<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಬ್ರೇಕಿಂಗ್ ಸುದ್ದಿ &#8211; Peepal Media</title>
	<atom:link href="https://peepalmedia.com/category/breaking-news/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 11 Apr 2026 01:59:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.4</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಬ್ರೇಕಿಂಗ್ ಸುದ್ದಿ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8220;ಪಶ್ಚಿಮ ಬಂಗಾಳ ಮಹಿಳೆಯರಿಗೆ ಮಾಸಿಕ ₹3,000 ಭತ್ಯೆ&#8221; : ಚುನಾವಣಾ &#8220;ಸಂಕಲ್ಪ ಪತ್ರ&#8221; ಬಿಡುಗಡೆ ಮಾಡಿದ ಬಿಜೆಪಿ</title>
		<link>https://peepalmedia.com/bjp-releases-election-resolution/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 11 Apr 2026 01:59:49 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<guid isPermaLink="false">https://peepalmedia.com/?p=76953</guid>

					<description><![CDATA[ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದ್ದು, ಮಹಿಳೆಯರ ಸಬಲೀಕರಣ, ಸುರಕ್ಷತೆ ಮತ್ತು ಆರ್ಥಿಕ ನೆರವಿಗೆ ವಿಶೇಷ ಆದ್ಯತೆ ನೀಡಿದೆ. ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮಾಸಿಕ ₹3,000 ಭತ್ಯೆ ನೀಡುವ ಭರವಸೆ ನೀಡಲಾಗಿದೆ. ಜೊತೆಗೆ, ರಾಜ್ಯದ 75 ಲಕ್ಷ ಮಹಿಳೆಯರನ್ನು ‘ಲಖ್ಪತಿ ದೀದಿ’ಗಳನ್ನಾಗಿ ರೂಪಿಸುವ ಉದ್ದೇಶವನ್ನು ಪಕ್ಷ ವ್ಯಕ್ತಪಡಿಸಿದೆ. ಮಹಿಳಾ ಸುರಕ್ಷತೆಯನ್ನು ಬಲಪಡಿಸಲು ಪ್ರತಿಯೊಂದು ಉಪವಿಭಾಗದಲ್ಲಿ ಕನಿಷ್ಠ ಒಂದು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸುವುದಾಗಿ ಹಾಗೂ ಎಲ್ಲಾ [&#8230;]]]></description>
										<content:encoded><![CDATA[
<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದ್ದು, ಮಹಿಳೆಯರ ಸಬಲೀಕರಣ, ಸುರಕ್ಷತೆ ಮತ್ತು ಆರ್ಥಿಕ ನೆರವಿಗೆ ವಿಶೇಷ ಆದ್ಯತೆ ನೀಡಿದೆ.</p>



<p>ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮಾಸಿಕ ₹3,000 ಭತ್ಯೆ ನೀಡುವ ಭರವಸೆ ನೀಡಲಾಗಿದೆ. ಜೊತೆಗೆ, ರಾಜ್ಯದ 75 ಲಕ್ಷ ಮಹಿಳೆಯರನ್ನು ‘ಲಖ್ಪತಿ ದೀದಿ’ಗಳನ್ನಾಗಿ ರೂಪಿಸುವ ಉದ್ದೇಶವನ್ನು ಪಕ್ಷ ವ್ಯಕ್ತಪಡಿಸಿದೆ.</p>



<p>ಮಹಿಳಾ ಸುರಕ್ಷತೆಯನ್ನು ಬಲಪಡಿಸಲು ಪ್ರತಿಯೊಂದು ಉಪವಿಭಾಗದಲ್ಲಿ ಕನಿಷ್ಠ ಒಂದು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸುವುದಾಗಿ ಹಾಗೂ ಎಲ್ಲಾ ಠಾಣೆಗಳಲ್ಲಿ ‘ನಾರಿ ಸಹಾಯತಾ ಡೆಸ್ಕ್’ ಆರಂಭಿಸುವುದಾಗಿ ಘೋಷಿಸಲಾಗಿದೆ. ಜನನಿಬಿಡ ಪ್ರದೇಶಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಠಿಣ ಕಾನೂನು ಜಾರಿಗೆ ಒತ್ತು ನೀಡುವುದರೊಂದಿಗೆ ಮಹಿಳೆಯರ ಮೇಲಿನ ಅಪರಾಧಗಳಿಗೆ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುವುದಾಗಿ ಹೇಳಿದೆ.</p>



<p><strong>ಪ್ರಮುಖ ಭರವಸೆಗಳು:</strong><br>* ಆರ್ಥಿಕವಾಗಿ ಹಿಂದುಳಿದ ಗರ್ಭಿಣಿಯರಿಗೆ ₹21,000 ನೆರವು ಹಾಗೂ 6 ಪೌಷ್ಠಿಕಾಂಶ ಕಿಟ್‌ಗಳು<br>* ‘ದುರ್ಗಾ ಸುರಕ್ಷಾ ಸ್ಕ್ವಾಡ್’ ಎಂಬ ಮಹಿಳಾ ಗಸ್ತು ತಂಡಗಳ ಸ್ಥಾಪನೆ<br>* ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಮಹಿಳೆಯರಿಗಾಗಿ ಎರಡು ವಿಶೇಷ ಬೆಟಾಲಿಯನ್‌ಗಳು<br>* ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ<br>* ಖಾಸಗಿ ಕ್ಷೇತ್ರದಲ್ಲಿ ಮಹಿಳಾ ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡುವ ಕೈಗಾರಿಕಾ ನೀತಿ<br>* ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ<br>* ಪ್ರತಿ ಜಿಲ್ಲೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ವಸತಿ ನಿಲಯಗಳು<br>* ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಪರಿಷ್ಕರಣೆ</p>



<p><strong>ಆರೋಗ್ಯ ಮತ್ತು ಶಿಕ್ಷಣದ ಮೇಲೆ ಒತ್ತು:</strong><br>* ಹುಡುಗಿಯರಿಗೆ ಪದವಿ ಪ್ರವೇಶದ ವೇಳೆ ₹50,000 ನೆರವು<br>* 40 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಉಚಿತ HPV ಲಸಿಕೆ<br>* 40 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಸ್ತನ ಕ್ಯಾನ್ಸರ್ ತಪಾಸಣೆ</p>



<p>ಇದೇ ವೇಳೆ, ಬಾಲ್ಯ ವಿವಾಹ ತಡೆಗೆ ಕ್ರಮಗಳನ್ನು ಕೈಗೊಳ್ಳುವುದಾಗಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಮರು ಪರಿಶೀಲಿಸಿ ನ್ಯಾಯ ಒದಗಿಸುವುದಾಗಿ ಬಿಜೆಪಿ ಭರವಸೆ ನೀಡಿದೆ.</p>
]]></content:encoded>
					
		
		
			</item>
		<item>
		<title>ಹಿಂದಿ ವಿಚಾರದಲ್ಲಿ ಗೊಂದಲ: ಪಿಐಎಲ್ ವಜಾ ಮಾಡಿದ ಹೈಕೋರ್ಟ್, ಸಚಿವರ ಹೇಳಿಕೆ ತಿರುಚಲು ಯತ್ನಿಸಿದ ಅರ್ಜಿದಾರರಿಗೆ ₹1 ಲಕ್ಷ ದಂಡ</title>
		<link>https://peepalmedia.com/confusion-over-hindi-issue-high-court-dismisses-pil/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 10 Apr 2026 12:27:59 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<guid isPermaLink="false">https://peepalmedia.com/?p=76948</guid>

					<description><![CDATA[ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಮೌಲ್ಯಮಾಪನ ಕುರಿತು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದ ಹೇಳಿಕೆಗೆ ವಿರೋಧವಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ, ಅರ್ಜಿಯನ್ನು ಆಧಾರರಹಿತವೆಂದು ತಳ್ಳಿ ಹಾಕಿ ಅರ್ಜಿದಾರರಿಗೆ ₹1 ಲಕ್ಷ ದಂಡ ವೆಚ್ಚ ವಿಧಿಸಿದೆ. ಸಚಿವರು ಇತ್ತೀಚೆಗೆ ತೃತೀಯ ಭಾಷೆಗಳ ಅಂಕಗಳನ್ನು ಅಂತಿಮ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸೇರಿಸಲಾಗುವುದಿಲ್ಲ, [&#8230;]]]></description>
										<content:encoded><![CDATA[
<p>ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಮೌಲ್ಯಮಾಪನ ಕುರಿತು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದ ಹೇಳಿಕೆಗೆ ವಿರೋಧವಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p>



<p>ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ, ಅರ್ಜಿಯನ್ನು ಆಧಾರರಹಿತವೆಂದು ತಳ್ಳಿ ಹಾಕಿ ಅರ್ಜಿದಾರರಿಗೆ ₹1 ಲಕ್ಷ ದಂಡ ವೆಚ್ಚ ವಿಧಿಸಿದೆ.</p>



<p>ಸಚಿವರು ಇತ್ತೀಚೆಗೆ ತೃತೀಯ ಭಾಷೆಗಳ ಅಂಕಗಳನ್ನು ಅಂತಿಮ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸೇರಿಸಲಾಗುವುದಿಲ್ಲ, ಅವುಗಳನ್ನು ಪ್ರತ್ಯೇಕವಾಗಿ ಶ್ರೇಣೀಕರಿಸಲಾಗುತ್ತದೆ ಎಂದು ಹೇಳಿದ್ದರು. ಅಂದರೆ, ಈ ವಿಷಯಗಳ ಅಂಕಗಳು ವಿದ್ಯಾರ್ಥಿಗಳ ಉತ್ತೀರ್ಣತೆ ಮೇಲೆ ಪರಿಣಾಮ ಬೀರುವುದಿಲ್ಲ.</p>



<p>ಈ ಹೇಳಿಕೆ ಹಿಂದಿ ಭಾಷೆಯನ್ನು ಕಡೆಗಣಿಸುವಂತಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಚಂದನ ಎಂಬವರು ಪಿಐಎಲ್ ಸಲ್ಲಿಸಿದ್ದರು. ಆದರೆ, ಅರ್ಜಿದಾರರು ಉಲ್ಲೇಖಿಸಿದ ಪತ್ರಿಕಾ ವರದಿಗಳಲ್ಲಿ ಹಿಂದಿಯನ್ನು ತೆಗೆದುಹಾಕುವ ಬಗ್ಗೆ ಯಾವುದೇ ಸ್ಪಷ್ಟ ಹೇಳಿಕೆ ಇಲ್ಲ ಎಂದು ನ್ಯಾಯಾಲಯ ಗಮನಿಸಿದೆ.</p>



<p>&#8220;ಇದು ಕೇವಲ ಪತ್ರಿಕೆಯಲ್ಲಿನ ಕೆಲವು ಪದಗಳ ಆಧಾರದಲ್ಲಿ ಸಲ್ಲಿಸಿದ ಪ್ರಚಾರ ಹಿತಾಸಕ್ತಿ ಅರ್ಜಿ,&#8221; ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.</p>



<p>ಮೊದಲಿಗೆ ₹50,000 ವೆಚ್ಚ ವಿಧಿಸಿದ್ದ ನ್ಯಾಯಾಲಯ, ನಂತರ ಅರ್ಜಿದಾರರು ಹೆಚ್ಚುವರಿ ವಾದ ಮಂಡಿಸಿದ ಹಿನ್ನೆಲೆಯಲ್ಲಿ ಅದನ್ನು ₹1 ಲಕ್ಷಕ್ಕೆ ಹೆಚ್ಚಿಸಿತು.</p>



<p>ಈ ವೆಚ್ಚವನ್ನು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಪಾವತಿಸದಿದ್ದರೆ ಭೂಕಂದಾಯ ಬಾಕಿಯಾಗಿ ವಸೂಲಿ ಮಾಡುವುದಾಗಿ ಎಚ್ಚರಿಸಿದೆ.</p>
]]></content:encoded>
					
		
		
			</item>
		<item>
		<title>ನಗದು ಹಗರಣ ವಿವಾದ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ದಿಢೀರ್ ರಾಜೀನಾಮೆ</title>
		<link>https://peepalmedia.com/yashwant-verma-resigns-suddenly/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 10 Apr 2026 10:18:41 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<guid isPermaLink="false">https://peepalmedia.com/?p=76944</guid>

					<description><![CDATA[ನಗದು ಹಣದ ಹಗರಣ ಆರೋಪದ ಹಿನ್ನೆಲೆಯಲ್ಲಿ ವಿವಾದಕ್ಕೊಳಗಾಗಿದ್ದ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿರುವುದಾಗಿ ಮೂಲಗಳು ತಿಳಿಸಿವೆ. ದೆಹಲಿಯಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಸುಟ್ಟ ನೋಟುಗಳು ಪತ್ತೆಯಾದ ಪ್ರಕರಣವು ದೇಶದ ನ್ಯಾಯಾಂಗ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯ ನಂತರ ನ್ಯಾಯಮೂರ್ತಿ ವರ್ಮಾ ವಿರುದ್ಧ ಆಂತರಿಕ ತನಿಖೆ ಆರಂಭಗೊಂಡಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಹಿಂದೆ [&#8230;]]]></description>
										<content:encoded><![CDATA[
<p>ನಗದು ಹಣದ ಹಗರಣ ಆರೋಪದ ಹಿನ್ನೆಲೆಯಲ್ಲಿ ವಿವಾದಕ್ಕೊಳಗಾಗಿದ್ದ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿರುವುದಾಗಿ ಮೂಲಗಳು ತಿಳಿಸಿವೆ.</p>



<p>ದೆಹಲಿಯಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಸುಟ್ಟ ನೋಟುಗಳು ಪತ್ತೆಯಾದ ಪ್ರಕರಣವು ದೇಶದ ನ್ಯಾಯಾಂಗ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯ ನಂತರ ನ್ಯಾಯಮೂರ್ತಿ ವರ್ಮಾ ವಿರುದ್ಧ ಆಂತರಿಕ ತನಿಖೆ ಆರಂಭಗೊಂಡಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದಿದೆ.</p>



<p>ಹಿಂದೆ ದೆಹಲಿ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ವರ್ಮಾ ಅವರನ್ನು ವಿವಾದದ ನಡುವೆಯೇ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು. 2025ರ ಏಪ್ರಿಲ್ 5ರಂದು ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದರು.</p>



<p>ಇದರ ನಡುವೆಯೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಮುಂದಿನ ಅಧಿವೇಶನದಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ವ್ಯಕ್ತವಾಗಿದೆ. ನ್ಯಾಯಮೂರ್ತಿ ವರ್ಮಾ ವಿರುದ್ಧ ದೋಷಾರೋಪಣೆ ಪ್ರಕ್ರಿಯೆ ಆರಂಭಿಸಲು ಎಲ್ಲಾ ಪಕ್ಷಗಳ ಸಂಸದರು ನೋಟಿಸ್ ನೀಡಿದ್ದರು.</p>



<p>ಆದರೆ, ದೋಷಾರೋಪಣೆ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ರಾಜೀನಾಮೆ ಸಲ್ಲಿಸಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳ ಮೇಲೆ ಗಮನ ಕೇಂದ್ರೀಕೃತವಾಗಿದೆ.</p>
]]></content:encoded>
					
		
		
			</item>
		<item>
		<title>ಹುಲಿಕಲ್ ಘಾಟ್ ದುರಂತ: ರಸ್ತೆ ಕಾಮಗಾರಿಯಲ್ಲಿ ಗುಡ್ಡ ಕುಸಿದು ಮೂವರು ಸಾವು, ನಾಲ್ವರಿಗೆ ಗಂಭೀರ ಗಾಯ</title>
		<link>https://peepalmedia.com/three-killed-in-hill-collapse-during-road-construction/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 10 Apr 2026 01:42:03 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=76917</guid>

					<description><![CDATA[ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಗುಡ್ಡ ಕುಸಿದು ಭೀಕರ ದುರಂತ ಸಂಭವಿಸಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದೆ. ಕಾಮಗಾರಿ ನಡೆಯುತ್ತಿದ್ದ ವೇಳೆ ಅಚಾನಕ್‌ ಗುಡ್ಡ ಕುಸಿದ ಪರಿಣಾಮ, ಸ್ಥಳದಲ್ಲೇ ಮೂವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿದರು. ಘಟನೆಯಲ್ಲಿ ಸುಮಂತ ಮತ್ತು ಪರಮೇಶ್ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ [&#8230;]]]></description>
										<content:encoded><![CDATA[
<p>ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಗುಡ್ಡ ಕುಸಿದು ಭೀಕರ ದುರಂತ ಸಂಭವಿಸಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದೆ.</p>



<p>ಕಾಮಗಾರಿ ನಡೆಯುತ್ತಿದ್ದ ವೇಳೆ ಅಚಾನಕ್‌ ಗುಡ್ಡ ಕುಸಿದ ಪರಿಣಾಮ, ಸ್ಥಳದಲ್ಲೇ ಮೂವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿದರು. ಘಟನೆಯಲ್ಲಿ ಸುಮಂತ ಮತ್ತು ಪರಮೇಶ್ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>



<p>ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ರಾತ್ರಿ ಸಮಯವಾಗಿರುವುದರಿಂದ ಕಾರ್ಯಾಚರಣೆಗೆ ಕೆಲ ಅಡ್ಡಿಗಳು ಎದುರಾದರೂ ಶೋಧ ಕಾರ್ಯ ಮುಂದುವರಿದಿದೆ. ಹೊಸನಗರ ತಹಶೀಲ್ದಾರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>



<p>ಈ ದುರ್ಘಟನೆಯ ಪರಿಣಾಮವಾಗಿ ಕುಂದಾಪುರ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸಂಚಾರಕ್ಕೆ ತಾತ್ಕಾಲಿಕ ವ್ಯತ್ಯಯ ಉಂಟಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
]]></content:encoded>
					
		
		
			</item>
		<item>
		<title>ದ್ವಿತೀಯ ಪಿಯು ಫಲಿತಾಂಶ ಅರ್ಪಿತಾ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ</title>
		<link>https://peepalmedia.com/second-pu-result-arpita-hassan-district-ranks-first/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 09 Apr 2026 13:38:07 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76901</guid>

					<description><![CDATA[ಹಾಸನ :&#160;ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿ ಶೇ.99.5 ಫಲಿತಾಂಶ ಸಾಧಿಸಿದ್ದಾರೆ. ಸಂಸ್ಕೃತ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ನಾಲ್ಕು ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಗಳಿಸಿರುವ ಅರ್ಪಿತಾ ಸಾಧನೆಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.]]></description>
										<content:encoded><![CDATA[
<p><strong>ಹಾಸನ :</strong>&nbsp;ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.</p>



<p>ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿ ಶೇ.99.5 ಫಲಿತಾಂಶ ಸಾಧಿಸಿದ್ದಾರೆ. ಸಂಸ್ಕೃತ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.</p>



<p>ನಾಲ್ಕು ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಗಳಿಸಿರುವ ಅರ್ಪಿತಾ ಸಾಧನೆಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ. </p>
]]></content:encoded>
					
		
		
			</item>
		<item>
		<title>‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ</title>
		<link>https://peepalmedia.com/new-digital-system-implemented-for-state-government-employees/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 09 Apr 2026 02:22:06 +0000</pubDate>
				<category><![CDATA[ಜನ-ಗಣ-ಮನ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=76870</guid>

					<description><![CDATA[ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ಸರ್ಕಾರ, ಇನ್ನು ಮುಂದೆ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳಿಗೆ ತೆರೆ ಎಳೆದಿದೆ. ಅದರ ಬದಲಿಗೆ ‘ಕರ್ತವ್ಯ’ (Kartavya) ಎಂಬ ನೂತನ ಮೊಬೈಲ್ ಆಧಾರಿತ ಆಪ್ ಮೂಲಕ ಹಾಜರಾತಿ ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಸರ್ಕಾರವು ಏಪ್ರಿಲ್ 7, 2026ರಂದು ಹೊರಡಿಸಿದ ಆದೇಶದ ಪ್ರಕಾರ, ಈ ಹೊಸ ವ್ಯವಸ್ಥೆ ಮೇ 1, 2026ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಗೆ ಬರಲಿದೆ. ಏನಿದು ‘ಕರ್ತವ್ಯ’ ಆಪ್?‘ಕರ್ತವ್ಯ’ ಆಪ್ ಕರ್ನಾಟಕ [&#8230;]]]></description>
										<content:encoded><![CDATA[
<p>ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ಸರ್ಕಾರ, ಇನ್ನು ಮುಂದೆ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳಿಗೆ ತೆರೆ ಎಳೆದಿದೆ. ಅದರ ಬದಲಿಗೆ ‘ಕರ್ತವ್ಯ’ (Kartavya) ಎಂಬ ನೂತನ ಮೊಬೈಲ್ ಆಧಾರಿತ ಆಪ್ ಮೂಲಕ ಹಾಜರಾತಿ ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.</p>



<p>ಸರ್ಕಾರವು ಏಪ್ರಿಲ್ 7, 2026ರಂದು ಹೊರಡಿಸಿದ ಆದೇಶದ ಪ್ರಕಾರ, ಈ ಹೊಸ ವ್ಯವಸ್ಥೆ ಮೇ 1, 2026ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಗೆ ಬರಲಿದೆ.</p>



<p><strong>ಏನಿದು ‘ಕರ್ತವ್ಯ’ ಆಪ್?</strong><br>‘ಕರ್ತವ್ಯ’ ಆಪ್ ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS)ಯ ಭಾಗವಾಗಿದ್ದು, ಕೃತಕ ಬುದ್ಧಿಮತ್ತೆ (AI) ಮತ್ತು ಜಿಯೋ-ಫೆನ್ಸಿಂಗ್ (Geofencing) ತಂತ್ರಜ್ಞಾನಗಳನ್ನು ಬಳಸಿ ಅಭಿವೃದ್ಧಿಪಡಿಸಲಾಗಿದೆ. ಇದರ ಮೂಲಕ ನೌಕರರು ತಮ್ಮ ಕಚೇರಿ ವ್ಯಾಪ್ತಿಯೊಳಗಿದ್ದಾಗ ಮಾತ್ರ ಮೊಬೈಲ್ ಮೂಲಕ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ.</p>



<p><strong>ಸರ್ಕಾರದ ಆದೇಶದ ಮುಖ್ಯಾಂಶಗಳು:</strong><br>* ಕಡ್ಡಾಯ ಜಾರಿ: ಎಲ್ಲಾ ಇಲಾಖೆಗಳು, ನಿಗಮಗಳು, ಮಂಡಳಿಗಳು ಮತ್ತು ಸಂಸ್ಥೆಗಳ ನೌಕರರಿಗೆ ಮೇ 1ರಿಂದ ‘ಕರ್ತವ್ಯ’ ಆಪ್ ಮೂಲಕ ಹಾಜರಾತಿ ಕಡ್ಡಾಯ.<br>* ಮೊಬೈಲ್ ಪ್ಲಾಟ್‌ಫಾರ್ಮ್: ಆಪ್ ಆಂಡ್ರಾಯ್ಡ್ ಹಾಗೂ ಐಓಎಸ್ ಎರಡೂ ಸಾಧನಗಳಲ್ಲಿ ಲಭ್ಯ.<br>* ಜಿಯೋ-ಟ್ಯಾಗಿಂಗ್: ಎಲ್ಲಾ ಸರ್ಕಾರಿ ಕಚೇರಿಗಳ ಸ್ಥಳ ಗುರುತಿಸುವ (Geo-tag) ಕಾರ್ಯವನ್ನು ಮೇ 1ರೊಳಗೆ ಪೂರ್ಣಗೊಳಿಸಲು ಸೂಚನೆ.<br>* ಪರ್ಯಾಯ ವ್ಯವಸ್ಥೆ: ಸ್ಮಾರ್ಟ್‌ಫೋನ್ ಇಲ್ಲದ ನೌಕರರಿಗಾಗಿ ವಿಧಾನಸೌಧ, ವಿಕಾಸಸೌಧ ಸೇರಿದಂತೆ ಪ್ರಮುಖ ಕಚೇರಿಗಳಲ್ಲಿ ‘ಕರ್ತವ್ಯ ಡಿವೈಸ್’ ಅಳವಡಿಕೆ.<br>* ನೋಡಲ್ ಅಧಿಕಾರಿಗಳು: ಪ್ರತಿ ಇಲಾಖೆಯಲ್ಲಿ ವ್ಯವಸ್ಥೆ ಜಾರಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಸೂಚನೆ.</p>



<p><strong>ಹಳೆಯ ವ್ಯವಸ್ಥೆಗೆ ತೆರೆ</strong><br>ಹೊಸ ತಂತ್ರಜ್ಞಾನ ಜಾರಿಯ ಹಿನ್ನೆಲೆ, ಇದುವರೆಗೆ ಬಳಸಲಾಗುತ್ತಿದ್ದ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳನ್ನು ಹಿಂಪಡೆಯಲಾಗಿದೆ. ನೌಕರರ HRMS/KGID ದತ್ತಾಂಶವನ್ನು ಹೊಸ ವ್ಯವಸ್ಥೆಯೊಂದಿಗೆ ಜೋಡಿಸುವ ಪ್ರಕ್ರಿಯೆ ನಡೆಯುತ್ತಿದೆ.</p>



<p><strong>ಯಶಸ್ವಿ ಪ್ರಯೋಗದ ಬಳಿಕ ರಾಜ್ಯವ್ಯಾಪಿ ವಿಸ್ತರಣೆ</strong><br>ಈ ವ್ಯವಸ್ಥೆಯನ್ನು ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ ಯಶಸ್ವಿಯಾಗಿದೆ. ಇದೇ ಅನುಭವದ ಆಧಾರದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳಿಗೂ ವಿಸ್ತರಿಸಲಾಗಿದೆ.</p>



<p><strong>ಉದ್ದೇಶ ಏನು?</strong><br>ಈ ಹೊಸ ಕ್ರಮದಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚುವ ಜೊತೆಗೆ, ನೌಕರರು ಬಯೋಮೆಟ್ರಿಕ್ ಯಂತ್ರಗಳ ಮುಂದೆ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ತಪ್ಪಿ ಸಮಯ ಉಳಿತಾಯವಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.</p>
]]></content:encoded>
					
		
		
			</item>
		<item>
		<title>ಬೈಕ್ ನಲ್ಲಿ ಲಿಪ್ಟ್ ಕೊಡುವ ನೆಪ ಶಿಕ್ಷಕಿ ಮೇಲೆ ಅ*ತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲು</title>
		<link>https://peepalmedia.com/registered-against-a-teacher-on-the-pretext-of-offering-a-lift-on-a-bike/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 08 Apr 2026 15:56:17 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76867</guid>

					<description><![CDATA[ಹಾಸನ:&#160;ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳಾ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಹಾಸನ ಜಿಲ್ಲೆಯ ದುದ್ದ ಹೋಬಳಿ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸಿದ್ದಾಪುರ ಗ್ರಾಮದ ನಿವಾಸಿ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆ (ಹೆಸರು ಗೌಪ್ಯತೆಗಾಗಿ ಬಹಿರಂಗಪಡಿಸಲಾಗಿಲ್ಲ) ನೀಡಿದ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಸಂಜೆ ಸುಮಾರು 4.45ರ ವೇಳೆಗೆ ಸಿದ್ದಾಪುರ ಗೇಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ಶಿಕ್ಷಕಿಗೆ ಆರೋಪಿ ಲಿಫ್ಟ್ ನೀಡುವ ನೆಪದಲ್ಲಿ ಬೈಕ್‌ನಲ್ಲಿ [&#8230;]]]></description>
										<content:encoded><![CDATA[
<p><strong>ಹಾಸನ:</strong>&nbsp;ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳಾ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಹಾಸನ ಜಿಲ್ಲೆಯ ದುದ್ದ ಹೋಬಳಿ ವ್ಯಾಪ್ತಿಯಲ್ಲಿ ವರದಿಯಾಗಿದೆ.</p>



<p>ಸಿದ್ದಾಪುರ ಗ್ರಾಮದ ನಿವಾಸಿ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆ (ಹೆಸರು ಗೌಪ್ಯತೆಗಾಗಿ ಬಹಿರಂಗಪಡಿಸಲಾಗಿಲ್ಲ) ನೀಡಿದ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಸಂಜೆ ಸುಮಾರು 4.45ರ ವೇಳೆಗೆ ಸಿದ್ದಾಪುರ ಗೇಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ಶಿಕ್ಷಕಿಗೆ ಆರೋಪಿ ಲಿಫ್ಟ್ ನೀಡುವ ನೆಪದಲ್ಲಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಶಿಕ್ಷಕಿ ನಿರಾಕರಿಸಿದರೂ ಬಲವಂತವಾಗಿ ಬೈಕ್ ಮೇಲೆ ಹತ್ತಿಸಿಕೊಂಡು ದುಡ್ಡದತ್ತ ಕರೆದೊಯ್ದಿದ್ದಾನೆ ಎನ್ನಲಾಗಿದೆ.</p>



<p>ಮುಂದೆ, ದುಡ್ಡ ತಲುಪಿದ ಬಳಿಕವೂ ಬೈಕ್ ನಿಲ್ಲಿಸದೆ ಮಾಯಸಮುದ್ರ–ಗೋಪನಹಳ್ಳಿ ಮಾರ್ಗವಾಗಿ ನಿರ್ಜನ ಪ್ರದೇಶದತ್ತ ಕರೆದೊಯ್ದು, ದೊಡ್ಡಪುರ ರೈಲ್ವೆ ಹಳಿಯ ಸಮೀಪ ಅತ್ಯಾಚಾರಕ್ಕೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯ ನಂತರ ಸಂತ್ರಸ್ತೆ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಪಹರಣ, ಜೀವ ಬೆದರಿಕೆ ಹಾಗೂ ಅತ್ಯಾಚಾರ ಯತ್ನದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ &#8211; ಮೇಟಿಕೇರಿ ಹಿರಿಯಣ್ಣ</title>
		<link>https://peepalmedia.com/ksp-election-today-is-all-about-money-metikeri-hiriyanna/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 08 Apr 2026 15:49:22 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76864</guid>

					<description><![CDATA[ಚನ್ನರಾಯಪಟ್ಟಣ:&#160;ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ ಮನಸುಗಳನ್ನು ಸೆಳೆಯುವ ಸಂಘಟನಾ ಚಾತುರ್ಯ ಇರುವ ಹೋರಾಟದ ಹಿನ್ನೆಲೆ ಇಂದ ಬಂದಂತವರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಪರಿಷತ್ ನಿಂತ ನೀರಾಗದೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಮೇಟಿಕೇರಿ ಹಿರಿಯಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿರುವ ಸಾಮಾಜಿಕ ಹೋರಾಟಗಾರ ಕಾಳೇನಹಳ್ಳಿ ಆನಂದ್ ಅವರ ಹಿತೈಷಿಗಳ ಚಿಂತನಾಸಭೆ ಕಾರ್ಯಕ್ರಮದಲ್ಲಿ [&#8230;]]]></description>
										<content:encoded><![CDATA[
<p><strong>ಚನ್ನರಾಯಪಟ್ಟಣ:</strong>&nbsp;ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ ಮನಸುಗಳನ್ನು ಸೆಳೆಯುವ ಸಂಘಟನಾ ಚಾತುರ್ಯ ಇರುವ ಹೋರಾಟದ ಹಿನ್ನೆಲೆ ಇಂದ ಬಂದಂತವರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಪರಿಷತ್ ನಿಂತ ನೀರಾಗದೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಮೇಟಿಕೇರಿ ಹಿರಿಯಣ್ಣ ಅಭಿಪ್ರಾಯಪಟ್ಟರು.</p>



<p>ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿರುವ ಸಾಮಾಜಿಕ ಹೋರಾಟಗಾರ ಕಾಳೇನಹಳ್ಳಿ ಆನಂದ್ ಅವರ ಹಿತೈಷಿಗಳ ಚಿಂತನಾಸಭೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಷತ್ ಚುನಾವಣೆಗಳು ರಾಜಕೀಯ ಚುನಾವಣೆಗಳ ರೀತಿ ಹಣದ ಹೊಳೆಯನ್ನು ಹರಿಸುವ ಮಟ್ಟಕ್ಕೆ ಬಂದಿರುವುದು ಸಂಗತಿ ಕನ್ನಡ ಸಾಹಿತ್ಯ ಪರಿಷತ್ತು ಎಂದರೆ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುವ ತುಡಿತ ಇರುವ ವ್ಯಕ್ತಿಯನ್ನು ಆರಿಸಿ ಕಳಿಸುವಂತಹ ಒಂದು ವ್ಯವಸ್ಥೆ ಆದರೆ ಇಂದು ಉದ್ಯಮಿಗಳು ರಾಜಕೀಯ ಹಿನ್ನಡೆಯುಳ್ಳವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು ಚುನಾವಣೆಗಳಲ್ಲಿ ನಿಜವಾದ ಕನ್ನಡದ ಕಟ್ಟಾಳುಗಳು ಹಿಮ್ಮುಖವಾಗಲು ಕಾರಣವಾಗಿದೆ ಎಂದರು. </p>



<p>ಆನಂದ್ ಕಾಳೇನಹಳ್ಳಿ ಚಿಕ್ಕಂದಿನಿಂದಲೂ ಸಂಘಟನಾ ಚತುರತೆ ಇರುವ ವ್ಯಕ್ತಿಯಾಗಿದ್ದು ಅವರಿಗೆ ಕನ್ನಡಕ್ಕಾಗಿ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹಾರೈಸಿದರು.</p>



<p>ಈ ಸಭೆಯಲ್ಲಿ ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಕಾಳೇನಹಳ್ಳಿ ಆನಂದ್ ಕುಮಾರ್, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷರಾದ ಮೆಡಿಕಲ್ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಕುಂಬಾರಹಳ್ಳಿ ರಮೇಶ್, ಮಾಜಿ ಉಪಾಧ್ಯಕ್ಷರಾದ ಸಿ ಜೆ ಜಗದೀಶ್, ಪುರಸಭಾ ಮಾಜಿ ಅಧ್ಯಕ್ಷರಾದ ಸಿ ನಾಗರಾಜು,ಕೋಟೆ ಮೋಹನ್, ಹಿರಿಯ ಸಾಹಿತಿಗಳಾದ ಮೇಟಿಕೆರೆ ಹಿರಿಯಣ್ಣ, ಪ್ರೊಫೆಸರ್ ಸಿದ್ದೇಗೌಡ,ಹೊನ್ನಶೆಟ್ಟಿಹಳ್ಳಿ ಗಿರಿರಾಜ್, ಶ್ರೀಮತಿ ಜಯಂತಿ ಚಂದ್ರಶೇಖರ್,ಕಾಳೇನಹಳ್ಳಿ ಚಂದ್ರು, ಹರಿಕಥೆ ವಿದ್ವಾಂಸರಾದ ಲೋಕೇಶ್ ದಾಸ್, ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಸಿ ಎನ್ ಅಶೋಕ್, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮುರಾಜಿ ಮಂಜಣ್ಣ, ಕಾರ್ಯದರ್ಶಿಗಳಾದ ಕೆಂಬಾಳು ಶರತ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ನಾಗರತ್ನ, ಉಪಾಧ್ಯಕ್ಷರಾದ ಪ್ರೇಮಮ್ಮ, ಸಮಾಜ ಸೇವಕರುಗಳಾದ ಗಜಾನನ ಮನೋಹರ್, ಅಬ್ದುಲ್ ಅಝೀಮ್, ಮಹದೇವ್, ಸಿದ್ದೇಶ್, ಕನ್ನಡ ಪರ ಹೋರಾಟಗಾರ ಜನಿವಾರ ಶರತ್, ರಾಜಕುಮಾರ, ಉಪನ್ಯಾಸಕರಾದ ಎಂ ಜೆ ರತ್ನಾಕರ್, ಹನುಮಂತಪ್ಪ,ಯಶವಂತ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಮಧ್ಯಾಹ್ನ 3ಕ್ಕೆ ಆನ್‌ಲೈನ್‌ನಲ್ಲಿ ಲಭ್ಯ, ಈ ಸುದ್ದಿಯೊಳಗಿನ ಲಿಂಕ್ ಕ್ಲಿಕ್ ಮಾಡಿ</title>
		<link>https://peepalmedia.com/available-online-at-3pm-this/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 08 Apr 2026 10:45:03 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಶಿಕ್ಷಣ]]></category>
		<guid isPermaLink="false">https://peepalmedia.com/?p=76843</guid>

					<description><![CDATA[ರಾಜ್ಯದ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಮಧ್ಯಾಹ್ನ 3:00 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ಪಡೆಯಲಿದ್ದಾರೆ. ತಾಂತ್ರಿಕ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಿರುವ ಮಂಡಳಿ, ಅಂಕಪಟ್ಟಿಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಸಜ್ಜಾಗಿದೆ. ಇದೇ ವೇಳೆ, ಸಂಜೆ 6:15ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, [&#8230;]]]></description>
										<content:encoded><![CDATA[
<p>ರಾಜ್ಯದ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಮಧ್ಯಾಹ್ನ 3:00 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ <a href="https://karresults.nic.in">https://karresults.nic.in</a> ನಲ್ಲಿ ಪ್ರಕಟಿಸಲಾಗುವುದು.</p>



<p>ವಿದ್ಯಾರ್ಥಿಗಳು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ಪಡೆಯಲಿದ್ದಾರೆ. ತಾಂತ್ರಿಕ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಿರುವ ಮಂಡಳಿ, ಅಂಕಪಟ್ಟಿಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಸಜ್ಜಾಗಿದೆ.</p>



<p>ಇದೇ ವೇಳೆ, ಸಂಜೆ 6:15ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಫಲಿತಾಂಶದ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ, ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಈ ಸುದ್ದಿಗೋಷ್ಠಿ ನಡೆಯಲಿದೆ.</p>



<p><strong>ಪರೀಕ್ಷೆಯ ಹಿನ್ನಲೆ:</strong><br>2026ರ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಸುಗಮವಾಗಿ ನಡೆದವು.</p>



<p><strong>ಮರುಮೌಲ್ಯಮಾಪನಕ್ಕೆ ಅವಕಾಶ:</strong><br>ಫಲಿತಾಂಶದಿಂದ ಅಸಮಾಧಾನಗೊಂಡ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ (Revaluation) ಹಾಗೂ ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅವಕಾಶ ಕಲ್ಪಿಸಲಾಗುವುದು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಫಲಿತಾಂಶ ಪ್ರಕಟವಾದ ನಂತರ ಮಂಡಳಿ ಪ್ರಕಟಿಸಲಿದೆ.</p>



<p><strong>ಫಲಿತಾಂಶ ವೀಕ್ಷಿಸುವ ವಿಧಾನ:</strong><br>ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಹಾಗೂ ವಿಷಯ ಸಂಯೋಜನೆ ನಮೂದಿಸುವ ಮೂಲಕ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು.</p>
]]></content:encoded>
					
		
		
			</item>
		<item>
		<title>ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆ</title>
		<link>https://peepalmedia.com/second-puc-result-announcement-postponed/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 07 Apr 2026 02:04:33 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=76763</guid>

					<description><![CDATA[ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮುಂದೂಡಲಾಗಿದೆ. ಫಲಿತಾಂಶ ಪ್ರಕಟಣೆಯ ನೂತನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದಾಗಿ ಮಂಡಳಿ ತಿಳಿಸಿದೆ. ಮೊದಲ ಬಾರಿಗೆ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಣೆಯ ಸಂಭಾವ್ಯ ದಿನಾಂಕಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದರು. ಆದರೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಮಂಗಳವಾರ ಫಲಿತಾಂಶ ಪ್ರಕಟಣೆ ಸಾಧ್ಯವಾಗಿಲ್ಲ. [&#8230;]]]></description>
										<content:encoded><![CDATA[
<p>ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮುಂದೂಡಲಾಗಿದೆ. ಫಲಿತಾಂಶ ಪ್ರಕಟಣೆಯ ನೂತನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದಾಗಿ ಮಂಡಳಿ ತಿಳಿಸಿದೆ.</p>



<p>ಮೊದಲ ಬಾರಿಗೆ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಣೆಯ ಸಂಭಾವ್ಯ ದಿನಾಂಕಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದರು.</p>



<p>ಆದರೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಮಂಗಳವಾರ ಫಲಿತಾಂಶ ಪ್ರಕಟಣೆ ಸಾಧ್ಯವಾಗಿಲ್ಲ. ನೀತಿ ಸಂಹಿತೆ ಜಾರಿಯಿರುವುದರಿಂದ ಫಲಿತಾಂಶ ಪ್ರಕಟಣೆಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.</p>



<p>ಈ ಹಿನ್ನೆಲೆಯಲ್ಲಿ ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗದಿಂದ ಅನುಮತಿ ದೊರೆತಲ್ಲಿ ಏಪ್ರಿಲ್ 8ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಪ್ರಕಟಣೆಯಲ್ಲಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದ್ದು, ಈ ಕುರಿತು ಅಧಿಕೃತ ಮಾಹಿತಿ ಮಂಗಳವಾರ ಸಂಜೆ ಬಿಡುಗಡೆ ಆಗಲಿದೆ.</p>



<p>ಚುನಾವಣಾ ಆಯೋಗದಿಂದ ಪ್ರಕಟಣೆಗೆ ಯಾವುದೇ ತೊಂದರೆ ಇಲ್ಲದಿದ್ದರೂ, ಉಪಚುನಾವಣೆ ಸಂದರ್ಭ ಸಚಿವರು ಲಭ್ಯವಿಲ್ಲದ ಕಾರಣ ಫಲಿತಾಂಶ ಪ್ರಕಟಣೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.</p>
]]></content:encoded>
					
		
		
			</item>
	</channel>
</rss>
