<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಬ್ರೇಕಿಂಗ್ ಸುದ್ದಿ &#8211; Peepal Media</title>
	<atom:link href="https://peepalmedia.com/category/breaking-news/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 06 Aug 2026 14:51:44 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಬ್ರೇಕಿಂಗ್ ಸುದ್ದಿ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು &#8211; ಚಿವ ಎಚ್.ಡಿ. ರೇವಣ್ಣ </title>
		<link>https://peepalmedia.com/the-government-must-take-immediate-steps-to-protect-the-interests/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 06 Aug 2026 14:51:43 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82772</guid>

					<description><![CDATA[ಹಾಸನ:&#160;ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದರು. ಹಾಸನದಲ್ಲಿ ಇಂದು ಈ ಕುರಿತು&#160; ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಬರ ಅಧ್ಯಯನವನ್ನು ಸ್ವಾಗತಿಸಿದರೂ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ನಿಖರವಾಗಿ ವರದಿ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕುಳಿತು ವರದಿ ಸಲ್ಲಿಸುವ ಬದಲು ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಸತ್ಯಾಂಶ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong>&nbsp;ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದರು.</p>



<p class="wp-block-paragraph">ಹಾಸನದಲ್ಲಿ ಇಂದು ಈ ಕುರಿತು&nbsp; ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಬರ ಅಧ್ಯಯನವನ್ನು ಸ್ವಾಗತಿಸಿದರೂ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ನಿಖರವಾಗಿ ವರದಿ ಮಾಡಬೇಕು ಎಂದು ಒತ್ತಾಯಿಸಿದರು.</p>



<p class="wp-block-paragraph">ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕುಳಿತು ವರದಿ ಸಲ್ಲಿಸುವ ಬದಲು ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಸತ್ಯಾಂಶ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>



<p class="wp-block-paragraph">ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ನೀರಾವರಿ ನಾಲೆಗಳಲ್ಲಿ ನೀರು ಹರಿಸಬೇಕು. ಕಳೆದ ವರ್ಷದ ಬೆಳೆ ವಿಮೆ ಇನ್ನೂ ರೈತರಿಗೆ ಸಿಕ್ಕಿಲ್ಲ. ಜಿಪಿಎಸ್ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಿಜವಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಮಾತ್ರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.</p>
]]></content:encoded>
					
		
		
			</item>
		<item>
		<title>ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೆ.ಎಂ.ಶಿವಲಿಂಗೇಗೌಡರು &#8211; ಬರ ಪರಿಸ್ಥಿತಿಯ ವೀಕ್ಷಣೆ</title>
		<link>https://peepalmedia.com/k-m-shivalinge-gowda-visits-the-district-for-the-first-time-as-minister/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 05 Aug 2026 09:45:24 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82726</guid>

					<description><![CDATA[ಹಾಸನ:&#160;ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಯಾದ ಹಾಸನಕ್ಕೆ ಆಗಮಿಸಿದ ನೂತನ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.ಜಿಲ್ಲೆಯ ಗಡಿಭಾಗದ ಕಿರಿಸಾವೆಯಲ್ಲಿ ನೂತನ ಸಚಿವರಿಗೆ ಪಟಾಕಿ ಸಿಡಿಸಿ, ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ನೂತನ ಸಚಿವರಿಗೆ ಹೂಗುಚ್ಚ ನೀಡಿ ಶುಭ ಹಾರೈಸಿದರು. ಸಚಿವರನ್ನು ಹತ್ತಿರದಿಂದ ನೋಡಲು ಹಾಗೂ ಹೂಗುಚ್ಚ ನೀಡಲು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು.ಬರ [&#8230;]]]></description>
										<content:encoded><![CDATA[
<p class="wp-block-paragraph"><strong>ಹಾಸನ:</strong>&nbsp;ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಯಾದ ಹಾಸನಕ್ಕೆ ಆಗಮಿಸಿದ ನೂತನ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.ಜಿಲ್ಲೆಯ ಗಡಿಭಾಗದ ಕಿರಿಸಾವೆಯಲ್ಲಿ ನೂತನ ಸಚಿವರಿಗೆ ಪಟಾಕಿ ಸಿಡಿಸಿ, ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ನೂತನ ಸಚಿವರಿಗೆ ಹೂಗುಚ್ಚ ನೀಡಿ ಶುಭ ಹಾರೈಸಿದರು.</p>



<p class="wp-block-paragraph">ಸಚಿವರನ್ನು ಹತ್ತಿರದಿಂದ ನೋಡಲು ಹಾಗೂ ಹೂಗುಚ್ಚ ನೀಡಲು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು.ಬರ ಅಧ್ಯಯನಕ್ಕೆ ಚಾಲನೆ ಸ್ವಾಗತ ಸ್ವೀಕಾರ ಸಮಾರಂಭದ ಬಳಿಕ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ತಕ್ಷಣವೇಕ್ಷೇತ್ರದ ಕಡೆ ಗಮನಹರಿಸಿದ್ದು, ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಲು ಮುಂದಾಗಿದ್ದಾರೆ.</p>



<p class="wp-block-paragraph">ರಾಜ್ಯ ಸರ್ಕಾರದ ಸೂಚನೆಯಂತೆ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಂ.ಶಿವಲಿಂಗೇಗೌಡ ಅವರು ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲ್ಲೂಕುಗಳಲ್ಲಿ ನೇರವಾಗಿ ಸಂಚರಿಸಿ, ಮಳೆಯಿಲ್ಲದೆ ಒಣಗಿ ಹೋಗಿರುವ ಬೆಳೆಗಳನ್ನು ಪರಿಶೀಲಿಸಿ, ಬರ ಪರಿಸ್ಥಿತಿಯ ವಾಸ್ತವಿಕ ಅಧ್ಯಯನ ನಡೆಸಲಿದ್ದಾರೆ.</p>



<p class="wp-block-paragraph"><a href="https://janamitra.co/#facebook" rel="noreferrer noopener" target="_blank"></a></p>
]]></content:encoded>
					
		
		
			</item>
		<item>
		<title>E 20 ಪೆಟ್ರೋಲ್‌ ವಿವಾದ ಗಡ್ಕರಿ ವಿರುದ್ಧದ AI ಪೋಸ್ಟ್‌ ತೆಗೆಯಿರಿ &#8211; ಬಾಂಬೆ ಹೈಕೋರ್ಟ್</title>
		<link>https://peepalmedia.com/e20-petrol-controversy-remove-ai-post-against-gadkari/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 05 Aug 2026 09:24:06 +0000</pubDate>
				<category><![CDATA[ದೆಹಲಿ]]></category>
		<category><![CDATA[ಮೀಡಿಯಾ]]></category>
		<category><![CDATA[ರಾಜಕೀಯ]]></category>
		<category><![CDATA[india]]></category>
		<category><![CDATA[news]]></category>
		<guid isPermaLink="false">https://peepalmedia.com/?p=82714</guid>

					<description><![CDATA[ಮುಂಬೈ: ಎಥನಾಲ್ ಮಿಶ್ರಿತ ಪೆಟ್ರೋಲ್ (E20) ನೀತಿಗೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿರುವ “ಅಸಭ್ಯ, ನಿಂದನಾತ್ಮಕ, ಮತ್ತು AI ತಂತ್ರಜ್ಞಾನದಿಂದ ಸೃಷ್ಟಿಸಲಾದ (Deepfake)” ಪೋಸ್ಟ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಬಾಂಬೆ ಹೈಕೋರ್ಟ್ ಪ್ರಮುಖ ಜಾಲತಾಣಗಳಿಗೆ ಆಜ್ಞಾಪಿಸಿದೆ. ಕೋರ್ಟ್‌ ಹೇಳಿದ್ದೇನು? ಸಚಿವ ಗಡ್ಕರಿ ಅವರು ಸಲ್ಲಿಸಿದ್ದ ಸಿವಿಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರೀಫ್ ಡಾಕ್ಟರ್ ಅವರಿದ್ದ ಪೀಠವು, ಈ ಪೋಸ್ಟ್‌ಗಳು [&#8230;]]]></description>
										<content:encoded><![CDATA[
<p class="wp-block-paragraph"><strong>ಮುಂಬೈ: </strong>ಎಥನಾಲ್ ಮಿಶ್ರಿತ ಪೆಟ್ರೋಲ್ (E20) ನೀತಿಗೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿರುವ “ಅಸಭ್ಯ, ನಿಂದನಾತ್ಮಕ, ಮತ್ತು AI ತಂತ್ರಜ್ಞಾನದಿಂದ ಸೃಷ್ಟಿಸಲಾದ (Deepfake)” ಪೋಸ್ಟ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಬಾಂಬೆ ಹೈಕೋರ್ಟ್ ಪ್ರಮುಖ ಜಾಲತಾಣಗಳಿಗೆ ಆಜ್ಞಾಪಿಸಿದೆ.</p>



<p class="wp-block-paragraph"><strong>ಕೋರ್ಟ್‌ ಹೇಳಿದ್ದೇನು?</strong></p>



<p class="wp-block-paragraph">ಸಚಿವ ಗಡ್ಕರಿ ಅವರು ಸಲ್ಲಿಸಿದ್ದ ಸಿವಿಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರೀಫ್ ಡಾಕ್ಟರ್ ಅವರಿದ್ದ ಪೀಠವು, ಈ ಪೋಸ್ಟ್‌ಗಳು ಪ್ರಥಮ ದೃಷ್ಟಿಯಲ್ಲೇ (Prima facie) ತೀವ್ರ ಮಾನಹಾನಿಕರವಾಗಿವೆ ಎಂದು ಅಭಿಪ್ರಾಯಪಟ್ಟು ಈ ನಿರ್ದೇಶನ ನೀಡಿದೆ.</p>



<p class="wp-block-paragraph">ಕೋರ್ಟ್ ಮೆಟ್ಟಿಲೇರದೆ ಪೋಸ್ಟ್ ತೆರವುಗೊಳಿಸುವ ವ್ಯವಸ್ಥೆಯಿಲ್ವೇ? – ಜಾಲತಾಣಗಳಿಗೆ ಹೈಕೋರ್ಟ್ ಪ್ರಶ್ನೆ<br>ಮೆಟಾ (Meta Platforms), ಎಕ್ಸ್ (X Corp) ಮತ್ತು ಗೂಗಲ್ (Google LLC) ನಂತಹ ಪ್ರಮುಖ ಸಾಮಾಜಿಕ ಜಾಲತಾಣ ಸಂಸ್ಥೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, “ಯಾವುದೇ ವ್ಯಕ್ತಿ ನ್ಯಾಯಾಲಯದ ಬಾಗಿಲು ತಟ್ಟುವ ಅಗತ್ಯವಿಲ್ಲದೇ ಇಂತಹ ನಿಂದನಾತ್ಮಕ ಪೋಸ್ಟ್‌ಗಳನ್ನು ತಾನಾಗಿಯೇ ಗುರುತಿಸಿ ತೆರವುಗೊಳಿಸುವಂತಹ ಸೂಕ್ತ ತಾಂತ್ರಿಕ ವ್ಯವಸ್ಥೆ (Mechanism) ಜಾಲತಾಣಗಳಲ್ಲಿ ಏಕಿಲ್ಲ?” ಎಂದು ಪ್ರಶ್ನಿಸಿತು.</p>



<p class="wp-block-paragraph">“ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ಇಂತಹ ಪೋಸ್ಟ್‌ಗಳು ಅಸಭ್ಯತೆಯಿಂದ ಕೂಡಿದ್ದು, ಯುವಜನತೆ ಸೇರಿದಂತೆ ಪ್ರತಿಯೊಬ್ಬರಿಗೂ ಸಿಗುವಂತಿರುತ್ತವೆ. ಇಂತಹ ನಿಂದನಾತ್ಮಕ ಪೋಸ್ಟ್‌ಗಳಿಗೆ ಜಾಲತಾಣಗಳಲ್ಲಿ ಜಾಗವಿರಬಾರದು. ಕಂಪನಿಗಳು ಸ್ವಯಂಪ್ರೇರಿತವಾಗಿ ಇವುಗಳನ್ನು ಡಿಲೀಟ್ ಮಾಡಬೇಕು” ಎಂದು ಹೈಕೋರ್ಟ್ ಆಕ್ರೋಶ ಹೊರಹಾಕಿತು. ಅಲ್ಲದೆ, ಭವಿಷ್ಯದಲ್ಲೂ ಸಚಿವರಿಗೆ ಸಂಬಂಧಿಸಿದಂತೆ ಇಂತಹ ಯಾವುದೇ ಪೋಸ್ಟ್‌ಗಳು ಕಂಡುಬಂದಲ್ಲಿ ತಕ್ಷಣವೇ ಅವುಗಳನ್ನು ತೆರವುಗೊಳಿಸಬೇಕು ಎಂದು ಸ್ಪಷ್ಟಪಡಿಸಿತು.</p>



<p class="wp-block-paragraph"><strong>ಗಡ್ಕರಿ ಸಲ್ಲಿಸಿದ್ದ ಅರ್ಜಿಯಲ್ಲಿ ಏನಿದೆ?</strong><br>ಸರ್ಕಾರ ಜಾರಿಗೆ ತಂದಿರುವ 20% ಎಥನಾಲ್ ಮಿಶ್ರಿತ ಪೆಟ್ರೋಲ್ (E20) ನೀತಿಯಿಂದ ನಿತಿನ್ ಗಡ್ಕರಿ ಹಾಗೂ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ಆರ್ಥಿಕ ಲಾಭವಾಗುತ್ತಿದೆ ಎಂದು AI ಹಾಗೂ ಡೀಪ್‌ಫೇಕ್ ವಿಡಿಯೋಗಳ ಮೂಲಕ ಸುಳ್ಳು ಸುದ್ದಿ ಬಿತ್ತರಿಸಲಾಗಿತ್ತು.</p>



<p class="wp-block-paragraph">ಈ ಪೋಸ್ಟ್‌ಗಳಿಂದ ತಮ್ಮ ವ್ಯಕ್ತಿತ್ವಕ್ಕೆ ಹಾಗೂ ಗೌರವಕ್ಕೆ ಗಂಭೀರ ಧಕ್ಕೆಯುಂಟಾಗಿದೆ ಎಂದು ಆರೋಪಿಸಿರುವ ಗಡ್ಕರಿ, ₹11 ಕೋಟಿ ನಷ್ಟಪರಿಹಾರ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಎಥನಾಲ್ ಮಿಶ್ರಣ ಯೋಜನೆಯು ಸಂಪೂರ್ಣವಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಆಡಳಿತಕ್ಕೆ ಒಳಪಟ್ಟಿದ್ದು, ತಮ್ಮ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ.</p>



<p class="wp-block-paragraph">ಅರ್ಜಿಯ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿರುವ ಹೈಕೋರ್ಟ್, ಈ ಕುರಿತು ಪ್ರತ್ಯುತ್ತರ ನೀಡುವಂತೆ ಪ್ರತಿವಾದಿಗಳಾದ ಮೆಟಾ, ಎಕ್ಸ್, ಗೂಗಲ್ ಮತ್ತು ಸಂಬಂಧಿತ ಕಂಪನಿಗಳಿಗೆ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿದೆ.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿಗಳ ಪ್ರತಿಭಟ ಸಮಯದಲ್ಲಿ ಹತೋಟಿಗೆ ತರಲು ತಾಳ್ಮೆ ಅಗತ್ಯ &#8211;  ಸುಪ್ರೀಂ ಕೋರ್ಟ್</title>
		<link>https://peepalmedia.com/patience-is-required-to-bring-the-situation-under-control-during-student/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 05 Aug 2026 09:19:52 +0000</pubDate>
				<category><![CDATA[ದೆಹಲಿ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯಾ]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[politics]]></category>
		<guid isPermaLink="false">https://peepalmedia.com/?p=82711</guid>

					<description><![CDATA[ನವದೆಹಲಿ : ವಿದ್ಯಾರ್ಥಿ ಪ್ರತಿಭಟನಾಕಾರರನ್ನು (Student Protest) ಹತೋಟಿಗೆ ತರುವಾಗ ಕಾನೂನು ಜಾರಿ ಸಂಸ್ಥೆಗಳು ಮತ್ತು ಪೊಲೀಸರು (Police) ತೀವ್ರ ಸಂಯಮದಿಂದ ನಡೆದುಕೊಳ್ಳಬೇಕು, ಅಧಿಕಾರಿಗಳು ಹಿಂಸಾತ್ಮಕ ಹಾದಿ ಹಿಡಿದರೆ ಪರಿಸ್ಥಿತಿ ಇನ್ನಷ್ಟು ಕೈಮೀರಿ ಹೋಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಬುಧವಾರ ಮಹತ್ವದ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಸಿಜಿಪಿ ವಿರುದ್ಧ ಸಲ್ಲಿಕೆ ಆಗಿದೆ ಅರ್ಜಿ ಇತ್ತೀಚೆಗೆ ದೆಹಲಿ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆ ಮತ್ತು ಕಲ್ಲುತೂರಾಟದ ಹಿಂಸಾಚಾರದಲ್ಲಿ [&#8230;]]]></description>
										<content:encoded><![CDATA[
<p class="wp-block-paragraph"><strong>ನವದೆಹಲಿ : </strong>ವಿದ್ಯಾರ್ಥಿ ಪ್ರತಿಭಟನಾಕಾರರನ್ನು (Student Protest) ಹತೋಟಿಗೆ ತರುವಾಗ ಕಾನೂನು ಜಾರಿ ಸಂಸ್ಥೆಗಳು ಮತ್ತು ಪೊಲೀಸರು (Police) ತೀವ್ರ ಸಂಯಮದಿಂದ ನಡೆದುಕೊಳ್ಳಬೇಕು, ಅಧಿಕಾರಿಗಳು ಹಿಂಸಾತ್ಮಕ ಹಾದಿ ಹಿಡಿದರೆ ಪರಿಸ್ಥಿತಿ ಇನ್ನಷ್ಟು ಕೈಮೀರಿ ಹೋಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಬುಧವಾರ ಮಹತ್ವದ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>



<p class="wp-block-paragraph"><strong>ಸಿಜಿಪಿ ವಿರುದ್ಧ ಸಲ್ಲಿಕೆ ಆಗಿದೆ ಅರ್ಜಿ</strong></p>



<p class="wp-block-paragraph">ಇತ್ತೀಚೆಗೆ ದೆಹಲಿ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆ ಮತ್ತು ಕಲ್ಲುತೂರಾಟದ ಹಿಂಸಾಚಾರದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜಿಪಿ) ಪಾತ್ರವಿದೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಾತುಗಳನ್ನು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಪೀಠವು, ವಿದ್ಯಾರ್ಥಿ ಪ್ರತಿಭಟನೆಯ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಬಾಕಿ ಇರುವ ಅರ್ಜಿಗಳ ಜೊತೆಗೆ ಈ ಅರ್ಜಿಯನ್ನೂ ಜೋಡಿಸಿ, ಎಲ್ಲವನ್ನೂ ಒಟ್ಟಿಗೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.</p>



<p class="wp-block-paragraph">ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಮೆರವಣಿಗೆಗಳು ನಡೆದಾಗ ಭದ್ರತಾ ಪಡೆಗಳು ಅತ್ಯಂತ ಎಚ್ಚರಿಕೆಯಿಂದ ಮತ್ತು ತಾಳ್ಮೆಯಿಂದ ವ್ಯವಹರಿಸಬೇಕು ಎಂದು ಸಿಜೆಐ ಒತ್ತಿಹೇಳಿದರು. ಯುವಕರು ಹಿಂಸಾಚಾರಕ್ಕೆ ಇಳಿಯದಂತೆ ನೋಡಿಕೊಳ್ಳಲು ಅಧಿಕಾರಿಗಳು ಮೃದು ಧೋರಣೆ ತಳೆಯಬೇಕು. ಸರ್ಕಾರದ ಕಡೆಯಿಂದ ಸಾರಾಸಗಟು ಬಲಪ್ರಯೋಗ ಅಥವಾ ಆಕ್ರಮಣಕಾರಿ ನಡವಳಿಕೆ ತೋರಿದರೆ, ಅದು ಪರಿಸ್ಥಿತಿಯನ್ನು ಮತ್ತಷ್ಟು ಭೀಕರಗೊಳಿಸುತ್ತದೆ. ಯುವಜನರು ಏನು ಹೇಳುತ್ತಿದ್ದಾರೆ, ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ಆಲಿಸುವುದೇ ಅತ್ಯಂತ ದೊಡ್ಡ ಶಕ್ತಿ. ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಲಹೆಯ ಅಗತ್ಯವಿದೆಯೇ ಹೊರತು ಹಿಂಸೆಯಲ್ಲ ಎಂದು ಪೀಠ ಎಚ್ಚರಿಸಿದೆ.</p>



<p class="wp-block-paragraph">ಇದೇ ವೇಳೆ, ನ್ಯಾಯಾಲಯದ ಪ್ರಕ್ರಿಯೆಗಳು ಕಾಯುತ್ತಿರುವಾಗ ಪ್ರಸ್ತುತ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಾನೂನು ಜಾರಿ ಸಂಸ್ಥೆಗಳ ವಿವೇಚನೆಗೆ ಬಿಡುವುದು ಸೂಕ್ತ ಎಂದು ನ್ಯಾಯಪೀಠ ಹೇಳಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ಸಹ ಪರಿಶೀಲಿಸಬೇಕಿದ್ದು, ಮುಂದಿನ ದಿನಾಂಕದಂದು ವಿವರವಾದ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: &#8216;ಋತುತಾರೆ&#8217; ಯೋಜನೆ ಜಾರಿ, ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ರಮ್ಯಾ</title>
		<link>https://peepalmedia.com/state-governments-new-step-for-womens-health/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 04 Aug 2026 13:32:29 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=82638</guid>

					<description><![CDATA[ಮಹಿಳೆಯರ ಆರೋಗ್ಯ ಮತ್ತು ಋತುಚಕ್ರ ಸಂಬಂಧಿತ ಸಮಸ್ಯೆಗಳ ಕುರಿತು ಅರಿವು ಮೂಡಿಸುವ ಹಾಗೂ ಸಮಗ್ರ ಆರೋಗ್ಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ &#8216;ಋತುತಾರೆ&#8217; ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸಿದೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ನಟಿ ರಮ್ಯಾ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಮಹಿಳಾ ಆರೋಗ್ಯ ತಜ್ಞೆ [&#8230;]]]></description>
										<content:encoded><![CDATA[
<p class="wp-block-paragraph">ಮಹಿಳೆಯರ ಆರೋಗ್ಯ ಮತ್ತು ಋತುಚಕ್ರ ಸಂಬಂಧಿತ ಸಮಸ್ಯೆಗಳ ಕುರಿತು ಅರಿವು ಮೂಡಿಸುವ ಹಾಗೂ ಸಮಗ್ರ ಆರೋಗ್ಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ &#8216;ಋತುತಾರೆ&#8217; ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸಿದೆ.</p>



<p class="wp-block-paragraph">ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ನಟಿ ರಮ್ಯಾ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.</p>



<p class="wp-block-paragraph">ಮಹಿಳಾ ಆರೋಗ್ಯ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಮಹಿಳೆಯರ ಆರೋಗ್ಯ, ಋತುಚಕ್ರ, ಮಾನಸಿಕ ಆರೋಗ್ಯ ಹಾಗೂ ಇತರ ಸಂಬಂಧಿತ ವಿಷಯಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ಅಗತ್ಯ ಶಿಫಾರಸುಗಳನ್ನು ಸಲ್ಲಿಸಲಿದೆ ಎಂದು ಹೇಳಿದರು.</p>



<p class="wp-block-paragraph">ಸಮಿತಿ ರಚನೆಗೂ ಮುನ್ನ ವಿವಿಧ ಕ್ಷೇತ್ರಗಳ ತಜ್ಞರು ಹಾಗೂ ನಟಿಯರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ. ಮಹಿಳೆಯರು ಮಾನಸಿಕ ಒತ್ತಡ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಅವರ ಅಗತ್ಯಗಳಿಗೆ ಅನುಗುಣವಾಗಿ ಪರಿಣಾಮಕಾರಿ ಯೋಜನೆಗಳನ್ನು ರೂಪಿಸುವ ಕೆಲಸವನ್ನು ಈ ಸಮಿತಿ ಕೈಗೊಳ್ಳಲಿದೆ ಎಂದು ಸಚಿವರು ವಿವರಿಸಿದರು.</p>



<p class="wp-block-paragraph">ಇದೇ ವೇಳೆ, ಈ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ರಮ್ಯಾ ಅವರನ್ನು ನೇಮಕ ಮಾಡಲಾಗಿದೆ ಎಂದು ಯು.ಟಿ. ಖಾದರ್ ಘೋಷಿಸಿದರು. ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಹಾಗೂ ಯೋಜನೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ತಲುಪಿಸಲು ರಮ್ಯಾ ಸಾರ್ವಜನಿಕ ಜಾಗೃತಿ ಅಭಿಯಾನಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ವಿನಯ್ ಕುಲಕರ್ಣಿಗೆ ಮತ್ತೆ ಶಾಸಕ ಸ್ಥಾನ: ವಿಧಾನಸಭೆ ಸಚಿವಾಲಯದಿಂದ ಅಧಿಕೃತ ಆದೇಶ</title>
		<link>https://peepalmedia.com/vinay-kulkarni-regains-mla-status-legislative/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 04 Aug 2026 11:26:48 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<guid isPermaLink="false">https://peepalmedia.com/?p=82634</guid>

					<description><![CDATA[ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರಾಜ್ಯ ವಿಧಾನಸಭೆ ಸಚಿವಾಲಯ ಮರುಸ್ಥಾಪಿಸಿದೆ. ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಅನರ್ಹಗೊಂಡಿದ್ದ ವಿನಯ್ ಕುಲಕರ್ಣಿ ಅವರಿಗೆ, ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ, ಹೈಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪರಿಗಣಿಸಿ ವಿನಯ್ ಕುಲಕರ್ಣಿ ಅವರ ಅನರ್ಹತೆಯನ್ನು [&#8230;]]]></description>
										<content:encoded><![CDATA[
<p class="wp-block-paragraph">ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರಾಜ್ಯ ವಿಧಾನಸಭೆ ಸಚಿವಾಲಯ ಮರುಸ್ಥಾಪಿಸಿದೆ. ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಅನರ್ಹಗೊಂಡಿದ್ದ ವಿನಯ್ ಕುಲಕರ್ಣಿ ಅವರಿಗೆ, ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p>



<p class="wp-block-paragraph">ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ, ಹೈಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪರಿಗಣಿಸಿ ವಿನಯ್ ಕುಲಕರ್ಣಿ ಅವರ ಅನರ್ಹತೆಯನ್ನು ಹಿಂಪಡೆದು, ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಅವರು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿ ಮತ್ತೆ ಮುಂದುವರಿಯಲಿದ್ದಾರೆ.</p>



<p class="wp-block-paragraph"><strong>ಪ್ರಕರಣದ ಹಿನ್ನೆಲೆ</strong><br>2016ರ ಜೂನ್ 15ರಂದು ಧಾರವಾಡ ಉಪನಗರದ ಜಿಮ್‌ನಲ್ಲಿ ಬಿಜೆಪಿ ಮುಖಂಡ ಯೋಗೇಶ್‌ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದರೂ, ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು.</p>



<p class="wp-block-paragraph">2019ರಲ್ಲಿ, ಪ್ರಕರಣದ ಪ್ರಮುಖ ಆರೋಪಿ ಎಂದು ಆರೋಪಿಸಲ್ಪಟ್ಟಿದ್ದ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶಪಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಯೋಗೇಶ್‌ಗೌಡ ಕುಟುಂಬವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿತ್ತು. ಬಳಿಕ, ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು.</p>



<p class="wp-block-paragraph">ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಆಧರಿಸಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ಅವರ ಶಾಸಕ ಸ್ಥಾನ ಅನರ್ಹಗೊಂಡಿತ್ತು.</p>



<p class="wp-block-paragraph">ಆದರೆ, ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ವಿಧಾನಸಭೆ ಸಚಿವಾಲಯವು ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ಅಧಿಕೃತ ಆದೇಶ ಹೊರಡಿಸಿದೆ.</p>
]]></content:encoded>
					
		
		
			</item>
		<item>
		<title>ನಟಿ ತ್ರಿಷಾ ಕುರಿತು ಅವಹೇಳನಕಾರಿ ಹೇಳಿಕೆ : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ</title>
		<link>https://peepalmedia.com/derogatory-remarks-about-actress-trisha-dmk-leader/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 04 Aug 2026 06:21:28 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<guid isPermaLink="false">https://peepalmedia.com/?p=82621</guid>

					<description><![CDATA[ತಮಿಳುನಾಡಿನ ರಾಜಕೀಯದಲ್ಲಿ ಹೊಸ ವಿವಾದ ಭುಗಿಲೆದ್ದಿದ್ದು, ನಟಿ ತ್ರಿಷಾ ಕೃಷ್ಣನ್ ಕುರಿತು ದ್ವಿಮುಖ ಅರ್ಥ ಬರುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೇರಿ ಜಲ ಹಂಚಿಕೆ ವಿಚಾರವಾಗಿ ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದ ವೇಳೆ, ಜನಸಮೂಹದ ಕೆಲವರು &#8220;ತ್ರಿಷಾ, ತ್ರಿಷಾ&#8221; ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, &#8220;ನೀರು [&#8230;]]]></description>
										<content:encoded><![CDATA[
<p class="wp-block-paragraph">ತಮಿಳುನಾಡಿನ ರಾಜಕೀಯದಲ್ಲಿ ಹೊಸ ವಿವಾದ ಭುಗಿಲೆದ್ದಿದ್ದು, ನಟಿ ತ್ರಿಷಾ ಕೃಷ್ಣನ್ ಕುರಿತು ದ್ವಿಮುಖ ಅರ್ಥ ಬರುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>



<p class="wp-block-paragraph">ಕಾವೇರಿ ಜಲ ಹಂಚಿಕೆ ವಿಚಾರವಾಗಿ ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದ ವೇಳೆ, ಜನಸಮೂಹದ ಕೆಲವರು &#8220;ತ್ರಿಷಾ, ತ್ರಿಷಾ&#8221; ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, &#8220;ನೀರು ಬೇರೆಲ್ಲಿಗಾದರೂ ತಲುಪಲಿ ಅಥವಾ ತಲುಪದಿರಲಿ, ಅದು ಅಲ್ಲಿಗೆ ತಲುಪಬೇಕು&#8221; ಎಂದು ಹೇಳಿ, ಬಳಿಕ ತಾವು ಕಾವೇರಿ ನೀರಿನ ಕುರಿತು ಮಾತನಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಆದರೆ ಈ ಹೇಳಿಕೆಯನ್ನು ನಟಿ ತ್ರಿಷಾ ಕೃಷ್ಣನ್ ಅವರನ್ನು ಉದ್ದೇಶಿಸಿ ದ್ವಿಮುಖ ಹಾಗೂ ಅಶ್ಲೀಲ ಅರ್ಥದಲ್ಲಿ ಹೇಳಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>



<p class="wp-block-paragraph">ಈ ಸಂಬಂಧ ತಂಜಾವೂರು ಟಿವಿಕೆ ಕೇಂದ್ರ ಜಿಲ್ಲಾ ಮಹಿಳಾ ವಿಭಾಗದ ಸಂಘಟಕಿ ಎಸ್. ಬೈರವಿ ಅವರು ತಂಜಾವೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಐಟಿ ವಿಭಾಗದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅವಮಾನಿಸಿದ್ದು, ಈ ಮೂಲಕ ನಟಿ ಸೇರಿದಂತೆ ಮಹಿಳೆಯರಿಗೆ ಮಾನಸಿಕ ನೋವು ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಎರಡು ನಿಮಿಷಕ್ಕೂ ಅಧಿಕ ಅವಧಿಯ ವೀಡಿಯೊವನ್ನು ಡಿಎಂಕೆ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಉದ್ದೇಶಪೂರ್ವಕವಾಗಿ ಹಂಚಿಕೊಂಡಿದೆ ಎಂಬ ಆರೋಪವೂ ಕೇಳಿಬಂದಿದೆ.</p>



<p class="wp-block-paragraph">ವಿವಾದ ತೀವ್ರಗೊಂಡ ಹಿನ್ನೆಲೆಯಲ್ಲಿ ಟಿವಿಕೆ ಮುಖಂಡರಾದ ಆಧವ್ ಅರ್ಜುನ ಮತ್ತು ಎನ್. ಆನಂದ್ ಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ ರೀತಿಯ ವರ್ತನೆ ಸಂಪೂರ್ಣ ಅಸಹ್ಯಕರ ಹಾಗೂ ರಾಜಕೀಯ ಸಂಸ್ಕೃತಿಯ ಕುಸಿತವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.</p>



<p class="wp-block-paragraph">ಇದೇ ವೇಳೆ, ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಮುಖ್ಯ ವಕ್ತಾರ ನಾರಾಯಣನ್ ತಿರುಪತಿ ಕೂಡ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಅವರ ಹೇಳಿಕೆಯನ್ನು &#8220;ಅಶ್ಲೀಲ, ಅಸಭ್ಯ ಹಾಗೂ ನಾಚಿಕೆಗೇಡಿನ&#8221; ಎಂದು ಖಂಡಿಸಿದ್ದಾರೆ.</p>



<p class="wp-block-paragraph">ಟಿವಿಕೆ ಶಾಸಕ ರೇವಂತ್ ಚರಣ್ ಕೂಡ ಡಿಎಂಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷದ ರಾಜಕೀಯ ಸಂಸ್ಕೃತಿ ಮತ್ತಷ್ಟು ಅಧೋಗತಿಗೆ ಇಳಿದಿದೆ ಎಂದು ಆರೋಪಿಸಿದ್ದಾರೆ. ಸಾರ್ವಜನಿಕರನ್ನು ಸೆಳೆಯಲು ಅಗ್ಗದ ಪ್ರಚೋದನೆಯ ರಾಜಕಾರಣ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.</p>



<p class="wp-block-paragraph">ಈ ಘಟನೆ ತಮಿಳುನಾಡಿನ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಉದಯನಿಧಿ ಸ್ಟಾಲಿನ್ ವಿರುದ್ಧ ದಾಖಲಾಗಿರುವ ದೂರಿನ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.</p>
]]></content:encoded>
					
		
		
			</item>
		<item>
		<title>5.50 ಲಕ್ಷ ರೂ. ಲಂಚಕ್ಕೆ ಬೇಡಿಕೆ, ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ</title>
		<link>https://peepalmedia.com/hunsur-ac-kavyarani-caught-in-lokayukta-trap-after-demanding-5-50-lakh-bribe/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 03 Aug 2026 14:00:49 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯಾ]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82581</guid>

					<description><![CDATA[ಮೈಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ ಡಾ. ರೂಪಾ ಅವರಿಂದ 5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ನಂತರ ರೂಪಾ [&#8230;]]]></description>
										<content:encoded><![CDATA[
<p class="wp-block-paragraph"><strong>ಮೈಸೂರು :</strong> 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.</p>



<p class="wp-block-paragraph">ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ ಡಾ. ರೂಪಾ ಅವರಿಂದ 5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ನಂತರ ರೂಪಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಎರಡನೇ ಕಂತಿನಲ್ಲಿ 5.50 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.</p>



<p class="wp-block-paragraph"></p>
]]></content:encoded>
					
		
		
			</item>
		<item>
		<title>ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ತನ್ವೀರ್ ಸೇಠ್ ಬೆಂಬಲಿಗ ವಿಷ ಸೇವನೆ ಯತ್ನ, ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಸಲ್ಲಿಕೆ</title>
		<link>https://peepalmedia.com/dissatisfaction-within-congress-following-cabinet-expansion/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 03 Aug 2026 09:43:04 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<guid isPermaLink="false">https://peepalmedia.com/?p=82552</guid>

					<description><![CDATA[ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ತೀವ್ರಗೊಂಡಿದೆ. ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವ ಬೆನ್ನಲ್ಲೇ, ಸಚಿವ ಸ್ಥಾನದಿಂದ ವಂಚಿತರಾದ ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ. ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ತೀವ್ರಗೊಂಡಿದೆ. ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವ ಬೆನ್ನಲ್ಲೇ, ಸಚಿವ ಸ್ಥಾನದಿಂದ ವಂಚಿತರಾದ ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ.</p>



<p class="wp-block-paragraph">ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ತಕ್ಷಣವೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಕಾರ್ಯಕರ್ತರ ಅಸಮಾಧಾನದ ತೀವ್ರತೆಯನ್ನು ಬಿಂಬಿಸಿದೆ.</p>



<p class="wp-block-paragraph">ಇನ್ನೊಂದೆಡೆ, ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಹಿರಿಯ ನಾಯಕರಾಗಿದ್ದರೂ ಸಂಪುಟದಲ್ಲಿ ಅವಕಾಶ ನೀಡದಿರುವುದಕ್ಕೆ ಬೇಸರಗೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.</p>



<p class="wp-block-paragraph">ಹಾಗೆಯೇ ಸಾಗರ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಇತ್ತೀಚಿನ ದಿನಗಳಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದವರು. ಶಿವಮೊಗ್ಗ ಜಿಲ್ಲೆಯ ಮೂವರು ಪ್ರಮುಖ ಕಾಂಗ್ರೆಸ್ ನಾಯಕರುಗಳಲ್ಲಿ ಗೋಪಾಲಕೃಷ್ಣ ಹೆಚ್ಚು ಕ್ರಿಯಾಶೀಲ. ಅದೂ ಅಲ್ಲದೆ ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಮಧು ಬಂಗಾರಪ್ಪ ಅವರಿಗೆ ಒಲಿದ ಸಚಿವ ಸ್ಥಾನ, ಡಿಕೆ ಸಂಪುಟದಲ್ಲಿ ತಮಗೆ ಸಿಗಬಹುದು ಎಂಬ ಆಕಾಂಕ್ಷೆ ಇತ್ತು. ಆದರೆ ಕಡೆಯ ಕ್ಷಣದಲ್ಲಿ ಕೈ ತಪ್ಪಿದ ಸಚಿವ ಸ್ಥಾನ ಈಗ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.</p>



<p class="wp-block-paragraph">ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಉಂಟಾಗಿರುವ ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಹೊಸ ತಲೆನೋವಾಗಿ ಪರಿಣಮಿಸಿದ್ದು, ಅಸಮಾಧಾನಗೊಂಡ ನಾಯಕರನ್ನು ಸಮಾಧಾನಪಡಿಸುವುದು ನಾಯಕತ್ವಕ್ಕೆ ದೊಡ್ಡ ಸವಾಲಾಗಿದೆ. ರಾಜಕೀಯ ವಲಯದಲ್ಲಿ ಈ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.</p>
]]></content:encoded>
					
		
		
			</item>
		<item>
		<title>ಸಕಲೇಶಪುರ ಅರಣ್ಯದಲ್ಲಿ ಆಫ್ ರೇಡಿಂಗ್, ಬೆಂಗಳೂರು ಮೂಲದ 7 ಮಹೀಂದ್ರ ಥಾರ್‌ ಜೀಪ್‌ಗಳು ಜಪ್ತಿ</title>
		<link>https://peepalmedia.com/off-roading-in-sakaleshpur-forest-7-bengaluru-based-mahindra-thar-jeeps-seized/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 03 Aug 2026 07:57:37 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=82543</guid>

					<description><![CDATA[ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಸೌಂದರ್ಯಕ್ಕೆ ಮನಸೋತು ಬರುವ ಪ್ರವಾಸಿಗರಲ್ಲಿ (Tourists ) ಕೆಲವರು ನಿಯಮ ಮೀರಿ ವರ್ತಿಸುತ್ತಿದ್ದಾರೆ. ತಾಲೂಕಿನ ಹೊಡಚಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್) ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ‘ಆಫ್ ರೇಡಿಂಗ್’ ಸಾಹಸ ಪ್ರದರ್ಶಿಸುತ್ತಿದ್ದ ಪ್ರವಾಸಿಗರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಜರುಗಿಸಿದೆ. ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ತಂಡವೊಂದು ಅತ್ಯಂತ ಸೂಕ್ಷ್ಮ ಪರಿಸರ ವಲಯದಲ್ಲಿ ವಾಹನಗಳನ್ನು ಚಲಾಯಿಸುತ್ತಾ ಪುಂಡಾಟ ನಡೆಸುತ್ತಿತ್ತು. ಸ್ಥಳೀಯ ಸಸ್ಯರಾಶಿ ಹಾಗೂ ವನ್ಯಜೀವಿಗಳ ಆವಾಸಸ್ಥಾನಕ್ಕೆ [&#8230;]]]></description>
										<content:encoded><![CDATA[
<p class="wp-block-paragraph"><strong>ಸಕಲೇಶಪುರ: </strong>ಹಾಸನ ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಸೌಂದರ್ಯಕ್ಕೆ ಮನಸೋತು ಬರುವ ಪ್ರವಾಸಿಗರಲ್ಲಿ (Tourists ) ಕೆಲವರು ನಿಯಮ ಮೀರಿ ವರ್ತಿಸುತ್ತಿದ್ದಾರೆ.</p>



<p class="wp-block-paragraph">ತಾಲೂಕಿನ ಹೊಡಚಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್) ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ‘ಆಫ್ ರೇಡಿಂಗ್’ ಸಾಹಸ ಪ್ರದರ್ಶಿಸುತ್ತಿದ್ದ ಪ್ರವಾಸಿಗರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಜರುಗಿಸಿದೆ.</p>



<p class="wp-block-paragraph">ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ತಂಡವೊಂದು ಅತ್ಯಂತ ಸೂಕ್ಷ್ಮ ಪರಿಸರ ವಲಯದಲ್ಲಿ ವಾಹನಗಳನ್ನು ಚಲಾಯಿಸುತ್ತಾ ಪುಂಡಾಟ ನಡೆಸುತ್ತಿತ್ತು. ಸ್ಥಳೀಯ ಸಸ್ಯರಾಶಿ ಹಾಗೂ ವನ್ಯಜೀವಿಗಳ ಆವಾಸಸ್ಥಾನಕ್ಕೆ ಹಾನಿ ಉಂಟಾಗುತ್ತಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ಸಕಲೇಶಪುರ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>



<p class="wp-block-paragraph">ಈ ದಿಢೀರ್ ದಾಳಿಯ ವೇಳೆ ನಿಯಮ ಉಲ್ಲಂಘಿಸಿ ಆಫ್ ರೋಡ್ ಚಾಲನೆ ಮಾಡುತ್ತಿದ್ದ 7 ಮಹೀಂದ್ರ ಥಾರ್ ಜೀಪ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕೃತಿ ಸೌಂದರ್ಯವನ್ನು ಆನಂದಿಸುವುದನ್ನು ಬಿಟ್ಟು ಪರಿಸರ ನಾಶಕ್ಕೆ ಕಾರಣರಾದ ಪ್ರವಾಸಿಗರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>



<p class="wp-block-paragraph">ಸೂಕ್ಷ್ಮ ಅರಣ್ಯ ಪ್ರದೇಶಗಳಿಗೆ ಅಕ್ರಮವಾಗಿ ಮಾರ್ಗದರ್ಶನ ನೀಡಿ, ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದ ಸ್ಥಳೀಯ ಹೋಮ್‌ಸ್ಟೇ ಹಾಗೂ ರೆಸಾರ್ಟ್‌ಗಳ ಮಾಲೀಕರಿಗೂ ನೋಟಿಸ್ ನೀಡಲು ಇಲಾಖೆ ತೀರ್ಮಾನಿಸಿದೆ. ಇಂತಹ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
