<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ರಾಜ್ಯ &#8211; Peepal Media</title>
	<atom:link href="https://peepalmedia.com/category/karnataka/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 29 May 2026 09:46:58 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ರಾಜ್ಯ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ: ಬೆಂಗಳೂರಿನ ಆಸ್ಪತ್ರೆಯಲ್ಲಿ ಮುಂಜಾನೆ ಹೃದಯಾಘಾತದಿಂದ ನಿಧನ</title>
		<link>https://peepalmedia.com/former-karnataka-minister-and-congress-leader-venkataramanappa-dies-at-80-tumakuru/</link>
		
		<dc:creator><![CDATA[Peepal Media]]></dc:creator>
		<pubDate>Fri, 29 May 2026 09:46:57 +0000</pubDate>
				<category><![CDATA[ತುಮಕೂರು]]></category>
		<guid isPermaLink="false">https://peepalmedia.com/?p=79103</guid>

					<description><![CDATA[ತುಮಕೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮುಂಜಾನೆ ಸುಮಾರು 6 ಗಂಟೆಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮೃತರು ಪ್ರಸ್ತುತ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪುತ್ರ ಎಚ್. ವಿ. ವೆಂಕಟೇಶ್ ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ. [&#8230;]]]></description>
										<content:encoded><![CDATA[
<p class="wp-block-paragraph">ತುಮಕೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.</p>



<p class="wp-block-paragraph">ವಯೋಸಹಜ ಕಾಯಿಲೆಗಳಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮುಂಜಾನೆ ಸುಮಾರು 6 ಗಂಟೆಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮೃತರು ಪ್ರಸ್ತುತ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪುತ್ರ ಎಚ್. ವಿ. ವೆಂಕಟೇಶ್ ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.</p>



<p class="wp-block-paragraph">ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದ ವೆಂಕಟರಮಣಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು ಮತ್ತು ಎರಡು ಬಾರಿ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅವರು 2008 ರಲ್ಲಿ ರೇಷ್ಮೆ ಕೃಷಿ ಮತ್ತು ಸಣ್ಣ ಕೈಗಾರಿಕೆಗಳ ಸಚಿವರಾಗಿ ಹಾಗೂ 2018 ರಲ್ಲಿ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶೋಷಿತ ವರ್ಗಗಳ ಪ್ರಮುಖ ಧ್ವನಿಯಾಗಿದ್ದ ಅವರು, ತಳಮಟ್ಟದ ರಾಜಕೀಯ ಕಾರ್ಯಗಳ ಮೂಲಕ ಪಾವಗಡ ಭಾಗದಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದರು.</p>



<p class="wp-block-paragraph">ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.</p>



<p class="wp-block-paragraph">ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವೆಂಕಟರಮಣಪ್ಪ ಅವರ ನಿಧನವು ತಮಗೆ &#8220;ತೀವ್ರ ನೋವುಂಟು ಮಾಡಿರುವ ನಷ್ಟ&#8221; ಎಂದು ಬಣ್ಣಿಸಿದರು ಮತ್ತು ಅವರೊಬ್ಬ ಸರಳ ಹಾಗೂ ಜನಪರ ನಾಯಕರಾಗಿದ್ದರು ಎಂದು ಸ್ಮರಿಸಿದರು. &#8220;ಅವರು ತಮ್ಮ ಸಾರ್ವಜನಿಕ ಸೇವೆ ಮತ್ತು ಸರಳತೆಯ ಮೂಲಕ ಹೆಸರು ಮಾಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ,&#8221; ಎಂದು ಪ್ರಾರ್ಥಿಸಿದರು.</p>



<p class="wp-block-paragraph">ಸಾಮಾಜಿಕ ಜಾಲತಾಣ &#8216;X&#8217; ನಲ್ಲಿ ಪೋಸ್ಟ್ ಮಾಡಿರುವ ಪರಮೇಶ್ವರ್, &#8220;ಅತ್ಯಂತ ಸರಳ ವ್ಯಕ್ತಿತ್ವದ ವೆಂಕಟರಮಣಪ್ಪ ಅವರು ಶೋಷಿತ ವರ್ಗಗಳ ಹಿರಿಯ ನಾಯಕರಾಗಿದ್ದು, ಹೋರಾಟದ ಬದುಕಿನ ಮೂಲಕ ಮುಂಚೂಣಿಗೆ ಬಂದವರು. ಶಾಸಕರಾಗಿ ಮತ್ತು ಸಚಿವರಾಗಿ ಅವರು ತುಮಕೂರು ಜಿಲ್ಲೆಯ ಜನರ ಅಭಿವೃದ್ಧಿಗಾಗಿ ದಣಿವಿಲ್ಲದೆ ಶ್ರಮಿಸಿ ಶಾಶ್ವತ ಜನಪ್ರಿಯತೆ ಗಳಿಸಿದ್ದರು&#8221; ಎಂದಿದ್ದಾರೆ.</p>



<p class="wp-block-paragraph">ಮುಂದುವರಿದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, &#8220;ಅವರು ಸಚಿವರಾಗಿದ್ದ ಅವಧಿಯಲ್ಲಿ ಶ್ಲಾಘನೀಯ ಕೆಲಸ ಮಾಡಿದ್ದರು. ಅವರ ಮಗ ವೆಂಕಟೇಶ್ ಪಾವಗಡದಿಂದ ಶಾಸಕರಾದ ಮೇಲೂ ಜನ ಇವರನ್ನು ಆತ್ಮೀಯತೆಯಿಂದ ಶಾಸಕರೆಂದೇ ಕರೆಯುತ್ತಿದ್ದರು. ಕ್ಷೇತ್ರದಲ್ಲಿ ಅಷ್ಟೊಂದು ಜನಪ್ರಿಯತೆ ಹೊಂದಿದ್ದ ಅವರು ನನಗೂ ಅತ್ಯಂತ ಆಪ್ತರಾಗಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ,&#8221; ಎಂದು ಕಂಬನಿ ಮಿಡಿದರು.</p>
]]></content:encoded>
					
		
		
			</item>
		<item>
		<title>ಮುಂದುವರೆದ ಮುಖ್ಯಮಂತ್ರಿ ಗೊಂದಲ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ತಕ್ಷಣಕ್ಕೆ ಅಂಗೀಕರಿಸದ ರಾಜ್ಯಪಾಲ ಗೆಹ್ಲೋತ್‌</title>
		<link>https://peepalmedia.com/karnataka-governor-gehlot-not-yet-accepted-siddaramaiah-resignation-fresh-summons-likely/</link>
		
		<dc:creator><![CDATA[Peepal Media]]></dc:creator>
		<pubDate>Fri, 29 May 2026 03:07:57 +0000</pubDate>
				<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=79097</guid>

					<description><![CDATA[ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಾಜೀನಾಮೆಯನ್ನು ಗುರುವಾರ ತಡರಾತ್ರಿವರೆಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅಂಗೀಕರಿಸಿಲ್ಲ. ಹೀಗಾಗಿ ಶುಕ್ರವಾರ ಮತ್ತೊಮ್ಮೆ ಮುಖ್ಯಮಂತ್ರಿಯವರನ್ನು ಖುದ್ದಾಗಿ ಲೋಕಭವನಕ್ಕೆ ಕರೆಯಿಸಿಕೊಂಡು ಸ್ಪಷ್ಟನೆ ಕೇಳಿದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಪತ್ನಿಯ ಅನಾರೋಗ್ಯದ ಕಾರಣ ಬುಧವಾರ ರಾತ್ರಿ ಇಂದೋರ್‌ಗೆ ತೆರಳಿದ್ದ ರಾಜ್ಯಪಾಲರು, ಗುರುವಾರ ರಾತ್ರಿ ಬೆಂಗಳೂರಿಗೆ ಮರಳಿದರು. ಅವರು ಬಂದ ತಕ್ಷಣವೇ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ತಮ್ಮ ಸಂಪುಟ ಸಹೋದ್ಯೋಗಿಗಳು [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಾಜೀನಾಮೆಯನ್ನು ಗುರುವಾರ ತಡರಾತ್ರಿವರೆಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅಂಗೀಕರಿಸಿಲ್ಲ. ಹೀಗಾಗಿ ಶುಕ್ರವಾರ ಮತ್ತೊಮ್ಮೆ ಮುಖ್ಯಮಂತ್ರಿಯವರನ್ನು ಖುದ್ದಾಗಿ ಲೋಕಭವನಕ್ಕೆ ಕರೆಯಿಸಿಕೊಂಡು ಸ್ಪಷ್ಟನೆ ಕೇಳಿದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.</p>



<p class="wp-block-paragraph">ಪತ್ನಿಯ ಅನಾರೋಗ್ಯದ ಕಾರಣ ಬುಧವಾರ ರಾತ್ರಿ ಇಂದೋರ್‌ಗೆ ತೆರಳಿದ್ದ ರಾಜ್ಯಪಾಲರು, ಗುರುವಾರ ರಾತ್ರಿ ಬೆಂಗಳೂರಿಗೆ ಮರಳಿದರು. ಅವರು ಬಂದ ತಕ್ಷಣವೇ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ತಮ್ಮ ಸಂಪುಟ ಸಹೋದ್ಯೋಗಿಗಳು ಹಾಗೂ ಶಾಸಕರೊಂದಿಗೆ ಆಗಮಿಸಿದ್ದ ಸಿಎಂ, ತಾವು ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು. ಆದರೆ, ತಮ್ಮ ಅನುಪಸ್ಥಿತಿಯಲ್ಲಿ ಸಲ್ಲಿಕೆಯಾಗಿದ್ದ ಈ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ತಕ್ಷಣಕ್ಕೆ ಅಂಗೀಕರಿಸದೆ ಕಾಯ್ದಿರಿಸಿದ್ದಾರೆ.</p>



<p class="wp-block-paragraph"><strong>ಉಪರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಬ್ಯುಸಿ:</strong> ಶುಕ್ರವಾರ ಬೆಳಗ್ಗೆ 7.30ಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ಬರಮಾಡಿಕೊಳ್ಳಲಿರುವ ರಾಜ್ಯಪಾಲರು, ನಂತರ &#8216;ಆರ್ಟ್‌ ಆಫ್‌ ಲಿವಿಂಗ್‌&#8217; ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲೂ ಉಪರಾಷ್ಟ್ರಪತಿಗಳ ಜೊತೆ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲ ಪ್ರವಾಸಗಳನ್ನು ಮುಗಿಸಿಕೊಂಡು ಸಂಜೆ 4.30ರ ವೇಳೆಗೆ ಅವರು ಬೆಂಗಳೂರಿನ ಲೋಕಭವನಕ್ಕೆ ಮರಳಲಿದ್ದಾರೆ.</p>



<p class="wp-block-paragraph"><strong>ಖುದ್ದಾಗಿ ರಾಜೀನಾಮೆ ಸಲ್ಲಿಸಲು ಬುಲಾವ್ ಸಾಧ್ಯತೆ:</strong> ರಾಜ್ಯಪಾಲರು ಬೆಂಗಳೂರಿಗೆ ಮರಳುವಷ್ಟರಲ್ಲಿ ಸಿಎಂ ಸಿದ್ದರಾಮಯ್ಯ ಅವರು ನವದೆಹಲಿಯಿಂದ ವಾಪಸ್ ಆಗಿದ್ದರೆ, ಅವರನ್ನು ಲೋಕಭವನಕ್ಕೆ ಕರೆಯಿಸಿಕೊಳ್ಳುವ ಸಾಧ್ಯತೆಯಿದೆ. ನಿಯಮಾವಳಿಗಳ ಪ್ರಕಾರ ಸಕ್ಷಮ ಪ್ರಾಧಿಕಾರವಾದ ರಾಜ್ಯಪಾಲರ ಮುಂದೆ ಮುಖ್ಯಮಂತ್ರಿಯೇ ಖುದ್ದಾಗಿ ಹಾಜರಾಗಿ ರಾಜೀನಾಮೆ ಸಲ್ಲಿಸಬೇಕಿರುವುದರಿಂದ, ಮತ್ತೊಮ್ಮೆ ಬರುವಂತೆ ಆಹ್ವಾನ ನೀಡಬಹುದು ಎನ್ನಲಾಗಿದೆ. ಗುರುವಾರ ರಾಜೀನಾಮೆ ಪತ್ರ ನೀಡಿ ಲೋಕಭವನದ ಆತಿಥ್ಯವನ್ನೂ ಸ್ವೀಕರಿಸದೆ ನಿರ್ಗಮಿಸಿದ್ದ ಸಿಎಂ ಅವರಿಗೆ, ಶುಕ್ರವಾರ ರಾಜ್ಯಪಾಲರೇ ಆತಿಥ್ಯ ನೀಡುವ ಸಂಭವವೂ ಇದೆ ಎಂದು ಮೂಲಗಳು ತಿಳಿಸಿವೆ.</p>



<p class="wp-block-paragraph"><strong>ರಾಜ್ಯಪಾಲರ ನಡೆಗೆ ಸಿದ್ದರಾಮಯ್ಯ ತೀವ್ರ ಬೇಸರ:</strong> ರಾಜೀನಾಮೆ ನೀಡಲು ಭೇಟಿಗೆ ಸಾಕಷ್ಟು ಮುಂಚಿತವಾಗಿಯೇ ಸಮಯಾವಕಾಶ ಕೇಳಿದ್ದರೂ ರಾಜ್ಯಪಾಲರು ಬೆಂಗಳೂರಿನಲ್ಲಿ ಲಭ್ಯವಿರಲಿಲ್ಲ ಎಂಬ ಬಗ್ಗೆ ಸಿದ್ದರಾಮಯ್ಯ ತೀವ್ರ ಬೇಸರ ಹೊರಹಾಕಿದ್ದಾರೆ. ಸಚಿವರಿಗಾಗಿ ಹಮ್ಮಿಕೊಂಡಿದ್ದ ಉಪಾಹಾರ ಕೂಟದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಅವರು, &#8220;ಒಂದು ದಿನ ಮುಂಚಿತವಾಗಿಯೇ ಕರೆ ಮಾಡಿ ಭೇಟಿಗೆ ಸಮಯ ನಿಗದಿಪಡಿಸಿಕೊಂಡಿದ್ದರೂ ರಾಜ್ಯಪಾಲರು ಅಲಭ್ಯರಾಗಿದ್ದಾರೆ. ಕೇಂದ್ರದವರೆಲ್ಲ ಉದ್ದೇಶಪೂರ್ವಕವಾಗಿಯೇ ಹೀಗೆಲ್ಲ ಮಾಡುತ್ತಾರೆ, ಇವರ ನಡೆಗಳ ಬಗ್ಗೆ ನಾವೆಲ್ಲರೂ ಎಚ್ಚರದಿಂದ ಇರಬೇಕು&#8221; ಎಂದು ಸಚಿವರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ಇರುವ ಒಬ್ಬ ಒಬಿಸಿ ಮುಖ್ಯಮಂತ್ರಿಯನ್ನೂ ಕೆಳಗಿಳಿಸುವ ಮೂಲಕ ತನ್ನ ಬಣ್ಣ ಬಯಲುಮಾಡಿದೆ: ಪ್ರಲ್ಹಾದ ಜೋಶಿ</title>
		<link>https://peepalmedia.com/rahul-gandhi-treated-siddaramaiah-shabbily-union-minister-pralhad-joshi-karnataka-politics/</link>
		
		<dc:creator><![CDATA[Peepal Media]]></dc:creator>
		<pubDate>Fri, 29 May 2026 02:26:47 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<guid isPermaLink="false">https://peepalmedia.com/?p=79086</guid>

					<description><![CDATA[ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ನಡೆಸಿಕೊಂಡ ರೀತಿ ಸರಿಯಲ್ಲ. ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ರಾಜೀವ್ ಗಾಂಧಿ ಅವಮಾನಿಸಿದ್ದರು, ಈಗ ಅದೇ ರೀತಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ಅತ್ಯಂತ ಕೀಳಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಟೀಕಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಜೋಶಿ, &#8220;ಕಾಂಗ್ರೆಸ್ ಅಧಿಕಾರದಲ್ಲಿರುವ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಮೇಲ್ಜಾತಿಯ ಮುಖ್ಯಮಂತ್ರಿಗಳಿದ್ದಾರೆ. ಕಾಂಗ್ರೆಸ್ ನಾಯಕರು ಸದಾ &#8216;ಒಬಿಸಿ [&#8230;]]]></description>
										<content:encoded><![CDATA[
<p class="wp-block-paragraph">ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ನಡೆಸಿಕೊಂಡ ರೀತಿ ಸರಿಯಲ್ಲ. ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ರಾಜೀವ್ ಗಾಂಧಿ ಅವಮಾನಿಸಿದ್ದರು, ಈಗ ಅದೇ ರೀತಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ಅತ್ಯಂತ ಕೀಳಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಟೀಕಿಸಿದ್ದಾರೆ.</p>



<p class="wp-block-paragraph">ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಜೋಶಿ, &#8220;ಕಾಂಗ್ರೆಸ್ ಅಧಿಕಾರದಲ್ಲಿರುವ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಮೇಲ್ಜಾತಿಯ ಮುಖ್ಯಮಂತ್ರಿಗಳಿದ್ದಾರೆ. ಕಾಂಗ್ರೆಸ್ ನಾಯಕರು ಸದಾ &#8216;ಒಬಿಸಿ ಮಂತ್ರ&#8217; ಜಪಿಸುತ್ತಾರೆ, ಆದರೆ ಈಗ ಅಧಿಕಾರದಲ್ಲಿದ್ದ ಏಕೈಕ ಒಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ,&#8221; ಎಂದರು.</p>



<p class="wp-block-paragraph">&#8220;ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ನಾವು ಅಸ್ಥಿರತೆ, ಸಂಪೂರ್ಣ ಕಾನೂನುಬಾಹಿರತೆ ಮತ್ತು ಗೊಂದಲದ ಗೂಡಾಗಿರುವ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಏನಾಗಲಿದೆ ಎಂದು ನಾನು ಈಗಲೇ ಊಹಿಸಲು ಸಾಧ್ಯವಿಲ್ಲ,&#8221; ಎಂದು ಅವರು ಹೇಳಿದರು.</p>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿ ಬದಲಾವಣೆ &#124; ಮುಂದಿನ ಸಲ ಕಾಂಗ್ರೆಸ್‌ 40 ಸೀಟು ಗೆಲ್ಲುವುದಕ್ಕೂ ಪರದಾಡಲಿದೆ: ಲಖನ್‌ ಜಾರಕಿಹೊಳಿ</title>
		<link>https://peepalmedia.com/slug-congress-will-pay-heavy-price-for-removing-siddaramaiah-lakhan-jarkiholi-karnataka-politics/</link>
		
		<dc:creator><![CDATA[Peepal Media]]></dc:creator>
		<pubDate>Fri, 29 May 2026 02:22:42 +0000</pubDate>
				<category><![CDATA[ಬೆಳಗಾವಿ]]></category>
		<guid isPermaLink="false">https://peepalmedia.com/?p=79083</guid>

					<description><![CDATA[ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಅಧಿಕಾರದಿಂದ ಕೆಳಗಿಳಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಜೇನುಗೂಡಿಗೆ ಕೈಹಾಕಿದೆ ಎಂದು ವಿಧಾನ ಪರಿಷತ್ ಸದಸ್ಯ (ಎಮ್‌ಎಲ್‌ಸಿ) ಲಖನ್ ಜಾರಕಿಹೊಳಿ ಗುರುವಾರ ಹೇಳಿದ್ದಾರೆ. ಹೈಕಮಾಂಡ್‌ನ ಈ ನಿರ್ಧಾರವು 2028 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಧೂಳೀಪಟ ಮಾಡಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಮಾತನಾಡಿರುವ ಲಖನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನವು ಕಾಂಗ್ರೆಸ್‌ನ ಪತನಕ್ಕೆ ನಾಂದಿ ಹಾಡಲಿದೆ. ಈ ದುರದೃಷ್ಟಕರ ಬೆಳವಣಿಗೆಯು ರಾಜ್ಯದಲ್ಲಿ &#8216;ಅಹಿಂದ&#8217; [&#8230;]]]></description>
										<content:encoded><![CDATA[
<p class="wp-block-paragraph">ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಅಧಿಕಾರದಿಂದ ಕೆಳಗಿಳಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಜೇನುಗೂಡಿಗೆ ಕೈಹಾಕಿದೆ ಎಂದು ವಿಧಾನ ಪರಿಷತ್ ಸದಸ್ಯ (ಎಮ್‌ಎಲ್‌ಸಿ) ಲಖನ್ ಜಾರಕಿಹೊಳಿ ಗುರುವಾರ ಹೇಳಿದ್ದಾರೆ.</p>



<p class="wp-block-paragraph">ಹೈಕಮಾಂಡ್‌ನ ಈ ನಿರ್ಧಾರವು 2028 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಧೂಳೀಪಟ ಮಾಡಲಿದೆ ಎಂದು ಅವರು ಎಚ್ಚರಿಸಿದ್ದಾರೆ.</p>



<p class="wp-block-paragraph">ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಮಾತನಾಡಿರುವ ಲಖನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನವು ಕಾಂಗ್ರೆಸ್‌ನ ಪತನಕ್ಕೆ ನಾಂದಿ ಹಾಡಲಿದೆ. ಈ ದುರದೃಷ್ಟಕರ ಬೆಳವಣಿಗೆಯು ರಾಜ್ಯದಲ್ಲಿ &#8216;ಅಹಿಂದ&#8217; (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ಚಳವಳಿಯನ್ನು ಹತ್ತಿಕ್ಕಿದಂತಾಗಿದೆ ಎಂದು ಪ್ರತಿಪಾದಿಸಿದ್ದಾರೆ.</p>



<p class="wp-block-paragraph">&#8220;ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗುವ ಜೊತೆಯಲ್ಲೇ ರಾಜ್ಯದ ಹಣಕಾಸು ಶಿಸ್ತನ್ನು ಅತ್ಯಂತ ಸಮರ್ಥವಾಗಿ ಕಾಪಾಡಿಕೊಂಡಿದ್ದರು. ಆದರೆ ಅವರ ನಿರ್ಗಮನದ ನಂತರ ಈ ಗ್ಯಾರಂಟಿ ಕಾರ್ಯಕ್ರಮಗಳು ದೀರ್ಘಕಾಲ ಮುಂದುವರಿಯುವುದಿಲ್ಲ. ಕಾಂಗ್ರೆಸ್ ನಾಯಕರಾದ ಕೆ. ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕದ ವಾಸ್ತವ ಸಮಸ್ಯೆಗಳ ಅರಿವೇ ಇಲ್ಲ. ಅವರೇ ಶ್ರಮಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದೇವೆ ಎಂದು ಅವರು ಭ್ರಮೆಯಲ್ಲಿದ್ದಾರೆ,&#8221; ಎಂದು ಲಖನ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.</p>



<p class="wp-block-paragraph">&#8220;ಮುಂದಿನ 2028 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ 40 ಸೀಟುಗಳನ್ನು ಗೆಲ್ಲಲು ಸಹ ಪರದಾಡಬೇಕಾಗುತ್ತದೆ. ಹಿಂದೆ ಬಿಎಸ್‌ವೈ ಅವರನ್ನು ಬಲವಂತವಾಗಿ ರಾಜೀನಾಮೆ ಕೊಡಿಸಿ ಬಿಜೆಪಿ ಹೇಗೆ ಭಾರಿ ಬೆಲೆ ತೆತ್ತಿತ್ತೋ, ಈಗ ಕಾಂಗ್ರೆಸ್ ಕೂಡ ಅದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲಿದೆ. ಒಬ್ಬ ಜನಪ್ರಿಯ ಸಮೂಹ ನಾಯಕನನ್ನು (ಮಾಸ್ ಲೀಡರ್) ಅಧಿಕಾರದಿಂದ ತೆಗೆದುಹಾಕುವುದನ್ನು ರಾಜ್ಯದ ಜನತೆ ಎಂದಿಗೂ ಸಹಿಸುವುದಿಲ್ಲ,&#8221; ಎಂದು ಅವರು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಲೋಕಾಯುಕ್ತ ವಿರುದ್ಧ ಸುಳ್ಳು ಭ್ರಷ್ಟಾಚಾರದ ಆರೋಪ: ಮಂಡ್ಯ ಸಂಘಟನೆಯೊಂದರ ಮುಖಂಡನ ವಿರುದ್ಧ ಉಪ ಲೋಕಾಯುಕ್ತರಿಂದ ಸುಮೊಟೊ ಕೇಸ್</title>
		<link>https://peepalmedia.com/upa-lokayukta-b-veerappa-registers-suo-motu-case-against-mandya-activist-nagannagowda/</link>
		
		<dc:creator><![CDATA[Peepal Media]]></dc:creator>
		<pubDate>Fri, 29 May 2026 02:18:55 +0000</pubDate>
				<category><![CDATA[ಮಂಡ್ಯ]]></category>
		<guid isPermaLink="false">https://peepalmedia.com/?p=79080</guid>

					<description><![CDATA[ಮಂಡ್ಯದ ಕರುನಾಡ ಸೇವಕರ ಸಂಘದ ಮುಖಂಡ ಎಂ. ಬಿ. ನಾಗಣ್ಣಗೌಡ ಅವರ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ನಾಗಣ್ಣಗೌಡ ಅವರು ಆರೋಪ ಮಾಡಿದ್ದರು. ಸಂಘಟನೆಯ ಮುಖಂಡರು ಯಾವುದೇ ಪೂರಕ ದಾಖಲೆಗಳನ್ನು ನೀಡದೆ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ [&#8230;]]]></description>
										<content:encoded><![CDATA[
<p class="wp-block-paragraph">ಮಂಡ್ಯದ ಕರುನಾಡ ಸೇವಕರ ಸಂಘದ ಮುಖಂಡ ಎಂ. ಬಿ. ನಾಗಣ್ಣಗೌಡ ಅವರ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ನಾಗಣ್ಣಗೌಡ ಅವರು ಆರೋಪ ಮಾಡಿದ್ದರು.</p>



<p class="wp-block-paragraph">ಸಂಘಟನೆಯ ಮುಖಂಡರು ಯಾವುದೇ ಪೂರಕ ದಾಖಲೆಗಳನ್ನು ನೀಡದೆ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ದೂರು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿರುವ ಒಂದು ಪಿತೂರಿಯಾಗಿದೆ ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.</p>



<p class="wp-block-paragraph">ಈ ಪ್ರಕರಣದ ವಿಚಾರಣೆಯನ್ನು ಜೂನ್ 1 ಕ್ಕೆ ನಿಗದಿಪಡಿಸಲಾಗಿದೆ. ಆದೇಶದ ಪ್ರತಿಯನ್ನು ಗೃಹ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗಿದೆ.</p>



<p class="wp-block-paragraph">ಇದೇ ವೇಳೆ, ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುವಲ್ಲಿ ವಕೀಲರೊಬ್ಬರು ಶಾಮೀಲಾಗಿದ್ದಾರೆ ಎಂದು ಸಂಘಟನೆಯು ಸುಳ್ಳು ಆರೋಪ ಮಾಡಿದೆ ಎಂದು ವಿವರಿಸಿರುವ ಜಿಲ್ಲಾ ವಕೀಲರ ಸಂಘವು, ಎಸ್‌ಪಿ (ಸೂಪರಿಂಟೆಂಡೆಂಟ್ ಆಫ್ ಪೊಲೀಸ್) ಅವರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.</p>
]]></content:encoded>
					
		
		
			</item>
		<item>
		<title>ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ಡಿಕೆಶಿ ಪಟ್ಟಕ್ಕೆ ಅಧಿಕೃತವಾಗಿ ವೇದಿಕೆ ಫಿಕ್ಸ್</title>
		<link>https://peepalmedia.com/siddaramaiah-resigns-as-cm-ka/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 May 2026 10:01:48 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=79065</guid>

					<description><![CDATA[ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಉಂಟಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಹುದ್ದೆಗೆ ಅಧಿಕೃತ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಾಗೂ ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆ, ಮಾತುಕತೆಗಳ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಡೀ ಸಚಿವ [&#8230;]]]></description>
										<content:encoded><![CDATA[
<p class="wp-block-paragraph">ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಉಂಟಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಹುದ್ದೆಗೆ ಅಧಿಕೃತ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಾಗೂ ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆ, ಮಾತುಕತೆಗಳ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.</p>



<p class="wp-block-paragraph">ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು.</p>



<p class="wp-block-paragraph">ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಡೀ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಜೊತೆಯಲ್ಲೇ ಇದ್ದು ಐಕ್ಯತೆ ಪ್ರದರ್ಶಿಸಿದರು. ಬೆಳಗ್ಗೆ ನಡೆದ ಸಚಿವ ಸಂಪುಟದ ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರ ಘೋಷಿಸಿದಾಗ ಭಾವುಕ ವಾತಾವರಣ ನಿರ್ಮಾಣವಾಯಿತು.</p>



<p class="wp-block-paragraph">ಸ್ವತಃ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಸೂಚಿಸಿರುವುದು ವಿಶೇಷ. ಹೊಸ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.</p>



<p class="wp-block-paragraph">ಇದೇ ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಅಧಿಕೃತ ಆಯ್ಕೆ ನಡೆಯಲಿದ್ದು, ಮೇ ೩೦ ರಂದು ಶಪಥ ಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ.</p>



<p class="wp-block-paragraph">ಕರ್ನಾಟಕ ಕಾಂಗ್ರೆಸ್‌ನಲ್ಲಿ ದೀರ್ಘಕಾಲದಿಂದ ನಡೆದುಬಂದ ನಾಯಕತ್ವ ಪ್ರಶ್ನೆ ಅಂತಿಮ ಹಂತ ತಲುಪಿದ್ದು, ರಾಜ್ಯ ರಾಜಕೀಯದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.</p>



<p class="wp-block-paragraph"><strong>ರಾಜ್ಯಪಾಲರ ಗೈರಿನಲ್ಲಿ ರಾಜಭವನ ಕ್ರಿಯೆ</strong><br>ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಶಿಷ್ಟ ಸ್ಥಿತಿ ನಿರ್ಮಾಣವಾಯಿತು. ಸಿದ್ದರಾಮಯ್ಯ ಅವರು ಖುದ್ದಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರ ಕೈಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಈ ರಾಜೀನಾಮೆ ಪ್ರಕ್ರಿಯೆ ಸಾಂವಿಧಾನಿಕ ಕ್ರಮದಂತೆ ನಡೆದಿದ್ದು ನ್ಯಾಯಸಮ್ಮತ ಎಂದು ಕಾನೂನು ತಜ್ಞರು ಸ್ಪಷ್ಟಪಡಿಸಿದ್ದಾರೆ.</p>



<p class="wp-block-paragraph"><strong>ಡಿಕೆಶಿ ಅವರ ನೇತೃತ್ವ ಬಹುತೇಕ ಖಚಿತ</strong><br>ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ಶಾಸಕಾಂಗ ಪಕ್ಷ ಸಭೆ ನಾಳೆ ನಡೆಯಲಿದ್ದು, ಹೈಕಮಾಂಡ್ ಪ್ರತಿನಿಧಿ ಸಮ್ಮುಖದಲ್ಲಿ ನೂತನ ನಾಯಕ ಆಯ್ಕೆ ನಡೆಯಲಿದೆ. ಮೇ ೩೦ರಂದು ಶಪಥ ಸ್ವೀಕಾರ ನಿರೀಕ್ಷಿಸಲಾಗಿದೆ.</p>



<p class="wp-block-paragraph">ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ೨೦೨೩ರಲ್ಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆ ಬಗ್ಗೆ ತಿಕ್ಕಾಟ ನಡೆದಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಅವರು ಮೊದಲ ಅರ್ಧ ಅವಧಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಒಪ್ಪಂದ ನಡೆದಿತ್ತು. ಆ ಆಂತರಿಕ ಒಡಂಬಡಿಕೆ ಈಗ ಜಾರಿಗೆ ಬಂದಿದ್ದು, ರಾಜ್ಯ ರಾಜಕೀಯ ಹೊಸ ತಿರುವು ತೆಗೆದುಕೊಂಡಿದೆ.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ರಾಜೀನಾಮೆ, ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಎಂದು ಸಿದ್ದರಾಮಯ್ಯರಿಂದಲೇ ಘೋಷಣೆ</title>
		<link>https://peepalmedia.com/siddaramaiah-himself-announced-that-shivakumar-will-be-the-next-cm/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 May 2026 07:23:54 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=79061</guid>

					<description><![CDATA[ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಘೋಷಿಸಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಈ ಮಹತ್ವದ ಘೋಷಣೆ ನಡೆದಿರುವುದಾಗಿ ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಾನು ಯಾವುದೇ ಒತ್ತಡಕ್ಕೆ ಒಳಗಾಗಿ ಅಲ್ಲ, ಸ್ವಇಚ್ಛೆಯಿಂದಲೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ” ಎಂದು ಸಚಿವರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಘೋಷಿಸಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಈ ಮಹತ್ವದ ಘೋಷಣೆ ನಡೆದಿರುವುದಾಗಿ ತಿಳಿದುಬಂದಿದೆ.</p>



<p class="wp-block-paragraph">ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಾನು ಯಾವುದೇ ಒತ್ತಡಕ್ಕೆ ಒಳಗಾಗಿ ಅಲ್ಲ, ಸ್ವಇಚ್ಛೆಯಿಂದಲೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ” ಎಂದು ಸಚಿವರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಸ್ತಾವನೆಗೆ ಸಭೆಯಲ್ಲಿದ್ದ ಎಲ್ಲಾ ಸಚಿವರು ಒಮ್ಮತದಿಂದ ಬೆಂಬಲ ಸೂಚಿಸಿರುವ ಮಾಹಿತಿ ಲಭ್ಯವಾಗಿದೆ.</p>



<p class="wp-block-paragraph">ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ. ಕಳೆದ ಕೆಲವು ವಾರಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದವು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿದ್ದರೂ, ಇದೀಗ ಹೈಕಮಾಂಡ್ ಮಧ್ಯಸ್ಥಿಕೆಯಿಂದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.</p>



<p class="wp-block-paragraph">ರಾಜಕೀಯ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:30ಕ್ಕೆ ದೆಹಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರೊಂದಿಗೆ ಅಂತಿಮ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅವರ ರಾಜೀನಾಮೆ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಕೃತ ಕ್ರಮಗಳು ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ.</p>



<p class="wp-block-paragraph">ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಭೆಯ ಬಳಿಕ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡಿರುವ ಭಾವನಾತ್ಮಕ ಕ್ಷಣಗಳು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಪ್ರಮುಖ ಚರ್ಚೆಯ ವಿಚಾರವಾಗಿದೆ.</p>



<p class="wp-block-paragraph">ಶುಕ್ರವಾರ (ಮೇ 29) ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಲಿದ್ದಾರೆ.</p>



<p class="wp-block-paragraph">ಈ ಬೆಳವಣಿಗೆಯೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್‌ರಚನೆ, ಅಧಿಕಾರ ಹಂಚಿಕೆ ಹಾಗೂ ಪ್ರಾದೇಶಿಕ ಸಮತೋಲನದ ಪ್ರಶ್ನೆಗಳು ಪ್ರಮುಖ ಚರ್ಚೆಯಾಗುವ ಸಾಧ್ಯತೆ ಇದೆ.</p>
]]></content:encoded>
					
		
		
			</item>
		<item>
		<title>ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ತಡೆ ಇಲ್ಲ: ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಮುಂದೂಡಿಕೆ</title>
		<link>https://peepalmedia.com/there-is-no-stay-on-timarodis-deportation-order-high-court/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 May 2026 01:54:59 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=79035</guid>

					<description><![CDATA[ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿರುವ ಗಡೀಪಾರು ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲು ಕರ್ನಾಟಕ ಹೈಕೋರ್ಟ್ ರಜಾಕಾಲದ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿ ಗಡೀಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಅಲ್ಲದೆ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿತ್ತು. ಈ [&#8230;]]]></description>
										<content:encoded><![CDATA[
<p class="wp-block-paragraph">ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿರುವ ಗಡೀಪಾರು ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲು ಕರ್ನಾಟಕ ಹೈಕೋರ್ಟ್ ರಜಾಕಾಲದ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ.</p>



<p class="wp-block-paragraph">ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿ ಗಡೀಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಅಲ್ಲದೆ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿತ್ತು.</p>



<p class="wp-block-paragraph">ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ವಿಭಾಗೀಯ ನ್ಯಾಯಪೀಠದ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ಅರ್ಜಿ ವಿಚಾರಣೆಗೆ ಬಂದಿತು.</p>



<p class="wp-block-paragraph">ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್, ಗಡೀಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಏಕಸದಸ್ಯ ನ್ಯಾಯಪೀಠದ ಸೂಚನೆಯಂತೆ ಮೊದಲು ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ಅದನ್ನು ಬಿಟ್ಟು ನೇರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತ ಕ್ರಮವಲ್ಲ ಎಂದು ವಾದಿಸಿದರು.</p>



<p class="wp-block-paragraph">ಸರ್ಕಾರದ ವಾದವನ್ನು ಪರಿಗಣಿಸಿದ ನ್ಯಾಯಪೀಠ, ಈ ಹಂತದಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತು. ಜೊತೆಗೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಪುತ್ತೂರು ಉಪವಿಭಾಗಾಧಿಕಾರಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿತು.</p>



<p class="wp-block-paragraph">ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆ ಹಾಗೂ ನ್ಯಾಯಕ್ಕಾಗಿ ಕಳೆದ ಹಲವು ವರ್ಷಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ಹೋರಾಟ ನಡೆಸುತ್ತಿದ್ದು, ಅವರ ವಿರುದ್ಧದ ಗಡೀಪಾರು ಆದೇಶ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ? ದೆಹಲಿ ಸಭೆ ಬಳಿಕ ಮಿಡ್‌ನೈಟ್ ಮೀಟಿಂಗ್!</title>
		<link>https://peepalmedia.com/countdown-to-siddaramaiahs-resignation/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 27 May 2026 02:03:40 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=79005</guid>

					<description><![CDATA[ಬೆಂಗಳೂರು: ದೆಹಲಿಯಲ್ಲಿ ಸುಮಾರು ಆರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್ ಸಭೆ ಮುಗಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾತ್ರಿ 12 ಗಂಟೆ ಸುಮಾರಿಗೆ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರ ಸ್ವಾಗತಕ್ಕೆ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಜಮೀರ್ ಉಪಸ್ಥಿತರಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಸಿಎಂ ನಿವಾಸ ಕಾವೇರಿಗೆ ತೆರಳಿದ ಸಿದ್ದರಾಮಯ್ಯ ಅವರು, ಆಪ್ತ ಸಚಿವರೊಂದಿಗೆ ಮಿಡ್‌ನೈಟ್ ಮೀಟಿಂಗ್ ನಡೆಸಿದರು. ಪರಮೇಶ್ವರ್, ದಿನೇಶ್ ಗುಂಡೂರಾವ್, ಅಶೋಕ್ ಪಟ್ಟಣ್, ಎಂ.ಸಿ. ಸುಧಾಕರ್, ಕೃಷ್ಣಬೈರೇಗೌಡ, ಶಾಸಕ ರಿಜ್ವಾನ್ ಹಾಗೂ [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು: ದೆಹಲಿಯಲ್ಲಿ ಸುಮಾರು ಆರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್ ಸಭೆ ಮುಗಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾತ್ರಿ 12 ಗಂಟೆ ಸುಮಾರಿಗೆ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರ ಸ್ವಾಗತಕ್ಕೆ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಜಮೀರ್ ಉಪಸ್ಥಿತರಿದ್ದರು.</p>



<p class="wp-block-paragraph">ವಿಮಾನ ನಿಲ್ದಾಣದಿಂದ ನೇರವಾಗಿ ಸಿಎಂ ನಿವಾಸ ಕಾವೇರಿಗೆ ತೆರಳಿದ ಸಿದ್ದರಾಮಯ್ಯ ಅವರು, ಆಪ್ತ ಸಚಿವರೊಂದಿಗೆ ಮಿಡ್‌ನೈಟ್ ಮೀಟಿಂಗ್ ನಡೆಸಿದರು. ಪರಮೇಶ್ವರ್, ದಿನೇಶ್ ಗುಂಡೂರಾವ್, ಅಶೋಕ್ ಪಟ್ಟಣ್, ಎಂ.ಸಿ. ಸುಧಾಕರ್, ಕೃಷ್ಣಬೈರೇಗೌಡ, ಶಾಸಕ ರಿಜ್ವಾನ್ ಹಾಗೂ ಬೈರತಿ ಸುರೇಶ್ ಸಭೆಯಲ್ಲಿ ಭಾಗವಹಿಸಿದರು. ದೆಹಲಿ ಬೆಳವಣಿಗೆ ಮತ್ತು ಮುಂದಿನ ನಿರ್ಧಾರದ ಕುರಿತು ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.</p>



<p class="wp-block-paragraph"><strong>ದೆಹಲಿಯಲ್ಲಿ ಏನು ನಡೆಯಿತು?</strong><br>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಯಿತು. ಸಿದ್ದರಾಮಯ್ಯ ಅವರಿಗೆ ಹಲವು ಆಫರ್‌ಗಳನ್ನು ನೀಡಿದ ಬಳಿಕ ರಾಜೀನಾಮೆಗೆ ಒಪ್ಪಿಗೆ ಸಿಕ್ಕಿದೆ ಎನ್ನಲಾಗುತ್ತಿದೆ.</p>



<p class="wp-block-paragraph"><strong>ಮುಂದೇನು?</strong><br>ಇಂದು ರಾಜ್ಯಕ್ಕೆ ಆಗಮಿಸುವ ಸುರ್ಜೇವಾಲಾ ಮತ್ತು ವೇಣುಗೋಪಾಲ್ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಳೆ ಗುರುವಾರ ಕೊನೆಯ ಸಂಪುಟ ಸಭೆ ನಡೆಸಿ, ಶುಕ್ರವಾರ ಸುದ್ದಿಗೋಷ್ಠಿ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.</p>
]]></content:encoded>
					
		
		
			</item>
		<item>
		<title>ಕಾವೇರಿ ನದಿ ನೀರಿನ ವಿಚಾರ ಮತ್ತೆ ಮುನ್ನೆಲೆಗೆ: ಮೇಕೆದಾಟು ಯೋಜನೆಗೆ ಅನುಮತಿ ಬೇಡ &#8211; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್</title>
		<link>https://peepalmedia.com/dont-allow-mekedatu-project-letter-to-the-p-m/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 27 May 2026 01:39:46 +0000</pubDate>
				<category><![CDATA[ದೇಶ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=78988</guid>

					<description><![CDATA[ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಮತ್ತೆ ರಾಜಕೀಯ ಮತ್ತು ಕಾನೂನು ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿ ತಮಿಳುನಾಡು ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೆಚ್ಚಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರಧಾನಿ ಅವರಿಗೆ ಪತ್ರ ಬರೆದು, ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆಗೆ ಯಾವುದೇ ಅನುಮತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರಕ್ರಿಯೆಯನ್ನು ವೇಗಗೊಳಿಸಲು ಮುಂದಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. [&#8230;]]]></description>
										<content:encoded><![CDATA[
<p class="wp-block-paragraph">ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಮತ್ತೆ ರಾಜಕೀಯ ಮತ್ತು ಕಾನೂನು ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿ ತಮಿಳುನಾಡು ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೆಚ್ಚಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರಧಾನಿ ಅವರಿಗೆ ಪತ್ರ ಬರೆದು, ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆಗೆ ಯಾವುದೇ ಅನುಮತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ.</p>



<p class="wp-block-paragraph">ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರಕ್ರಿಯೆಯನ್ನು ವೇಗಗೊಳಿಸಲು ಮುಂದಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಡಿಪಿಆರ್ ಸಿದ್ಧಗೊಂಡಿದ್ದು, ಶೀಘ್ರದಲ್ಲೇ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಘೋಷಿಸಿದ್ದರು. ಜೊತೆಗೆ, ಕೇಂದ್ರ ಸರ್ಕಾರ ಅನುಮೋದನೆ ನೀಡಿದ ತಕ್ಷಣ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.</p>



<p class="wp-block-paragraph">ಈ ಬೆಳವಣಿಗೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ, ಮೇಕೆದಾಟು ಯೋಜನೆ ಸುಪ್ರೀಂ ಕೋರ್ಟ್ ನೀಡಿರುವ ಕಾವೇರಿ ನೀರು ಹಂಚಿಕೆ ತೀರ್ಪಿನ “ಸ್ಪಷ್ಟ ಉಲ್ಲಂಘನೆ” ಎಂದು ಆರೋಪಿಸಿದೆ. ಮುಖ್ಯಮಂತ್ರಿ ವಿಜಯ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ಹಕ್ಕುಗಳು, ರೈತರ ಹಿತಾಸಕ್ತಿ ಮತ್ತು ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆದಿದೆ ಎಂದು ತಮಿಳುನಾಡು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p>



<p class="wp-block-paragraph">ತಮಿಳುನಾಡು ಸರ್ಕಾರದ ಪ್ರಕಾರ, ಮೇಕೆದಾಟು ಯೋಜನೆಗೆ ವಿರೋಧವಾಗಿ ಈಗಾಗಲೇ 2018 ಮತ್ತು 2022ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಸಲ್ಲಿಸಲಾಗಿತ್ತು. 2025ರ ನವೆಂಬರ್ 13ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಯೋಜನೆಗೆ ಇನ್ನೂ ಯಾವುದೇ ಅಂತಿಮ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಲ್ಲದೆ, ಯೋಜನೆ ಪ್ರಾಥಮಿಕ ಹಂತದಲ್ಲಿದೆ ಎಂದು ಹೇಳಿತ್ತು. ಕೇಂದ್ರ ಜಲ ಆಯೋಗವೇ ಈ ಯೋಜನೆ ನ್ಯಾಯಾಲಯದ ಹಿಂದಿನ ತೀರ್ಪಿನ ವ್ಯಾಪ್ತಿಗೆ ಬರುತ್ತದೆಯೇ ಎಂಬುದನ್ನು ಪರಿಶೀಲಿಸಬೇಕೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.</p>



<p class="wp-block-paragraph">ಇತ್ತ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಕುಡಿಯುವ ನೀರಿನ ಭದ್ರತೆಗೆ ಅತ್ಯವಶ್ಯಕ ಯೋಜನೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಅರಣ್ಯ ಪ್ರದೇಶ ಮುಳುಗಡೆಯಾಗುವ ಹಿನ್ನೆಲೆಯಲ್ಲಿ ಪರ್ಯಾಯ ಭೂಮಿ ಗುರುತಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.</p>



<p class="wp-block-paragraph">ಕಾವೇರಿ ನೀರಿನ ಹಂಚಿಕೆ ವಿಚಾರವು ಹಲವು ದಶಕಗಳಿಂದ ಕರ್ನಾಟಕ ಮತ್ತು ತಮಿಳು ನಾಡು ರಾಜ್ಯಗಳ ನಡುವೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ವಿಷಯ ರಾಜಕೀಯವಾಗಿ ಅತಿಸೂಕ್ಷ್ಮವಾಗಿದ್ದು, ಹಿಂದೆಯೂ ಹಲವು ಬಾರಿ ಪ್ರತಿಭಟನೆಗಳು ಮತ್ತು ಉದ್ವಿಗ್ನ ಪರಿಸ್ಥಿತಿಗಳಿಗೆ ಕಾರಣವಾಗಿತ್ತು. ಇದೀಗ ಮೇಕೆದಾಟು ಯೋಜನೆ ಮತ್ತೆ ಎರಡೂ ರಾಜ್ಯಗಳ ನಡುವೆ ರಾಜಕೀಯ ಮತ್ತು ಕಾನೂನು ಸಂಘರ್ಷವನ್ನು ತೀವ್ರಗೊಳಿಸುವ ಲಕ್ಷಣಗಳು ಕಾಣಿಸುತ್ತಿವೆ.</p>
]]></content:encoded>
					
		
		
			</item>
	</channel>
</rss>
