<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಹಾಸನ &#8211; Peepal Media</title>
	<atom:link href="https://peepalmedia.com/category/breaking-news/%E0%B2%B9%E0%B2%BE%E0%B2%B8%E0%B2%A8/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 14 Aug 2026 07:44:52 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಹಾಸನ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಕಲೇಶಪುರ ಮಾನವ–ಆನೆ ಸಂಘರ್ಷ ತಕ್ಷಣ ತಜ್ಞರ ತಂಡ ಕಳುಹಿಸಿ &#8211; ಸಂಸದ ಶ್ರೇಯಸ್ ಪಟೇಲ್</title>
		<link>https://peepalmedia.com/send-a-team-of-experts-immediately-to-address-the-human-elephant-conflict-in-sakaleshpur/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 14 Aug 2026 07:44:52 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=83240</guid>

					<description><![CDATA[ಹಾಸನ :&#160;&#160;ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಮಾನವ–ಆನೆ ಸಂಘರ್ಷವನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಹೊರಗೆ, ವಿಶೇಷವಾಗಿ ಕಾಫಿ ತೋಟಗಳು ಹಾಗೂ ಕೃಷಿ ಪ್ರದೇಶಗಳಲ್ಲಿ 90ಕ್ಕೂ ಹೆಚ್ಚು ಆನೆಗಳು ಸಂಚರಿಸುತ್ತಿದ್ದು, ಇದುವರೆಗೆ ಆನೆ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ :&nbsp;</strong>&nbsp;ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಮಾನವ–ಆನೆ ಸಂಘರ್ಷವನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.</p>



<p class="wp-block-paragraph">ಹಾಸನ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಹೊರಗೆ, ವಿಶೇಷವಾಗಿ ಕಾಫಿ ತೋಟಗಳು ಹಾಗೂ ಕೃಷಿ ಪ್ರದೇಶಗಳಲ್ಲಿ 90ಕ್ಕೂ ಹೆಚ್ಚು ಆನೆಗಳು ಸಂಚರಿಸುತ್ತಿದ್ದು, ಇದುವರೆಗೆ ಆನೆ ದಾಳಿಯಿಂದ 80ಕ್ಕೂ ಹೆಚ್ಚು ಮಾನವ ಜೀವಗಳು ಬಲಿಯಾಗಿವೆ. ಇದರ ಜೊತೆಗೆ ಬೆಳೆ ನಷ್ಟ, ಆಸ್ತಿ ಹಾನಿ ಹಾಗೂ ಜನರಿಗೆ ಗಾಯಗಳಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಈ ಗಂಭೀರ ಸಮಸ್ಯೆಯನ್ನು ಈ ಹಿಂದೆ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದ ಸಂಸದ ಶ್ರೇಯಸ್ ಎಂ. ಪಟೇಲ್ ಅವರ ಮನವಿಯನ್ನು ಸಚಿವರು ಪರಿಗಣಿಸಿ, DGF (Wildlife) ಅವರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಬಳಿಕ ಹಾಸನ ಜಿಲ್ಲೆಗೆ ತಜ್ಞರ ತಂಡವನ್ನು ಕಳುಹಿಸಿ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸುವ ಭರವಸೆ ನೀಡಲಾಗಿತ್ತು.</p>



<p class="wp-block-paragraph">ಆದರೆ ಮಾನವ ಜೀವಗಳಿಗೆ ಮುಂದುವರಿದಿರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಭರವಸೆ ನೀಡಿರುವ ತಜ್ಞರ ತಂಡದ ಭೇಟಿಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಆಯೋಜಿಸಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.</p>



<p class="wp-block-paragraph">ಭೇಟಿ ನೀಡುವ ತಂಡದಲ್ಲಿ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಅನುಭವ ಹೊಂದಿರುವ ಆನೆ ತಜ್ಞರು, ವನ್ಯಜೀವಿ ತಜ್ಞರು ಹಾಗೂ ವಿಜ್ಞಾನಿಗಳು ಇರಬೇಕು. ಅವರು ಹಾಸನದ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರು ಹಾಗೂ ಸ್ಥಳೀಯ ಜನರೊಂದಿಗೆ ನೇರವಾಗಿ ಚರ್ಚಿಸಿ, ಮಾನವ–ಆನೆ ಸಂಘರ್ಷಕ್ಕೆ ಶಾಶ್ವತ ಮತ್ತು ವೈಜ್ಞಾನಿಕ ಪರಿಹಾರ ರೂಪಿಸುವಂತೆ ಸಂಸದರು ಮನವಿ ಮಾಡಿದ್ದಾರೆ. ಹಾಸನದ ಜನರು ಈಗಾಗಲೇ ಅನೇಕ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದಾರೆ. ಮತ್ತಷ್ಟು ಜೀವಹಾನಿ ಸಂಭವಿಸುವ ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ತುರ್ತು ಕ್ರಮ ಕೈ ಳ್ಳಬೇಕು. DGF (Wildlife) ಅವರಿಂದ ತಂಡ ಭೇಟಿ ನೀಡುವ ಭರವಸೆ ಈಗಾಗಲೇ ದೊರೆತಿದೆ. ಇನ್ನು ಅಗತ್ಯವಿರುವುದು ನೆಲಮಟ್ಟದಲ್ಲಿ ತ್ವರಿತ ಮತ್ತು ಸಮನ್ವಯಿತ ಕ್ರಮ,” ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದ್ದಾರೆ.</p>



<p class="wp-block-paragraph">ಹಾಸನ ಜಿಲ್ಲೆಯ ಜನರ ಜೀವ ಮತ್ತು ಜೀವನೋಪಾಯವನ್ನು ರಕ್ಷಿಸಲು ಕೇಂದ್ರ ಹಾಗೂ ಕರ್ನಾಟಕ ಸರ್ಕಾರಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಮತ್ತು ತಜ್ಞರ ತಂಡದ ಭೇಟಿಯನ್ನು ಶೀಘ್ರದಲ್ಲೇ ಖಚಿತಪಡಿಸಬೇಕು ಎಂದು ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ವ್ಯಂಗ್ಯಚಿತ್ರಗಳು ಸಾವಿರ ಪದಗಳ ಸುದ್ದಿಯನ್ನು ಒಂದೇ ಚಿತ್ರದಲ್ಲಿ ಹೇಳುವ ಶಕ್ತಿ ಹೊಂದಿರುತ್ತವೆ &#8211; ಎಂ.ವಿ ಶಿವರಾಂ</title>
		<link>https://peepalmedia.com/cartoons-have-the-power-to-convey-a-story-worth-a-thousand-words-in-a-single-image/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 14 Aug 2026 07:19:33 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=83227</guid>

					<description><![CDATA[ಹಾಸನ: ವ್ಯಂಗ್ಯಚಿತ್ರಗಳು ಸಮಾಜ ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವುದರ ಜೊತೆಗೆ ಸಾವಿರ ಪದಗಳ ಸುದ್ದಿಯನ್ನು ಒಂದೇ ಚಿತ್ರದಲ್ಲಿ ಹೇಳುವ ಶಕ್ತಿ ಹೊಂದಿವೆ ಎಂದು ಹಿರಿಯ ವ್ಯಂಗ್ಯಚಿತ್ರಕಾರ ಹಾಗೂ ‘ವ್ಯಂಗ್ಯ ಲೋಕ’ ಪತ್ರಿಕೆಯ ಆರಂಭಿಕರಾದ ಎಂ ವಿ ಶಿವರಾಂ ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್. ೧೫ ರಂದು ಈ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದೇವೆ, ಇದು ಆನ್ಲೈನ್ ನಲ್ಲಿ ಸಿಗುವ ಪತ್ರಿಕೆ ಎಂದು ತಿಳಿಸಿದರು. ಕಳೆದ 30–40 ವರ್ಷಗಳಿಂದ ವಿವಿಧ ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ದಿನಪತ್ರಿಕೆಗಳಿಗೆ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong> ವ್ಯಂಗ್ಯಚಿತ್ರಗಳು ಸಮಾಜ ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವುದರ ಜೊತೆಗೆ ಸಾವಿರ ಪದಗಳ ಸುದ್ದಿಯನ್ನು ಒಂದೇ ಚಿತ್ರದಲ್ಲಿ ಹೇಳುವ ಶಕ್ತಿ ಹೊಂದಿವೆ ಎಂದು ಹಿರಿಯ ವ್ಯಂಗ್ಯಚಿತ್ರಕಾರ ಹಾಗೂ ‘ವ್ಯಂಗ್ಯ ಲೋಕ’ ಪತ್ರಿಕೆಯ ಆರಂಭಿಕರಾದ ಎಂ ವಿ ಶಿವರಾಂ ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್. ೧೫ ರಂದು ಈ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದೇವೆ, ಇದು ಆನ್ಲೈನ್ ನಲ್ಲಿ ಸಿಗುವ ಪತ್ರಿಕೆ ಎಂದು ತಿಳಿಸಿದರು. ಕಳೆದ 30–40 ವರ್ಷಗಳಿಂದ ವಿವಿಧ ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ದಿನಪತ್ರಿಕೆಗಳಿಗೆ ವ್ಯಂಗ್ಯಚಿತ್ರಗಳನ್ನು ರಚಿಸುತ್ತಾ ಬಂದಿರುವುದಾಗಿ ತಿಳಿಸಿದರು. ಇದೀಗ ತಮ್ಮ ದೀರ್ಘಕಾಲದ ಅನುಭವದ ಆಧಾರದಲ್ಲಿ ‘ವ್ಯಂಗ್ಯ ಲೋಕ’ ಹೆಸರಿನ ಪಾಕ್ಷಿಕ ವ್ಯಂಗ್ಯಚಿತ್ರ ಪತ್ರಿಕೆಯನ್ನು ಆರಂಭಿಸುತ್ತಿರುವುದಾಗಿ ಹೇಳಿದರು.</p>



<p class="wp-block-paragraph">ತಮ್ಮ ವೃತ್ತಿಜೀವನದ ಆರಂಭದಲ್ಲಿ ‘ಜನತಾ ಮಾಧ್ಯಮ’ ಪತ್ರಿಕೆಗೆ ವ್ಯಂಗ್ಯಚಿತ್ರಗಳನ್ನು ರಚಿಸುತ್ತಿದ್ದೆ. ಪತ್ರಿಕೆ ಆರಂಭವಾದಾಗಿನಿಂದ ಸುಮಾರು ಐದಾರು ವರ್ಷಗಳ ಕಾಲ ನಿರಂತರವಾಗಿ ಚಿತ್ರಗಳನ್ನು ನೀಡಿದ್ದೇನೆ. ನಂತರ ‘ಸುಧಾ’, ‘ತರಂಗ’ ಸೇರಿದಂತೆ ಹಲವು ಪತ್ರಿಕೆಗಳಿಗೂ ವ್ಯಂಗ್ಯಚಿತ್ರಗಳನ್ನು ರಚಿಸಿದ್ದಾಗಿ ಸ್ಮರಿಸಿದರು.<br>ಒಂದು ವ್ಯಂಗ್ಯಚಿತ್ರಕ್ಕೆ ಐದು ರೂಪಾಯಿ ಸಂಭಾವನೆ ನೀಡುತ್ತಿದ್ದ ಸಂದರ್ಭವೂ ಇತ್ತು. ಆದರೆ ಆಗ ಹಣಕ್ಕಿಂತಲೂ ನಮ್ಮ ಚಿತ್ರ ಪ್ರಕಟವಾಗುವುದು ಹಾಗೂ ಓದುಗರನ್ನು ತಲುಪುವುದು ಮುಖ್ಯವಾಗಿತ್ತು. ಪತ್ರಿಕೆಗಳಲ್ಲಿ ವ್ಯಂಗ್ಯಚಿತ್ರಗಳಿಗೆ ವಿಶೇಷ ಸ್ಥಾನವಿತ್ತು ಎಂದು ಹೇಳಿದರು.</p>



<p class="wp-block-paragraph">ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಹಿರಿಯ ಸಂಪಾದಕರು ಹಾಗೂ ಚಿತ್ರಕಾರರನ್ನು ಸ್ಮರಿಸಿದ ಅವರು, ವ್ಯಂಗ್ಯಚಿತ್ರಕಾರರು ಆ ದಿನದ ಪ್ರಮುಖ ವಿದ್ಯಮಾನಗಳನ್ನು ಕೆಲವೇ ರೇಖೆಗಳ ಮೂಲಕ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಾರೆ. ಒಂದು ಉತ್ತಮ ವ್ಯಂಗ್ಯಚಿತ್ರ ಸಾವಿರಾರು ಪದಗಳ ಸುದ್ದಿಯನ್ನು ಹೇಳುವ ಸಾಮರ್ಥ್ಯ ಹೊಂದಿದೆ ಎಂದರು. ವ್ಯಂಗ್ಯಚಿತ್ರಗಳಿಗೆ ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿದ್ದು, ಹಿಂದಿನ ಕಾಲದಿಂದಲೂ ರಾಜರು, ಆಡಳಿತಗಾರರು ಹಾಗೂ ಸಾಮಾಜಿಕ ವಿದ್ಯಮಾನಗಳನ್ನು ವ್ಯಂಗ್ಯಚಿತ್ರಗಳ ಮೂಲಕ ಬಿಂಬಿಸಲಾಗುತ್ತಿತ್ತು. ಇದೀಗ ತಂತ್ರಜ್ಞಾನ ಬೆಳವಣಿಗೆಯಿಂದ ಇಂಕ್, ಬ್ರಷ್ ಸೇರಿದಂತೆ ಸಾಂಪ್ರದಾಯಿಕ ವಿಧಾನಗಳ ಜೊತೆಗೆ ಡಿಜಿಟಲ್ ತಂತ್ರಜ್ಞಾನವೂ ವ್ಯಂಗ್ಯಚಿತ್ರಕಾರರ ಕೆಲಸವನ್ನು ಸುಲಭ ಹಾಗೂ ವೇಗಗೊಳಿಸಿದೆ ಎಂದು ಹೇಳಿದರು.</p>



<p class="wp-block-paragraph">ಜನತಾ ಮಾಧ್ಯಮ’ದಿಂದ ವೃತ್ತಿಜೀವನ ಆರಂಭಿಸಿ ನಗರದ ಹಲವು ಪತ್ರಿಕೆಗಳಿಗೆ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಗಳನ್ನು ರಚಿಸಿದ್ದೇನೆ. ತಮ್ಮ ಲೆಕ್ಕದ ಪ್ರಕಾರ ಸುಮಾರು 1,500ಕ್ಕೂ ಹೆಚ್ಚು ವ್ಯಂಗ್ಯಚಿತ್ರಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಈ ಕೆಲಸದಿಂದ ರಾಜ್ಯಮಟ್ಟದ ಪ್ರಶಸ್ತಿಗಳೂ ದೊರೆತಿವೆ ಎಂದು ತಿಳಿಸಿದರು. ನಾನು ಮೂಲತಃ ಮೆಕ್ಯಾನಿಕ್ ಇಂಜಿನಿಯರ್ ಆಗಿದ್ದು, ನನ್ನನ್ನು ನಾನು ದೊಡ್ಡ ಕಲಾವಿದ ಎಂದು ಎಂದಿಗೂ ಭಾವಿಸಿಲ್ಲ. ಚಿತ್ರ ಬಿಡಿಸುವುದು ನನ್ನ ಆಸಕ್ತಿಯಾಗಿತ್ತು. ಯಾರಿಗಾದರೂ ಚಿತ್ರ ಬಿಡಿಸಲು ಸಾಧ್ಯ ಎಂಬ ಸಂದೇಶವನ್ನು ಮುಂದಿನ ಪೀಳಿಗೆಗೆ ನೀಡಬೇಕು ಎಂಬ ಉದ್ದೇಶದಿಂದ ‘ವ್ಯಂಗ್ಯ ಲೋಕ’ ಆರಂಭಿಸುತ್ತಿದ್ದೇನೆ” ಎಂದು ಹೇಳಿದರು.</p>



<p class="wp-block-paragraph">ಪತ್ರಿಕೆಯ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವ್ಯಂಗ್ಯಚಿತ್ರ ರಚನೆಯ ಕುರಿತು ಕಾರ್ಯಾಗಾರಗಳನ್ನು ಆಯೋಜಿಸುವ ಉದ್ದೇಶವಿದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸುವುದು ಹಾಗೂ ಭವಿಷ್ಯದ ವ್ಯಂಗ್ಯಚಿತ್ರಕಾರರನ್ನು ರೂಪಿಸುವುದು ಇದರ ಪ್ರಮುಖ ಆಶಯವಾಗಿದೆ. ಇದಕ್ಕೆ ಪ್ರಾಯೋಜಕರ ಸಹಕಾರ ಅಗತ್ಯವಿದ್ದು, ಉತ್ತಮ ಗುಣಮಟ್ಟದ ಕಾಗದದಲ್ಲಿ ಪತ್ರಿಕೆಯನ್ನು ಹೊರತರುವ ಮೂಲಕ ಹೆಚ್ಚಿನ ವ್ಯಂಗ್ಯಚಿತ್ರಕಾರರಿಗೆ ವೇದಿಕೆ ಕಲ್ಪಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.</p>
]]></content:encoded>
					
		
		
			</item>
		<item>
		<title>ಹಾಸನ ಲಂಚ ಪಡೆಯುವ ವೇಳಯಲ್ಲಿ ಪಿಎಸ್‌ಐ ಮಂಜುನಾಥ್  &#8211; ಲೋಕಾಯುಕ್ತ ಬಲೆಗೆ</title>
		<link>https://peepalmedia.com/hassan-psi-manjunath-caught-in-lokayukta-trap-while-accepting-a-bribe/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 13 Aug 2026 14:01:08 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=83217</guid>

					<description><![CDATA[ಹಾಸನ:&#160;ಎನ್‌ಸಿಆರ್‌ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎನ್‌ಸಿಆರ್ ಇತ್ಯರ್ಥಪಡಿಸಲು ನವೀನ್ ಎಂಬುವವರ ಬಳಿ ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮುಂಗಡವಾಗಿ ₹20 ಸಾವಿರ ನೀಡುವಂತೆ ಸೂಚಿಸಿದ್ದರು. ಇಂದು ಹೋಟೆಲ್‌ವೊಂದರಲ್ಲಿ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಎಸ್‌ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong>&nbsp;ಎನ್‌ಸಿಆರ್‌ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>



<p class="wp-block-paragraph">ಎನ್‌ಸಿಆರ್ ಇತ್ಯರ್ಥಪಡಿಸಲು ನವೀನ್ ಎಂಬುವವರ ಬಳಿ ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮುಂಗಡವಾಗಿ ₹20 ಸಾವಿರ ನೀಡುವಂತೆ ಸೂಚಿಸಿದ್ದರು. ಇಂದು ಹೋಟೆಲ್‌ವೊಂದರಲ್ಲಿ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಎಸ್‌ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.</p>



<p class="wp-block-paragraph">ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಗವಿರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.</p>
]]></content:encoded>
					
		
		
			</item>
		<item>
		<title>ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕು &#8211; ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ </title>
		<link>https://peepalmedia.com/the-state-government-must-immediately-implement-the-minimum-wage-for-workers/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 10 Aug 2026 15:20:22 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82982</guid>

					<description><![CDATA[ಹಾಸನ : ಕಾರ್ಮಿಕರಿಗೆ ನಿಗದಿಪಡಿಸಿರುವ ಕನಿಷ್ಠ ವೇತನದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಎಚ್ಚರಿಸಿದರು. ನಗರದಲ್ಲಿ ಸಿಐಟಿಯು, ಕೆಪಿಆರ್‌ಎಸ್ ಹಾಗೂ ಡಿಎಚ್‌ಎಸ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ‘ಜನಾಕ್ರೋಶ ಸಭೆ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ 10-15 ವರ್ಷಗಳಲ್ಲಿ ದೇಶದ ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳ ಸಂಪತ್ತು ನೂರಾರು ಪಟ್ಟು ಹೆಚ್ಚಾಗಿದೆ. ಆದರೆ ಶ್ರಮಿಕ ವರ್ಗದ ಆದಾಯ ಕುಸಿದಿದ್ದು, ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ :</strong> ಕಾರ್ಮಿಕರಿಗೆ ನಿಗದಿಪಡಿಸಿರುವ ಕನಿಷ್ಠ ವೇತನದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಎಚ್ಚರಿಸಿದರು.</p>



<p class="wp-block-paragraph">ನಗರದಲ್ಲಿ ಸಿಐಟಿಯು, ಕೆಪಿಆರ್‌ಎಸ್ ಹಾಗೂ ಡಿಎಚ್‌ಎಸ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ‘ಜನಾಕ್ರೋಶ ಸಭೆ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ 10-15 ವರ್ಷಗಳಲ್ಲಿ ದೇಶದ ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳ ಸಂಪತ್ತು ನೂರಾರು ಪಟ್ಟು ಹೆಚ್ಚಾಗಿದೆ. ಆದರೆ ಶ್ರಮಿಕ ವರ್ಗದ ಆದಾಯ ಕುಸಿದಿದ್ದು, ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ದುಸ್ತರವಾಗಿದೆ. ಕಾರ್ಮಿಕ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಮೇ 22ರಂದು ಸರ್ಕಾರ ಕನಿಷ್ಠ ವೇತನದ ಅಧಿಸೂಚನೆ ಹೊರಡಿಸಿತ್ತು. ಆದರೆ ಖಾಸಗಿ ಮಾಲೀಕರ ಒತ್ತಡಕ್ಕೆ ಮಣಿದು ಅದನ್ನು ಮೌಖಿಕವಾಗಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.</p>



<p class="wp-block-paragraph">ಗ್ರಾಮ ಪಂಚಾಯಿತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಹಾಗೂ ಗುತ್ತಿಗೆ ಕಾರ್ಮಿಕರಿಗೆ ಹಲವು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸರ್ಕಾರ ಹಾಗೂ ಆಡಳಿತ ಯಂತ್ರ ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಧರ್ಮೇಶ್ ದೂರಿದರು.</p>



<p class="wp-block-paragraph"><strong>ಹೋರಾಟದ ರೂಪುರೇಷೆ</strong></p>



<p class="wp-block-paragraph">ಕನಿಷ್ಠ ವೇತನ ಜಾರಿಗೊಳಿಸದ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದ ಪ್ರತಿಯೊಬ್ಬ ಕಾರ್ಮಿಕರೂ ಕಾರ್ಮಿಕ ಇಲಾಖೆಗೆ ಸಾಮೂಹಿಕವಾಗಿ ‘ಕ್ಲೈಮ್ ಅರ್ಜಿ’ ಸಲ್ಲಿಸಲಿದ್ದಾರೆ. ಆ.18ರಂದು ಗ್ರಾಮ ಪಂಚಾಯಿತಿ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಮುತ್ತಿಗೆ ಹಾಕಲಾಗುವುದು.</p>



<p class="wp-block-paragraph">ಸರ್ಕಾರದ ವಿಳಂಬ ನೀತಿ ಮುಂದುವರಿದರೆ ಸೆ.8ರಂದು ‘ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗುವುದು. ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಕಾರ್ಮಿಕರು ಬೆಂಗಳೂರಿಗೆ ಆಗಮಿಸಿ ಅಹೋರಾತ್ರಿ ಧರಣಿ ಹಾಗೂ ರಸ್ತೆ ತಡೆ ನಡೆಸಲಿದ್ದಾರೆ ಎಂದು ಅವರು ಘೋಷಿಸಿದರು.</p>
]]></content:encoded>
					
		
		
			</item>
		<item>
		<title>ಡಾ. ಬಾಬು ಜಗಜೀವನ್ ರಾಮ್ ರವರಿಗೆ ಅವಮಾನ, ಜಿಲ್ಲಾಡಳಿತಕ್ಕೆ ಮುತ್ತಿಗೆ &#8211; ದಲಿತ ಸಂಘಟನೆಗಳ ಒಕ್ಕೂಟ</title>
		<link>https://peepalmedia.com/insult-to-dr-babu-jagjivan-ram-district-administration-besieged/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 10 Aug 2026 15:09:17 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82976</guid>

					<description><![CDATA[ಹಾಸನ: ಡಾ. ಬಾಬು ಜಗಜೀವನ್ ರಾಮ್ ಅವರಿಗೆ ಅವಮಾನ, ಪೂಜ್ಯ ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮೇಲಿನ ಹಲ್ಲೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಆಗಸ್ಟ್ 14 ಮತ್ತು 15ರಂದು ಹಾಸನದಲ್ಲಿ ಬೃಹತ್ ಆಕ್ರೋಶ ಪ್ರತಿಭಟನಾ ಮೆರವಣಿಗೆ, ಅಹೋರಾತ್ರಿ ಧರಣಿ ಹಾಗೂ ಜಿಲ್ಲಾಡಳಿತ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ (ಎಂ.ಆರ್.ಹೆಚ್.ಎಸ್), ಕರ್ನಾಟಕ ಮಾದಿಗ ಮಹಾಸಭಾ ಹಾಗೂ ಸ್ವಾಭಿಮಾನಿ ದಲಿತ ಮತ್ತು ಜನಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ಆಗಸ್ಟ್ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong> ಡಾ. ಬಾಬು ಜಗಜೀವನ್ ರಾಮ್ ಅವರಿಗೆ ಅವಮಾನ, ಪೂಜ್ಯ ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮೇಲಿನ ಹಲ್ಲೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಆಗಸ್ಟ್ 14 ಮತ್ತು 15ರಂದು ಹಾಸನದಲ್ಲಿ ಬೃಹತ್ ಆಕ್ರೋಶ ಪ್ರತಿಭಟನಾ ಮೆರವಣಿಗೆ, ಅಹೋರಾತ್ರಿ ಧರಣಿ ಹಾಗೂ ಜಿಲ್ಲಾಡಳಿತ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ (ಎಂ.ಆರ್.ಹೆಚ್.ಎಸ್), ಕರ್ನಾಟಕ ಮಾದಿಗ ಮಹಾಸಭಾ ಹಾಗೂ ಸ್ವಾಭಿಮಾನಿ ದಲಿತ ಮತ್ತು ಜನಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ.</p>



<p class="wp-block-paragraph">ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ಆಗಸ್ಟ್ 14ರಂದು ಬೆಳಗ್ಗೆ 11ರಿಂದ ಆಗಸ್ಟ್ 15ರ ಸಂಜೆ 5ರವರೆಗೆ ಪ್ರತಿಭಟನೆ ನಡೆಯಲಿದೆ. ಹೇಮಾವತಿ ಪ್ರತಿಮೆ ಮುಂಭಾಗದಿಂದ ಮೆರವಣಿಗೆ ಆರಂಭವಾಗಿ ಅಂಬೇಡ್ಕರ್ ಭವನದವರೆಗೆ ಸಾಗಲಿದೆ. ಬಳಿಕ ಎಸ್‌ಪಿ ಕಚೇರಿ ಎದುರು ಧರಣಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು.</p>



<p class="wp-block-paragraph"><br>ಡಾ. ಬಾಬು ಜಗಜೀವನ್ ರಾಮ್ ಅವರ 40ನೇ ವರ್ಷದ ಪುಣ್ಯಸ್ಮರಣೆ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಅಪಚಾರವಾಗಿದೆ ಎಂದು ಆರೋಪಿಸಿದ ಮುಖಂಡರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪೂರ್ವಭಾವಿ ಸಭೆ ನಡೆಸದೆ ಹಾಗೂ ದಲಿತ ಮುಖಂಡರಿಗೆ ಆಹ್ವಾನ ನೀಡದೆ ಕಾರ್ಯಕ್ರಮ ನಡೆಸಿದ್ದಾರೆ. ಕರ್ತವ್ಯಲೋಪ ಎಸಗಿರುವ ಅಧಿಕಾರಿಯನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>
]]></content:encoded>
					
		
		
			</item>
		<item>
		<title>ಕಸ್ತೂರಿರಂಗನ್ ವರದಿ ಜಾರಿ ಆಗಬಾರದು &#8211; ಬೆಳೆಗಾರರ ಒತ್ತಾಯ</title>
		<link>https://peepalmedia.com/growers-demand-that-the-kasturirangan-report-not-be-implemented/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 10 Aug 2026 09:56:43 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82973</guid>

					<description><![CDATA[ಹಾಸನ : ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಮರುಬಿಡುಗಡೆ ಮಾಡಿರುವ 7ನೇ ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ವಿರೋಧಿಸಿರುವ ರೈತರು ಹಾಗೂ ಬೆಳೆಗಾರರು, ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬಾರದು ಎಂದು ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ಎಫ್ ಅಧ್ಯಕ್ಷ ಹಳಸೆ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಟಿ.ಪಿ. ಸುರೇಂದ್ರ ಹಾಗೂ ಎಚ್.ಡಿ.ಪಿ.ಎ ಅಧ್ಯಕ್ಷ ಮಂಜುನಾಥ್ ಶೆಟ್ಟಿ, ವರದಿ ಸಿದ್ಧಪಡಿಸುವ ಸಂದರ್ಭದಲ್ಲಿ ಪಶ್ಚಿಮಘಟ್ಟ ಪ್ರದೇಶದ ರೈತರು, ಬೆಳೆಗಾರರು ಹಾಗೂ ಮೂಲನಿವಾಸಿಗಳ ಅಭಿಪ್ರಾಯಗಳನ್ನು ಸಮರ್ಪಕವಾಗಿ ಪಡೆಯಲಾಗಿಲ್ಲ. ಹೀಗಾಗಿ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ :</strong> ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಮರುಬಿಡುಗಡೆ ಮಾಡಿರುವ 7ನೇ ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ವಿರೋಧಿಸಿರುವ ರೈತರು ಹಾಗೂ ಬೆಳೆಗಾರರು, ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬಾರದು ಎಂದು ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ಎಫ್ ಅಧ್ಯಕ್ಷ ಹಳಸೆ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಟಿ.ಪಿ. ಸುರೇಂದ್ರ ಹಾಗೂ ಎಚ್.ಡಿ.ಪಿ.ಎ ಅಧ್ಯಕ್ಷ ಮಂಜುನಾಥ್ ಶೆಟ್ಟಿ, ವರದಿ ಸಿದ್ಧಪಡಿಸುವ ಸಂದರ್ಭದಲ್ಲಿ ಪಶ್ಚಿಮಘಟ್ಟ ಪ್ರದೇಶದ ರೈತರು, ಬೆಳೆಗಾರರು ಹಾಗೂ ಮೂಲನಿವಾಸಿಗಳ ಅಭಿಪ್ರಾಯಗಳನ್ನು ಸಮರ್ಪಕವಾಗಿ ಪಡೆಯಲಾಗಿಲ್ಲ. ಹೀಗಾಗಿ ವರದಿಯು ಸ್ಥಳೀಯರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಕಾಫಿ, ಟೀ ಹಾಗೂ ರಬ್ಬರ್ ಬೆಳೆಗಾರರ ಅಭಿಪ್ರಾಯಗಳನ್ನು ಸಂಬಂಧಪಟ್ಟ ಬೋರ್ಡ್‌ಗಳಿಂದ ಪಡೆಯದೆ ವರದಿ ಸಿದ್ಧಪಡಿಸಿರುವುದು ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಕಾಫಿ ಬೆಳೆಗಾರರು ದಶಕಗಳಿಂದ ನೆರಳಿನಾಶ್ರಿತವಾಗಿ ಕಾಫಿ ಬೆಳೆಯುವ ಮೂಲಕ ಕೋಟ್ಯಂತರ ಮರಗಳನ್ನು ಸಂರಕ್ಷಿಸಿದ್ದು, ಪರಿಸರ ಹಾಗೂ ಜಲಮೂಲಗಳ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.</p>



<p class="wp-block-paragraph">ವರದಿಯಲ್ಲಿ ಶೇ.20ರಷ್ಟು ಹಸಿರು ಹೊದಿಕೆಯನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಉಪಗ್ರಹ ಆಧಾರಿತ ಚಿತ್ರಗಳ ಮೂಲಕ ನೆರಳಿನಾಶ್ರಿತ ಕಾಫಿ ತೋಟಗಳು ಹಾಗೂ ನೈಸರ್ಗಿಕ ಅರಣ್ಯ ಪ್ರದೇಶಗಳ ನಡುವಿನ ವ್ಯತ್ಯಾಸವನ್ನು ನಿಖರವಾಗಿ ಗುರುತಿಸಲು ಸಾಧ್ಯವಿಲ್ಲ. ಆದ್ದರಿಂದ ಸ್ಥಳ ಪರಿಶೀಲನೆ ಹಾಗೂ ಮಾನವ ನಿರ್ವಹಿತ ಭೂಮಾಪನದ ಮೂಲಕ ಪ್ರದೇಶವನ್ನು ಗುರುತಿಸಬೇಕು ಎಂದು ಒತ್ತಾಯಿಸಿದರು. ಪಶ್ಚಿಮಘಟ್ಟದ ಅರಣ್ಯದಂಚಿನ ಹಲವು ಗ್ರಾಮಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದರೆ ರಸ್ತೆ, ಮನೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೂ ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮಗಳ ಅಭಿವೃದ್ಧಿಗೆ ಯಾವುದೇ ನಿರ್ಬಂಧ ವಿಧಿಸಬಾರದು ಎಂದು ಆಗ್ರಹಿಸಿದರು.<br>ಪರಿಸರ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನೋಪಾಯ ಹಾಗೂ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರದ ಪರಿಸರ, ವಾಣಿಜ್ಯ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯಗಳು ರೈತರು, ಬೆಳೆಗಾರರು ಮತ್ತು ಸಾರ್ವಜನಿಕರೊಂದಿಗೆ ಮುಕ್ತ ಚರ್ಚೆ ನಡೆಸಬೇಕು. ಕಾಫಿ, ಟೀ ಹಾಗೂ ರಬ್ಬರ್ ಬೋರ್ಡ್‌ಗಳೊಂದಿಗೆ ಸಮಗ್ರವಾಗಿ ಚರ್ಚಿಸಿ ವರದಿಯ ಸಾಧಕ-ಬಾಧಕಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಬಿಜೆಪಿ ಪ್ರೀತಂ ಗೌಡರನ್ನು ಹಾಡಿ ಹೊಗಳಿದ &#8211; ಸಂಸದ ಶ್ರೇಯಸ್‌ ಪಟೇಲ್</title>
		<link>https://peepalmedia.com/mp-shreyas-patel-heaped-praise-on-bjps-preetham-gowda/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 10 Aug 2026 09:24:20 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<guid isPermaLink="false">https://peepalmedia.com/?p=82970</guid>

					<description><![CDATA[ಹಾಸನ:&#160;ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರನ್ನು ಹಾಸನ ಸಂಸದ ಶ್ರೇಯಸ್‌ ಪಟೇಲ್ ಹಾಡಿ ಹೊಗಳಿದ್ದಾರೆ. ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಬಾಬು ಜಗಜೀವನ್‌ ರಾಂ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರೀತಂ ಗೌಡ ಅವರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ನನಗೆ ಪಕ್ಷದ ಸಭೆ ಇತ್ತು. ನಾನು ಹೋಗಬೇಕಿತ್ತು. ಆದರೆ ಪ್ರೀತಂ ಅಣ್ಣ ಕರೆ ಮಾಡಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ನಾವೆಲ್ಲರೂ ಪಾಲ್ಗೊಳ್ಳಬೇಕು ಎಂದು [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong>&nbsp;ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರನ್ನು ಹಾಸನ ಸಂಸದ ಶ್ರೇಯಸ್‌ ಪಟೇಲ್ ಹಾಡಿ ಹೊಗಳಿದ್ದಾರೆ. ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಬಾಬು ಜಗಜೀವನ್‌ ರಾಂ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರೀತಂ ಗೌಡ ಅವರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು.</p>



<p class="wp-block-paragraph">ನನಗೆ ಪಕ್ಷದ ಸಭೆ ಇತ್ತು. ನಾನು ಹೋಗಬೇಕಿತ್ತು. ಆದರೆ ಪ್ರೀತಂ ಅಣ್ಣ ಕರೆ ಮಾಡಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ನಾವೆಲ್ಲರೂ ಪಾಲ್ಗೊಳ್ಳಬೇಕು ಎಂದು ಹೇಳಿದ್ದರಿಂದ ಅತ್ಯಂತ ಸಂತೋಷದಿಂದ ಬಂದಿದ್ದೇನೆ ಎಂದು ಶ್ರೇಯಸ್‌ ಪಟೇಲ್ ಹೇಳಿದರು.ಹಾಸನವನ್ನು ಸುಂದರ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರೀತಂ ಗೌಡ ಅವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮುಂದಾಲೋಚನೆಯೊಂದಿಗೆ ನಗರದ ಸ್ವಚ್ಛತೆ ಹಾಗೂ ಸೌಂದರ್ಯೀಕರಣಕ್ಕೆ ಒತ್ತು ನೀಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. </p>



<p class="wp-block-paragraph">ಪ್ರೀತಂ ಗೌಡ ಅವರು ಕೇವಲ ಐದು ವರ್ಷ, ಒಂದು ಅವಧಿಗೆ ಮಾತ್ರ ಶಾಸಕರಾಗಿದ್ದರು. ಆದರೂ ಎಲ್ಲಾ ಸಮಾಜಗಳ ಅಭಿವೃದ್ಧಿಗೆ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯದಾಗಲಿ. ಪಕ್ಷ ಯಾವುದೇ ಇರಲಿ, ಒಬ್ಬ ಸಹೋದರನಾಗಿ ಅವರಿಗೆ ಶುಭ ಹಾರೈಸುತ್ತೇನೆ” ಎಂದರು. ಪಕ್ಷಾತೀತವಾಗಿ ತಾನು ಹಾಗೂ ಪ್ರೀತಂ ಗೌಡ ಅವರು ಸಮಾಜದ ಏಳಿಗೆಗಾಗಿ ಶ್ರಮಿಸಿದ್ದೇವೆ. ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತರುವಂತೆ ಶ್ರೇಯಸ್‌ ಪಟೇಲ್ ಮನವಿ ಮಾಡಿದರು.</p>



<p class="wp-block-paragraph">ಜಂತರ್‌-ಮಂತರ್‌ನಲ್ಲಿ ನೀಟ್‌ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಡ ಹಾಗೂ ಅಮಾಯಕ ವಿದ್ಯಾರ್ಥಿಗಳ ಮೇಲೆ ಧಾರುಣವಾಗಿ ಹಲ್ಲೆ ಮಾಡಲಾಗಿದೆ ಎಂದು ಸಂಸದ ಶ್ರೇಯಸ್‌ ಪಟೇಲ್ ಆರೋಪಿಸಿದ್ದಾರೆ. ಈ ಘಟನೆಗೆ ಕಾರಣ ಯಾರು ಎಂಬುದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸ್ಪಷ್ಟನೆ ನೀಡಬೇಕು ಎಂಬುದು ನಮ್ಮೆಲ್ಲರ ಒಕ್ಕೊರಲ ಆಗ್ರಹ ಎಂದು ಅವರು ಹೇಳಿದರು.</p>



<p class="wp-block-paragraph">ಲೋಕಸಭೆಯ ಮಳೆಗಾಲದ ಅಧಿವೇಶನ ಮುಗಿಯುವ ಹಂತಕ್ಕೆ ಬಂದರೂ ಈ ವಿಚಾರದ ಕುರಿತು ಕನಿಷ್ಠ ಸೌಜನ್ಯಕ್ಕಾದರೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಲೋಕಸಭಾ ಅಧಿವೇಶನದಲ್ಲಿ ಕ್ಷೇತ್ರಗಳ ಸಮಸ್ಯೆಗಳ ಕುರಿತು ಚರ್ಚಿಸಲು ಸಾಧ್ಯವಾಗುತ್ತಿಲ್ಲ. ಸದನವನ್ನು ಸುಸೂತ್ರವಾಗಿ ನಡೆಸಬೇಕೆಂಬ ಯಾವುದೇ ಮನೋಭಾವ ಕೇಂದ್ರ ಸರ್ಕಾರಕ್ಕೆ ಇಲ್ಲ. ಅವರಿಗೆ ಅಧಿವೇಶನದ ದಿನಗಳನ್ನು ಪೂರ್ಣಗೊಳಿಸುವುದಷ್ಟೇ ಉದ್ದೇಶವಾಗಿದೆ ಎಂದು ಶ್ರೇಯಸ್‌ ಪಟೇಲ್ ಟೀಕಿಸಿದರು.</p>
]]></content:encoded>
					
		
		
			</item>
		<item>
		<title>ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು &#8211; ಚಿವ ಎಚ್.ಡಿ. ರೇವಣ್ಣ </title>
		<link>https://peepalmedia.com/the-government-must-take-immediate-steps-to-protect-the-interests/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 06 Aug 2026 14:51:43 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82772</guid>

					<description><![CDATA[ಹಾಸನ:&#160;ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದರು. ಹಾಸನದಲ್ಲಿ ಇಂದು ಈ ಕುರಿತು&#160; ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಬರ ಅಧ್ಯಯನವನ್ನು ಸ್ವಾಗತಿಸಿದರೂ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ನಿಖರವಾಗಿ ವರದಿ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕುಳಿತು ವರದಿ ಸಲ್ಲಿಸುವ ಬದಲು ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಸತ್ಯಾಂಶ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong>&nbsp;ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದರು.</p>



<p class="wp-block-paragraph">ಹಾಸನದಲ್ಲಿ ಇಂದು ಈ ಕುರಿತು&nbsp; ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಬರ ಅಧ್ಯಯನವನ್ನು ಸ್ವಾಗತಿಸಿದರೂ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ನಿಖರವಾಗಿ ವರದಿ ಮಾಡಬೇಕು ಎಂದು ಒತ್ತಾಯಿಸಿದರು.</p>



<p class="wp-block-paragraph">ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕುಳಿತು ವರದಿ ಸಲ್ಲಿಸುವ ಬದಲು ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಸತ್ಯಾಂಶ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>



<p class="wp-block-paragraph">ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ನೀರಾವರಿ ನಾಲೆಗಳಲ್ಲಿ ನೀರು ಹರಿಸಬೇಕು. ಕಳೆದ ವರ್ಷದ ಬೆಳೆ ವಿಮೆ ಇನ್ನೂ ರೈತರಿಗೆ ಸಿಕ್ಕಿಲ್ಲ. ಜಿಪಿಎಸ್ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಿಜವಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಮಾತ್ರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.</p>
]]></content:encoded>
					
		
		
			</item>
		<item>
		<title>ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೆ.ಎಂ.ಶಿವಲಿಂಗೇಗೌಡರು &#8211; ಬರ ಪರಿಸ್ಥಿತಿಯ ವೀಕ್ಷಣೆ</title>
		<link>https://peepalmedia.com/k-m-shivalinge-gowda-visits-the-district-for-the-first-time-as-minister/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 05 Aug 2026 09:45:24 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82726</guid>

					<description><![CDATA[ಹಾಸನ:&#160;ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಯಾದ ಹಾಸನಕ್ಕೆ ಆಗಮಿಸಿದ ನೂತನ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.ಜಿಲ್ಲೆಯ ಗಡಿಭಾಗದ ಕಿರಿಸಾವೆಯಲ್ಲಿ ನೂತನ ಸಚಿವರಿಗೆ ಪಟಾಕಿ ಸಿಡಿಸಿ, ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ನೂತನ ಸಚಿವರಿಗೆ ಹೂಗುಚ್ಚ ನೀಡಿ ಶುಭ ಹಾರೈಸಿದರು. ಸಚಿವರನ್ನು ಹತ್ತಿರದಿಂದ ನೋಡಲು ಹಾಗೂ ಹೂಗುಚ್ಚ ನೀಡಲು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು.ಬರ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong>&nbsp;ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಯಾದ ಹಾಸನಕ್ಕೆ ಆಗಮಿಸಿದ ನೂತನ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.ಜಿಲ್ಲೆಯ ಗಡಿಭಾಗದ ಕಿರಿಸಾವೆಯಲ್ಲಿ ನೂತನ ಸಚಿವರಿಗೆ ಪಟಾಕಿ ಸಿಡಿಸಿ, ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ನೂತನ ಸಚಿವರಿಗೆ ಹೂಗುಚ್ಚ ನೀಡಿ ಶುಭ ಹಾರೈಸಿದರು.</p>



<p class="wp-block-paragraph">ಸಚಿವರನ್ನು ಹತ್ತಿರದಿಂದ ನೋಡಲು ಹಾಗೂ ಹೂಗುಚ್ಚ ನೀಡಲು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು.ಬರ ಅಧ್ಯಯನಕ್ಕೆ ಚಾಲನೆ ಸ್ವಾಗತ ಸ್ವೀಕಾರ ಸಮಾರಂಭದ ಬಳಿಕ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ತಕ್ಷಣವೇಕ್ಷೇತ್ರದ ಕಡೆ ಗಮನಹರಿಸಿದ್ದು, ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಲು ಮುಂದಾಗಿದ್ದಾರೆ.</p>



<p class="wp-block-paragraph">ರಾಜ್ಯ ಸರ್ಕಾರದ ಸೂಚನೆಯಂತೆ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಂ.ಶಿವಲಿಂಗೇಗೌಡ ಅವರು ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲ್ಲೂಕುಗಳಲ್ಲಿ ನೇರವಾಗಿ ಸಂಚರಿಸಿ, ಮಳೆಯಿಲ್ಲದೆ ಒಣಗಿ ಹೋಗಿರುವ ಬೆಳೆಗಳನ್ನು ಪರಿಶೀಲಿಸಿ, ಬರ ಪರಿಸ್ಥಿತಿಯ ವಾಸ್ತವಿಕ ಅಧ್ಯಯನ ನಡೆಸಲಿದ್ದಾರೆ.</p>



<p class="wp-block-paragraph"><a href="https://janamitra.co/#facebook" rel="noreferrer noopener" target="_blank"></a></p>
]]></content:encoded>
					
		
		
			</item>
		<item>
		<title>ಸಕಲೇಶಪುರ ಅರಣ್ಯದಲ್ಲಿ ಆಫ್ ರೇಡಿಂಗ್, ಬೆಂಗಳೂರು ಮೂಲದ 7 ಮಹೀಂದ್ರ ಥಾರ್‌ ಜೀಪ್‌ಗಳು ಜಪ್ತಿ</title>
		<link>https://peepalmedia.com/off-roading-in-sakaleshpur-forest-7-bengaluru-based-mahindra-thar-jeeps-seized/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 03 Aug 2026 07:57:37 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82543</guid>

					<description><![CDATA[ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಸೌಂದರ್ಯಕ್ಕೆ ಮನಸೋತು ಬರುವ ಪ್ರವಾಸಿಗರಲ್ಲಿ (Tourists ) ಕೆಲವರು ನಿಯಮ ಮೀರಿ ವರ್ತಿಸುತ್ತಿದ್ದಾರೆ. ತಾಲೂಕಿನ ಹೊಡಚಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್) ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ‘ಆಫ್ ರೇಡಿಂಗ್’ ಸಾಹಸ ಪ್ರದರ್ಶಿಸುತ್ತಿದ್ದ ಪ್ರವಾಸಿಗರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಜರುಗಿಸಿದೆ. ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ತಂಡವೊಂದು ಅತ್ಯಂತ ಸೂಕ್ಷ್ಮ ಪರಿಸರ ವಲಯದಲ್ಲಿ ವಾಹನಗಳನ್ನು ಚಲಾಯಿಸುತ್ತಾ ಪುಂಡಾಟ ನಡೆಸುತ್ತಿತ್ತು. ಸ್ಥಳೀಯ ಸಸ್ಯರಾಶಿ ಹಾಗೂ ವನ್ಯಜೀವಿಗಳ ಆವಾಸಸ್ಥಾನಕ್ಕೆ [&#8230;]]]></description>
										<content:encoded><![CDATA[
<p class="wp-block-paragraph"><strong>ಸಕಲೇಶಪುರ: </strong>ಹಾಸನ ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಸೌಂದರ್ಯಕ್ಕೆ ಮನಸೋತು ಬರುವ ಪ್ರವಾಸಿಗರಲ್ಲಿ (Tourists ) ಕೆಲವರು ನಿಯಮ ಮೀರಿ ವರ್ತಿಸುತ್ತಿದ್ದಾರೆ.</p>



<p class="wp-block-paragraph">ತಾಲೂಕಿನ ಹೊಡಚಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್) ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ‘ಆಫ್ ರೇಡಿಂಗ್’ ಸಾಹಸ ಪ್ರದರ್ಶಿಸುತ್ತಿದ್ದ ಪ್ರವಾಸಿಗರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಜರುಗಿಸಿದೆ.</p>



<p class="wp-block-paragraph">ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ತಂಡವೊಂದು ಅತ್ಯಂತ ಸೂಕ್ಷ್ಮ ಪರಿಸರ ವಲಯದಲ್ಲಿ ವಾಹನಗಳನ್ನು ಚಲಾಯಿಸುತ್ತಾ ಪುಂಡಾಟ ನಡೆಸುತ್ತಿತ್ತು. ಸ್ಥಳೀಯ ಸಸ್ಯರಾಶಿ ಹಾಗೂ ವನ್ಯಜೀವಿಗಳ ಆವಾಸಸ್ಥಾನಕ್ಕೆ ಹಾನಿ ಉಂಟಾಗುತ್ತಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ಸಕಲೇಶಪುರ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>



<p class="wp-block-paragraph">ಈ ದಿಢೀರ್ ದಾಳಿಯ ವೇಳೆ ನಿಯಮ ಉಲ್ಲಂಘಿಸಿ ಆಫ್ ರೋಡ್ ಚಾಲನೆ ಮಾಡುತ್ತಿದ್ದ 7 ಮಹೀಂದ್ರ ಥಾರ್ ಜೀಪ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕೃತಿ ಸೌಂದರ್ಯವನ್ನು ಆನಂದಿಸುವುದನ್ನು ಬಿಟ್ಟು ಪರಿಸರ ನಾಶಕ್ಕೆ ಕಾರಣರಾದ ಪ್ರವಾಸಿಗರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>



<p class="wp-block-paragraph">ಸೂಕ್ಷ್ಮ ಅರಣ್ಯ ಪ್ರದೇಶಗಳಿಗೆ ಅಕ್ರಮವಾಗಿ ಮಾರ್ಗದರ್ಶನ ನೀಡಿ, ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದ ಸ್ಥಳೀಯ ಹೋಮ್‌ಸ್ಟೇ ಹಾಗೂ ರೆಸಾರ್ಟ್‌ಗಳ ಮಾಲೀಕರಿಗೂ ನೋಟಿಸ್ ನೀಡಲು ಇಲಾಖೆ ತೀರ್ಮಾನಿಸಿದೆ. ಇಂತಹ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
