಕ್ಯಾಬಿನೇಟ್ ನಲ್ಲಿ ತೀರ್ಮಾನ ಮಾಡಿ ಶಾಲಾ ಕಾಲೇಜು, ಧಾರ್ಮಿಕ ಸ್ಥಳಗಳನ್ನು ಖಾಸಗಿಯವರಿಗೆ ಕೊಡಬಾರದು ಎಂದು ತೀರ್ಮಾನ ಮಾಡಲಾಗಿದೆ ಎಂದರು.</p>



<p>ಸರ್ಕಾರಿ ಜಾಗದಲ್ಲಿ ಹೋಗಿ ಗುಂಪು ಕಟ್ಟಿಕೊಂಡು ಕುಳಿತರೆ ಯಾರೂ ಬೇಡ ಅನ್ನಲ್ಲ. ಕಾರ್ಯಕ್ರಮಗಳನ್ನು ಮಾಡಬಾರದು ಅಷ್ಟೇ. ಕೇವಲ ಆರ್‌ಎಸ್ಎಸ್ (RSS) ಮಾತ್ರ ನೋಂದಣಿ ಮಾಡಬೇಕು ಅಂತಲ್ಲ. ಎಲ್ಲಾ ಖಾಸಗಿ ಸಂಸ್ಥೆಗಳು ನೋಂದಣಿ ಆಗಬೇಕು. ಆರ್‌ಎಸ್ಎಸ್ ಒಂದು ಖಾಸಗಿ ಸಂಸ್ಥೆ. ಈ ಹಿಂದೆ ಪರಮೇಶ್ವರ್ ಒಡೆತನದ ಸಿದ್ದಾರ್ಥ ಕಾಲೇಜು ಆವರಣದಲ್ಲಿ ಆರ್‌ಎಸ್ಎಸ್ ಕಾರ್ಯಕ್ರಮ ನಡೆದಿತ್ತು. ಬಹಳ ಹಿಂದೆ ಅಂದರೆ 20 ವರ್ಷಗಳ ಹಿಂದೆ ನಮ್ಮ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಆರ್‌ಎಸ್ಎಸ್ ಕ್ಯಾಂಪ್ ನಡೆದಿತ್ತು. ಎಸ್ಎಸ್ಐಟಿ ಹಾಗೂ ಹೆಗ್ಗೆರೆ ಕಾಲೇಜಿನಲ್ಲಿ ಆರ್‌ಎಸ್ಎಸ್ ಕ್ಯಾಂಪ್ ನಡೆದಿತ್ತು. ಆಗ ನಾವು ಅನುಮತಿ ಕೊಟ್ಟಿದ್ವಿ. ನಮ್ಮ ಪ್ರಾಂಶುಪಾಲರು ಅನುಮತಿ ಕೊಟ್ಟಿದ್ದರು ಎಂದರು.</p>



<p>ನಾಳೆ ತುಮಕೂರಿನಲ್ಲಿ ಆರ್‌ಎಸ್ಎಸ್ ಪಥ ಸಂಚಲನ ವಿಚಾರದ ಬಗ್ಗೆ ಮಾತನಾಡಿದ ಅವರು, ಪಥ ಸಂಚಲನ ನಡೆಸೋದಾದರೆ ಪರ್ಮಿಷನ್ ತಗೋಬೇಕು. ಪೊಲೀಸರಿಂದ ಪರ್ಮಿಷನ್ ತಗೋಬೇಕು. ಕಾಂಗ್ರೆಸ್ ಸರ್ಕಾರ ಹಣ ಮಾಡಲು ಆಸ್ತಿ ಪರಿವರ್ತನೆ ಮಾಡ್ತಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಅವರು ನಿಖರವಾಗಿ ಹೇಳಲಿ. ಅವರು ಮುಖ್ಯಮಂತ್ರಿ‌ ಆಗಿದ್ದವರು. ಅವರು ಹೇಳಿದ ಮೇಲೆ ನಾವು ಸ್ವಲ್ಪ ಗಂಭೀರವಾಗಿ ಪರಿಗಣಿಸ್ತಿವಿ. ಸರಿಯಾಗಿ ಇಂತಹ ಕಡೆ ಹಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಬೇಕು ಎಂದರು.</p>
]]></content:encoded>
					
		
		
			</item>
		<item>
		<title>SSLC &#8211; 206 ಅಂಕ PUC &#8211; 198 ಅಂಕ ತೆಗೆದರೆ ಪಾಸ್‌ – ಶಿಕ್ಷಣ ಸಚಿವ ಮಧುಬಂಗಾರಪ್ಪ</title>
		<link>https://peepalmedia.com/pass-if-sslc-206-marks-puc-198-marks-education-minister/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 16 Oct 2025 05:12:43 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[ರಾಜ್ಯ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=67933</guid>

					<description><![CDATA[ಬೆಂಗಳೂರು : 2025-26ನೇ ಸಾಲಿನಿಂದ ಪರೀಕ್ಷಾ (Exam) ಪಾಸಿಂಗ್ ಅಂಕವನ್ನು (Passing Marks) ಕಡಿತಗೊಳಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಿಗೆ 206 ಅಂಕ ಗಳಿಸಿದರೆ ಪಾಸ್‌ ಆಗಬಹುದು. ಜೊತೆಗೆ ಪ್ರತಿ ವಿಷಯದಲ್ಲೂ ವಿದ್ಯಾರ್ಥಿ ಕನಿಷ್ಠ 30 ಅಂಕ ಪಡೆಯಲೇಬೇಕು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಅವ್ಯವಸ್ಥೆಯನ್ನು ಸುಧಾರಣೆ ತರೋದು ಅತಿ ಮುಖ್ಯವಾಗುತ್ತದೆ. ಹೀಗಾಗಿ ತುಂಬಾ ಚರ್ಚೆಗಳು ಆಗುತ್ತಿತ್ತು. ಮಕ್ಕಳು ಬೇರೆ ವ್ಯವಸ್ಥೆಯಲ್ಲಿ ಪಾಸ್ ಆದರೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> 2025-26ನೇ ಸಾಲಿನಿಂದ ಪರೀಕ್ಷಾ (Exam) ಪಾಸಿಂಗ್ ಅಂಕವನ್ನು (Passing Marks) ಕಡಿತಗೊಳಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಿಗೆ 206 ಅಂಕ ಗಳಿಸಿದರೆ ಪಾಸ್‌ ಆಗಬಹುದು. ಜೊತೆಗೆ ಪ್ರತಿ ವಿಷಯದಲ್ಲೂ ವಿದ್ಯಾರ್ಥಿ ಕನಿಷ್ಠ 30 ಅಂಕ ಪಡೆಯಲೇಬೇಕು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.</p>



<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಅವ್ಯವಸ್ಥೆಯನ್ನು ಸುಧಾರಣೆ ತರೋದು ಅತಿ ಮುಖ್ಯವಾಗುತ್ತದೆ. ಹೀಗಾಗಿ ತುಂಬಾ ಚರ್ಚೆಗಳು ಆಗುತ್ತಿತ್ತು. ಮಕ್ಕಳು ಬೇರೆ ವ್ಯವಸ್ಥೆಯಲ್ಲಿ ಪಾಸ್ ಆದರೆ ಮುಂದೆ ತೊಂದರೆಯಾಗುತ್ತದೆ. ಹೀಗಾಗಿ ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸುತ್ತಿದ್ದೇವೆ ಎಂದರು. ನಾವು ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅನುಕೂಲತೆಗಾಗಿ ಮೂರು ಪರೀಕ್ಷೆಗಳನ್ನು ತಂದೆವು. ಸರ್ಕಾರಿ ಶಾಲೆಗಳಲ್ಲಿ ಒಳ್ಳೆಯ ಟೀಚರ್‌ಗಳಿದ್ದಾರೆ. ಆದರೆ ಅವರನ್ನು ಬಳಸಿಕೊಳ್ಳುವುದರಲ್ಲಿ ಇಲಾಖೆ ಎಡವುತ್ತಿತ್ತು. ಶಿಕ್ಷಕರು ಅದನ್ನು ಸರಿಪಡಿಸಿಕೊಂಡು ಪಾಠ ಮಾಡುತ್ತಿದ್ದಾರೆ. ಸಿಎಂ ಕೂಡ ಗ್ರೇಸ್ ಮಾರ್ಕ್ಸ್ ನೀಡಬಾರದು ಎಂದು ಹೇಳಿದರು. ಅವರು 75% ಫಲಿತಾಂಶದ ಟಾರ್ಗೆಟ್ ನೀಡಿದ್ದರು. ಆದರೆ ಈ ವರ್ಷ ನಾವು 79%ಗೆ ರೀಚ್ ಆಗಿದ್ದೇವೆ ಎಂದು ಮಾಹಿತಿ ನೀಡಿದರು.</p>



<p>2025-26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕವನ್ನು ಕಡಿತಗೊಳಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ ಕನಿಷ್ಠ 206 ಅಂಕ ಗಳಿಸಿದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಕನಿಷ್ಠ 30 ಅಂಕ ಪಡೆಯಲೇ ಬೇಕು. ಇದರೊಂದಿಗೆ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198ಅಂಕ ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲೂ ಲಿಖಿತ ಹಾಗೂ ಆಂತರಿಕ ಅಂಕ ಸೇರಿ 30 ಅಂಕ ಬರೋದು ಕಡ್ಡಾಯ ಎಂದು ಮಧಿ ಬಂಗಾರಪ್ಪ ಸೂಚಿಸಿದರು.ಇನ್ನು ಜಾತಿ ಜನಗಣತಿ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿದ್ದಾರೆ. ಅವರಿಗೆಲ್ಲಾ ನಾನು ಧನ್ಯವಾದಗಳನ್ನು ಹೇಳುತ್ತೇನೆ. ಇದೇ ವೇಳೆ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಸಾಕಷ್ಟು ಜನ ಶಿಕ್ಷಕರಿಗೆ ಸಾರ್ವಜನಿಕರು ತೊಂದರೆ ಕೊಟ್ಟಿದ್ದಾರೆ. ಆದರೂ ಕೂಡ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಮಕ್ಕಳಿಗೆ ಸ್ಪೆಷಲ್ ಕ್ಲಾಸ್ ಮಾಡಿ ಪಾಠವನ್ನು ಮುಗಿಸಲಿದ್ದಾರೆ ಎಂದರು.</p>



<p>ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವನ್ನು ನಾವು ಪಬ್ಲಿಕ್ ಡೋಮೆನ್‌ಗೆ ಹಾಕಿದ್ದೆವು. 33 ಅಂಕದ ಪರವಾಗಿ 701 ಪತ್ರಗಳು ಬಂದಿದ್ವು. 35 ಅಂಕದ ಪರವಾಗಿ 8 ಪತ್ರಗಳು ಬಂದಿದ್ವು. ಹೀಗಾಗಿ 2025-26ನೇ ಸಾಲಿನಿಂದ 33% ಅನ್ನು ಜಾರಿಗೆ ತರುತ್ತಿದ್ದೇವೆ ಎಂದರು.</p>



<p>ರಾಜ್ಯದಲ್ಲಿ 308 ಪಬ್ಲಿಕ್ ಶಾಲೆಗಳಿವೆ. ಆದರೆ ಇಂದು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳೆಂದು ಘೋಷಣೆ ಮಾಡುತ್ತಿದ್ದೇವೆ. ಅದರಲ್ಲಿ 500 ಶಾಲೆಗಳನ್ನು ಎಡಿಬಿ ಸಹಯೋಗದೊಂದಿಗೆ ಉನ್ನತೀಕರಣ ಮಾಡಲಾಗುತ್ತದೆ. ಜೊತೆಗೆ 200 ಶಾಲೆಗಳನ್ನು ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ನಿಧಿಯಿಂದ ಉನ್ನತೀಕರಣ ಹಾಗೂ 100 ಕೆಪಿಎಸ್‌ ಗಳನ್ನು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದಿಂದ ಉನ್ನತೀಕರಿಸಲು ನಿರ್ಧಾರ ಮಾಡಲಾಗಿದೆ. ಕೆಪಿಎಸ್‌ಗೆ 1100ಕ್ಕೂ ಹೆಚ್ಚು ಮಕ್ಕಳು ಬರುವ ನಿರೀಕ್ಷೆ ಇದೆ ಎಂದರು.</p>
]]></content:encoded>
					
		
		
			</item>
		<item>
		<title>1100 ಕೋಟಿ ರೂ. ವೆಚ್ಚದಲ್ಲಿ ಗುಂಡಿ ಮುಚ್ಚುತ್ತಿದ್ದೇವೆ &#8211; ಡಿಕೆಶಿ</title>
		<link>https://peepalmedia.com/we-are-closing-the-pothole-at-a-cost-of-rs-1100-crore-dksh/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 15 Oct 2025 18:49:31 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<guid isPermaLink="false">https://peepalmedia.com/?p=67903</guid>

					<description><![CDATA[ಬೆಂಗಳೂರಿನಲ್ಲಿರುವ ರಸ್ತೆ (Patholes) ಗುಂಡಿಗಳನ್ನು ಮುಚ್ಚುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿದ್ದು,  ಸುಗಮ ಸಂಚಾರಕ್ಕೆ ಆದ್ಯತೆ ನೀಡಿ, ನಗರದ ವಿವಿಧ ಸ್ಥಳಗಳಲ್ಲಿ ರಸ್ತೆಗಳನ್ನು ಡಾಂಬರೀಕರಣಗೊಳಿಸುವ ಮತ್ತು ಗುಂಡಿಗಳನ್ನು ಮುಚ್ಚುವ ಕೆಲಸ ವೇಗವಾಗಿ ನಡೆಯುತ್ತಿದೆ ಎಂದು ತಿಳಿಸಿದರು.ಈ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಗುಂಡಿ ಮುಚ್ಚವ ಕಾರ್ಯ ಭರದಿಂದ ಸಾಗುತ್ತಿದೆ. ಸದ್ಯದಲ್ಲೇ ಈ ಕಾಮಗಾರಿ ಪೂರ್ಣವಾಗುತ್ತದೆ. ಬಳಿಕ ವಾಹನ ಸವಾರರು ಆರಾಮವಾಗಿ ಸಂಚಾರ ಮಾಡಬಹುದು ಎಂದರು. ನಗರದಲ್ಲಿ ಈಗಾಗಲೇ 13,000 ಗುಂಡಿಗಳನ್ನು ಮುಚ್ಚಲಾಗಿದೆ ಮತ್ತು [&#8230;]]]></description>
										<content:encoded><![CDATA[
<p>ಬೆಂಗಳೂರಿನಲ್ಲಿರುವ ರಸ್ತೆ (Patholes) ಗುಂಡಿಗಳನ್ನು ಮುಚ್ಚುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿದ್ದು,  ಸುಗಮ ಸಂಚಾರಕ್ಕೆ ಆದ್ಯತೆ ನೀಡಿ, ನಗರದ ವಿವಿಧ ಸ್ಥಳಗಳಲ್ಲಿ ರಸ್ತೆಗಳನ್ನು ಡಾಂಬರೀಕರಣಗೊಳಿಸುವ ಮತ್ತು ಗುಂಡಿಗಳನ್ನು ಮುಚ್ಚುವ ಕೆಲಸ ವೇಗವಾಗಿ ನಡೆಯುತ್ತಿದೆ ಎಂದು ತಿಳಿಸಿದರು.ಈ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಗುಂಡಿ ಮುಚ್ಚವ ಕಾರ್ಯ ಭರದಿಂದ ಸಾಗುತ್ತಿದೆ. ಸದ್ಯದಲ್ಲೇ ಈ ಕಾಮಗಾರಿ ಪೂರ್ಣವಾಗುತ್ತದೆ. ಬಳಿಕ ವಾಹನ ಸವಾರರು ಆರಾಮವಾಗಿ ಸಂಚಾರ ಮಾಡಬಹುದು ಎಂದರು.</p>



<p>ನಗರದಲ್ಲಿ ಈಗಾಗಲೇ 13,000 ಗುಂಡಿಗಳನ್ನು ಮುಚ್ಚಲಾಗಿದೆ ಮತ್ತು ಬೆಂಗಳೂರಿನ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ತಮ್ಮ ಯೋಜನೆಯಾಗಿದೆ. ಹೀಗಾಗಿ ನಗರದಲ್ಲಿ 550 ಕಿ.ಮೀ. ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸಲು 1,100 ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಪುರಸಭೆ ಪ್ರಾಧಿಕಾರಗಳು (ಬಿಬಿಎಂಪಿ), ಜಿಬಿಎ) ನಡೆಸಿದ ಕಳಪೆ ನಾಗರಿಕ ಮೂಲಸೌಕರ್ಯ ಯೋಜನೆಯಿಂದಾಗಿ ನಾಗರಿಕರು ಮತ್ತು ತೆರಿಗೆದಾರರು ತಮ್ಮ ಕುಟುಂಬಗಳು ಮತ್ತು ಮಕ್ಕಳೊಂದಿಗೆ ಅಪಾರ ತೊಂದರೆ ಅನುಭವಿಸುತ್ತಿದ್ದಾರೆ. ವರ್ತೂರು-ಬಳಗೆರೆ ಪಾಣತ್ತೂರು ಪ್ರದೇಶದಲ್ಲಿ ರಸ್ತೆ ವೈಟ್-ಟಾಪಿಂಗ್ ಮತ್ತು ಮಳೆನೀರಿನ ಒಳಚರಂಡಿ ಕಾಮಗಾರಿಗಳ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.</p>



<p>ರಸ್ತೆ ಸ್ಥಿರತೆಗೆ ಅಡಿಪಾಯವಾಗಿರುವ ಒಳಚರಂಡಿ ಜಾಲವನ್ನು ಮೊದಲು ಪೂರ್ಣಗೊಳಿಸುವ ಬದಲು, ಅಧಿಕಾರಿಗಳು ವರ್ತೂರು-ಬಳಗೆರೆ-ಪಣತ್ತೂರಿನಲ್ಲಿ ಗುಂಡಿಗಳನ್ನು ಮುಚ್ಚುವುದು, ವೈಟ್-ಟಾಪಿಂಗ್ ಕಾಮಗಾರಿಗಳನ್ನು ತರಾತುರಿಯಲ್ಲಿ ಪ್ರಾರಂಭಿಸಿದ್ದಾರೆ.ಇಂತಹ ಅರ್ಧ ಕ್ರಮಗಳು ಹೊಸ ರಸ್ತೆಗಳ ತ್ವರಿತ ಹದಗೆಡುವಿಕೆಗೆ ಕಾರಣವಾಗುತ್ತವೆ, ಸಾರ್ವಜನಿಕ ನಿಧಿಗಳು ಮತ್ತು ತೆರಿಗೆದಾರರ ಕೊಡುಗೆಗಳನ್ನು ವ್ಯರ್ಥ ಮಾಡುತ್ತವೆ. ಆದರೆ ಆ ರೀತಿ ಆಗಲು ನಾವು ಬಿಡುವುದಿಲ್ಲ ಎಂದು ಹೇಳಿದರು.ಇನ್ನು ಇದೇ ವೇಳೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್-ಶಾ ಹೇಳಿಕೆಯ ಬಗ್ಗೆ ಮಾತನಾಡಿದ ಡಿಕೆ, ಬೆಂಗಳೂರು ಭಾರತದ ಐಟಿ ಕೇಂದ್ರವೆಂದು ಜಾಗತಿಕವಾಗಿ ಗುರುತಿಸಲ್ಪಟ್ಟಿದೆ, ಅಂತಹ ಸಾಂದರ್ಭಿಕ ವಿಧಾನ ಮತ್ತು ನಾಗರಿಕ ನಿರ್ಲಕ್ಷ್ಯವು ಬ್ರ್ಯಾಂಡ್ ಬೆಂಗಳೂರಿನ ಹೆಮ್ಮೆ ಮತ್ತು ವಿಶ್ವಾಸಾರ್ಹತೆಯನ್ನು ನಾಶಪಡಿಸುತ್ತದೆ ಮತ್ತು ಅದನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದರು. </p>
]]></content:encoded>
					
		
		
			</item>
		<item>
		<title>ಧರ್ಮಸ್ಥಳ ಪ್ರಕರಣ : ಅಕ್ಟೋಬರ್ 9 ರಾಜ್ಯಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನ</title>
		<link>https://peepalmedia.com/october-9th-is-the-statewide-janagraha-day-for-justice/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 04 Oct 2025 06:57:49 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=67346</guid>

					<description><![CDATA[ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯ ಅತ್ಯಾಚಾರ, ಕೊಲೆಯಾಗಿ 13 ವರ್ಷಗಳಾದ ಹಿನ್ನಲೆಯಲ್ಲಿ ಅಕ್ಟೋಬರ್ 09 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ರಾಜ್ಯಾದ್ಯಂತ &#8216;ನ್ಯಾಯಕ್ಕಾಗಿ ಜನಾಗ್ರಹ ದಿನ&#8217; ಎಂದು ಕಾರ್ಯಕ್ರಮ ಆಯೋಜಿಸಿದೆ. ಅಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಅಂದು ಎಲ್ಲಾ ಜಿಲ್ಲೆಗಳಲ್ಲಿ ಸೌಜನ್ಯ ಭಾವಚಿತ್ರಕ್ಕೆ ಗೌರವ ಸಲ್ಲಿಕೆ, ಸಭೆ, ಮನವಿ‌ ಸಲ್ಲಿಕೆ, ಹಾಡುಗಳ ಕಾರ್ಯಕ್ರಮಗಳು ನಡೆಯಲಿದೆ ಎಂದು ವೇದಿಕೆ ತಿಳಿಸಿದೆ. ಹಲವಾರು ಜನಪರ ಸಂಘಟನೆಗಳ [&#8230;]]]></description>
										<content:encoded><![CDATA[
<pre class="wp-block-code"><code>- ಧರ್ಮಸ್ಥಳ ಸೌಜನ್ಯ ಅತ್ಯಾಚಾರ- ಕೊಲೆಗೆ 13 ವರ್ಷ<br>- ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಕಾರ್ಯಕ್ರಮ</code></pre>



<p>ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯ ಅತ್ಯಾಚಾರ, ಕೊಲೆಯಾಗಿ 13 ವರ್ಷಗಳಾದ ಹಿನ್ನಲೆಯಲ್ಲಿ ಅಕ್ಟೋಬರ್ 09 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ರಾಜ್ಯಾದ್ಯಂತ &#8216;ನ್ಯಾಯಕ್ಕಾಗಿ ಜನಾಗ್ರಹ ದಿನ&#8217; ಎಂದು ಕಾರ್ಯಕ್ರಮ ಆಯೋಜಿಸಿದೆ.</p>



<p>ಅಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಅಂದು ಎಲ್ಲಾ ಜಿಲ್ಲೆಗಳಲ್ಲಿ ಸೌಜನ್ಯ ಭಾವಚಿತ್ರಕ್ಕೆ ಗೌರವ ಸಲ್ಲಿಕೆ, ಸಭೆ, ಮನವಿ‌ ಸಲ್ಲಿಕೆ, ಹಾಡುಗಳ ಕಾರ್ಯಕ್ರಮಗಳು ನಡೆಯಲಿದೆ ಎಂದು ವೇದಿಕೆ ತಿಳಿಸಿದೆ.</p>



<p>ಹಲವಾರು ಜನಪರ ಸಂಘಟನೆಗಳ ಭಾಗಿದಾರಿಕೆಯಲ್ಲಿ ನಡೆಯುವ &#8216;ನ್ಯಾಯಕ್ಕಾಗಿ ಜನಾಗ್ರಹ ದಿನ&#8217; ಕಾರ್ಯಕ್ರಮದಲ್ಲಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿ, ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ.</p>



<p>ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ಹಕ್ಕೊತ್ತಾಯಗಳು :<br>1. ಸೌಜನ್ಯ ಅತ್ಯಾಚಾರಿ-ಹಂತಕರಾಗಿರುವ ನೈಜ ಪ್ರಭಾವಿ ಆರೋಪಿಗಳನ್ನು ಬಂಧಿಸಬೇಕು<br>2. ಸೌಜನ್ಯ ಸಹಿತ ವೇದವಲ್ಲಿ, ಪದ್ಮಲತಾ, ಯಮುನಾ, ಮಾವುತ ನಾರಾಯಣ ಕೊಲೆ ಪ್ರಕರಣಗಳ ಮರು ತನಿಖೆ ಆಗಬೇಕು, ನ್ಯಾಯ ದೊರಕಬೇಕು.<br>3. ಅಸಹಜ ಸಾವುಗಳ SIT ತನಿಖೆ ನ್ಯಾಯಯುತವಾಗಿ ನಡೆಯಬೇಕು.<br>4. ಧರ್ಮಸ್ಥಳ ಭೂಹಗರಣ, ಮೈಕ್ರೊ ಫೈನಾನ್ಸ್ ಅಕ್ರಮಗಳ ಸಮಗ್ರ ತನಿಖೆ ನಡೆಸಬೇಕು.<br>5. ಎಸ್ಐಟಿ ತನಿಖೆ ದಾರಿ ತಪ್ಪಬಾರದು. ಷಡ್ಯಂತ್ರ ನಿಲ್ಲಬೇಕು<br>6. ನೂರಾರು ಅಸಹಜ ಸಾವು-ಕೊಲೆ ಆದ ಪ್ರದೇಶದ ಮಾಲೀಕರನ್ನು ವಿಚಾರಣೆ ನಡೆಸಿ<br>7. ಆರೋಪಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿ<br>8. ದೂರುದಾರರು, ಸಾಕ್ಷಿಗಳು, ಹೋರಾಟಗಾರರ ಮೇಲಿನ ಪೊಲೀಸ್ ದೌರ್ಜನ್ಯ ನಿಲ್ಲಲಿ<br>9. ಸೌಜನ್ಯ, ವೇದವಲ್ಲಿ, ಪದ್ಮಲತಾ, ಯಮುನಾ ನಾರಾಯಣ ಕೊಲೆ ಪ್ರಕರಣ ಮರುತನಿಖೆಯಾಗಲಿ.<br>10. ಸೌಜನ್ಯ ಅತ್ಯಾಚಾರದ ಸಾಕ್ಷ್ಯ ನಾಶ ಮಾಡಿದ ಅಧಿಕಾರಿಗಳನ್ನು ವಿಚಾರಣೆ ನಡೆಸಿ<br>11. ಫೊರೆನ್ಸಿಕ್ ಸಾಕ್ಷ್ಯಗಳನ್ನು ರಕ್ಷಿಸದೇ ಪಿತೂರಿ ಮಾಡಿದ ವೈದ್ಯರು, ಪೊಲೀಸರನ್ನು ಜೈಲಿಗೆ ಹಾಕಿ<br>12. ಅತ್ಯಾಚಾರ-ಕೊಲೆಯ ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹಿಸದೇ ಪ್ರಭಾವಿಗಳನ್ನು ರಕ್ಷಿಸಿದ ಪೊಲೀಸರನ್ನು ಬಂಧಿಸಿ</p>



<p>ಸಧ್ಯ ಈ ಒಂದು ವೇದಿಕೆ ರಾಜ್ಯಾದ್ಯಂತ ಪ್ರತಿರೋಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈಗಾಗಲೇ 20 ಜಿಲ್ಲೆಗಳಲ್ಲಿ ಕಾರ್ಯಕ್ರಮದ ರೂಪುರೇಷೆ ಸಿದ್ಧವಾಗಿದೆ ಎಂದು ವೇದಿಕೆ ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಕಾಂತಾರ ಯಶಸ್ಸು; ಗೆಳೆಯ ರಕ್ಷಿತ್ ಶೆಟ್ಟಿ, ರಾಜ್ ಶೆಟ್ಟಿ ಸಂಪೂರ್ಣ ಗೈರು: &#8220;ಶೆಟ್ಟಿ ಗ್ಯಾಂಗ್‌&#8221;ನಲ್ಲಿ ಮೂಡಿದ ಬಿರುಕು!</title>
		<link>https://peepalmedia.com/kantaras-success-boyfriend-rakshit-shetty-is-completely-absent/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 04 Oct 2025 01:24:03 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ವಿಶೇಷ]]></category>
		<category><![CDATA[ಸಿನಿಮಾ]]></category>
		<guid isPermaLink="false">https://peepalmedia.com/?p=67318</guid>

					<description><![CDATA[ಕಾಂತಾರ ಅಧ್ಯಾಯ 1 ಸಿನಿಮಾ ಯಶಸ್ಸಿನ ತುತ್ತ ತುದಿಯಲ್ಲಿ ತೇಲುತ್ತಿದೆ. ನಿರೀಕ್ಷೆಯಂತೆ ನೂರಾರು ಕೋಟಿ ಬಜೆಟ್, ನಿರ್ದೇಶಕ ನಟ ರಿಷಬ್ ಶೆಟ್ಟಿಯ ಅದ್ಭುತ ಪರಿಕಲ್ಪನೆ, ಸಾವಿರಾರು ಜನರ ಶ್ರಮ ಸಿನಿಮಾ ಹೊರಬಂದಂತೆ ಶ್ರಮಕ್ಕೆ ತಕ್ಕ ಪ್ರತಿಫಲದಂತೆ ಸಿನಿಮಾ ಯಶಸ್ಸಿನಲ್ಲಿ ತೇಲುತ್ತಿದೆ. ಈ ನಡುವೆ ಏನೋ ಒಂದು ಕಡಿಮೆ ಆಗಿದೆ ಎನ್ನುವುದಾದರೆ ಅದು ರಿಷಬ್ ಗೆಳೆಯ ರಕ್ಷಿತ್ ಶೆಟ್ಟಿ ಅವರ ಉಪಸ್ಥಿತಿ. ಹೌದು. ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ದಿನದಿಂದಲೂ ಸೋಲು ಗೆಲುವು ಎರಡನ್ನೂ ಒಟ್ಟಾಗಿಯೇ ಅನುಭವಿಸಿದ, ಇನ್ನೊಬ್ಬರ ಗೆಲುವನ್ನು [&#8230;]]]></description>
										<content:encoded><![CDATA[
<p>ಕಾಂತಾರ ಅಧ್ಯಾಯ 1 ಸಿನಿಮಾ ಯಶಸ್ಸಿನ ತುತ್ತ ತುದಿಯಲ್ಲಿ ತೇಲುತ್ತಿದೆ. ನಿರೀಕ್ಷೆಯಂತೆ ನೂರಾರು ಕೋಟಿ ಬಜೆಟ್, ನಿರ್ದೇಶಕ ನಟ ರಿಷಬ್ ಶೆಟ್ಟಿಯ ಅದ್ಭುತ ಪರಿಕಲ್ಪನೆ, ಸಾವಿರಾರು ಜನರ ಶ್ರಮ ಸಿನಿಮಾ ಹೊರಬಂದಂತೆ ಶ್ರಮಕ್ಕೆ ತಕ್ಕ ಪ್ರತಿಫಲದಂತೆ ಸಿನಿಮಾ ಯಶಸ್ಸಿನಲ್ಲಿ ತೇಲುತ್ತಿದೆ. ಈ ನಡುವೆ ಏನೋ ಒಂದು ಕಡಿಮೆ ಆಗಿದೆ ಎನ್ನುವುದಾದರೆ ಅದು ರಿಷಬ್ ಗೆಳೆಯ ರಕ್ಷಿತ್ ಶೆಟ್ಟಿ ಅವರ ಉಪಸ್ಥಿತಿ.</p>



<p>ಹೌದು. ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ದಿನದಿಂದಲೂ ಸೋಲು ಗೆಲುವು ಎರಡನ್ನೂ ಒಟ್ಟಾಗಿಯೇ ಅನುಭವಿಸಿದ, ಇನ್ನೊಬ್ಬರ ಗೆಲುವನ್ನು ತನ್ನದೇ ಗೆಲುವೆಂದು ಸಂಭ್ರಮಿಸುತ್ತಾ, ಸೋಲಿನಲ್ಲೂ ಕೈ ಬಿಡದೇ ನಡೆಸಿಕೊಂಡು ಬಂದ ಅತ್ಯಾಪ್ತ ಗೆಳೆಯರಿಬ್ಬರ ನಡೆ ಈಗ ಚಿತ್ರರಂಗದ ಪಡಸಾಲೆಯಲ್ಲಿ ಈ ಒಂದು ಅನುಮಾನ ಕುಡಿಯೊಡೆದಿದೆ.</p>



<p>ಕಳೆದ ಭಾರಿ ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ಬಿಡುಗಡೆಗೂ ಮುನ್ನ ನಡೆದ ಪ್ರೀಮಿಯರ್ ಶೋನಲ್ಲಿ ಗೆಳೆಯ ರಕ್ಷಿತ್ ಶೆಟ್ಟಿ ಸಿನಿಮಾ ನೋಡಿದ್ದರು. ಸಿನಿಮಾ ಮುಗಿಯುತ್ತಿದ್ದಂತೆ, ಥಿಯೇಟರ್‌ನ ಕೊನೆಯ ಸಾಲಿನಿಂದ ಓಡಿ ಬಂದು ರಿಷಭ್ ಶೆಟ್ಟಿಯನ್ನು ತಬ್ಬಿಕೊಂಡು ಭಾವುಕವಾಗಿ ಅಭಿನಂದಿಸಿದ್ದರು. ಈ ಒಂದು ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಗೆಳೆಯನ ಗೆಲುವನ್ನು ಮನಃಪೂರ್ವಕವಾಗಿ ಕಣ್ತುಂಬಿಕೊಂಡ ರಕ್ಷಿತ್ ಶೆಟ್ಟಿ ಈಗೆಲ್ಲಿ?</p>



<p>ಹೀಗೊಂದು ಪ್ರಶ್ನೆ ಕಳೆದ ಮೂರು ದಿನಗಳಿಂದ ಚಿತ್ರರಂಗದ ವಲಯದಲ್ಲಿ ಸಣ್ಣಗೆ ಹೊಗೆಯಾಡುತ್ತಿದೆ. ಈಗಾಗಲೇ ರಕ್ಷಿತ್ ಶೆಟ್ಟಿ ತನ್ನ ಸಿನೆಮಾ &#8216;ರಿಚರ್ಡ್ ಆಂಟನಿ&#8217;ಯಲ್ಲಿ ಸಂಪೂರ್ಣ ಮುಳುಗಿದ್ದಾರೆ ಎಂಬ ಮಾತುಗಳಿವೆ. ಹೀಗಾಗಿಯೇ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ. ಆದರೆ ಗೆಳೆಯನ ನಿರೀಕ್ಷಿತ ಗೆಲುವನ್ನು ತನ್ನ ಸಾಮಾಜಿಕ ಜಾಲತಾಣದ ಮೂಲಕವೂ ಅಭಿನಂಧಿಸದೇ ಇರುವುದು ಮಾತ್ರ ರಕ್ಷಿತ್ ಮತ್ತು ರಿಷಬ್ ನಡುವೆ ಏನೂ ಸರಿಯಿಲ್ಲ ಎಂಬುದನ್ನು ಒತ್ತಿ ಹೇಳುವಂತಿದೆ.</p>



<p>ಈಗಾಗಲೇ ಕಾಂತಾರ ಚಾಪ್ಟರ್ 1 ನೋಡಿದ ಚಿತ್ರರಂಗದ ಹಿರಿ ಕಿರಿಯ ಗಣ್ಯರು ಹಾಡಿ ಹೊಗಳಿದ್ದಾರೆ. ರಾಜ್ಯ ಮಾತ್ರವಲ್ಲದೇ ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ದಿಗ್ಗಜರು ಶುಭಾಶಯ ಕೋರಿದ್ದಾರೆ.‌ ಗಳಿಕೆಯಲ್ಲೂ ಕಾಂತಾರ ಚಾಪ್ಟರ್ 1 ದಾಖಲೆ ನಿರ್ಮಿಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಇಷ್ಟೆಲ್ಲಾ ಇರುವಾಗ ರಕ್ಷಿತ್ ಶೆಟ್ಟಿ ಪ್ರೀಮೀಯರ್ ಶೋಗೂ ರಕ್ಷಿತ್ ಶೆಟ್ಟಿ ಬಂದಿಲ್ಲ. ಮೊದಲ ದಿನದ ಮೊದಲ ಶೋಗೂ ರಕ್ಷಿತ್ ಶೆಟ್ಟಿ ಬಂದಿಲ್ಲ. ಸೌಜನ್ಯಕ್ಕಾದರೂ ರಿಷಬ್‌ಗೆ ಸಾಮಾಜಿಕ ಜಾಲತಾಣದಲ್ಲೂ ಅಭಿನಂದಿಸಬಹುದಿತ್ತು ಎಂಬುದು ಸಿನಿ ಪ್ರಿಯರ ಅಭಿಪ್ರಾಯ.</p>



<p>ಇನ್ನು &#8216;ಶೆಟ್ಟಿ ಗ್ಯಾಂಗ್&#8217; ಬಗ್ಗೆ ಖಾಸಗಿ ಮಾಧ್ಯಮವೊಂದರಲ್ಲಿ ಈ ಹಿಂದೆ ಬಹಿರಂಗವಾಗಿಯೇ ತಮ್ಮನ್ನು ಸಮರ್ಥಿಸಿಕೊಂಡಿದ್ದ ರಾಜ್ ಬಿ ಶೆಟ್ಟಿ ಕೂಡಾ ಕಾಂತಾರದ ಎಲ್ಲಾ ಈವೆಂಟ್‌ಗಳಿಂದ ದೂರ ಉಳಿದಿದ್ದು ಶೆಟ್ಟಿ ಗ್ಯಾಂಗ್ ಬಿರುಕನ್ನು ಮತ್ತಷ್ಟು ಪ್ರತಿಬಿಂಬಿಸುತ್ತಿದೆ.</p>



<p>ರಕ್ಷಿತ್ ಈ ಹಿಂದಿನ &#8220;ಚಾರ್ಲಿ 777&#8221; ಒಂದು ಮಟ್ಟಿಗಿನ ಯಶಸ್ಸು ತಂದಿತ್ತು. ಹಾಗೇ 2021 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗೂ ಭಾಜನರಾಗಿದೆ. ಆದರೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಕ್ಷಿತ್ ಗುರುತಿಸಿಕೊಳ್ಳಲು ಆಗಲಿಲ್ಲ. &#8220;ಸಪ್ತ ಸಾಗರದಾಚೆ ಎಲ್ಲೋ ಭಾಗ ಒಂದು ಮತ್ತು ಎರಡು&#8221; ಎರಡೂ ಸಹ ನಿರೀಕ್ಷಿತ ಮಟ್ಟದಲ್ಲಿ ಸದ್ದು ಮಾಡಲೇ ಇಲ್ಲ. ಆ ಎರಡು ಸಿನಿಮಾ ಮಾತ್ರವಲ್ಲ, ರಕ್ಷಿತ್ ಶೆಟ್ಟಿಯವರ ಕಿರಿಕ್ ಪಾರ್ಟಿ ನಂತರದ ಯಾವ ಸಿನಿಮಾಗಳೂ ಆ ಮಟ್ಟಿಗಿನ ಸಕ್ಸಸ್ ಕಂಡಿದ್ದೇ ಇಲ್ಲ. ಆದರೆ ರಿಷಬ್ ಹಂತ ಹಂತವಾಗಿ ಮೇಲೇರುತ್ತಲೇ ಇರುವುದು ಮತ್ತು ಅವಕಾಶಗಳು ಅವರನ್ನು ಅರಸುತ್ತಲೇ ಬರುತ್ತಿರುವುದು ರಕ್ಷಿತ್ ಒಳಗೊಂದು ಸಣ್ಣ ಅಸಮಾಧಾನ ಅಥವಾ ಅಸೂಯೆ ಕೂಡಾ ಮನೆಮಾಡಿದೆ ಎಂದರೂ ತಪ್ಪಾಗಲಾರದು.</p>



<p>ಅದಷ್ಟೇ ಅಲ್ಲದೇ ರಕ್ಷಿತ್‌ಗೆ ಪ್ರಾರಂಭಿಕ ಹಂತದಿಂದಲೂ ಕಾಂತಾರ ಸಿನೆಮಾದಿಂದ ದೂರ ಇಡಲಾಗಿತ್ತು. ಕಾಂತಾರ ಮೊದಲ ಸಿನೆಮಾ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಸ್ವಲ್ಪ ಮಟ್ಟಿಗಾದರೂ ರಕ್ಷಿತ್ ಶೆಟ್ಟಿ ಸಲಹೆಗಳನ್ನು ತೆಗೆದುಕೊಂಡಿದ್ದರು. ಹೀಗಾಗಿಯೇ ಗೆಳೆಯ ರಿಷಬ್ ಗೆ ಈ ಒಂದು ಸಕ್ಸಸ್ ಬೇಕು ಎಂದೇ ರಕ್ಷಿತ್ ಬಯಸಿದಂತಿತ್ತು. &#8220;ಕಾಂತಾರ ಚಾಪ್ಟರ್ 1 ಸಿನೆಮಾಗೆ ರಿಷಬ್ ಶೆಟ್ಟಿ ನನಗೆ ಅವಕಾಶ ಕೊಟ್ಟರೆ ನಟಿಸುವ ಆಸೆ&#8221;ಯನ್ನೂ ರಕ್ಷಿತ್ ಶೆಟ್ಟಿ ಹೊರ ‌ಹಾಕಿದ್ದರು.</p>



<p>ಆದರೆ ಕಾಂತಾರ ಚಾಪ್ಟರ್ 1 ಸಿನೆಮಾದ ಯಾವ ಸಂದರ್ಭದಲ್ಲೂ ರಕ್ಷಿತ್ ರನ್ನು ರಿಷಬ್ ಹತ್ತಿರಕ್ಕೂ ಬಿಟ್ಟುಕೊಂಡಿರಲಿಲ್ಲ ಎಂಬುದು ಗಮನಾರ್ಹ. ಕಾಂತಾರದ ಪ್ರೆಸ್ ಮೀಟ್ ನಲ್ಲೂ ಸಹ &#8220;ಅವರವರು ಅವರವರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ, ಇದು ಸಂಪೂರ್ಣವಾಗಿ ನನ್ನದೇ ಕುಸುರಿ&#8221; ಎಂದು ನೇರವಾಗಿ ರಿಷಬ್ ಹೇಳಿದ್ದರು.</p>



<p>ಹಾಗೇ ಕಾಂತಾರ ಬಗೆಗಿನ ಪ್ರಶ್ನೆಯೊಂದಕ್ಕೆ ರಾಜ್ ಬಿ ಶೆಟ್ಟಿ ಸಹ ನಿರ್ಲಕ್ಷ್ಯದ ಉತ್ತರ ನೀಡಿದ್ದರು. &#8220;ಅವರು ತಿಳಿದವರು, ಅವರಿಗೆಲ್ಲಾ ಗೊತ್ತು, ನಮ್ಮ ಅವಶ್ಯಕತೆ ಅಲ್ಲೇನೂ ಇಲ್ಲ&#8221; ಎಂಬಂತೆ ಉತ್ತರ ಕೊಟ್ಟಿದ್ದೂ ಸಹ ಶೆಟ್ಟಿ ಗ್ಯಾಂಗ್ ನಡುವಿನ ಬಿರುಕನ್ನು ಎತ್ತಿ ಹಿಡಿದಿದೆ.</p>
]]></content:encoded>
					
		
		
			</item>
		<item>
		<title>9ನೇ ಬಾರಿಗೆ ಏಷ್ಯಾಕಪ್ ಎತ್ತಿಹಿಡಿದ ಟೀಂ ಇಂಡಿಯಾ</title>
		<link>https://peepalmedia.com/team-india-lifts-the-asia-cup-for-the-9th-time/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sun, 28 Sep 2025 18:52:49 +0000</pubDate>
				<category><![CDATA[ಕ್ರೀಡೆ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[Team India Champions]]></category>
		<guid isPermaLink="false">https://peepalmedia.com/?p=66941</guid>

					<description><![CDATA[Team India Champions : ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ. 41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.]]></description>
										<content:encoded><![CDATA[
<p><strong>Team India Champions : </strong>ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ. 41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.</p>



<p></p>
]]></content:encoded>
					
		
		
			</item>
		<item>
		<title>ಹಾಸನ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ 9 ಜನರ ಮೇಲೆ ಎಫ್‌ಐಆರ್</title>
		<link>https://peepalmedia.com/fir-against-9-people-in-hassan-conductor-assault-case/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sat, 27 Sep 2025 06:06:31 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=66900</guid>

					<description><![CDATA[ಹಾಸನ : ಹಾಸನ ತಾಲ್ಲೂಕಿನ ಗೊರೂರು ಬಳಿ ಬಸ್ ಕಂಡಕ್ಟರ್ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.ಗುರುವಾರ ನಡೆದ ಈ ಘಟನೆಯ ಬಗ್ಗೆ ನಿರ್ವಾಹಕ ಬಸವರಾಜು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವನಿತಾ, ಲಕ್ಷ್ಮೀ, ಕುಮಾರ, ತಿಮ್ಮೇಗೌಡ, ಶೇಖರ್ ಪೂಜಾರಿ, ಸಂದೀಪ, ರವಿಕುಮಾರ, ಗಿಡ್ಡೇಗೌಡ ಹಾಗೂ ಇನ್ನಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.ಹಾಸನ ಬಸ್ ನಿಲ್ದಾಣದಲ್ಲಿ ಬಸ್ [&#8230;]]]></description>
										<content:encoded><![CDATA[
<p><strong>ಹಾಸನ</strong> : ಹಾಸನ ತಾಲ್ಲೂಕಿನ ಗೊರೂರು ಬಳಿ ಬಸ್ ಕಂಡಕ್ಟರ್ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.ಗುರುವಾರ ನಡೆದ ಈ ಘಟನೆಯ ಬಗ್ಗೆ ನಿರ್ವಾಹಕ ಬಸವರಾಜು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವನಿತಾ, ಲಕ್ಷ್ಮೀ, ಕುಮಾರ, ತಿಮ್ಮೇಗೌಡ, ಶೇಖರ್ ಪೂಜಾರಿ, ಸಂದೀಪ, ರವಿಕುಮಾರ, ಗಿಡ್ಡೇಗೌಡ ಹಾಗೂ ಇನ್ನಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.ಹಾಸನ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಬೇರೊಂದು ಬಸ್ ನಲ್ಲಿ ಪ್ರಯಾಣಿಸುವಂತೆ ಕಂಡಕ್ಟರ್ ಸೂಚಿಸಿದ್ದರು. ಈ ಸಂಬಂಧ ವಿದ್ಯಾರ್ಥಿನಿಯೊಂದಿಗೆ ಕಂಡಕ್ಟರ್ ವಾಗ್ವಾದ ನಡೆಸಿದ್ದರು. ಈ ಬಗ್ಗೆ ಆಕೆ ದೂರವಾಣಿ ಕರೆ ಮಾಡಿ ಕಂಡಕ್ಟರ್ ಜತೆ ಜಗಳವಾಗಿರುವ ವಿಷಯ ತಿಳಿಸಿದ್ದರು. ಬಸ್ ಗ್ರಾಮಕ್ಕೆ ಬರುತ್ತಿದ್ದಂತೆ ಅಡ್ಡಗಟ್ಟಿದ್ದ ಆಕೆಯ ಪೋಷಕರು ಹಾಗೂ ಗ್ರಾಮಸ್ಥರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿತ್ತು.</p>



<p></p>
]]></content:encoded>
					
		
		
			</item>
	</channel>
</rss>
