<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಬೆಂಗಳೂರು &#8211; Peepal Media</title>
	<atom:link href="https://peepalmedia.com/category/bengaluru/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 24 Jun 2026 11:32:33 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಬೆಂಗಳೂರು &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>RSS ದಾಖಲೆಗಳನ್ನು ನೀಡದಿದ್ದರೆ ಕಾನೂನು ಕ್ರಮ &#8211; ಸಚಿವ ಪ್ರಿಯಾಂಕ್ ಖರ್ಗೆ</title>
		<link>https://peepalmedia.com/rss-documents-are-not-provided-minister-priyank-kharge/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 24 Jun 2026 11:32:32 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=80492</guid>

					<description><![CDATA[ಬೆಂಗಳೂರು:&#160;ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ನೋಂದಣಿ ಬಗ್ಗೆ ಮಾಹಿತಿ ನೀಡುವಂತೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸದಿದ್ದರೆ ಸಂಘದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮಂಗಳವಾರ ಸುಳಿವು ನೀಡಿದ್ದಾರೆ. ನಾನು ಬರೆದ ಪತ್ರಕ್ಕೆ ಆರ್ ಎಸ್ಎಸ್ ನಿಂದ ಯಾವುದೇ ತೃಪ್ತಿದಾಯಕ ಉತ್ತರ ಸಿಗದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ. ಶತಮಾನಗಳಷ್ಟು ಹಳೆಯದಾದ ಆರ್‌ಎಸ್‌ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ ಗೃಹ ಸಚಿವರು, ಆರ್ ಎಸ್ ಎಸ್ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong>&nbsp;ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ನೋಂದಣಿ ಬಗ್ಗೆ ಮಾಹಿತಿ ನೀಡುವಂತೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸದಿದ್ದರೆ ಸಂಘದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮಂಗಳವಾರ ಸುಳಿವು ನೀಡಿದ್ದಾರೆ.</p>



<p class="wp-block-paragraph">ನಾನು ಬರೆದ ಪತ್ರಕ್ಕೆ ಆರ್ ಎಸ್ಎಸ್ ನಿಂದ ಯಾವುದೇ ತೃಪ್ತಿದಾಯಕ ಉತ್ತರ ಸಿಗದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.</p>



<p class="wp-block-paragraph">ಶತಮಾನಗಳಷ್ಟು ಹಳೆಯದಾದ ಆರ್‌ಎಸ್‌ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ ಗೃಹ ಸಚಿವರು, ಆರ್ ಎಸ್ ಎಸ್ ನೋಂದಣಿ ಬಗ್ಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದೇನೆ . ಇದೇ ಅಂತಿಮ ಅಲ್ಲ. ಅವರು ಉತ್ತರ ಕೊಡಲಿ. ತಾಳ್ಮೆಯಿಂದ ಕಾಯೋಣ ಎಂದರು.</p>
]]></content:encoded>
					
		
		
			</item>
		<item>
		<title>ಲಿವ್-ಇನ್ ರಿಲೇಶನ್‌ಶಿಪ್ ಮತ್ತು ಸಾಲ ಮಾಡಿದ್ದನ್ನು ಪ್ರಶ್ನಿಸಿದ ಪೋಷಕರು ಮತ್ತು ತಂಗಿಯನ್ನು ಕೊಂದ ಯುವತಿ</title>
		<link>https://peepalmedia.com/daughter-and-lover-allegedly-kill-parents-and-sister-in-bengaluru-kr-puram/</link>
		
		<dc:creator><![CDATA[Peepal Media]]></dc:creator>
		<pubDate>Wed, 24 Jun 2026 02:01:28 +0000</pubDate>
				<category><![CDATA[ಬೆಂಗಳೂರು]]></category>
		<guid isPermaLink="false">https://peepalmedia.com/?p=80464</guid>

					<description><![CDATA[ಬೆಂಗಳೂರು: &#8220;ಸಹಜೀವನ ತಪ್ಪು ಮಗಳೇ, ಇಷ್ಟೊಂದು ಲಕ್ಷ ರೂಪಾಯಿ ಸಾಲ ಏಕೆ ಮಾಡಿದೆ?&#8221; ಎಂದು ಪ್ರಶ್ನಿಸಿದ ಹೆತ್ತವರ ವಿರುದ್ಧ ಹಗೆ ಸಾಧಿಸಿದ ಹಿರಿಯ ಮಗಳು, ಕಣ್ಣೆದುರೇ ತನ್ನ ಪ್ರೇಮಿಯೊಂದಿಗೆ ಸೇರಿ ಹೆತ್ತ ಅಮ್ಮ-ಅಪ್ಪ ಹಾಗೂ ಒಡಹುಟ್ಟಿದ ತಂಗಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸೋಮವಾರ ನಡೆದಿದೆ. ಪ್ರಾಣ ಉಳಿಸಿಕೊಳ್ಳಲು ತಂದೆ-ತಾಯಿ ಮತ್ತು ತಂಗಿ ಎಷ್ಟೇ ಪ್ರಯತ್ನಿಸಿದರೂ ಬಿಡದ ಹಿರಿಯ ಮಗಳು, ತನ್ನ ಪ್ರಿಯಕರನೊಂದಿಗೆ ಸೇರಿ ಇಡೀ ಕುಟುಂಬವನ್ನೇ ಮುಗಿಸಿದ್ದಾಳೆ. ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> &#8220;ಸಹಜೀವನ ತಪ್ಪು ಮಗಳೇ, ಇಷ್ಟೊಂದು ಲಕ್ಷ ರೂಪಾಯಿ ಸಾಲ ಏಕೆ ಮಾಡಿದೆ?&#8221; ಎಂದು ಪ್ರಶ್ನಿಸಿದ ಹೆತ್ತವರ ವಿರುದ್ಧ ಹಗೆ ಸಾಧಿಸಿದ ಹಿರಿಯ ಮಗಳು, ಕಣ್ಣೆದುರೇ ತನ್ನ ಪ್ರೇಮಿಯೊಂದಿಗೆ ಸೇರಿ ಹೆತ್ತ ಅಮ್ಮ-ಅಪ್ಪ ಹಾಗೂ ಒಡಹುಟ್ಟಿದ ತಂಗಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸೋಮವಾರ ನಡೆದಿದೆ. ಪ್ರಾಣ ಉಳಿಸಿಕೊಳ್ಳಲು ತಂದೆ-ತಾಯಿ ಮತ್ತು ತಂಗಿ ಎಷ್ಟೇ ಪ್ರಯತ್ನಿಸಿದರೂ ಬಿಡದ ಹಿರಿಯ ಮಗಳು, ತನ್ನ ಪ್ರಿಯಕರನೊಂದಿಗೆ ಸೇರಿ ಇಡೀ ಕುಟುಂಬವನ್ನೇ ಮುಗಿಸಿದ್ದಾಳೆ.</p>



<p class="wp-block-paragraph">ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿ ಪ್ರದೇಶದ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸವಾಗಿದ್ದ ಸೋಮಸುಂದರ್ (55), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಮಗಳು ಸುಪ್ರಿಯಾ (20) ಸೋಮವಾರ ದಾರುಣವಾಗಿ ಹತ್ಯೆಗೀಡಾದ ದುರ್ದೈವಿಗಳು. ಕುಟುಂಬದ ಹಿರಿಯ ಮಗಳು ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನ್ನೆತ್ ಈ ತ್ರಿವಳಿ ಕೊಲೆ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆರೋಪಿಗಳಿಬ್ಬರೂ ತಲೆಮರೆಸಿಕೊಂಡಿದ್ದಾರೆ.</p>



<p class="wp-block-paragraph">ಶ್ವೇತಾ ಕಳೆದ ಕೆಲವು ಸಮಯದಿಂದ ಕೆನ್ನೆತ್ ಎಂಬಾತನೊಂದಿಗೆ ಸಹಜೀವನ (ಲಿವ್-ಇನ್ ರಿಲೇಶನ್‌ಶಿಪ್) ನಡೆಸುತ್ತಿದ್ದಳು ಎನ್ನಲಾಗಿದೆ. ಈ ನಡವಳಿಕೆಯನ್ನು ತಿದ್ದಿಕೊಳ್ಳುವಂತೆ ಹಾಗೂ ಜೀವನದ ಶೈಲಿಯನ್ನು ಬದಲಾಯಿಸಿಕೊಳ್ಳುವಂತೆ ಹೆತ್ತವರು ಆಕೆಯನ್ನು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಈ ಭೀಕರ ಕೃತ್ಯ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ </p>
]]></content:encoded>
					
		
		
			</item>
		<item>
		<title>ರಾಮನ ಹೆಸರಿನಲ್ಲಿ ಬಿಜೆಪಿ 5,000 ಕೋಟಿ ಲೂಟಿ &#8211; ಮಲ್ಲಿಕಾರ್ಜುನ ಖರ್ಗೆ ಕಿಡಿ</title>
		<link>https://peepalmedia.com/bjp-looted-rs-5000-crore-in-the-name-of-ram/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 22 Jun 2026 05:29:13 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=80373</guid>

					<description><![CDATA[ಬೆಂಗಳೂರು: ಧರ್ಮದ ಹೆಸರಿನಲ್ಲಿ &#8216;ಲೂಟಿ&#8217; ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದ ಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಖರ್ಗೆ, ಅಯೋಧ್ಯೆಯಲ್ಲಿ ರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸುಮಾರು 5,000 ಕೋಟಿ ರೂ. ದುರುಪಯೋಗವಾಗಿದೆ ಎಂಬ ವರದಿಗಳಿವೆ. ಅರ್ಚಕರು ಹಣವನ್ನು ದೋಚುತ್ತಿದ್ದಾರೆ. ರಾಮನ ಹೆಸರನ್ನು ಜಪಿಸಿ ಬೇರೆಯವರ ಆಸ್ತಿಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ರಾಮನ ಹೆಸರಿನಲ್ಲಿ ಲೂಟಿ ನಡೆದಿದೆ. ಕೋಟ್ಯಂತರ ರೂಪಾಯಿಗಳನ್ನು [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> ಧರ್ಮದ ಹೆಸರಿನಲ್ಲಿ &#8216;ಲೂಟಿ&#8217; ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದ ಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಖರ್ಗೆ, ಅಯೋಧ್ಯೆಯಲ್ಲಿ ರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.</p>



<p class="wp-block-paragraph">ಸುಮಾರು 5,000 ಕೋಟಿ ರೂ. ದುರುಪಯೋಗವಾಗಿದೆ ಎಂಬ ವರದಿಗಳಿವೆ. ಅರ್ಚಕರು ಹಣವನ್ನು ದೋಚುತ್ತಿದ್ದಾರೆ. ರಾಮನ ಹೆಸರನ್ನು ಜಪಿಸಿ ಬೇರೆಯವರ ಆಸ್ತಿಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ರಾಮನ ಹೆಸರಿನಲ್ಲಿ ಲೂಟಿ ನಡೆದಿದೆ. ಕೋಟ್ಯಂತರ ರೂಪಾಯಿಗಳನ್ನು ಲೂಟಿ ಮಾಡಲು ದೇವಾಲಯವನ್ನು ನಿರ್ಮಿಸಲಾಗಿದೆ&#8221; ಎಂದು ಅವರು ಆರೋಪಿಸಿದರು.</p>



<p class="wp-block-paragraph">ದೇವಾಲಯಗಳನ್ನು ಸಾಮಾನ್ಯವಾಗಿ ಸ್ವಾಮೀಜಿಗಳು ಮತ್ತು ಮಠಾಧೀಶರು ಉದ್ಘಾಟಿಸುತ್ತಾರೆ, ಆದರೆ ರಾಮ ಮಂದಿರವನ್ನು ಪ್ರಧಾನಿಯೇ ಉದ್ಘಾಟಿಸಿದ್ದಾರೆ. ದೇವಾಲಯದ ಹುಂಡಿಯಿಂದ ಬರುವ ಹಣ ಎಲ್ಲೋ ಹೋಗುತ್ತಿದೆ. ಅವರ ಸ್ವಂತ ಜನರು ಇದರ ಹಿಂದೆ ಇದ್ದಾರೆಯೇ ಅಥವಾ ಬೇರೆ ಯಾರಾದರೂ ಇದ್ದಾರೆಯೇ ಎಂಬುದನ್ನು ತನಿಖೆ ಮಾಡಬೇಕು&#8221; ಎಂದು ಅವರು ಒತ್ತಾಯಿಸಿದರು. ಇದೇ ವೇಳೆ ನೀಟ್ ಪರೀಕ್ಷೆ ವಿಚಾರದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮೋದಿ ಸರ್ಕಾರ ದ್ರೋಹ ಮಾಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>



<p class="wp-block-paragraph">ಮೋದಿ ಹಾಗೂ ಟ್ರಂಪ್ ತಮ್ಮನ್ನು ತಾವು ಒಳ್ಳೆಯ ಸ್ನೇಹಿತರು ಎಂದು ಕರೆದುಕೊಳ್ಳುತ್ತಾರೆ. ಆದರೆ, ಮೋದಿ ದೇಶವನ್ನು ನಾಶಪಡಿಸುತ್ತಿದ್ದರೆ, ಟ್ರಂಪ್ ಇಡೀ ಜಗತ್ತನ್ನು ನಾಶಪಡಿಸುತ್ತಿದ್ದಾರೆ. ನಿಮ್ಮಿಬ್ಬರಿಂದ ಜನರು ಬಳಲುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>



<p class="wp-block-paragraph">ಇಂಧನ ಬೆಲೆ ಏರಿಕೆಗೆ ಟ್ರಂಪ್ ಅವರನ್ನು ದೂಷಿಸಿದ ಖರ್ಗೆ, ನೆಹರೂ ಕಾಲದಿಂದಲೂ ಭಾರತ ಅಲಿಪ್ತ ನೀತಿಯನ್ನು ಅನುಸರಿಸುತ್ತಿದೆ ಮತ್ತು ಎಲ್ಲಾ ದೇಶಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ. ಆದರೆ ಆ ನೀತಿಯನ್ನು ಕೈಬಿಡಲಾಗಿದೆ. ಮೋದಿ ಎಲ್ಲರನ್ನೂ ತನ್ನ ಸ್ನೇಹಿತರು ಎಂದು ಕರೆಯುವ ಮೂಲಕ ಮತ್ತು ಅವರನ್ನು ಅಪ್ಪಿಕೊಳ್ಳುವ ಮೂಲಕ ನಮ್ಮನ್ನು ಈ ಪರಿಸ್ಥಿತಿಗೆ ತಂದಿದ್ದಾರೆ ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಸಾರಿಗೆ ದರ ಹೆಚ್ಚಳ ಪ್ರಸ್ತಾಪಕ್ಕೆ ಜನಾಕ್ರೋಶ &#8211; ಗಂಡಸರಿಗೆ ಡಬಲ್ ಚಾರ್ಜ್</title>
		<link>https://peepalmedia.com/public-outrage-over-proposed-transport-fare-hike/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 22 Jun 2026 05:00:02 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=80365</guid>

					<description><![CDATA[ಬೆಂಗಳೂರು : ರಾಜ್ಯದ (Karnataka) ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವ ಲಕ್ಷಣಗಳು ದಟ್ಟವಾಗಿವೆ. ಈಗಾಗಲೇ ವಿವಿಧ ಆರ್ಥಿಕ ಸಂಕಷ್ಟಗಳಿಂದ ತತ್ತರಿಸುತ್ತಿರುವ ಸಾರಿಗೆ ನಿಗಮಗಳು ಇದೀಗ ಬಸ್ ಟಿಕೆಟ್ (Bus Ticket) ದರವನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿವೆ. ‌ಇದರಿಂದ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಫ್ರೀ ಟಿಕೆಟ್‌ ಲಭಿಸಿದರೂ ಗಂಡಸರಿಗೆ ಮಾತ್ರ ಡಬಲ್‌ ಚಾರ್ಜ್‌ನ ಹೊರೆ ಎದುರಾಗುವ ಸಾಧ್ಯತೆ ಇದೆ. ಕಳೆದ ವರ್ಷದ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು :</strong> ರಾಜ್ಯದ (Karnataka) ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವ ಲಕ್ಷಣಗಳು ದಟ್ಟವಾಗಿವೆ. ಈಗಾಗಲೇ ವಿವಿಧ ಆರ್ಥಿಕ ಸಂಕಷ್ಟಗಳಿಂದ ತತ್ತರಿಸುತ್ತಿರುವ ಸಾರಿಗೆ ನಿಗಮಗಳು ಇದೀಗ ಬಸ್ ಟಿಕೆಟ್ (Bus Ticket) ದರವನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿವೆ. ‌ಇದರಿಂದ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಫ್ರೀ ಟಿಕೆಟ್‌ ಲಭಿಸಿದರೂ ಗಂಡಸರಿಗೆ ಮಾತ್ರ ಡಬಲ್‌ ಚಾರ್ಜ್‌ನ ಹೊರೆ ಎದುರಾಗುವ ಸಾಧ್ಯತೆ ಇದೆ.</p>



<p class="wp-block-paragraph">ಕಳೆದ ವರ್ಷದ ಜನವರಿಯಲ್ಲಷ್ಟೇ ಶೇ 15 ರಷ್ಟು ದರ ಏರಿಕೆ ಮಾಡಿದ್ದ ನಿಗಮಗಳು, ಇದೀಗ ಕೇವಲ ಒಂದೂವರೆ ವರ್ಷದ ಅವಧಿಯಲ್ಲಿ ಮತ್ತೆ ಬೆಲೆ ಏರಿಕೆಗೆ ಮುಂದಾಗಿರುವುದು ಪ್ರಯಾಣಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಸಂಘರ್ಷಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಷ್ಟು ದುಬಾರಿಯಾಗಿದೆ. ಇದರಿಂದಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ಸುಮಾರು 40 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ನಷ್ಟವಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ವಾರ್ಷಿಕ ನಷ್ಟದ ಪ್ರಮಾಣ 480 ಕೋಟಿ ರೂಪಾಯಿ ದಾಟುವ ಆತಂಕ ಎದುರಾಗಿದ್ದು, ದರ ಏರಿಕೆ ಮಾಡದೆ ಸಂಸ್ಥೆಗಳನ್ನು ನಡೆಸುವುದು ಅಸಾಧ್ಯ ಎನ್ನುವುದು ಅಧಿಕಾರಿಗಳ ವಾದವಾಗಿದೆ.</p>



<p class="wp-block-paragraph">ಇಂಧನ ದರ ಏರಿಕೆಯ ಜೊತೆಗೆ ಸಾರಿಗೆ ಸಂಸ್ಥೆಗಳ ಮೇಲೆ ಇತರೆ ಆರ್ಥಿಕ ಹೊರೆಗಳೂ ಹೆಚ್ಚಾಗಿವೆ. ಬರುವ ಜುಲೈ ತಿಂಗಳಿನಿಂದ ನೌಕರರಿಗೆ ಶೇಕಡಾ 12.5 ರಷ್ಟು ಹೊಸ ವೇತನ ನೀಡಬೇಕಾಗಿದ್ದು, ಹಳೆಯ ವೇತನ ಬಾಕಿ ಮೊತ್ತದಲ್ಲಿ ಇನ್ನೂ 821 ಕೋಟಿ ರೂಪಾಯಿಗಳನ್ನು ಪಾವತಿಸಬೇಕಿದೆ. ಇದರೊಂದಿಗೆ, ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ನಿಗಮಗಳಿಗೆ ಬರಬೇಕಿರುವ ಸುಮಾರು 5,000 ಕೋಟಿ ರೂಪಾಯಿಗಳ ಅನುದಾನವೂ ಬಾಕಿ ಉಳಿದಿದೆ. ಈ ಎಲ್ಲಾ ಕಾರಣಗಳಿಂದಾಗಿ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಇಕ್ಕಟ್ಟಿಗೆ ಸಿಲುಕಿದೆ.</p>



<p class="wp-block-paragraph">ಇತ್ತ ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಷಕ್ಕೊಮ್ಮೆ ದರ ಹೆಚ್ಚಿಸಿದರೆ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದು ಹೇಗೆ ಎಂದು ಪ್ರಯಾಣಿಕರು ಪ್ರಶ್ನಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಟಿಕೆಟ್ ದರವನ್ನು ಎಲ್ಲರಿಗೂ ಹೆಚ್ಚಿಸುವ ಬದಲು ಸದ್ಯ ಉಚಿತವಾಗಿ ಪ್ರಯಾಣಿಸುತ್ತಿರುವ ಮಹಿಳೆಯರಿಂದ ಕನಿಷ್ಠ ಅರ್ಧದಷ್ಟಾದರೂ ಹಣ ಪಡೆದರೆ ನಿಗಮಗಳ ನಷ್ಟ ತುಂಬಬಹುದು ಎಂದು ಸಾರ್ವಜನಿಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಸದ್ಯ ಸಾರಿಗೆ ಸಂಸ್ಥೆಗಳ ಈ ಮನವಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಾರಾ ಇಲ್ಲವಾ ಎಂಬುದನ್ನು ಕಾದು ನೋಡಬೇಕಿದೆ.</p>
]]></content:encoded>
					
		
		
			</item>
		<item>
		<title>ಪೊಲೀಸ್‌ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ &#8211; ಇಲ್ಲಿದೆ ಲಿಂಕ್</title>
		<link>https://peepalmedia.com/applications-invited-for-constable-posts-in-the-police-department/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 22 Jun 2026 04:47:53 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=80362</guid>

					<description><![CDATA[ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ ಸಂಸ್ಥಯೆ ಹೆಸರು – ಕರ್ನಾಟಕ ರಾಜ್ಯ ಪೊಲೀಸ್‌ ಹುದ್ದೆಯ ಹೆಸರು – ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ (CAR/DAR) ಖಾಲಿ ಹುದ್ದೆಗಳ ಸಂಖ್ಯೆ – 1600 ಉದ್ಯೋಗ ಸ್ಥಳ – ಕರ್ನಾಟಕ ವೇತನ – 37500-76100 ರೂ. ಮಾಸಿಕ ವಿದ್ಯಾರ್ಹತೆ – 12 ನೇ ತರಗತಿ ವಯೋಮಿತಿ – ಗರಿಷ್ಠ 38 ವರ್ಷ ವಯೋಮಿತಿ ಸಡಿಲಿಕೆ – ಓಬಿಸಿ, 2ಎ, [&#8230;]]]></description>
										<content:encoded><![CDATA[
<p class="wp-block-paragraph">ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ</p>



<p class="wp-block-paragraph">ಸಂಸ್ಥಯೆ ಹೆಸರು – ಕರ್ನಾಟಕ ರಾಜ್ಯ ಪೊಲೀಸ್‌</p>



<p class="wp-block-paragraph">ಹುದ್ದೆಯ ಹೆಸರು – ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ (CAR/DAR)</p>



<p class="wp-block-paragraph">ಖಾಲಿ ಹುದ್ದೆಗಳ ಸಂಖ್ಯೆ – 1600</p>



<p class="wp-block-paragraph">ಉದ್ಯೋಗ ಸ್ಥಳ – ಕರ್ನಾಟಕ</p>



<p class="wp-block-paragraph">ವೇತನ – 37500-76100 ರೂ. ಮಾಸಿಕ</p>



<p class="wp-block-paragraph">ವಿದ್ಯಾರ್ಹತೆ – 12 ನೇ ತರಗತಿ</p>



<p class="wp-block-paragraph">ವಯೋಮಿತಿ – ಗರಿಷ್ಠ 38 ವರ್ಷ</p>



<p class="wp-block-paragraph">ವಯೋಮಿತಿ ಸಡಿಲಿಕೆ – ಓಬಿಸಿ, 2ಎ, 2ಬಿ, 3ಎ,3ಬಿ, ಅಭ್ಯರ್ಥಿಗಳಿಗೆ 2 ವರ್ಷ, ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ</p>



<p class="wp-block-paragraph">ಅರ್ಜಿ ಶುಲ್ಕ – 750 ರೂ. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 500 ರೂ.</p>



<p class="wp-block-paragraph">ನೇಮಕಾತಿ ವಿಧಾನ – ಲಿಖಿತ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ</p>



<p class="wp-block-paragraph">ಅರ್ಜಿ ಸಲ್ಲಿಸಲು ಕೊನೆಯ ದಿನಾಂಖ – 22-07-2026</p>



<p class="wp-block-paragraph">ಅಧಿಕೃತ ವೆಬ್‌ಸೈಟ್‌ ವಿಳಾಸ –&nbsp;<a href="http://ksp.karnataka.gov.in/">http://ksp.karnataka.gov.in</a></p>
]]></content:encoded>
					
		
		
			</item>
		<item>
		<title>ವರ್ತೂರು ಒಳಚರಂಡಿ ಘಟಕದ ದುರಂತ: ಇಂಜಿನಿಯರ್ ಮೃತದೇಹ ಪತ್ತೆ, ಮತ್ತೊಬ್ಬ ಕಾರ್ಮಿಕನಿಗಾಗಿ ಮುಂದುವರಿದ ಶೋಧ!</title>
		<link>https://peepalmedia.com/varthur-sewage-treatment-plant-accident-bengaluru-worker-remains-untraced/</link>
		
		<dc:creator><![CDATA[Peepal Media]]></dc:creator>
		<pubDate>Mon, 22 Jun 2026 02:04:51 +0000</pubDate>
				<category><![CDATA[ಬೆಂಗಳೂರು]]></category>
		<guid isPermaLink="false">https://peepalmedia.com/?p=80341</guid>

					<description><![CDATA[ಬೆಂಗಳೂರು: ವರ್ತೂರಿನಲ್ಲಿರುವ ಬೆಂಗಳೂರು ಜಲಮಂಡಳಿ (BWSSB) ಘಟಕದ ಒಳಚರಂಡಿ ಸಂಸ್ಕರಣಾ ಘಟಕದ (STP) ವೆಟ್ ವೆಲ್‌ಗೆ ಬಿದ್ದು ನಾಪತ್ತೆಯಾಗಿರುವ ಕಾರ್ಮಿಕನಿಗಾಗಿ ರಕ್ಷಣಾ ತಂಡಗಳು ಸುದೀರ್ಘ ಶೋಧ ಕಾರ್ಯವನ್ನು ಮುಂದುವರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಕಾರ್ಮಿಕನನ್ನು ಬಿಹಾರ ಮೂಲದ 27 ವರ್ಷದ ಬ್ರಿಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಜೂನ್ 18 ರಂದು ಸಂಜೆ 5 ರಿಂದ 6 ರ ನಡುವೆ ಬಾಲಗೆರೆ ರಸ್ತೆ ಬಳಿಯಿರುವ ಘಟಕದ ವೆಟ್ ವೆಲ್ ಒಳಗಡೆ ಬ್ರಿಜೇಶ್ ಕುಮಾರ್ ಹಾಗೂ ಅವರ ಇಬ್ಬರು [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> ವರ್ತೂರಿನಲ್ಲಿರುವ ಬೆಂಗಳೂರು ಜಲಮಂಡಳಿ (BWSSB) ಘಟಕದ ಒಳಚರಂಡಿ ಸಂಸ್ಕರಣಾ ಘಟಕದ (STP) ವೆಟ್ ವೆಲ್‌ಗೆ ಬಿದ್ದು ನಾಪತ್ತೆಯಾಗಿರುವ ಕಾರ್ಮಿಕನಿಗಾಗಿ ರಕ್ಷಣಾ ತಂಡಗಳು ಸುದೀರ್ಘ ಶೋಧ ಕಾರ್ಯವನ್ನು ಮುಂದುವರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<p class="wp-block-paragraph">ನಾಪತ್ತೆಯಾಗಿರುವ ಕಾರ್ಮಿಕನನ್ನು ಬಿಹಾರ ಮೂಲದ 27 ವರ್ಷದ ಬ್ರಿಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಜೂನ್ 18 ರಂದು ಸಂಜೆ 5 ರಿಂದ 6 ರ ನಡುವೆ ಬಾಲಗೆರೆ ರಸ್ತೆ ಬಳಿಯಿರುವ ಘಟಕದ ವೆಟ್ ವೆಲ್ ಒಳಗಡೆ ಬ್ರಿಜೇಶ್ ಕುಮಾರ್ ಹಾಗೂ ಅವರ ಇಬ್ಬರು ಸಹೋದ್ಯೋಗಿಗಳು ಬಿದ್ದಿದ್ದರು. ಇವರಲ್ಲಿ ಕುಮಾರ್ ಮತ್ತು ಮೇಲ್ವಿಚಾರಣೆ ನಡೆಸುತ್ತಿದ್ದ ಇಂಜಿನಿಯರ್ ಅಗಿಲನ್ ಮೋಹನ್ ಅವರು ಒಳಚರಂಡಿ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದರೆ, ಮೂರನೇ ಕಾರ್ಮಿಕ ಕಾರ್ತಿಕ್ ಎಂಬುವವರು ಹೇಗೋ ಪ್ರಾಣಾಪಾಯದಿಂದ ಪಾರಾಗಿದ್ದರು. ಇಂಜಿನಿಯರ್ ಮೋಹನ್ ಮೃತದೇಹವು ಜೂನ್ 20 ರ ಮುಂಜಾನೆ ಪತ್ತೆಯಾಗಿದ್ದು, ಬ್ರಿಜೇಶ್ ಕುಮಾರ್ ಈವರೆಗೂ ಪತ್ತೆಯಾಗಿಲ್ಲ.</p>



<p class="wp-block-paragraph">ಬಾವಿಯ ಒಳಗಿದ್ದ ಸಣ್ಣ ಮೆಟ್ಟಿಲುಗಳ ಮೇಲೆ ನಿಂತಿದ್ದಾಗ ಬ್ರಿಜೇಶ್ ಕುಮಾರ್ ಆಕಸ್ಮಿಕವಾಗಿ ಜಾರಿದ್ದರು. ಈ ವೇಳೆ ಕೆಲಸದ ಮೇಲ್ವಿಚಾರಣೆ ನಡೆಸುತ್ತಿದ್ದ ಇಂಜಿನಿಯರ್ ಮೋಹನ್ ಅವರು ಕುಮಾರ್ ಅವರ ಬೆಲ್ಟ್ ಹಿಡಿದು ರಕ್ಷಿಸಲು ಪ್ರಯತ್ನಿಸಿದಾಗ, ನಿಯಂತ್ರಣ ತಪ್ಪಿ ಇಬ್ಬರೂ ಒಳಗಡೆ ಬಿದ್ದಿದ್ದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಜಂಟಿಯಾಗಿ ನಿರಂತರ ಶೋಧ ಕಾರ್ಯ ಕೈಗೊಂಡಿವೆ.</p>



<p class="wp-block-paragraph">ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಂತೋಷ್ ಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ವರ್ತೂರು ಪೊಲೀಸರು &#8216;ವಾಟೆಕ್ ವಬಾಗ್ ಲಿಮಿಟೆಡ್&#8217; (Vatech Wabag Ltd) ಎಂಬ ಖಾಸಗಿ ಕಂಪನಿಯ ವಿರುದ್ಧ ಜೀವಕ್ಕೆ ಅಥವಾ ವೈಯಕ್ತಿಕ ಸುರಕ್ಷತೆಗೆ ಧಕ್ಕೆ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೆನ್ನೈ ಮೂಲದ ಈ ಕಂಪನಿಯು ಐದು ವರ್ಷಗಳ ಅವಧಿಗೆ ಈ ಘಟಕದ ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ಪಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ವೆಟ್ ವೆಲ್‌ನ ಹಿಂಭಾಗದ ಗೇಟ್ ಬಳಿ ಕೆಲಸ ನಡೆಯುತ್ತಿದ್ದಾಗ ಈ ಭೀಕರ ಘಟನೆ ಸಂಭವಿಸಿದೆ.</p>



<p class="wp-block-paragraph">ಕೆಲಸದ ಅವಧಿಯಲ್ಲಿ ಕಂಪನಿಯು ಜಲಮಂಡಳಿಯ ಸುರಕ್ಷತಾ ನಿಯಮಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ, ಹೀಗಾಗಿ ಇದನ್ನು ಕ್ರಿಮಿನಲ್ ನಿರ್ಲಕ್ಷ್ಯ ಎಂದು ಪರಿಗಣಿಸಿ ಮೊಕದ್ದಮೆ ಹೂಡಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಕಂಪನಿಗೆ ಈಗಾಗಲೇ ಅಧಿಕೃತ ನೋಟಿಸ್ ಜಾರಿ ಮಾಡಲಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಮತ್ತೊಂದೆಡೆ, ಈ ಭೀಕರ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಜಲಮಂಡಳಿಯು ಮೂವರು ಹಿರಿಯ ಅಧಿಕಾರಿಗಳನ್ನೊಳಗೊಂಡ ವಿಶೇಷ ಸಮಿತಿಯನ್ನು ರಚಿಸಿದೆ.</p>



<h3 class="wp-block-heading"></h3>
]]></content:encoded>
					
		
		
			</item>
		<item>
		<title>ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಜೆಡಿಎಸ್ ಪಕ್ಷಕ್ಕೆ ಸಂಬಂಧಿಸಿದ ಫೇಸ್‌ಬುಕ್ ಪುಟದ ವಿರುದ್ಧ ಎಫ್‌ಐಆರ್ ದಾಖಲು!</title>
		<link>https://peepalmedia.com/fir-registered-against-jds-and-another-facebook-page-for-derogatory-remarks-on-cm-dk-shivakumar/</link>
		
		<dc:creator><![CDATA[Peepal Media]]></dc:creator>
		<pubDate>Mon, 22 Jun 2026 02:00:16 +0000</pubDate>
				<category><![CDATA[ಬೆಂಗಳೂರು]]></category>
		<guid isPermaLink="false">https://peepalmedia.com/?p=80339</guid>

					<description><![CDATA[ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ &#8220;ಸುಳ್ಳು ಮತ್ತು ಅವಹೇಳನಕಾರಿ&#8221; ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೆಲವು ಫೇಸ್‌ಬುಕ್ ಪುಟಗಳ ಅಡ್ಮಿನ್‌ಗಳ ವಿರುದ್ಧ ಅಧಿಕೃತವಾಗಿ ಮೊಕದ್ದಮೆ (FIR) ದಾಖಲಿಸಿಕೊಂಡಿದ್ದಾರೆ. ನ್ಯಾಯವಾದಿ ದೀಪು ಸಿ.ಆರ್. ಎಂಬುವರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20 ರಂದು ಈ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಜೂನ್ 17 ರಂದು ‘ಕುಮಾರಸ್ವಾಮಿ ಫಾರ್ ಸಿಎಂ’ (Kumaraswamy [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ &#8220;ಸುಳ್ಳು ಮತ್ತು ಅವಹೇಳನಕಾರಿ&#8221; ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೆಲವು ಫೇಸ್‌ಬುಕ್ ಪುಟಗಳ ಅಡ್ಮಿನ್‌ಗಳ ವಿರುದ್ಧ ಅಧಿಕೃತವಾಗಿ ಮೊಕದ್ದಮೆ (FIR) ದಾಖಲಿಸಿಕೊಂಡಿದ್ದಾರೆ.</p>



<p class="wp-block-paragraph">ನ್ಯಾಯವಾದಿ ದೀಪು ಸಿ.ಆರ್. ಎಂಬುವರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20 ರಂದು ಈ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಜೂನ್ 17 ರಂದು ‘ಕುಮಾರಸ್ವಾಮಿ ಫಾರ್ ಸಿಎಂ’ (Kumaraswamy for CM) ಮತ್ತು ‘ಜನತಾ ದಳ ಸೆಕ್ಯುಲರ್’ (Janata Dal Secular) ಎಂಬ ಹೆಸರಿನ ಫೇಸ್‌ಬುಕ್ ಪುಟಗಳಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿತ್ತು. &#8220;ಹಳೇ ಚಾಳಿ ಮತ್ತೆ ಶುರು; ಹುಟ್ಟ ಗುಣ ಸುಟ್ಟರೂ ಹೋಗಲ್ಲ&#8221; ಎಂಬ ಶೀರ್ಷಿಕೆಯಡಿಯಲ್ಲಿ ಈ ಪೋಸ್ಟ್‌ಗಳನ್ನು ಪ್ರಕಟಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>



<p class="wp-block-paragraph">ಗಲಭೆ ಅಥವಾ ಸಾರ್ವಜನಿಕ ಶಾಂತಿಭಂಗ ಉಂಟುಮಾಡುವ ದುರುದ್ದೇಶದಿಂದ ಪ್ರಚೋದನೆ ನೀಡುವುದಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ತನಿಖೆಯನ್ನು ತೀವ್ರಗೊಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಬಿಜೆಪಿ, ಆರ್‌ಎಸ್‌ಎಸ್‌ಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ</title>
		<link>https://peepalmedia.com/siddaramaiah-slams-bjp-rss-at-bk-hariprasad-kpcc-president-charge-taking-event/</link>
		
		<dc:creator><![CDATA[Peepal Media]]></dc:creator>
		<pubDate>Mon, 22 Jun 2026 01:55:32 +0000</pubDate>
				<category><![CDATA[ಬೆಂಗಳೂರು]]></category>
		<guid isPermaLink="false">https://peepalmedia.com/?p=80332</guid>

					<description><![CDATA[ಬೆಂಗಳೂರು: &#8220;ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ (RSS) ನಮ್ಮ ದೇಶದ ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲ. ಈ ದೇಶದಲ್ಲಿ ಸಂವಿಧಾನದ ವಿರೋಧಿಗಳು ಯಾರಾದರೂ ಇದ್ದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಮಾತ್ರ,&#8221; ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ವೇಳೆ, ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> &#8220;ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ (RSS) ನಮ್ಮ ದೇಶದ ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲ. ಈ ದೇಶದಲ್ಲಿ ಸಂವಿಧಾನದ ವಿರೋಧಿಗಳು ಯಾರಾದರೂ ಇದ್ದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಮಾತ್ರ,&#8221; ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>



<p class="wp-block-paragraph">ಇದೇ ವೇಳೆ, ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದ ಮಾಜಿ ಮುಖ್ಯಮಂತ್ರಿಗಳು, ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ ಸಲ್ಲಿಸಿದರು. ತಳಮಟ್ಟದಿಂದ, ಸಾಮಾನ್ಯ ಕಾರ್ಯಕರ್ತರಾಗಿ ಬಂದು ಐದು ದಶಕಗಳ ಕಾಲ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಹರಿಪ್ರಸಾದ್ ಅವರ ಸಿದ್ಧಾಂತ ಬದ್ಧತೆಯು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>



<p class="wp-block-paragraph">ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, &#8220;ಕಳೆದ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಬಹುತ್ವವನ್ನು ಹಾಳುಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಧರ್ಮ, ಜಾತಿ ಹಾಗೂ ಸಂಸ್ಕೃತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೆಲಸವಾಗುತ್ತಿದೆ. ಆರ್‌ಎಸ್‌ಎಸ್‌ನ ಸಂಸ್ಥಾಪಕ ಹೆಗ್ಡೆವಾರ್ ಅವರು ಇಟಲಿಯ ಮುಸಲೋನಿ ಮತ್ತು ಜರ್ಮನಿಯ ಹಿಟ್ಲರ್ ಅವರ ಸರ್ವಾಧಿಕಾರಿ ಆಡಳಿತವನ್ನು ಭಾರತದಲ್ಲಿ ಹುಟ್ಟುಹಾಕಲು ಪ್ರಯತ್ನಿಸಿದ್ದರು. ಇವರ ಸಂವಿಧಾನ ವಿರೋಧಿ ಧೋರಣೆಯನ್ನು ಅರಿತು, ದೇಶದ ಬಹುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ನಮ್ಮ ಕಾರ್ಯಕರ್ತರು ಸನ್ನದ್ಧರಾಗಬೇಕು. ಬಿಜೆಪಿಯವರು ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ಸುಳ್ಳುಗಳನ್ನು ತಡೆದು ಜನರನ್ನು ಜಾಗೃತಗೊಳಿಸಬೇಕಿದೆ,&#8221; ಎಂದರು.</p>



<p class="wp-block-paragraph">ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಐದು ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ , &#8220;ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 40 ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೇವೆ. ಖಜಾನೆ ಖಾಲಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿರೋಧ ಪಕ್ಷದವರು ನುಡಿದಿದ್ದ ಭವಿಷ್ಯವನ್ನು ಸುಳ್ಳು ಮಾಡಿ, ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ 5 ವಿಧಾನಸಭಾ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವುದು ನಮ್ಮ ಗ್ಯಾರಂಟಿ ಯೋಜನೆಗಳ ಮೇಲಿನ ಜನರ ಪ್ರೀತಿ ಮತ್ತು ವಿಶ್ವಾಸಕ್ಕೆ ಸಾಕ್ಷಿಯಾಗಿದೆ,&#8221; ಎಂದು ಹೆಮ್ಮೆಯಿಂದ ನುಡಿದರು.</p>



<p class="wp-block-paragraph">ಮುಂಬರುವ 2028ರ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವಂತೆ ಕರೆ ನೀಡಿದ ಸಿದ್ದರಾಮಯ್ಯ, &#8220;ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಜಿಲ್ಲಾ, ತಾಲ್ಲೂಕು ಮತ್ತು ಬೂತ್ ಮಟ್ಟದಲ್ಲಿ ಶಿಬಿರಗಳನ್ನು ನಡೆಸಿ ಪಕ್ಷದ ಸಿದ್ಧಾಂತವನ್ನು ಗಟ್ಟಿಗೊಳಿಸಬೇಕು. 2028ರಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಮತ್ತು 2029ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದು ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನ ಮಂತ್ರಿಯನ್ನಾಗಿ ಮಾಡುವ ದೃಢ ಸಂಕಲ್ಪವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕು,&#8221; ಎಂದು ಕರೆ ನೀಡಿದರು.</p>
]]></content:encoded>
					
		
		
			</item>
		<item>
		<title>ಪರಿಷತ್‌ ಸೋಲು &#124; ನಾನು ಯಡಿಯೂರಪ್ಪನವರ ಮಗ, ಸೋಲಿಗೆ ಹೆದರಿ ಓಡಿಹೋಗುವವನಲ್ಲ: ಬಿ.ವೈ. ವಿಜಯೇಂದ್ರ</title>
		<link>https://peepalmedia.com/by-vijayendra-slams-rebels-and-dk-shivakumar-over-cross-voting/</link>
		
		<dc:creator><![CDATA[Peepal Media]]></dc:creator>
		<pubDate>Sat, 20 Jun 2026 06:36:06 +0000</pubDate>
				<category><![CDATA[ಬೆಂಗಳೂರು]]></category>
		<guid isPermaLink="false">https://peepalmedia.com/?p=80315</guid>

					<description><![CDATA[ಬೆಂಗಳೂರು: &#8220;ನನ್ನ ಹಣೆಬರಹದಲ್ಲಿ ಏನಿದೆಯೋ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹಾಗೆಯೇ ಬೇರೆಯವರ ಹಣೆಬರಹವನ್ನು ಬದಲಾಯಿಸಲು ನನ್ನಿಂದಲೂ ಆಗುವುದಿಲ್ಲ. ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಹೆದರಿ ಓಡಿಹೋಗುವವ ನಾನಲ್ಲ, ನಾನು ಬಿ.ಎಸ್. ಯಡಿಯೂರಪ್ಪನವರ ಮಗ,&#8221; ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಡಾಯ ನಾಯಕರು ಹಾಗೂ ವಿರೋಧಿಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಹಿನ್ನೆಲೆಯಲ್ಲಿ ತಮಗೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪಬಹುದು ಎಂಬ ವದಂತಿಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಅತ್ಯಂತ ಕಡಕ್ ಆಗಿ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> &#8220;ನನ್ನ ಹಣೆಬರಹದಲ್ಲಿ ಏನಿದೆಯೋ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹಾಗೆಯೇ ಬೇರೆಯವರ ಹಣೆಬರಹವನ್ನು ಬದಲಾಯಿಸಲು ನನ್ನಿಂದಲೂ ಆಗುವುದಿಲ್ಲ. ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಹೆದರಿ ಓಡಿಹೋಗುವವ ನಾನಲ್ಲ, ನಾನು ಬಿ.ಎಸ್. ಯಡಿಯೂರಪ್ಪನವರ ಮಗ,&#8221; ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಡಾಯ ನಾಯಕರು ಹಾಗೂ ವಿರೋಧಿಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.</p>



<p class="wp-block-paragraph">ರಾಜ್ಯಸಭಾ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಹಿನ್ನೆಲೆಯಲ್ಲಿ ತಮಗೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪಬಹುದು ಎಂಬ ವದಂತಿಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಅತ್ಯಂತ ಕಡಕ್ ಆಗಿ ಉತ್ತರಿಸಿದ್ದಾರೆ. ಇಂತಹ ಸವಾಲುಗಳನ್ನು ಅರಗಿಸಿಕೊಳ್ಳುವ ಮತ್ತು ಎದುರಿಸುವ ಸಂಪೂರ್ಣ ಶಕ್ತಿ ತಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ತಾವು ಪಕ್ಷದ ಅಧ್ಯಕ್ಷರಾಗಿ ಯಾರಿಗೆ ಏನು ಹೇಳಬೇಕೋ ಅದನ್ನು ಸೂಕ್ತ ವೇದಿಕೆಯಲ್ಲಿ ಖಂಡಿತವಾಗಿ ಹೇಳುವುದಾಗಿ ತಿಳಿಸಿದರು.</p>



<p class="wp-block-paragraph"> ಚುನಾವಣಾ ತಂತ್ರಗಾರಿಕೆಯ ಕುರಿತು ಮಾತನಾಡಿದ ವಿಜಯೇಂದ್ರ, &#8220;ಎಂಟು-ಹತ್ತು ದಿನಗಳ ಹಿಂದೆಯೇ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿಯವರು ನನಗೆ ಕರೆ ಮಾಡಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದರು. ಎರಡೂ ಪಕ್ಷಗಳಲ್ಲಿ ಯಾರಾದರೂ ಒಬ್ಬರು ಅಭ್ಯರ್ಥಿ ಹಾಕಿ ಜಂಟಿಯಾಗಿ ಹೋರಾಡೋಣ ಎಂದಾಗ, ನೀವೇ ಅಭ್ಯರ್ಥಿ ಹಾಕಿ ಎಂದು ನಾನೇ ಹೇಳಿದ್ದೆ. </p>



<p class="wp-block-paragraph">ಮೈತ್ರಿಯಂತೆ ಉಭಯ ಪಕ್ಷಗಳು ಒಟ್ಟಾಗಿಯೇ ಇದ್ದೆವು. ಆದರೆ ದುರಾದೃಷ್ಟವಶಾತ್ ಜೆಡಿಎಸ್‌ನಿಂದ ಆರೇಳು ಹಾಗೂ ಬಿಜೆಪಿಯಿಂದ ನಾಲ್ಕೈದು ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಪಕ್ಷಕ್ಕೆ ದ್ರೋಹ ಬಗೆದ ಇಂತಹ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ. ಯಾರ್ಯಾರು ಈ ಒಳಸಂಚಿನ ಆಟವಾಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ,&#8221; ಎಂದು ಎಚ್ಚರಿಸಿದ್ದಾರೆ.</p>



<p class="wp-block-paragraph"> ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಚಾಣಕ್ಯ ತಂತ್ರದ ಕುರಿತ ಪ್ರಶ್ನೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, &#8220;ರಾಜ್ಯದ ಜನತೆ ಹಾಗೂ ನಾವು ಇಂತಹ ಬಹಳ ಜನ ಚಾಣಕ್ಯರನ್ನು ನೋಡಿದ್ದೇವೆ. ಕುದುರೆಯು ಓಡುವ ಸಮಯದಲ್ಲಿ ಓಡುತ್ತದೆ, ಮುಗ್ಗರಿಸಿ ಬೀಳುವಾಗ ಬೀಳುತ್ತದೆ. ಎದುರಾಳಿಗಳನ್ನು ಯಾವ ರೀತಿ ಬಗ್ಗಿಸಬೇಕೋ ಆ ತಂತ್ರ ನಮಗೂ ಗೊತ್ತಿದೆ. ಇಲ್ಲಿಗೆ ಎಲ್ಲವೂ ಮುಗಿದಿಲ್ಲ. ಶಿವಕುಮಾರ್ ಆಗಲಿ ಅಥವಾ ಇನ್ಯಾರೇ ಆಗಲಿ, ನಾವು ಯಾವುದಕ್ಕೂ ಹೆದರಿ ಓಡಿಹೋಗುವವರಲ್ಲ,&#8221; ಎಂದರು.</p>



<p class="wp-block-paragraph">ಅಡ್ಡಮತದಾನದಿಂದ ತಮಗೂ ಮತ್ತು ಕುಮಾರಸ್ವಾಮಿ ಅವರಿಗೂ ತೀವ್ರ ಬೇಸರ ಹಾಗೂ ನೋವಾಗಿದೆ ಎಂದು ಒಪ್ಪಿಕೊಂಡ ವಿಜಯೇಂದ್ರ, ಈ ಇಡೀ ಪ್ರಸಂಗವನ್ನು ಪಕ್ಷವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರದಲ್ಲೇ ಇದರ ಸಂಪೂರ್ಣ ಚಿತ್ರಣ ಹೊರಬರಲಿದೆ ಎಂದಿದ್ದಾರೆ.</p>



<p class="wp-block-paragraph">ಬಂಡಾಯವೆದ್ದವರ ವಿರುದ್ಧ ಕ್ರಮದ ಕುರಿತು ಮಾತನಾಡಿದ ಅವರು, &#8220;ನಾನು ಈಗಾಗಲೇ ಪಕ್ಷದ ರಾಷ್ಟ್ರೀಯ ನಾಯಕರ ಭೇಟಿಗೆ ಸಮಯ ಕೇಳಿದ್ದು, ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದೇನೆ. ನಮ್ಮ ಬೆನ್ನಿಗೆ ಇರಿದ ಆ &#8216;ಮೀರ್ ಸಾದಿಕ್&#8217;ಗಳು ಯಾರು ಎಂಬ ಪಟ್ಟಿಯನ್ನು ಹೈಕಮಾಂಡ್ ನಾಯಕರ ಮುಂದೆ ನೇರವಾಗಿ ಇಟ್ಟು, ಅವರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು ನಿಶ್ಚಿತ,&#8221; ಎಂದು ಸ್ಪಷ್ಟಪಡಿಸಿದರು.</p>



<p class="wp-block-paragraph">ಇದೇ ವೇಳೆ, ಬಿಜೆಪಿ ಪಾಳಯದಲ್ಲಿ ಗೊಂದಲ ಮೂಡಿಸಲು ಕಾಂಗ್ರೆಸ್ ನಾಯಕರು ಕೆಲವು ಶಾಸಕರ ಹೆಸರುಗಳನ್ನು ವ್ಯವಸ್ಥಿತವಾಗಿ ತೇಲಿಬಿಡುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಮಾಜಿ ಸಚಿವ ಭೈರತಿ ಬಸವರಾಜ್ ಅವರ ಹೆಸರು ಹರಿದಾಡುತ್ತಿರುವುದರ ಹಿಂದೆ ಕಾಂಗ್ರೆಸ್‌ನ ಕುತಂತ್ರವಿದೆ. ಬಸವರಾಜ್ ಯಾವುದೇ ತಪ್ಪು ಕೆಲಸ ಮಾಡಿಲ್ಲ ಮತ್ತು ಅವರು ಪಕ್ಷದ ನಿಷ್ಠಾವಂತ ನಾಯಕರಾಗಿದ್ದಾರೆ ಎಂದು ಬೆಂಬಲ ಸೂಚಿಸಿದರು.</p>
]]></content:encoded>
					
		
		
			</item>
		<item>
		<title>ಬ್ಯಾಂಕ್ ಖಾತೆ ವಿವರವೇ ಇಲ್ಲದೆ 46 ಕೋಟಿ ರೂ. ಗೃಹ ಲಕ್ಷ್ಮಿ ಹಣ ಪಾವತಿ: ಸರ್ಕಾರದ ವಿರುದ್ಧ ಸಿಎಜಿ ತೀವ್ರ ಆಕ್ಷೇಪ!</title>
		<link>https://peepalmedia.com/cag-audit-finds-irregular-gruha-lakshmi-payments/</link>
		
		<dc:creator><![CDATA[Peepal Media]]></dc:creator>
		<pubDate>Sat, 20 Jun 2026 02:23:05 +0000</pubDate>
				<category><![CDATA[ಬೆಂಗಳೂರು]]></category>
		<guid isPermaLink="false">https://peepalmedia.com/?p=80287</guid>

					<description><![CDATA[ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆ ವಿವರಗಳೇ ಇಲ್ಲದಿದ್ದರೂ ಸಾವಿರಾರು ಪಾವತಿಗಳನ್ನು ಮಾಡಿರುವುದನ್ನು ಭಾರತದ ಮಹಾಲೇಖಪಾಲರು (ಸಿಎಜಿ) ಪತ್ತೆ ಹಚ್ಚಿದ್ದಾರೆ. ಸರ್ಕಾರದ ಈ ಪ್ರಮುಖ ಗ್ಯಾರಂಟಿ ಯೋಜನೆಯಡಿ ನಡೆದಿರಬಹುದಾದ &#8220;ನಿಯಮಬಾಹಿರ ವಹಿವಾಟುಗಳ&#8221; ಕುರಿತು ಸಿಎಜಿ ತೀವ್ರ ಪ್ರಶ್ನೆಗಳನ್ನು ಎತ್ತಿದೆ. ಕನಿಷ್ಠ 23,262 ಪಾವತಿಗಳ ಮೂಲಕ ಒಟ್ಟು 46.52 ಕೋಟಿ ರೂಪಾಯಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆಗಳನ್ನೇ ದಾಖಲಿಸಿಕೊಳ್ಳದೆ ವರ್ಗಾವಣೆ ಮಾಡಲಾಗಿದೆ ಎಂದು ಆಡಿಟ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಪಾವತಿಗಳನ್ನು ಹೇಗೆ ಮಾಡಲಾಯಿತು ಎಂಬುದಕ್ಕೆ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು:</strong> ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆ ವಿವರಗಳೇ ಇಲ್ಲದಿದ್ದರೂ ಸಾವಿರಾರು ಪಾವತಿಗಳನ್ನು ಮಾಡಿರುವುದನ್ನು ಭಾರತದ ಮಹಾಲೇಖಪಾಲರು (ಸಿಎಜಿ) ಪತ್ತೆ ಹಚ್ಚಿದ್ದಾರೆ. </p>



<p class="wp-block-paragraph">ಸರ್ಕಾರದ ಈ ಪ್ರಮುಖ ಗ್ಯಾರಂಟಿ ಯೋಜನೆಯಡಿ ನಡೆದಿರಬಹುದಾದ &#8220;ನಿಯಮಬಾಹಿರ ವಹಿವಾಟುಗಳ&#8221; ಕುರಿತು ಸಿಎಜಿ ತೀವ್ರ ಪ್ರಶ್ನೆಗಳನ್ನು ಎತ್ತಿದೆ. ಕನಿಷ್ಠ 23,262 ಪಾವತಿಗಳ ಮೂಲಕ ಒಟ್ಟು 46.52 ಕೋಟಿ ರೂಪಾಯಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆಗಳನ್ನೇ ದಾಖಲಿಸಿಕೊಳ್ಳದೆ ವರ್ಗಾವಣೆ ಮಾಡಲಾಗಿದೆ ಎಂದು ಆಡಿಟ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. </p>



<p class="wp-block-paragraph">ಇಂತಹ ಪಾವತಿಗಳನ್ನು ಹೇಗೆ ಮಾಡಲಾಯಿತು ಎಂಬುದಕ್ಕೆ ಸೂಕ್ತ ವಿವರಣೆ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಿಎಜಿ ಸೂಚಿಸಿದೆ. ಈ ಆಡಿಟ್ ವರದಿಯ ಪ್ರಮುಖ ಅಂಶಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾಗಿದೆ.</p>



<p class="wp-block-paragraph">ಮನೆಯ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಗೃಹ ಲಕ್ಷ್ಮಿ ಯೋಜನೆಯು ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೇ ಅತ್ಯಂತ ದೊಡ್ಡದಾಗಿದ್ದು, ಒಟ್ಟು 1.22 ಕೋಟಿ ಫಲಾನುಭವಿಗಳನ್ನು ಒಳಗೊಂಡಿದೆ. 2023 ರಿಂದ ಸರ್ಕಾರವು ಈ ಯೋಜನೆಗಾಗಿ 74,000 ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಖರ್ಚು ಮಾಡಿದೆ. </p>



<p class="wp-block-paragraph">ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರವು ಈ ಯೋಜನೆಗಾಗಿ 28,608 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಿದೆ. ಒಂದೇ ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಿರುವ ವಿಭಿನ್ನ ಫಲಾನುಭವಿಗಳಿಗೂ ಹಣ ಪಾವತಿಯಾಗಿರುವುದನ್ನು ಸಿಎಜಿ ಪತ್ತೆ ಮಾಡಿದೆ. ಒಟ್ಟು 19,020 ಫಲಾನುಭವಿಗಳು ಬ್ಯಾಂಕ್ ಖಾತೆ ಸಂಖ್ಯೆಗಳನ್ನು ಹಂಚಿಕೊಂಡಿದ್ದಾರೆ, ಅಂದರೆ ಇಬ್ಬರು ವಿಭಿನ್ನ ಫಲಾನುಭವಿಗಳು ಜಂಟಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ. ಇಂತಹ ಪುನರಾವರ್ತಿತ ಪ್ರಕರಣಗಳು ಸಂಭವನೀಯ ಅಕ್ರಮಗಳ ಅಪಾಯವನ್ನು ಉಂಟುಮಾಡುತ್ತವೆ ಎಂದು ಆಡಿಟ್ ಎಚ್ಚರಿಸಿದೆ.</p>



<p class="wp-block-paragraph">ಆಡಿಟ್ ವರದಿಯ ಪ್ರಕಾರ, ಇಂತಹ ಫಲಾನುಭವಿಗಳಿಗೆ ವಿವಿಧ ತಿಂಗಳುಗಳಲ್ಲಿ ಒಟ್ಟು 60.69 ಕೋಟಿ ರೂಪಾಯಿ ಮೌಲ್ಯದ 3.03 ಲಕ್ಷ ಯಶಸ್ವಿ ಪಾವತಿಗಳನ್ನು ಮಾಡಲಾಗಿದೆ. ಇದರಲ್ಲಿ, ಇದೇ ಫಲಾನುಭವಿಗಳಿಗೆ ಒಂದೇ ತಿಂಗಳ ಅವಧಿಗೆ ಒಟ್ಟು 1.8 ಕೋಟಿ ರೂಪಾಯಿ ಮೌಲ್ಯದ 8,995 ಯಶಸ್ವಿ ಪಾವತಿಗಳನ್ನು ಮಾಡಲಾಗಿದೆ ಎಂದು ವರದಿ ಹೇಳಿದೆ. ಇದಲ್ಲದೆ, ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು ಹಲವು ಬಾರಿ ಬದಲಾಯಿಸಿರುವುದನ್ನು ತೋರಿಸುವ 10.06 ಲಕ್ಷ ದಾಖಲೆಗಳನ್ನು ಆಡಿಟ್ ಪರಿಶೀಲಿಸಿದೆ. </p>



<p class="wp-block-paragraph">ಅನರ್ಹ ಎಂದು ಗುರುತಿಸಲಾದ ಫಲಾನುಭವಿಗಳ ಡೇಟಾ ಮತ್ತು ಯೋಜನೆಯಡಿ ಸ್ವೀಕರಿಸಲಾದ ದೂರುಗಳ ವಿವರಗಳನ್ನು ಒದಗಿಸುವಂತೆ ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ನಿರ್ದೇಶನಾಲಯಕ್ಕೆ (ECDS) ಸಿಎಜಿ ಕೇಳಿದೆ. ಅಗತ್ಯವಿರುವ ಡೇಟಾ ಲಭ್ಯವಿಲ್ಲದಿರುವುದನ್ನು ಎತ್ತಿ ತೋರಿಸಿರುವ ಸಿಎಜಿ, ಯೋಜನೆಯಿಂದ ಕೈಬಿಡಲಾದ ಫಲಾನುಭವಿಗಳ ವಿವರಗಳನ್ನು ಒದಗಿಸುವಲ್ಲಿ ಇಲಾಖೆಯು ವಿಫಲವಾಗಿದೆ ಎಂದು ಹೇಳಿದೆ.</p>



<p class="wp-block-paragraph">ಕಳೆದ 2026 ರ ಜನವರಿಯಲ್ಲಿ, ಡೇಟಾ ವಿಶ್ಲೇಷಣೆಯ ಸಮಯದಲ್ಲಿ ಗುರುತಿಸಲಾದ ಸಮಸ್ಯೆಗಳ ಆಧಾರದ ಮೇಲೆ ಸಿಎಜಿಗೆ ಅನುಪಾಲನಾ ವರದಿಯನ್ನು ಸಲ್ಲಿಸಲು ಇಲಾಖೆಯು ಒಪ್ಪಿಕೊಂಡಿತ್ತು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಕಂಡುಬಂದಿದೆ ಎಂದು ಆಡಿಟ್ ತಿಳಿಸಿದೆ. </p>



<p class="wp-block-paragraph">ಈ ಇಲಾಖಾ ನಿಷ್ಕ್ರಿಯತೆಯು ಆಡಿಟ್ ಅವಲೋಕನಗಳಿಗೆ ಸ್ಪಂದನೆಯ ಕೊರತೆಯನ್ನು ಪ್ರತಿಬಿಂಬಿಸುವುದಲ್ಲದೆ, ಡೇಟಾ ವಿಶ್ಲೇಷಣೆಯ ಮೂಲಕ ಪತ್ತೆಹಚ್ಚಲಾದ ಸಂಭವನೀಯ ನಿಯಮಬಾಹಿರ ವಹಿವಾಟುಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವುದನ್ನು ವಿಳಂಬಗೊಳಿಸುತ್ತದೆ ಎಂದು ಸಿಎಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>



<p class="wp-block-paragraph"> ಒಟ್ಟು 19,020 ಫಲಾನುಭವಿಗಳು ಒಂದೇ ಬ್ಯಾಂಕ್ ಖಾತೆ ಸಂಖ್ಯೆಯನ್ನು ಹಂಚಿಕೊಂಡಿದ್ದು, ಇಬ್ಬರು ವಿಭಿನ್ನ ಫಲಾನುಭವಿಗಳು ಜಂಟಿ ಖಾತೆಗಳನ್ನು ಹೊಂದಿರುವುದು ಇಂತಹ ನಕಲಿ ಪ್ರಕರಣಗಳು ಸಂಭವನೀಯ ಆಡಳಿತಾತ್ಮಕ ಅಕ್ರಮಗಳ ಅಪಾಯವನ್ನು ತಂದೊಡ್ಡುತ್ತವೆ ಎಂದು ಆಡಿಟ್ ವರದಿ ಪುನರುಚ್ಚರಿಸಿದೆ.</p>
]]></content:encoded>
					
		
		
			</item>
	</channel>
</rss>
