<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಬೆಂಗಳೂರು ಗ್ರಾಮಾಂತರ &#8211; Peepal Media</title>
	<atom:link href="https://peepalmedia.com/category/karnataka/bengaluru-rural/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 20 Oct 2025 02:51:25 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಬೆಂಗಳೂರು ಗ್ರಾಮಾಂತರ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಆರ್.ಜಾಲಪ್ಪ ನೇರ-ನಿಷ್ಠುರ ಮತ್ತು ಹೃದಯವಂತಿಕೆಯ ವ್ಯಕ್ತಿ: ನಾನು ಸಚಿವನಾಗಲು ಜಾಲಪ್ಪ ಅವರೂ ಕೂಡ ಕಾರಣಕರ್ತರು: ಸಿ.ಎಂ</title>
		<link>https://peepalmedia.com/r-jalappa-is-a-straightforward-stern-and-kind-hearted-person/</link>
		
		<dc:creator><![CDATA[Peepal Media]]></dc:creator>
		<pubDate>Mon, 20 Oct 2025 02:51:25 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<guid isPermaLink="false">https://peepalmedia.com/?p=68095</guid>

					<description><![CDATA[ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ &#8220;ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ&#8221; ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ [&#8230;]]]></description>
										<content:encoded><![CDATA[
<p>ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.</p>



<p>ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ &#8220;ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ&#8221; ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>



<p>ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ,<br>ರೈತರಿಗೆ, ಕೃಷಿಗೆ ಅತ್ಯಂತ ಮಹತ್ವ ನೀಡಿದ್ದನ್ನು ಸಿಎಂ ಸ್ಮರಿಸಿದರು.</p>



<p>ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪ ಅವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುವುದನ್ನು ಉಲ್ಲೇಖಿಸಿ ಶ್ಲಾಘಿಸಿದರು.</p>



<p>ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನನಗೂ, ಜೆ.ಹೆಚ್.ಪಟೇಲರಿಗೂ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದನ್ನು ನೆನಪಿಸಿಕೊಂಡರು.</p>



<p>ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ‌ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್ ಗಳನ್ನು ಮಂಡಿಸುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.</p>



<p>ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ ಎಂದರು.</p>



<p>ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು.</p>



<p>ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು.</p>



<p>ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು ಎಂದು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.</p>
]]></content:encoded>
					
		
		
			</item>
		<item>
		<title>ಕರ್ನಾಟಕದ ಹೊಸಕೋಟೆ ಬಳಿ ಬಸ್-ಲಾರಿ ಡಿಕ್ಕಿ: ಐದು ಸಾವು</title>
		<link>https://peepalmedia.com/five-killed-in-bus-lorry-crash-near-hoskote/</link>
		
		<dc:creator><![CDATA[Peepal Media]]></dc:creator>
		<pubDate>Sat, 14 Jun 2025 03:55:29 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=60995</guid>

					<description><![CDATA[ಬೆಂಗಳೂರು: ಶುಕ್ರವಾರ ಮುಂಜಾನೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ನಗರದ ಹೊರವಲಯದ ಹೊಸಕೋಟೆ ಸಮೀಪದಲ್ಲಿ ಆಂಧ್ರಪ್ರದೇಶ ರಾಜ್ಯ ಸಾರಿಗೆ ಬಸ್ ಮತ್ತು ಲಾರಿಯ ನಡುವಿನ ರಸ್ತೆ ಅಪಘಾತದಲ್ಲಿ 11 ತಿಂಗಳ ಮಗುವಿನೊಂದಿಗೆ ಐವರು ಸಾವಿಗೀಡಾಗಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಚಿತ್ತೂರು ಡಿಪೋದ ಎಪಿಎಸ್‌ಆರ್‌ಟಿಸಿ ಬಸ್, ಪಶ್ಚಿಮ ಬಂಗಾಳದ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯನ್ನು ಡಬದಿಯಿಂದ ಓವರ್‌ಟೇಕ್ ಮಾಡಲು ಯತ್ನಿಸುವ ವೇಳೆ ಡಿಕ್ಕಿಯಾಗಿದೆ ಎಂದು ಹೊಸಕೋಟೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ [&#8230;]]]></description>
										<content:encoded><![CDATA[
<p>ಬೆಂಗಳೂರು: ಶುಕ್ರವಾರ ಮುಂಜಾನೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ನಗರದ ಹೊರವಲಯದ ಹೊಸಕೋಟೆ ಸಮೀಪದಲ್ಲಿ ಆಂಧ್ರಪ್ರದೇಶ ರಾಜ್ಯ ಸಾರಿಗೆ ಬಸ್ ಮತ್ತು ಲಾರಿಯ ನಡುವಿನ ರಸ್ತೆ ಅಪಘಾತದಲ್ಲಿ 11 ತಿಂಗಳ ಮಗುವಿನೊಂದಿಗೆ ಐವರು ಸಾವಿಗೀಡಾಗಿದ್ದಾರೆ.</p>



<p>ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಚಿತ್ತೂರು ಡಿಪೋದ ಎಪಿಎಸ್‌ಆರ್‌ಟಿಸಿ ಬಸ್, ಪಶ್ಚಿಮ ಬಂಗಾಳದ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯನ್ನು ಡಬದಿಯಿಂದ ಓವರ್‌ಟೇಕ್ ಮಾಡಲು ಯತ್ನಿಸುವ ವೇಳೆ ಡಿಕ್ಕಿಯಾಗಿದೆ ಎಂದು ಹೊಸಕೋಟೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.</p>



<p>ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಗೊಟ್ಟಿಪುರ ಗೇಟ್ ಬಳಿ ಬೆಳಗ್ಗೆ 1:50ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಕೇಶವುಲು ರೆಡ್ಡಿ (54), ತುಳಸಿ (21), ಯುತ್ವಿಕ್ (11 ತಿಂಗಳು), ಪ್ರಣತಿ (4) ಮತ್ತು ಶಾರದಾ (43) ಎಂದು ಗುರುತಿಸಲಾಗಿದೆ.</p>



<p>ಪೊಲೀಸರ ಪ್ರಕಾರ, ಬಸ್ ಚಾಲಕ ಸೇರಿದಂತೆ ಒಟ್ಟು ಎಂಟು ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.</p>



<h1 class="wp-block-heading">HoskoteAccident #BusCrash #BengaluruChennaiHighway #RoadSafety</h1>
]]></content:encoded>
					
		
		
			</item>
		<item>
		<title>ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ‌ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ</title>
		<link>https://peepalmedia.com/our-government-is-providing-rs-19000-crore-pump-set-subsidy-every-year-cm/</link>
		
		<dc:creator><![CDATA[Peepal Media]]></dc:creator>
		<pubDate>Wed, 11 Jun 2025 09:01:32 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=60761</guid>

					<description><![CDATA[ದೊಡ್ಡಬಳ್ಳಾಪುರ ಜೂ 11: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ [&#8230;]]]></description>
										<content:encoded><![CDATA[
<p>ದೊಡ್ಡಬಳ್ಳಾಪುರ ಜೂ 11: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.<br>ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.</p>



<p>ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ ನೀಡಿ, &#8216;ಲಿಪಿ-ಮನೆ&#8217; ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>



<p>ಇಂದು ನಾನು ಉದ್ಘಾಟನೆ ಮಾಡಿರುವ, 70 ಮೆವ್ಯಾ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ ಎಂದರು.</p>



<p>ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದು ಮೆಚ್ಚುಗೆ ಸೂಚಿಸಿದರು.</p>



<p>ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ50 ರಷ್ಟು ಹಣ ಕೊಡುತ್ತದೆ. ಶೇ20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ 30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ ಎಂದರು.</p>



<p>ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡ್ತೇವೆ ಎಂದು ವಿವರಿಸಿದರು.</p>



<p>ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ವಿವರಿಸಿದರು.</p>



<p>ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದರು.</p>



<p>ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.</p>



<p><strong>ಗೌರಿಬಿದನೂರಿಗೆ ಬಂಪರ್</strong></p>



<p>ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.</p>



<p>ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು.</p>



<p>ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಮೀಸಲಿ &#8211; ಡಿಸಿಎಂ ಡಿ.ಕೆ.ಶಿವಕುಮಾರ್</title>
		<link>https://peepalmedia.com/bbmp-to-allocate-rs-730-crore-for-civic-workers-dcm-d-k-shivakumar/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 07 Apr 2025 12:51:01 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[news]]></category>
		<category><![CDATA[peepal]]></category>
		<guid isPermaLink="false">https://peepalmedia.com/?p=56786</guid>

					<description><![CDATA[ಬೆಂಗಳೂರು : ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.</p>



<p>ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ ನೀಡುವ ಯೋಜನೆ ತರಲಾಗಿದೆ.ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ  ರೂ.6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ ರೂ. 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ ಕಲ್ಯಾಣಕ್ಕೆ ರೂ. 64 ಕೋಟಿ ಮೀಸಲಿಡಲಾಗಿದೆ ಎಂದರು.</p>



<p>ಪೌರಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರುವುದೇ ಕಾಂಗ್ರೆಸ್ ಸರ್ಕಾರದ ಸಂಕಲ್ಪ. ಪೌರಕಾರ್ಮಿಕರು ನಮ್ಮ ಹಾಗೂ ದೇಶದ ಶಕ್ತಿ, ಕಾಂಗ್ರೆಸ್ ಸರ್ಕಾರ ನಿಮ್ಮ ಶಕ್ತಿ ಎಂಬುದನ್ನು ಮರೆಯಬಾರದು. ನಿಮ್ಮ ಕೆಲಸ ಖಾಯಂ ಆದ ತಕ್ಷಣ ನಿಮಗೆ ಬರುವ ಸಂಬಳ 50 ಸಾವಿರ ಮುಟ್ಟುತ್ತದೆ ಎಂದ ಡಿಕೆಶಿ ಭರವಸೆ ನೀಡಿದರು.2013 ರ ಸರ್ಕಾರದ ಅವಧಿಯಲ್ಲಿ ನಿಮ್ಮ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇವೆ. 1 ಸಾವಿರ ಪೌರ ಕಾರ್ಮಿಕರನ್ನು ವಿದೇಶಿ ಪ್ರವಾಸಕ್ಕೆ ಕಳಿಸಿಕೊಡಲಾಗಿತ್ತು. 2017ರಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. 7.50 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿತ್ತು ಎಂದು ಇದೇ ವೇಳೆ ಡಿಸಿಎಂ ಉಲ್ಲೇಖಿಸಿದರು.</p>
]]></content:encoded>
					
		
		
			</item>
		<item>
		<title>258 ಸರ್ಕಾರಿ ಕಚೇರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿ</title>
		<link>https://peepalmedia.com/greater-bengaluru-mahanagara-corporation-issued-notice-to-258-government-offices/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 03 Mar 2025 06:28:58 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<guid isPermaLink="false">https://peepalmedia.com/?p=54674</guid>

					<description><![CDATA[ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 258 ಸರ್ಕಾರಿ ಕಚೇರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಆಸ್ತಿ ತೆರಿಗೆ ಬಾಕಿಗೆ ಸಂಬಂಧಿಸಿದಂತೆ, ಒಟ್ಟು ಎಷ್ಟು ಮೊತ್ತ ಬಾಕಿ ಇದೆ ಎಂದು ತಿಳಿದು ಬಂದಿಲ್ಲ. ಆದರೆ ಬಹಳ ವರ್ಷಗಳಿಂದ ತೆರಿಗೆ ಪಾವತಿಯಾಗದೇ ಉಳಿದಿದೆ ಎನ್ನಲಾಗಿದೆ. ನೂರಾರು ಕೋಟಿ ಬಾಕಿ ಇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಆಸ್ತಿಗಳಂತೆ, ಈಗ ಸರ್ಕಾರಿ ಆಸ್ತಿಗಳಿಗೂ ತೆರಿಗೆ ಪಾವತಿ ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ತೆರಿಗೆ ಬಾಕಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 258 ಸರ್ಕಾರಿ ಕಚೇರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಆಸ್ತಿ ತೆರಿಗೆ ಬಾಕಿಗೆ ಸಂಬಂಧಿಸಿದಂತೆ, ಒಟ್ಟು ಎಷ್ಟು ಮೊತ್ತ ಬಾಕಿ ಇದೆ ಎಂದು ತಿಳಿದು ಬಂದಿಲ್ಲ. ಆದರೆ ಬಹಳ ವರ್ಷಗಳಿಂದ ತೆರಿಗೆ ಪಾವತಿಯಾಗದೇ ಉಳಿದಿದೆ ಎನ್ನಲಾಗಿದೆ. ನೂರಾರು ಕೋಟಿ ಬಾಕಿ ಇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>



<p></p>



<p></p>



<p></p>



<p></p>



<p></p>



<p></p>



<p></p>



<p></p>



<p></p>



<p>ಖಾಸಗಿ ಆಸ್ತಿಗಳಂತೆ, ಈಗ ಸರ್ಕಾರಿ ಆಸ್ತಿಗಳಿಗೂ ತೆರಿಗೆ ಪಾವತಿ ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ತೆರಿಗೆ ಬಾಕಿ ಇರುವ ಕಚೇರಿಗಳಿಗೆ ಬಿಬಿಎಂಪಿ ನೋಟೀಸು ನೀಡಿದೆ. ಈ ಪಟ್ಟಿಯಲ್ಲಿ ವಿಧಾನಸೌಧ, ವಿಕಾಸ ಸೌಧ ಮತ್ತು ರಾಜಭವನ ಮುಂತಾದ ಪ್ರಮುಖ ಸರ್ಕಾರಿ ಕಚೇರಿಗಳು ಸೇರಿರುವುದು ಈ ಪಟ್ಟಿಯಿಂದ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಇನ್ನೂ ಯಾವ ಪ್ರತಿಕ್ರಿಯೆಯೂ ಬಂದಿಲ್ಲ.</p>



<p></p>



<p></p>



<p></p>



<p></p>



<p></p>



<p></p>



<p></p>



<p></p>



<p></p>



<p></p>



<p>ಚಕ್ರಬಡ್ಡಿಯನ್ನು ಕಡಿಮೆ ಮಾಡುವ ಮತ್ತು ದಂಡವನ್ನು ಶೇ.50ರಷ್ಟು ಕಡಿಮೆ ಮಾಡುವ ವನ್ ಟೈಮ್ ಸೆಟಲ್‌ಮೆಂಟ್ ಯೋಜನೆಯು ಜಾರಿಯಲ್ಲಿತ್ತು. ಆದರೆ ಸರಕಾರಿಯ ಕಚೇರಿಗಳು ಅದರ ಪ್ರಯೋಜನ ಪಡೆಯಲು ವಿಫಲವಾಗಿದೆ. ಆ ಯೋಜನೆಯ ಕಾಲಾವಧಿ ಪೂರ್ಣಗೊಳ್ಳುವ ಮೊದಲಿನಿಂದಲೂ, ಬಿಬಿಎಂಪಿ ಸತತವಾಗಿ ನೋಟಿಸ್‌ಗಳನ್ನು ಕಳುಹಿಸಿ, ತೆರಿಗೆ ಪಾವತಿ ಮಾಡಲು ಸೂಚನೆ ನೀಡುತ್ತಾ ಬಂದಿದೆ.ತೆರಿಗೆ ಪಾವತಿ ಬಾಕಿ ಇರುವ ಖಾಸಗಿ ಆಸ್ತಿ ಮಾಲಿಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಬಿಬಿಎಂಪಿ, ಅಂತಹ ಆಸ್ತಿಗಳನ್ನು ಹರಾಜಿಗೆ ಹಾಕಿ ತೆರಿಗೆ ಬಾಕಿ ವಸೂಲಿಗೆ ಮುಂದಾಗಿದೆ. ಆದರೆ ಸರ್ಕಾರಿ ಕಚೇರಿಗಳ ವಿರುದ್ಧ ಇನ್ನೂ ಯಾವ ಕ್ರಮವನ್ನೂ ಬಿಬಿಎಂಪಿ ಕೈಗೊಂಡಿಲ್ಲ.</p>
]]></content:encoded>
					
		
		
			</item>
		<item>
		<title>ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತಾಗಲಿ &#8211; ಉಪನ್ಯಾಸಕರಾದ ವಸಂತ ಕುಮಾರ್</title>
		<link>https://peepalmedia.com/let-the-grassroots-youth-get-higher-education-lecturer-vasant-kumar/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 09 Jan 2025 17:44:53 +0000</pubDate>
				<category><![CDATA[ನಾಡು-ನುಡಿ]]></category>
		<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[ಯುವ ನೋಟ]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[peepal]]></category>
		<guid isPermaLink="false">https://peepalmedia.com/?p=51991</guid>

					<description><![CDATA[ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತೆ ಮಾಡುವುದೇ ನಿಜವಾದ ಸಮಾಜಕರ‍್ಯ ಎಂದು ಉಪನ್ಯಾಸಕರಾದ ವಸಂತ ಕುಮಾರ್ ಎಚ್.ಆರ್. ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ನ ಎಸ್ ಈ ಏ ವಿಜ್ಞಾನ ವಾಣಿಜ್ಯ ಕಲಾ ಕಾಲೇಜಿನ ಸಮಾಜಕರ‍್ಯ ವಿಭಾಗ, ಜನಪರ ಫೌಂಡೇಷನ್ ಹಾಗೂ ವಿದ್ಯಾಜ್ಯೋತಿ ಕಾಲೇಜು ಸಹಭಾಗಿತ್ವದಲ್ಲಿ ಕಾಲೇಜಿನಲ್ಲಿ ಸಾವಿತ್ರಿಭಾಯಿ ಪುಲೆ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ “ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ” ಕುರಿತು ಅರಿವು ಕರ‍್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೋಷಿತ ವರ್ಗ ಹಿಂದುಳಿದ [&#8230;]]]></description>
										<content:encoded><![CDATA[
<p></p>



<p>ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತೆ ಮಾಡುವುದೇ ನಿಜವಾದ ಸಮಾಜಕರ‍್ಯ ಎಂದು ಉಪನ್ಯಾಸಕರಾದ ವಸಂತ ಕುಮಾರ್ ಎಚ್.ಆರ್. ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ನ ಎಸ್ ಈ ಏ ವಿಜ್ಞಾನ ವಾಣಿಜ್ಯ ಕಲಾ ಕಾಲೇಜಿನ ಸಮಾಜಕರ‍್ಯ ವಿಭಾಗ, ಜನಪರ ಫೌಂಡೇಷನ್ ಹಾಗೂ ವಿದ್ಯಾಜ್ಯೋತಿ ಕಾಲೇಜು ಸಹಭಾಗಿತ್ವದಲ್ಲಿ ಕಾಲೇಜಿನಲ್ಲಿ ಸಾವಿತ್ರಿಭಾಯಿ ಪುಲೆ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ “ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ” ಕುರಿತು ಅರಿವು ಕರ‍್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೋಷಿತ ವರ್ಗ ಹಿಂದುಳಿದ ವರ್ಗ ಯುವಜನರು ಸಾಮಾಜಿಕವಾಗಿ ವೃದ್ಧಿಯಾಗಲು ಉನ್ನತ ಶಿಕ್ಷಣ ಅಗತ್ಯ. ಈ ನಿಟ್ಟಿನಲ್ಲಿ ಸಮಾಜದ ಕಡೆಗೆ ಕೆಲಸ ಮಾಡಬೇಕಿದೆ ಎಂದು ಹೇಳಿದರು.</p>



<p><br>ಪ್ರಸ್ತುತ ದಿನಗಳಲ್ಲಿ ತಳ ಸಮುದಾಯ, ಹಿಂದುಳಿದ ಸಮುದಾಯಗಳಲ್ಲಿನ ಯುವಜನರಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕ್ಷೀಣಿಸುತ್ತಿದೆ. ಹೀಗಾಗಿ, ಹೆಚ್ಚಿನ ಪ್ರಮಾಣದಲ್ಲಿ ಯುವಜನರು ಉನ್ನತ ಶಿಕ್ಷಣಕ್ಕೆ ಒತ್ತು ನೀಡಬೇಕು ಹಾಗೂ ಉನ್ನತ ಹುದ್ದೆಗಳನ್ನು ಪಡೆಯುವ ನಿಟ್ಟಿನಲ್ಲಿ ಕರ‍್ಯೋನ್ಮುಖರಾಗಬೇಕು. ಹೆಣ್ಣು ಮಕ್ಕಳು ಭವಿಷ್ಯದ ನಾಳೆಗಳಿಗಾಗಿ ಇಂದಿನಿಂದಲೇ ತಯಾರಾಗಬೇಕು. ಅದಕ್ಕಾಗಿ ಶಿಕ್ಷಣವೇ ರ‍್ಯಾಯ ಎಂದು ತಿಳಿಸಿದರು.</p>



<p><br>ಸಾಮಾಜಿಕ ಹೋರಾಟಗಾರ ಜನ ನಾಗಪ್ಪ ಅವರು ಮಾತನಾಡಿ, ಸ್ವಾತಂತ್ರ‍್ಯ ಪರ‍್ವ ಭಾರತದ ಸಮಾನತವಾದಿ, ಸ್ತ್ರೀವಾದಿ ಮತ್ತು ಸಾಮಾಜಿಕ ಸುಧಾರಣೆಗಳ ಮೊದಲ ಚಾರಿತ್ರಿಕ ಹೆಜ್ಜೆ ಎಂದು ಗುರುತಿಸುವುದಾದರೆ ಅದು ಜ್ಯೋತಿ ರಾವ್ ಫುಲೆ ಮತ್ತು ಸಾವಿತ್ರಿಬಾಯಿ ಪುಲೆ ದಂಪತಿ. ಜ್ಯೋತಿ ರಾವ್ ಫುಲೆಯವರನ್ನು ಭಾರತದ ಸಾಮಾಜಿಕ ಹೋರಾಟಗಳ ತಂದೆ ಎಂದೇ ಇತಿಹಾಸವು ನೆನಪಿಸಿಕೊಳ್ಳುವುದು. ಇಂತಹ ಮಹಾನ್ ಚೇತನದ ಮಡದಿಯಾಗಿ ತನ್ನ ಬಾಳಸಂಗಾತಿಯ ಆಶಯಗಳ ಮಹತ್ವವನ್ನು ಅರಿತುಕೊಂಡು, ಅವುಗಳನ್ನು ತನ್ನ ಜೀವನದ ಮುಖ್ಯ ಗುರಿಯನ್ನಾಗಿಸಿಕೊಂಡು ಬದುಕಿನ ಕೊನೆಯವರೆಗೂ ಮುನ್ನಡೆಸಿದ ಮಹಾನ್ ಚೇತನ ಸಾವಿತ್ರಿಬಾಯಿ ಫುಲೆ ಎಂದು ಹೇಳಿದರು.</p>



<p><br>ಭಾರತದ ಮೇಲ್ರ‍್ಗ ಹಾಗೂ ಊಳಿಗಮಾನ್ಯ ವ್ಯವಸ್ಥೆ ಶೂದ್ರರು ಮತ್ತು ಅಸ್ಪಶ್ಯರು ಕೆಲವರ ಸೇವೆಗೆಂದು ಮಾತ್ರ. ಅಕ್ಷರ, ಸ್ವತಂತ್ರ, ಸಮಾನತೆ, ಸ್ವಾಭಿಮಾನಗಳೆಲ್ಲ ತಳಸಮುದಾಯಗಳಿಗೆ ನಿಷಿದ್ದ, ಎಂಬ ನಿಯಮವನ್ನು ವಿಧಿಸಿದ್ದರು. ಅಂತಹ ಕಾಲದಲ್ಲಿ ಜಾತಿಮನಸ್ಥಿತಿಗಳ ವಿರುದ್ಧ ದೃಢವಾಗಿ ನಿಂತು ಶೂದ್ರಾತಿ ಶೂದ್ರರಿಗೆ ಅಕ್ಷರಾಭ್ಯಾಸ ಮಾಡಿಸಿ ಶಿಕ್ಷಣದ ಹಕ್ಕನ್ನು ಕಲ್ಪಿಸಿಕೊಟ್ಟು, ಸ್ವಾಭಿಮಾನದ ಜ್ಯೋತಿಯನ್ನು ಅಕ್ಷರಗಳ ಮೂಲಕ ನಮ್ಮೆಲ್ಲರೆದೆಗಳಲ್ಲಿ ಬೆಳಗಿಸಿದವರು ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಎಂದು ನುಡಿದರು.</p>



<p><br>ಮಹಿಳೆಯರಿಗೆ ಶಿಕ್ಷಣವನ್ನು ನೀಡಬೇಕೆಂಬ ಅಗಾಧವಾದ ಆಸೆ ಹೊಂದಿದ್ದ ಜ್ಯೋತಿಬಾ ಮೊದಲು ತನ್ನ ಮಡದಿ ಸಾವಿತ್ರಿಬಾಯಿಗೆ ಅಕ್ಷರಾಭ್ಯಾಸ ಮಾಡಿಸಿ ಅವರ ಮೊದಲ ಗುರುವಾದರು. ಬಾಳಸಂಗಾತಿಯ ಘನ ಉದ್ದೇಶವನ್ನು ಅರಿತ ಸಾವಿತ್ರಿಬಾಯಿ ಅಷ್ಟೇ ಆಸ್ಥೆ ಮತ್ತು ಶ್ರದ್ಧೆಯಿಂದ ಕಲಿತರು. ಕಲಿಕೆಯ ಆಸಕ್ತಿ ಅವರನ್ನು ಭಾರತದ ಶೋಷಿತ ಸಮುದಾಯಗಳ ವಿಮೋಚಕಿಯನ್ನಾಗಿ ಬೆಳೆಸಿತು. ಸಾವಿತ್ರಿಬಾಯಿ ಪತಿಯ ಮೊದಲ ಅನುಯಾಯಿ. ಅವರ ಎಲ್ಲಾ ಪ್ರಯೋಗಗಳ ಮೊದಲ ಫಲಿತಾಂಶ ಎಂದು ಮಾಹಿತಿ ನೀಡಿದರು.</p>



<p><br>ಅಂದಿನ ಕಾಲದಲ್ಲಿ ಶಿಕ್ಷಣವನ್ನು ನೀಡುವುದು ಅಷ್ಟೊಂದು ಸುಲಭದ ಮಾತಾಗಿರಲಿಲ್ಲ. ಅತ್ಯಂತ ನಿಂದನೆ, ನೋವು, ಅವಮಾನದಿಂದಲೇ ಕ್ರಮಿಸಿದ್ದರು. ಪಾಠ ಕಲಿಸಲು ಹೋಗುವ ದಾರಿಯ ಮಧ್ಯೆ ಅವರ ಮೇಲೆ ಕಲ್ಲು, ಮಣ್ಣು, ಸೆಗಣಿ ಎಸೆದರು. ಆದರೂ, ಧೃತಿಗೆಡದೇ ಎಲ್ಲವನ್ನೂ ಹಿಮ್ಮೆಟ್ಟಿಸಿ ಬಂಡೆಯಂತೆ ನಿಂತು ಅಕ್ಷರಾಭ್ಯಾಸದ ಕರ‍್ಯವನ್ನು ಮುಂದುವರಿಸಿದರು. ಹೀಗಾಗಿ, ಅವರು ನಮ್ಮೆಲ್ಲರಿಗೂ ಅಕ್ಷರದ ಮಾತೆಯಾಗಿದ್ದಾರೆ ಎಂದು ಪ್ರತಿಪಾದಿಸಿದರು.<br>ಈ ಸಂರ‍್ಭದಲ್ಲಿ ಬೇರು ಬೆವರು ಕಲಾ ಬಳಗದ ಸೋರಪ್ಪಲ್ಲಿ ಚಂದ್ರಶೇಖರ್ ಹಾಗೂ ಪೆದ್ದೂರು ಮುನಿರಾಜು ಅವರು ಸಾವಿತ್ರಿ ಭಾಯಿ ಪುಲೆ, ಜ್ಯೋತಿ ಭಾಯಿ ಪುಲೆ ಹಾಗೂ ಹಲವು ಸಾಮಾಜಿಕ ಹಾಡುಗಳನ್ನು ಪ್ರಸ್ತುತಪಡಿಸಿದರು. ವೇದಿಕೆಯಲ್ಲಿ ವಿದ್ಯಾಜ್ಯೋತಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಉಪನ್ಯಾಸಕರಾದ ಸ್ವಾಮಿ, ಎಸ್ ಈ ಏ ಕಾಲೇಜಿನ ದ್ವಿತೀಯ ಪ್ರಶಿಕ್ಷಣರ‍್ಥಿಗಳಾದ ರ‍್ಪಿತಾ, ವಿನೋಧಶ್ರೀ, ಬಾಬುರೆಡ್ಡಿ, ಜನಪರ ಫೌಂಡೇಷನ್ ನ ಯುವಯಾನ ಬಳಗದ ಅಕ್ಷಯ್, ಗಂಗೋತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಬಿಜೆಪಿಗೆ ಕೊನೆಯ ಗಡುವು ನೀಡಿದ ಸಿಪಿ ಯೋಗೇಶ್ವರ್ ; ಕುಮಾರಸ್ವಾಮಿಗಾಗಿ ಯೋಗೇಶ್ವರ್ ಕಳೆದುಕೊಳ್ಳಲಿರುವ ಬಿಜೆಪಿ</title>
		<link>https://peepalmedia.com/cp-yogeshwar-gave-last-deadline-to-bjp/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 22 Oct 2024 08:51:32 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಮನಗರ]]></category>
		<guid isPermaLink="false">https://peepalmedia.com/?p=47568</guid>

					<description><![CDATA[ಕೊನೆಯ ಕ್ಷಣದ ವರೆಗೂ ಬಿಜೆಪಿ ಟಿಕೆಟ್ ಗಾಗಿ ಕಾಯುವ ಬಗ್ಗೆ ಮಾತನಾಡಿದ ಸಿಪಿ ಯೋಗೇಶ್ವರ್ ಅಂತಿಮವಾಗಿ ಕಾರ್ಯಕರ್ತರ ನಿರ್ಧಾರವೇ ಅಂತಿಮ ಎಂದು ತನ್ನೆಲ್ಲಾ ನಿರ್ಧಾರವನ್ನು ಕಾರ್ಯಕರ್ತರ ತಲೆಗೆ ಕಟ್ಟಿದ್ದಾರೆ. ಇತ್ತ ಬಿಜೆಪಿ ಮಾತ್ರ ಇಲ್ಲಿಯವರೆಗೂ ಪಕ್ಷಕ್ಕೆ ದುಡಿದ ಸಿಪಿ ಯೋಗೇಶ್ವರ್ ಅವರನ್ನು ಕುಮಾರಸ್ವಾಮಿಗಾಗಿ ದೂರ ಇಟ್ಟು ಅತಂತ್ರ ಸ್ಥಿತಿಗೆ ನೂಕಿದ್ದಾರೆ. ಇತ್ತ ಕಾಂಗ್ರೆಸ್ ಕೂಡ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಸಿಪಿ ಯೋಗೇಶ್ವರ್ ಮಾತ್ರವಲ್ಲ, ಯಾರೇ ಬಂದರೂ ಸ್ವಾಗತ ಎಂದು ಹೇಳುವ ಮೂಲಕ ಯೋಗೇಶ್ವರ್ ಗೆ ಪರೋಕ್ಷ ಆಹ್ವಾನ [&#8230;]]]></description>
										<content:encoded><![CDATA[
<p></p>



<p>ಕೊನೆಯ ಕ್ಷಣದ ವರೆಗೂ ಬಿಜೆಪಿ ಟಿಕೆಟ್ ಗಾಗಿ ಕಾಯುವ ಬಗ್ಗೆ ಮಾತನಾಡಿದ ಸಿಪಿ ಯೋಗೇಶ್ವರ್ ಅಂತಿಮವಾಗಿ ಕಾರ್ಯಕರ್ತರ ನಿರ್ಧಾರವೇ ಅಂತಿಮ ಎಂದು ತನ್ನೆಲ್ಲಾ ನಿರ್ಧಾರವನ್ನು ಕಾರ್ಯಕರ್ತರ ತಲೆಗೆ ಕಟ್ಟಿದ್ದಾರೆ. ಇತ್ತ ಬಿಜೆಪಿ ಮಾತ್ರ ಇಲ್ಲಿಯವರೆಗೂ ಪಕ್ಷಕ್ಕೆ ದುಡಿದ ಸಿಪಿ ಯೋಗೇಶ್ವರ್ ಅವರನ್ನು ಕುಮಾರಸ್ವಾಮಿಗಾಗಿ ದೂರ ಇಟ್ಟು ಅತಂತ್ರ ಸ್ಥಿತಿಗೆ ನೂಕಿದ್ದಾರೆ.</p>



<p>ಇತ್ತ ಕಾಂಗ್ರೆಸ್ ಕೂಡ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಸಿಪಿ ಯೋಗೇಶ್ವರ್ ಮಾತ್ರವಲ್ಲ, ಯಾರೇ ಬಂದರೂ ಸ್ವಾಗತ ಎಂದು ಹೇಳುವ ಮೂಲಕ ಯೋಗೇಶ್ವರ್ ಗೆ ಪರೋಕ್ಷ ಆಹ್ವಾನ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಡಿಕೆ ಸುರೇಶ್ ಅವರ ಆದಿಯಾಗಿ ಪ್ರತಿಯೊಬ್ಬರ ಕಡೆಯಿಂದಲೂ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಪರೋಕ್ಷ ಆಹ್ವಾನ ಸಿಕ್ಕಿದೆ.</p>



<p>ಸಧ್ಯ ಯೋಗೇಶ್ವರ್ ಅವರ ಆಪ್ತ ವಲಯದಿಂದ ಬಂದ ಮಾಹಿತಿಯಂತೆ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಗೆ ಪಕ್ಷ ಎಲ್ಲಾ ತಯಾರಿ ಮಾಡಿಕೊಂಡಿದೆ. ಯೋಗೇಶ್ವರ್ ಆಪ್ತರು ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಕೆಲವು ಪ್ರಮುಖ ಷರತ್ತುಗಳು ಮತ್ತು ಸ್ಥಾನಮಾನದ ಬಗ್ಗೆ ಮಾತುಕತೆ ನಡೆದಿರುವ ಹಿನ್ನೆಲೆಯಲ್ಲಿ ಅಂತಿಮ ಆದೇಶ ಒಂದು ಬಾಕಿ ಇದೆ ಎಂಬ ಬಗ್ಗೆ ಯೋಗೇಶ್ವರ್ ಆಪ್ತ ವಲಯ ತಿಳಿಸಿದೆ.</p>



<p>ಈ ಬಗ್ಗೆ ಯೋಗೇಶ್ವರ್ ಕೂಡ ಸಣ್ಣ ಸುಳಿವು ಬಿಟ್ಟಿದ್ದು, ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವರ ಆಡಳಿತ ನಿಲುವುಗಳ ಬಗ್ಗೆ ಮೆಚ್ಚುಗೆ ಮಾತಾಡಿದ್ದಾರೆ. ತಪ್ಪಿಯೂ ಯಾವುದೇ ಕಾಂಗ್ರೆಸ್ ಮುಖಂಡರ ವಿರುದ್ದವಾಗಿ ಮಾತನಾಡದೇ, ಇಂದು ಸಂಜೆಯ ವರೆಗೂ ಕಾದು ನೋಡಿ ಎಂದು ಹೇಳಿದ್ದಾರೆ.</p>



<p>ಈ ಕಡೆ ಬಿಜೆಪಿ ಮಾತ್ರ NDA ನಿಯಮಗಳಿಗೆ ಕಟ್ಟುಬಿದ್ದಿದ್ದು, ಜೆಡಿಎಸ್ ಪಕ್ಷ ಮತ್ತು ಕುಮಾರಸ್ವಾಮಿಗಾಗಿ ಇಡೀ ಕ್ಷೇತ್ರದ ತ್ಯಾಗಕ್ಕೆ ಸಿದ್ದವಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ &#8216;ಇದು ಜೆಡಿಎಸ್ ಕ್ಷೇತ್ರ. ಹೀಗಾಗಿ ಅಭ್ಯರ್ಥಿ ಆಯ್ಕೆ ಕುಮಾರಸ್ವಾಮಿಯವರಿಗೆ ಬಿಟ್ಟಿದ್ದು ನಮ್ಮ ಪಾತ್ರ ಏನಿಲ್ಲ&#8217; ಎಂದು ಹೇಳಿದ್ದಾರೆ. ಯಡಿಯೂರಪ್ಪರಂತಹ ನಾಯಕರೇ ಯೋಗೇಶ್ವರ್ ಬೆನ್ನಿಗೆ ನಿಲ್ಲದ ಹಿನ್ನೆಲೆಯಲ್ಲಿ ಸಹಜವಾಗಿ ಯೋಗೇಶ್ವರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.</p>



<p>ಇಷ್ಟಾದರೂ ತನ್ನ ಪರವಾಗಿ ನಿಲ್ಲಲು ಬಿಜೆಪಿ ಪಕ್ಷಕ್ಕೆ ಯೋಗೇಶ್ವರ್ ಕೊನೆಯ ಅವಕಾಶ ನೀಡಿದ್ದಾರೆ. ಆದರೆ ಬೆಳವಣಿಗೆ ನೋಡಿದರೆ ಸಧ್ಯಕ್ಕೆ ಕುಮಾರಸ್ವಾಮಿ ಬಿಟ್ಟು ಯಾವುದೇ ನಿರ್ಧಾರ ತಗೆದುಕೊಳ್ಳಲು ಬಿಜೆಪಿ ಅಸಹಾಯಕತೆ ತೋರಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ ಎನ್ನುವಂತಾಗಿದೆ.</p>



<p>ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಜಯಮುತ್ತು ಹೆಸರು ಚಾಲ್ತಿಯಲ್ಲಿದೆ. ಕಾಂಗ್ರೆಸ್ ನಿಂದ ಕೊನೆಯ ಕ್ಷಣದ ಬದಲಾವಣೆ ಹೊರತಾಗಿ ಡಿಕೆ ಸುರೇಶ್, ರಘುನಂದನ್ ರಾಮಣ್ಣ ಹೆಸರು ಮುಂಚೂಣಿಯಲ್ಲಿದೆ. ಅಕಸ್ಮಾತ್ ಯೋಗೇಶ್ವರ್ ಪಕ್ಷ ಸೇರ್ಪಡೆ ಆಗಿದ್ದೇ ಆದರೆ ಕಾಂಗ್ರೆಸ್‌ ಯೋಗೇಶ್ವರ್ ಹೆಸರು ಅಂತಿಮಗೊಳಿಸುವುದು ಮಾತ್ರ ಸ್ಪಷ್ಟ.</p>
]]></content:encoded>
					
		
		
			</item>
		<item>
		<title>15000 ಗೌರವ ಸಂಭಾವನೆ&#124; ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ</title>
		<link>https://peepalmedia.com/journalism-apprenticeship-in-bangalore/</link>
		
		<dc:creator><![CDATA[Peepal Media]]></dc:creator>
		<pubDate>Wed, 09 Oct 2024 13:47:12 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=46936</guid>

					<description><![CDATA[ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಹ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು [&#8230;]]]></description>
										<content:encoded><![CDATA[
<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಹ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.</p>



<p><br>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.</p>



<p><br>ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಅಪ್ರೆಂಟಿಸ್ ಮಾಹೆಯಾನ ರೂ.15000/- ಗಳ ಸ್ಟೇಫಂಡ್(ಗೌರವ ಸಂಭಾವನೆ) ನೀಡಲಾಗುವುದು.</p>



<p><br>ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಆಧಾರ್, ಎಸ್.ಎಸ್. ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ತ್ರಿ-ಪ್ರತಿಯಲ್ಲಿ 2024 ರ ಅಕ್ಟೋಬರ್ 28 ರೊಳಗಾಗಿ ಉಪನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.17, ಭಗವಾನ್ ಮಾಹಾವೀರ ರಸ್ತೆ, ವಾರ್ತಾ ಸೌಧ, 2ನೇ ಮಹಡಿ, ಇನ್ಫೆಂಟ್ರಿ ರಸ್ತೆ, ಬೆಂಗಳೂರು-560001 ಗೆ ಸಲ್ಲಿಸುವುದು.</p>



<p><br>ಆಸಕ್ತರು ಅರ್ಹತೆಗಳು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿಯ ಇ-ಮೇಲ್ <a href="mailto:ruralinformation@gmail.com">ruralinformation@gmail.com</a> ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕೊರತೆ ಹಲವು ಹೋಟೆಲ್‌ ಬೇಕರಿಗಳಿಗೆ ನೋಟೀಸ್‌ ಮತ್ತು ದಂಡ!</title>
		<link>https://peepalmedia.com/food-safty-and-quality-policy-dept-fines-shops-and-hotels/</link>
		
		<dc:creator><![CDATA[Peepal Media]]></dc:creator>
		<pubDate>Sat, 31 Aug 2024 13:48:21 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=44740</guid>

					<description><![CDATA[ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ ಆಹಾರ ಉದ್ದಿಮೆಗಳನ್ನು ಪರಿಶೀಲಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡದ ವ್ಯಾಪಾರಿಗಳಿಗೆ ಒಟ್ಟು 23 ನೋಟಿಸ್ ಜಾರಿ ಮಾಡಿ, ಒಟ್ಟು ರೂ. 20,000 (ಇಪ್ಪತ್ತು ಸಾವಿರ)ಗಳ ದಂಡ ವಿಧಿಸಲಾಗಿದೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ ಆಹಾರ ಉದ್ದಿಮೆಗಳನ್ನು ಪರಿಶೀಲಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡದ ವ್ಯಾಪಾರಿಗಳಿಗೆ ಒಟ್ಟು 23 ನೋಟಿಸ್ ಜಾರಿ ಮಾಡಿ, ಒಟ್ಟು ರೂ. 20,000 (ಇಪ್ಪತ್ತು ಸಾವಿರ)ಗಳ ದಂಡ ವಿಧಿಸಲಾಗಿದೆ.</p>



<p><br>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರ ಸೂಚನೆಯಂತೆ ಆಗಸ್ಟ್ 30 ಮತ್ತು 31 ರಂದು ಎರಡು ದಿನಗಳ ಕಾಲ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲೆಯಲ್ಲಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು.</p>



<p><br>ಆಹಾರ ಸಿದ್ಧಪಡಿಸುವ ಸ್ಥಳ, ವ್ಯಾಪಾರದ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು, ತಮ್ಮ ಆರೋಗ್ಯವು ಸಹ ಉತ್ತಮವಾಗಿರಬೇಕು ಎಂದು ಆಹಾರ ವ್ಯಾಪಾರಿಗಳಿಗೆ ಆಹಾರ ಸುರಕ್ಷತಾಧಿಕಾರಿಗಳು ಜಾಗೃತಿ ನೀಡಿ, ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು. ಗ್ರಾಹಕರಿಗೆ ಶುದ್ಧವಾದ ಆಹಾರವನ್ನು ಮತ್ತು ನೀರನ್ನು ಪೂರೈಸಬೇಕು, ಆಹಾರ ಉದ್ದಿಮೆಗಳಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳತಕ್ಕದ್ದು ಎಂದು ಅಧಿಕಾರಿಗಳು ಜಾಗೃತಿ ಮೂಡಿಸಿದರು.</p>



<p><br>ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ಅಧಿಕಾರಿಗಳು ಆಹಾರ ಉದ್ದಿಮೆದಾರರಿಗೆ ತಿಳಿಸಿದರು.</p>



<p><br>ಈ ಆಂದೋಲನದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ, ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.</p>



<p></p>
]]></content:encoded>
					
		
		
			</item>
		<item>
		<title>ಬೆಂಗಳೂರು ಗ್ರಾಮಾಂತರ ಜಿಲ್ಲೆ: ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ</title>
		<link>https://peepalmedia.com/job-fair-in-bangalore-rural-dist/</link>
		
		<dc:creator><![CDATA[Peepal Media]]></dc:creator>
		<pubDate>Thu, 29 Aug 2024 03:59:40 +0000</pubDate>
				<category><![CDATA[ಬೆಂಗಳೂರು ಗ್ರಾಮಾಂತರ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=44581</guid>

					<description><![CDATA[ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಕುಟುಂಬಗಳಿವೆ. ಪ್ರತಿ ಕುಟುಂಬದಲ್ಲಿ ಅರ್ಹ ಒಬ್ಬರಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಆಶಯದಿಂದ ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್ .ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ನಲ್ಲಿ ನಡೆದ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ [&#8230;]]]></description>
										<content:encoded><![CDATA[
<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಕುಟುಂಬಗಳಿವೆ. ಪ್ರತಿ ಕುಟುಂಬದಲ್ಲಿ ಅರ್ಹ ಒಬ್ಬರಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಆಶಯದಿಂದ ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್ .ಮುನಿಯಪ್ಪ ಅವರು ಹೇಳಿದರು.</p>



<p><br>ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ನಲ್ಲಿ ನಡೆದ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಅವರು ‌ಮಾತನಾಡಿದರು.</p>



<p><br>ಒಂದು‌ ಕುಟುಂಬಕ್ಕೆ ಒಂದು ಕೆಲಸ ಸಿಗಬೇಕು ಎಂಬ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು 09 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿದೆ. ಉದ್ಯೋಗ ‌ಮೇಳಕ್ಕೂ‌ ಮುನ್ನ ಎಷ್ಟು ಕುಟುಂಬದಲ್ಲಿ ಕೆಲಸ ಇದೆ. ಎಷ್ಟರಲ್ಲಿ ಕೆಲಸವಿಲ್ಲ ಎಂಬ ಮಾಹಿತಿ ಸಂಗ್ರಹಿಸಲಾಗುವುದು. ಹಾಗಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಎಂದರು. ಇದುವರೆಗೂ ಉದ್ಯೋಗ ಮೇಳಕ್ಕೆ 50 ಕಂಪನಿಗಳು ನೊಂದಣಿಯಾಗಿದೆ. 100 ಕ್ಕೂ ಅಧಿಕ ಕಂಪನಿಗಳು‌ ನೋಂದಣಿಯಾಗುವ ನಿರೀಕ್ಷೆ ಇದೆ.</p>



<p><br>ಈ ವರೆಗೆ 1110 ಉದ್ಯೋಗಾಂಕ್ಷಿಗಳು ನೊಂದಣಿಯಾಗಿದ್ದಾರೆ. ಇನ್ನು ನೋಂದಣಿ ಹೆಚ್ಚಿಸಲು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಮುಖಂಡರು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಇದುವರೆಗೂ ಕಂಪನಿಗಳಿಂದ ಸುಮಾರು 2000 ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಬಂದಿದೆ. ಉದ್ಯೋಗಾಂಕ್ಷಿಗಳಿಗೆ ಯಾವುದೇ ತಾಂತ್ರಿಕ ಅಥವಾ ತಾಂತ್ರಿಕೇತರ ಪದವಿ ಹೊಂದಿದ್ದರು ಅರ್ಹರಿಗೆ ತರಬೇತಿಯ ಜೊತೆಗೆ ಉದ್ಯೋಗ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು.</p>



<p><br>ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 100 ನಿಯೋಜಕರು/ಕಂಪನಿಗಳು ಭಾಗವಹಿಸಲ್ಲಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.</p>



<p><br>ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು <a href="https://bangalorerural.nic.in/en/job-fair/5">https://bangalorerural.nic.in/en/job-fair/5</a> ನೋಂದಾಯಿಸಿ ಎಂದರು.</p>



<p><br>ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಸೇರಿದಂತೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಸ್ಥಳೀಯ ಅಧಿಕಾರಿಗಳು , ಸ್ವಚ್ಚತಾ ವಾಹಿನಿ, ಆಟೋಗಳ ಮೂಲಕ ಜಾಗೃತಿ ‌ಮೂಡಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>



<p><br>ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ರಾಜಣ್ಣ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ (ಬಯಪ)ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎ.ಸ್ಪಿ ಸಿ.ಕೆ ಬಾಬಾ, ಎ.ಸಿ ದುರ್ಗಶ್ರೀ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಜರಿದ್ದರು.</p>
]]></content:encoded>
					
		
		
			</item>
	</channel>
</rss>
