<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ರಾಜ್ಯ &#8211; Peepal Media</title>
	<atom:link href="https://peepalmedia.com/category/karnataka/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 28 Aug 2026 09:57:58 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ರಾಜ್ಯ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಶಕ್ತಿ ಯೋಜನೆ ಸಾರಿಗೆ ನಿಗಮಗಳಿಗೆ ಇನ್ನೂ ಸಿಗದ &#8211; 5,650 ಕೋಟಿ ಬಾಕಿ ಹಣ</title>
		<link>https://peepalmedia.com/transport-corporations-yet-to-receive-5650-crore-in-outstanding-dues-for-the-shakti-scheme/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 28 Aug 2026 09:57:58 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=84285</guid>

					<description><![CDATA[ಬೆಂಗಳೂರು : ಕರ್ನಾಟಕ ಸರ್ಕಾರದ (Karnataka Govt) ಮಹತ್ವಾಕಾಂಕ್ಷೆಯ ಅಭಯ ಅಭಿಯಾನವಾದ ಶಕ್ತಿ ಯೋಜನೆಯಡಿ (Shakti Scheme) ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ (Transport Corporations) ಬಿಡುಗಡೆಯಾಗಬೇಕಿದ್ದ ಹಣದಲ್ಲಿ ಭಾರಿ ಬಾಕಿ ಉಳಿದುಕೊಂಡಿದೆ. ಯೋಜನೆ ಆರಂಭವಾದಂದಿನಿಂದ 2026ರ ಜುಲೈ ಅಂತ್ಯದವರೆಗೆ ಸರ್ಕಾರದಿಂದ ನಿಗಮಗಳಿಗೆ ಬರೋಬ್ಬರಿ 5,650.95 ಕೋಟಿ ರೂ. ಬರಬೇಕಾಗಿದೆ. ಉಚಿತ ಬಸ್ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಹಣ ಬಿಡುಗಡೆಯಾಗದ ಕಾರಣ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು :</strong> ಕರ್ನಾಟಕ ಸರ್ಕಾರದ (Karnataka Govt) ಮಹತ್ವಾಕಾಂಕ್ಷೆಯ ಅಭಯ ಅಭಿಯಾನವಾದ ಶಕ್ತಿ ಯೋಜನೆಯಡಿ (Shakti Scheme) ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ (Transport Corporations) ಬಿಡುಗಡೆಯಾಗಬೇಕಿದ್ದ ಹಣದಲ್ಲಿ ಭಾರಿ ಬಾಕಿ ಉಳಿದುಕೊಂಡಿದೆ.</p>



<p class="wp-block-paragraph">ಯೋಜನೆ ಆರಂಭವಾದಂದಿನಿಂದ 2026ರ ಜುಲೈ ಅಂತ್ಯದವರೆಗೆ ಸರ್ಕಾರದಿಂದ ನಿಗಮಗಳಿಗೆ ಬರೋಬ್ಬರಿ 5,650.95 ಕೋಟಿ ರೂ. ಬರಬೇಕಾಗಿದೆ. ಉಚಿತ ಬಸ್ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಹಣ ಬಿಡುಗಡೆಯಾಗದ ಕಾರಣ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ.</p>



<p class="wp-block-paragraph">ಇತ್ತೀಚೆಗೆ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ ಲಿಖಿತ ಮಾಹಿತಿಯ ಪ್ರಕಾರ, 2023ರ ಜೂನ್ 11ರಂದು ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ 2026ರ ಜುಲೈ 31ರವರೆಗೆ ನಾಲ್ಕೂ ನಿಗಮಗಳು ಒಟ್ಟು ₹20,955.96 ಕೋಟಿ ವೆಚ್ಚ ಮಾಡಿವೆ. ಆದರೆ, ಸರ್ಕಾರ ಈವರೆಗೆ ₹15,305.01 ಕೋಟಿಯನ್ನಷ್ಟೇ ಬಿಡುಗಡೆ ಮಾಡಿದೆ. ಈ ಬಾಕಿ ಹಣವನ್ನು ತಕ್ಷಣವೇ ನೀಡುವಂತೆ ಸಾರಿಗೆ ಇಲಾಖೆಯು ಹಣಕಾಸು ಇಲಾಖೆಗೆ ಮನವಿ ಸಲ್ಲಿಸಿತ್ತು. ಆದರೆ, ಈಗಾಗಲೇ ಬಜೆಟ್‌ನಲ್ಲಿ ನಿಗದಿಪಡಿಸಿದ ಹಣ ನೀಡಲಾಗಿದೆ ಹಾಗೂ ಇತರ ಮಾರ್ಗಗಳ ಮೂಲಕವೂ ನಿಗಮಗಳಿಗೆ ಅನುದಾನ ಹಂಚಿಕೆಯಾಗಿರುವುದರಿಂದ ಹೆಚ್ಚುವರಿ ಮೊತ್ತ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.</p>



<p class="wp-block-paragraph">ಯೋಜನೆ ಜಾರಿಯಾದ ದಿನದಿಂದ ಉಚಿತವಾಗಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಯೋಜನೆ ಆರಂಭದಿಂದ ಜುಲೈ 2026ರವರೆಗೆ ಸಾರಿಗೆ ನಿಗಮಗಳು ಒಟ್ಟು 797.16 ಕೋಟಿ ಉಚಿತ ಟಿಕೆಟ್‌ಗಳನ್ನು ವಿತರಿಸಿವೆ. ಶಕ್ತಿ ಯೋಜನೆಯ ಜೊತೆಗೆ ವಿದ್ಯಾರ್ಥಿ ಪಾಸ್, ಹೊಸ ಬಸ್‌ಗಳ ಖರೀದಿ, ಸಿಬ್ಬಂದಿ ವೇತನ, ಡೀಸೆಲ್ ವೆಚ್ಚ ಹಾಗೂ ತೆರಿಗೆ ವಿನಾಯಿತಿ ಸೇರಿದಂತೆ ಹಲವು ವಿಭಾಗಗಳಿಗೆ ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಒಟ್ಟು ₹18,459.37 ಕೋಟಿ ನೆರವು ನೀಡಿದ್ದರೂ ಸಹ, ಶಕ್ತಿ ಯೋಜನೆಯ ಬೃಹತ್ ಬಾಕಿ ಮೊತ್ತವು ಸಾರಿಗೆ ನಿಗಮಗಳ ದಿನನಿತ್ಯದ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ.</p>
]]></content:encoded>
					
		
		
			</item>
		<item>
		<title>ಅಂಬೇಡ್ಕರ್‌ಗೆ ಗೌರವ ಕೇವಲ ಜಯಕಾರಕ್ಕೆ ಸೀಮಿತವಾಗಬಾರದು &#8211; ಕೃಷ್ಣ ಬೈರೇಗೌಡ</title>
		<link>https://peepalmedia.com/respect-for-ambedkar-should-not-be-limited-to-mere-sloganeering/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 28 Aug 2026 09:53:19 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=84282</guid>

					<description><![CDATA[ಬೆಂಗಳೂರು : ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಪ್ರವೃತ್ತಿ ದೂರವಾಗಿ, ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುವ ಮಾನವೀಯ ದೃಷ್ಟಿಕೋನ ಬೆಳೆದಾಗ ಮಾತ್ರ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ನಿಜವಾದ ಗೌರವ ಸಿಕ್ಕಂತಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ–2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೂ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು : </strong>ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಪ್ರವೃತ್ತಿ ದೂರವಾಗಿ, ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುವ ಮಾನವೀಯ ದೃಷ್ಟಿಕೋನ ಬೆಳೆದಾಗ ಮಾತ್ರ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ನಿಜವಾದ ಗೌರವ ಸಿಕ್ಕಂತಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>



<p class="wp-block-paragraph">ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ–2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>



<p class="wp-block-paragraph">ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವರು, ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.</p>



<p class="wp-block-paragraph">ಡಾ. ಅಂಬೇಡ್ಕರ್ ಅವರನ್ನು ನಿರ್ದಿಷ್ಟ ಜಾತಿ ಅಥವಾ ಸಮುದಾಯದ ನಾಯಕರಾಗಿ ನೋಡಬಾರದು. ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ. ಮಾನವೀಯತೆಯನ್ನೇ ಪ್ರಧಾನವಾಗಿಟ್ಟುಕೊಂಡ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.</p>



<p class="wp-block-paragraph">ದೇಶದಲ್ಲಿ ಬಸವಣ್ಣ, ಮಹಾತ್ಮ ಗಾಂಧೀಜಿ, ಕುವೆಂಪು ಸೇರಿದಂತೆ ಅನೇಕ ಮಹನೀಯರು ಸಮಾನತೆ ಮತ್ತು ಮಾನವ ಧರ್ಮದ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದಾರೆ. ಆದರೆ ಅವರ ಸಂದೇಶಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ, ಸಾಮಾಜಿಕ ಬದುಕಿನಲ್ಲಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.</p>



<p class="wp-block-paragraph">ಅಂಬೇಡ್ಕರ್ ಅವರ ಜಯಂತಿ ಸಂದರ್ಭದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜೈಕಾರ ಕೂಗುವುದಷ್ಟೇ ಗೌರವವಲ್ಲ. ಸಮಾಜದಲ್ಲಿನ ಮೇಲು-ಕೀಳು ಭಾವನೆಗಳನ್ನು ತೊಡೆದುಹಾಕಿ, ಜಾತಿ-ಧರ್ಮದ ಹೆಸರಿನಲ್ಲಿ ನಡೆಯುವ ತಾರತಮ್ಯಕ್ಕೆ ಕಡಿವಾಣ ಹಾಕುವುದು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಸಚಿವರು ಹೇಳಿದರು.</p>



<p class="wp-block-paragraph"><strong>ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದನೆ</strong><br>ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.</p>



<p class="wp-block-paragraph">ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಸಹಯೋಗದಲ್ಲಿ ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ ನಡೆಸಲಾಗುತ್ತಿದೆ. ಎಸ್ಐಆರ್ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ವಿಳಂಬವಾಗಿತ್ತು. ಇದೀಗ ಆದ್ಯತೆ ನೀಡಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಅವರು ವಿವರಿಸಿದರು.</p>



<p class="wp-block-paragraph">ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು, ರಾಜ್ಯ ಸಫಾಯಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ್ ಸಾಲಪ್ಪ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ನಿತೀಶ್, ವಿವಿಧ ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ ಸೇರಿದಂತೆ ಹಲವು ಅಧಿಕಾರಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಜಿಪಂ ಸಿಇಒಗೆ ಗ್ರಾಪಂ ನೌಕರರನ್ನು ವಜಾಗೊಳಿಸುವ ಅಧಿಕಾರವಿಲ್ಲ &#8211; ಹೈಕೋರ್ಟ್ ಸ್ಪಷ್ಟನೆ</title>
		<link>https://peepalmedia.com/zilla-panchayat-ceo-has-no-authority-to-dismiss-gram-panchayat-employees/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 28 Aug 2026 09:32:22 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=84276</guid>

					<description><![CDATA[ಬೆಂಗಳೂರು :  ಗ್ರಾಮ ಪಂಚಾಯಿತಿ (gram panchayat) ನೌಕರರನ್ನು ಸೇವೆಯಿಂದ ವಜಾಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯತ್​ (Zilla Panchayat) ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ (ಸಿಇಒ) ಇಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court ) ಸ್ಪಷ್ಟಪಡಿಸಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮ ಪಂಚಾಯಿತಿಯು 2015ರಲ್ಲಿ ಪ್ರವೀಣ್ ಅವರನ್ನು ಡೇಟಾ ಎಂಟ್ರಿ ಆಪರೇಟರ್ ಆಗಿ ನೇಮಕ ಮಾಡಿತ್ತು. ಆದರೆ, 2018ರಲ್ಲಿ ಅಧಿಕಾರಕ್ಕೆ ಬಂದ ಹೊಸ ಪಂಚಾಯಿತಿ ಆಡಳಿತ ಮಂಡಳಿಯು&#160; ಪ್ರವೀಣ್ ಸೇರಿದಂತೆ 9 ಜನರನ್ನು ಕೆಲಸದಿಂದ ತೆಗೆಯಲು [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು</strong> :  ಗ್ರಾಮ ಪಂಚಾಯಿತಿ (gram panchayat) ನೌಕರರನ್ನು ಸೇವೆಯಿಂದ ವಜಾಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯತ್​ (Zilla Panchayat) ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ (ಸಿಇಒ) ಇಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court ) ಸ್ಪಷ್ಟಪಡಿಸಿದೆ.</p>



<p class="wp-block-paragraph">ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮ ಪಂಚಾಯಿತಿಯು 2015ರಲ್ಲಿ ಪ್ರವೀಣ್ ಅವರನ್ನು ಡೇಟಾ ಎಂಟ್ರಿ ಆಪರೇಟರ್ ಆಗಿ ನೇಮಕ ಮಾಡಿತ್ತು. ಆದರೆ, 2018ರಲ್ಲಿ ಅಧಿಕಾರಕ್ಕೆ ಬಂದ ಹೊಸ ಪಂಚಾಯಿತಿ ಆಡಳಿತ ಮಂಡಳಿಯು&nbsp; ಪ್ರವೀಣ್ ಸೇರಿದಂತೆ 9 ಜನರನ್ನು ಕೆಲಸದಿಂದ ತೆಗೆಯಲು ನಿರ್ಣಯಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್​ ಮೆಟ್ಟಿಲೇರಿದ್ದರು.</p>



<p class="wp-block-paragraph">ಈ ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ನಿಯಮಾನುಸಾರ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒಗೆ ಸೂಚಿಸಿತ್ತು. ಅದರಂತೆ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ಅವರು 2021ರ ಜೂನ್​ 18ರಂದು ಪ್ರವೀಣ್ ಅವರನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿದ್ದರಿಂದ, ಅರ್ಜಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ&nbsp;ನ್ಯಾಯಮೂರ್ತಿಗಳಾದ ಆರ್ ದೇವದಾಸ್​ ಮತ್ತು ಎಂ ಬೃಂಗೇಶ್​&nbsp;ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು.</p>



<p class="wp-block-paragraph">ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಯ 1993ರ ಸೆಕ್ಷನ್ 113(3)ರ ಪ್ರಕಾರ ನೌಕರರನ್ನು ತೆಗೆದುಹಾಕುವ ಸಂಪೂರ್ಣ ಅಧಿಕಾರ ಕೇವಲ ಗ್ರಾಮ ಪಂಚಾಯಿತಿಗೆ ಮಾತ್ರ ಇರಲಿದೆ. ಕಾಯಿದೆಯ ಅನ್ವಯ ಗ್ರಾಮ ಪಂಚಾಯಿತಿ ನೌಕರರ ನೇಮಕಾತಿ ಅಥವಾ ವಜಾ ಪ್ರಕ್ರಿಯೆಗಳು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುತ್ತವೆ. ಹೀಗಾಗಿ, ಸಿಇಒ ಹೊರಡಿಸಿದ್ದ ವಜಾ ಆದೇಶವು ಕಾನೂನುಬಾಹಿರ ಮತ್ತು ಅವರ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ತಿಳಿಸಿ ಸಿಇಒ ನೀಡಿದ್ದ ವಜಾ ಆದೇಶವನ್ನು ರದ್ದುಪಡಿಸಿತು.</p>



<p class="wp-block-paragraph">ಪಂಚಾಯಿತಿಯಲ್ಲಿ 2021ರಿಂದ ಸ್ಥಗಿತಗೊಂಡಿರುವ ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿದಾರರು ಭಾಗವಹಿಸಲು ನ್ಯಾಯಾಲಯ ಮುಕ್ತ ಅವಕಾಶ ಕಲ್ಪಿಸಿದೆ. ಅವರ ಅರ್ಜಿಯನ್ನು ಸ್ವೀಕರಿಸಿ, ವಯೋಮಿತಿ ಸಡಿಲಿಕೆ ಮತ್ತು ಸೇವಾ ಅನುಭವದ ವೆಯ್ಟೇಜ್ ನೀಡಿ ನೇಮಕಾತಿಯಲ್ಲಿ ಅವಕಾಶ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ನಿವಾಸದಲ್ಲಿ ಬಿಜೆಪಿ ನಾಯಕರ ಸರಣಿ ಭೇಟಿ</title>
		<link>https://peepalmedia.com/series-of-meetings-by-bjp-leaders-at-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Aug 2026 04:00:38 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=84242</guid>

					<description><![CDATA[ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ರಮೇಶ್‌ ಜಾರಕಿಹೊಳಿ ಪ್ರತ್ಯೇಕವಾಗಿ ಭೇಟಿಯಾಗಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಬುಧವಾರ ರಾತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದ ಬಿಜೆಪಿ ಶಾಸಕ ಸಿ.ಟಿ.ರವಿ, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಬಳಿಕ ಈ ಭೇಟಿಯನ್ನು ಸೌಹಾರ್ದಯುತ ಭೇಟಿಯೆಂದು ಬಣ್ಣಿಸಿದ್ದ ಸಿದ್ದರಾಮಯ್ಯ, ಸಾಮಾಜಿಕ ಜಾಲತಾಣದಲ್ಲಿ ಸಿ.ಟಿ.ರವಿ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ರಮೇಶ್‌ [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ರಮೇಶ್‌ ಜಾರಕಿಹೊಳಿ ಪ್ರತ್ಯೇಕವಾಗಿ ಭೇಟಿಯಾಗಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.</p>



<p class="wp-block-paragraph">ಬುಧವಾರ ರಾತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದ ಬಿಜೆಪಿ ಶಾಸಕ ಸಿ.ಟಿ.ರವಿ, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಬಳಿಕ ಈ ಭೇಟಿಯನ್ನು ಸೌಹಾರ್ದಯುತ ಭೇಟಿಯೆಂದು ಬಣ್ಣಿಸಿದ್ದ ಸಿದ್ದರಾಮಯ್ಯ, ಸಾಮಾಜಿಕ ಜಾಲತಾಣದಲ್ಲಿ ಸಿ.ಟಿ.ರವಿ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದರು.</p>



<p class="wp-block-paragraph">ಇದರ ಬೆನ್ನಲ್ಲೇ ಬಿಜೆಪಿ ನಾಯಕ ರಮೇಶ್‌ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳಿದ ಕೆಲವೇ ಹೊತ್ತಿನಲ್ಲಿ ರಮೇಶ್‌ ಜಾರಕಿಹೊಳಿ ಅವರು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.</p>



<p class="wp-block-paragraph">ಆದರೆ, ಬಿಜೆಪಿ ಮೂಲಗಳ ಪ್ರಕಾರ ಈ ಭೇಟಿಗೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಂದರ್ಭದಲ್ಲಿ ರಮೇಶ್‌ ಜಾರಕಿಹೊಳಿ ವಿದೇಶ ಪ್ರವಾಸದಲ್ಲಿದ್ದ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>
]]></content:encoded>
					
		
		
			</item>
		<item>
		<title>ಶಿವಮೊಗ್ಗ: ಈದ್ ಮಿಲಾದ್ ಕಟೌಟ್ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಾಟ; ಮೂವರ ವಿರುದ್ಧ ಎಫ್‌ಐಆರ್</title>
		<link>https://peepalmedia.com/shivamogga-3-booked-palestine-flag-eid-milad-cutout/</link>
		
		<dc:creator><![CDATA[Peepal Media]]></dc:creator>
		<pubDate>Fri, 28 Aug 2026 02:48:17 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=84217</guid>

					<description><![CDATA[ಶಿವಮೊಗ್ಗ: ನಗರದ ಆರ್‌ಎಂಎಲ್ ನಗರದಲ್ಲಿ (RML Nagar) ಆಗಸ್ಟ್ 24ರಂದು ಈದ್ ಮಿಲಾದ್ ಆಚರಣೆಗಾಗಿ ಅಳವಡಿಸಲಾಗುತ್ತಿದ್ದ ಬೃಹತ್ ಕಟೌಟ್ ಮೇಲೆ ಹತ್ತಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ಆರೋಪದ ಮೇಲೆ ಮೂವರ ವಿರುದ್ಧ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಎಫ್‌ಐಆರ್ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಎಂಬ ಮೂವರು ಯುವಕರು ಕಟೌಟ್ ರಚನೆಯ ಮೇಲೆ ಹತ್ತಿ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿ, ಆ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್ [&#8230;]]]></description>
										<content:encoded><![CDATA[
<p class="wp-block-paragraph">ಶಿವಮೊಗ್ಗ: ನಗರದ ಆರ್‌ಎಂಎಲ್ ನಗರದಲ್ಲಿ (RML Nagar) ಆಗಸ್ಟ್ 24ರಂದು ಈದ್ ಮಿಲಾದ್ ಆಚರಣೆಗಾಗಿ ಅಳವಡಿಸಲಾಗುತ್ತಿದ್ದ ಬೃಹತ್ ಕಟೌಟ್ ಮೇಲೆ ಹತ್ತಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ಆರೋಪದ ಮೇಲೆ ಮೂವರ ವಿರುದ್ಧ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>



<p class="wp-block-paragraph">ಪೊಲೀಸ್ ಎಫ್‌ಐಆರ್ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಎಂಬ ಮೂವರು ಯುವಕರು ಕಟೌಟ್ ರಚನೆಯ ಮೇಲೆ ಹತ್ತಿ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿ, ಆ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು.</p>



<p class="wp-block-paragraph">ಈ ಕೃತ್ಯವು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಸುವ, ವೈಮನಸ್ಸು ಪ್ರಚೋದಿಸುವ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯನ್ನು ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 353(2), 196(1) ಮತ್ತು 197ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.</p>
]]></content:encoded>
					
		
		
			</item>
		<item>
		<title>KPSC ಹಗರಣ OMR ಸ್ಕ್ಯಾನ್ ಮಾಡಿದ ಹಾರ್ಡ್‌ಡಿಸ್ಕ್ &#8211; ನಾಪತ್ತೆ</title>
		<link>https://peepalmedia.com/kpsc-scam-hard-disk-containing-scanned-omr-sheets-goes-missing/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 27 Aug 2026 12:40:29 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=84185</guid>

					<description><![CDATA[ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷೆಯ OMR ಶೀಟ್‌ಗಳನ್ನು ಸ್ಕ್ಯಾನ್ ಮಾಡಿದ್ದ ಹಾರ್ಡ್‌ಡಿಸ್ಕ್ ನಾಪತ್ತೆಯಾಗಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ 2026ರ ಜನವರಿ 8 ಮತ್ತು 9ರಂದು ನಡೆದಿತ್ತು. ನೇಮಕಾತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, OMR ಶೀಟ್ ತಿದ್ದುಪಡಿ ಹಾಗೂ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ CID ತನಿಖೆಗೆ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು :</strong> ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷೆಯ OMR ಶೀಟ್‌ಗಳನ್ನು ಸ್ಕ್ಯಾನ್ ಮಾಡಿದ್ದ <strong>ಹಾರ್ಡ್‌ಡಿಸ್ಕ್ ನಾಪತ್ತೆಯಾಗಿರುವುದು</strong> ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ.</p>



<p class="wp-block-paragraph">400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ 2026ರ ಜನವರಿ 8 ಮತ್ತು 9ರಂದು ನಡೆದಿತ್ತು. ನೇಮಕಾತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, OMR ಶೀಟ್ ತಿದ್ದುಪಡಿ ಹಾಗೂ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ CID ತನಿಖೆಗೆ ವಹಿಸಿದೆ.</p>
]]></content:encoded>
					
		
		
			</item>
		<item>
		<title>ರಾಜ್ಯಾದ್ಯಂತ 101 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳು &#8211; ಡಿಸಿಎಂ ಪರಮೇಶ್ವರ್</title>
		<link>https://peepalmedia.com/101-taluks-across-the-state-are-drought-hit-areas-dcm-parameshwara/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 27 Aug 2026 12:36:19 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=84182</guid>

					<description><![CDATA[ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಕಂದಾಯ ಸಚಿವರೂ ಆಗಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂನ್ 1ರಿಂದ ಈವರೆಗೆ ರಾಜ್ಯದಲ್ಲಿ 666 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 464 ಮಿ.ಮೀ. ಮಳೆಯಾಗಿದೆ. ಒಳನಾಡು ಕರ್ನಾಟಕದಲ್ಲಿ ಶೇ.33ರಷ್ಟು, ದಕ್ಷಿಣ ಒಳನಾಡಿನಲ್ಲಿ ಶೇ.41ರಷ್ಟು ಹಾಗೂ ಕರಾವಳಿ ಭಾಗದಲ್ಲಿ ಶೇ.24ರಷ್ಟು ಮಳೆ ಕೊರತೆಯಾಗಿದೆ ಎಂದು ಹೇಳಿದರು. ರಾಜ್ಯದ 190 ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, 13 ತಾಲ್ಲೂಕುಗಳಲ್ಲಿ [&#8230;]]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು :</strong> ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಕಂದಾಯ ಸಚಿವರೂ ಆಗಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.</p>



<p class="wp-block-paragraph">ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂನ್ 1ರಿಂದ ಈವರೆಗೆ ರಾಜ್ಯದಲ್ಲಿ 666 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 464 ಮಿ.ಮೀ. ಮಳೆಯಾಗಿದೆ. ಒಳನಾಡು ಕರ್ನಾಟಕದಲ್ಲಿ ಶೇ.33ರಷ್ಟು, ದಕ್ಷಿಣ ಒಳನಾಡಿನಲ್ಲಿ ಶೇ.41ರಷ್ಟು ಹಾಗೂ ಕರಾವಳಿ ಭಾಗದಲ್ಲಿ ಶೇ.24ರಷ್ಟು ಮಳೆ ಕೊರತೆಯಾಗಿದೆ ಎಂದು ಹೇಳಿದರು. ರಾಜ್ಯದ 190 ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, 13 ತಾಲ್ಲೂಕುಗಳಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.</p>



<p class="wp-block-paragraph">ಒಟ್ಟು 134 ತಾಲ್ಲೂಕುಗಳಲ್ಲಿ ಬರ ಘೋಷಣೆಗೆ ಪೂರಕ ಅಂಶಗಳಿದ್ದು, ಈ ಪ್ರದೇಶಗಳಿಗೆ ತಂಡಗಳನ್ನು ಕಳುಹಿಸಿ ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆಯಲ್ಲಿ 89 ತಾಲ್ಲೂಕುಗಳಲ್ಲಿ ತೀವ್ರ ಬರ ಹಾಗೂ 12 ತಾಲ್ಲೂಕುಗಳಲ್ಲಿ ಸಾಧಾರಣ ಬರ ಪರಿಸ್ಥಿತಿ ಕಂಡುಬಂದಿದೆ ಎಂದು ಅವರು ಹೇಳಿದರು. ರಾಜ್ಯಕ್ಕೆ ಬರ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರದ ಮೊರೆ ಹೋಗಲಾಗುವುದು. ಈ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರ ಅಮಾನತು</title>
		<link>https://peepalmedia.com/yadgir-two-govt-school-teachers-suspended-rss-patha-sanchalan-karnataka/</link>
		
		<dc:creator><![CDATA[Peepal Media]]></dc:creator>
		<pubDate>Thu, 27 Aug 2026 07:35:20 +0000</pubDate>
				<category><![CDATA[ಯಾದಗಿರಿ]]></category>
		<guid isPermaLink="false">https://peepalmedia.com/?p=84164</guid>

					<description><![CDATA[ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ ಒಂಬತ್ತು ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ ದೇಶಮುಖ್ ಅವರ ವಿರುದ್ಧ ಯಾದಗಿರಿ ಡಿಡಿಪಿಐ (DDPI) ಚನ್ನಬಸಪ್ಪ ಮುಧೋಳ ಅಮಾನತು ಆದೇಶ ಹೊರಡಿಸಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಕಳೆದ ನವೆಂಬರ್‌ನಲ್ಲಿ [&#8230;]]]></description>
										<content:encoded><![CDATA[
<p class="wp-block-paragraph">ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ ಒಂಬತ್ತು ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.</p>



<p class="wp-block-paragraph">ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ ದೇಶಮುಖ್ ಅವರ ವಿರುದ್ಧ ಯಾದಗಿರಿ ಡಿಡಿಪಿಐ (DDPI) ಚನ್ನಬಸಪ್ಪ ಮುಧೋಳ ಅಮಾನತು ಆದೇಶ ಹೊರಡಿಸಿದ್ದಾರೆ.</p>



<p class="wp-block-paragraph">ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಕಳೆದ ನವೆಂಬರ್‌ನಲ್ಲಿ ತಾಳಿಕೋಟೆಯಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಈ ಇಬ್ಬರು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>



<p class="wp-block-paragraph">ಶಿಕ್ಷಕರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಅಧಿಕಾರಿಗಳಿಗೆ ಸತತ ದೂರು ನೀಡಿದ್ದರು. ಈ ದೂರುಗಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಇದೀಗ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಿದೆ.</p>
]]></content:encoded>
					
		
		
			</item>
		<item>
		<title>ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ</title>
		<link>https://peepalmedia.com/emergency-helpline-system-for-indians-home-minister/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 27 Aug 2026 07:16:50 +0000</pubDate>
				<category><![CDATA[ದೇಶ]]></category>
		<category><![CDATA[ಮೀಡಿಯಾ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=84159</guid>

					<description><![CDATA[ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರಿಗೆ ನೆರವು ಹಾಗೂ ಅಗತ್ಯ ಮಾಹಿತಿ ಒದಗಿಸಲು ತುರ್ತು ಸಹಾಯವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ. ಪ್ರವಾಹದಿಂದಾಗಿ ನೇಪಾಳದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭಾರತೀಯ ನಾಗರಿಕರೂ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನೆರವು ಅಥವಾ ಮಾಹಿತಿಯ ಅಗತ್ಯವಿರುವವರು ತಕ್ಷಣ ಕೆಳಗಿನ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸುವಂತೆ ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ. ತುರ್ತು ಸಹಾಯವಾಣಿ ಸಂಖ್ಯೆಗಳು: [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರಿಗೆ ನೆರವು ಹಾಗೂ ಅಗತ್ಯ ಮಾಹಿತಿ ಒದಗಿಸಲು ತುರ್ತು ಸಹಾಯವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ.</p>



<p class="wp-block-paragraph">ಪ್ರವಾಹದಿಂದಾಗಿ ನೇಪಾಳದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭಾರತೀಯ ನಾಗರಿಕರೂ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನೆರವು ಅಥವಾ ಮಾಹಿತಿಯ ಅಗತ್ಯವಿರುವವರು ತಕ್ಷಣ ಕೆಳಗಿನ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸುವಂತೆ ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ.</p>



<p class="wp-block-paragraph">ತುರ್ತು ಸಹಾಯವಾಣಿ ಸಂಖ್ಯೆಗಳು:</p>



<ul class="wp-block-list">
<li>+977 985 131 6807</li>



<li>+977 970 910 7500</li>



<li>+977 981 032 6117<br>ಈ ಮೂರು ಸಂಖ್ಯೆಗಳಿಗೂ WhatsApp ಮೂಲಕವೂ ಸಂಪರ್ಕಿಸಬಹುದಾಗಿದೆ.</li>
</ul>



<p class="wp-block-paragraph">ನೇಪಾಳದಲ್ಲಿರುವ ಭಾರತೀಯ ನಾಗರಿಕರು ಅಥವಾ ಅವರ ಕುಟುಂಬದ ಸದಸ್ಯರಿಗೆ ಯಾವುದೇ ರೀತಿಯ ನೆರವು, ಮಾಹಿತಿ ಅಥವಾ ಸಂಪರ್ಕದ ಅಗತ್ಯವಿದ್ದಲ್ಲಿ ವಿಳಂಬ ಮಾಡದೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಸಚಿವರು ತಿಳಿಸಿದ್ದಾರೆ.</p>



<p class="wp-block-paragraph">ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಹಾಗೂ ಅಗತ್ಯ ನೆರವು ಪಡೆಯಲು ಈ ತುರ್ತು ಸಂಪರ್ಕ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಸಂಪುಟ ಉಪಸಮಿತಿ ರಚನೆ : ಶಿಕ್ಷಣ ಕ್ಷೇತ್ರದ ಸಮಗ್ರ ಸುಧಾರಣೆಗೆ ಒಂದು ತಿಂಗಳಲ್ಲಿ ವರದಿ ಸಲ್ಲಿಕೆ</title>
		<link>https://peepalmedia.com/cabinet-sub-committee-formed-for-relief/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 27 Aug 2026 06:37:59 +0000</pubDate>
				<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=84146</guid>

					<description><![CDATA[ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಉನ್ನತ ಮಟ್ಟದ ಸಂಪುಟ ಉಪಸಮಿತಿಯನ್ನು ರಚಿಸಿದೆ. ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು [&#8230;]]]></description>
										<content:encoded><![CDATA[
<p class="wp-block-paragraph">ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಉನ್ನತ ಮಟ್ಟದ ಸಂಪುಟ ಉಪಸಮಿತಿಯನ್ನು ರಚಿಸಿದೆ.</p>



<p class="wp-block-paragraph">ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಸಮಿತಿಯ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸಲಿದೆ. ಸಮಿತಿಯು ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ.</p>



<p class="wp-block-paragraph">ಪ್ರಮುಖವಾಗಿ ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಮಿತಿ ಗಮನ ಹರಿಸಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವುದು, ನೇಮಕಾತಿ ಪ್ರಕ್ರಿಯೆ ಸುಧಾರಣೆ ಮತ್ತು ನಿಗದಿತ ಅವಧಿಯಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ರೂಪಿಸುವ ಕುರಿತು ಪರಿಶೀಲನೆ ನಡೆಯಲಿದೆ.</p>



<p class="wp-block-paragraph">ಅದೇ ರೀತಿ ಖಾಸಗಿ ಶಿಕ್ಷಣ ಸಂಸ್ಥೆಗಳು ವಿಧಿಸುವ ಅತಿಯಾದ ಶುಲ್ಕ ಹಾಗೂ ಕೋಚಿಂಗ್ ಸೆಂಟರ್‌ಗಳ ನಿಯಂತ್ರಣ, ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಶಿಫಾರಸುಗಳನ್ನು ರೂಪಿಸಲಿದೆ.</p>



<p class="wp-block-paragraph">ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಬಲಪಡಿಸುವುದು, ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಗ್ರಂಥಾಲಯ ಮತ್ತು ಪ್ರಯೋಗಾಲಯಗಳ ಗುಣಮಟ್ಟ ಹೆಚ್ಚಿಸುವುದಕ್ಕೂ ಆದ್ಯತೆ ನೀಡಲಾಗುತ್ತಿದೆ.</p>



<p class="wp-block-paragraph">ಪ್ರಸ್ತುತ ಉದ್ಯೋಗ ಮಾರುಕಟ್ಟೆಗೆ ಅನುಗುಣವಾಗಿ ಪಠ್ಯಕ್ರಮ ಪರಿಷ್ಕರಣೆ, ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ, ಉದ್ಯಮಗಳು ಹಾಗೂ ಶಿಕ್ಷಣ ಸಂಸ್ಥೆಗಳ ನಡುವೆ ಸಹಭಾಗಿತ್ವ ಹೆಚ್ಚಿಸುವ ಮೂಲಕ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಉತ್ತೇಜನ ನೀಡುವ ಕುರಿತು ಚರ್ಚೆ ನಡೆಯಲಿದೆ.</p>



<p class="wp-block-paragraph">ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವೂ ಸಮಿತಿಯ ಪ್ರಮುಖ ಆದ್ಯತೆಯಾಗಿದೆ. ಪರೀಕ್ಷಾ ಒತ್ತಡ ಹಾಗೂ ಆತಂಕ ನಿವಾರಣೆಗೆ ಕೌನ್ಸೆಲಿಂಗ್ ವ್ಯವಸ್ಥೆ ಬಲಪಡಿಸುವುದು ಮತ್ತು ವಸತಿ ನಿಲಯಗಳು ಹಾಗೂ ಕೋಚಿಂಗ್ ಕೇಂದ್ರಗಳಲ್ಲಿ ಆತ್ಮಹತ್ಯೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಿಫಾರಸು ಮಾಡಲಿದೆ.</p>



<p class="wp-block-paragraph">ಇದರ ಜೊತೆಗೆ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು, ಗ್ರಾಮೀಣ ಹಾಗೂ ಪ್ರಥಮ ತಲೆಮಾರಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಉಚಿತ ವಸತಿ ನಿಲಯ ಸೌಲಭ್ಯಗಳನ್ನು ವಿಸ್ತರಿಸುವ ಮೂಲಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸುವ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಲಿದೆ.</p>



<p class="wp-block-paragraph">ವರದಿ ಸಿದ್ಧಪಡಿಸುವ ಮುನ್ನ ಸಮಿತಿಯು ರಾಜ್ಯಾದ್ಯಂತ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿದೆ. ಅಗತ್ಯವಿದ್ದಲ್ಲಿ ವಿಷಯ ತಜ್ಞರನ್ನು ಆಹ್ವಾನಿಸಿ ಅವರ ಸಲಹೆ ಪಡೆಯಲು ಸಮಿತಿಗೆ ಅವಕಾಶ ಕಲ್ಪಿಸಲಾಗಿದೆ.</p>
]]></content:encoded>
					
		
		
			</item>
	</channel>
</rss>
