<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಶಿವಮೊಗ್ಗ &#8211; Peepal Media</title>
	<atom:link href="https://peepalmedia.com/category/karnataka/sivamogga/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 24 Oct 2025 06:50:59 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಶಿವಮೊಗ್ಗ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8216;ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್&#8217; ನಿಂದ ಮಲೆನಾಡಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ಸುಳ್ಳು ಆರೋಪ</title>
		<link>https://peepalmedia.com/false-accusations-against-muslim-and-christian-communities/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 24 Oct 2025 06:50:59 +0000</pubDate>
				<category><![CDATA[ಜನ-ಗಣ-ಮನ]]></category>
		<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=68236</guid>

					<description><![CDATA[ಆಗುಂಬೆಯ &#8216;ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್&#8217; ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು, ಅದರ ಸಾಮೂಹಿಕ ಫೋಟೋ ಶೂಟ್, ಅನುಮತಿ ಇಲ್ಲದೆ ಸಂಶೋಧನೆ, ಸಂರಕ್ಷಣೆ ಅಧ್ಯಯನದ ಹೆಸರಿನಲ್ಲಿ ರೆಸಾರ್ಟ್ ನಡೆಸುತ್ತಿರುವುದು, ಅಕ್ರಮ ಕಾಡು ಪ್ರವೇಶ, ಮೋಜು -ಮಸ್ತಿ, ಕಾಳಿಂಗ ಸರ್ಪಗಳನ್ನು ವಾಣಿಜ್ಯಿಕ ಚಟುವಟಿಕೆಗಳಿಗೆ ಬಳಸುತ್ತಿರುವುದು ಮೊದಲಾದ ಹತ್ತು ಹಲವು ಗಂಭೀರ ಆರೋಪಗಳು ಬಂದು, ಅರಣ್ಯ ಇಲಾಖೆಗೆ ಸರಣಿ ದೂರುಗಳು ಸಲ್ಲಿಕೆಯಾಗಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆರೋಪಗಳಿಗೆ ಸ್ಪಷ್ಟನೆ ಕೊಡುವ ನೆಪದಲ್ಲಿ ಕಾಳಿಂಗ ಫೌಂಡೇಶನ್ ನವರು ಮಲೆನಾಡಿನಲ್ಲಿ ಮುಸ್ಲಿಂ [&#8230;]]]></description>
										<content:encoded><![CDATA[
<p>ಆಗುಂಬೆಯ &#8216;ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್&#8217; ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು, ಅದರ ಸಾಮೂಹಿಕ ಫೋಟೋ ಶೂಟ್, ಅನುಮತಿ ಇಲ್ಲದೆ ಸಂಶೋಧನೆ, ಸಂರಕ್ಷಣೆ ಅಧ್ಯಯನದ ಹೆಸರಿನಲ್ಲಿ ರೆಸಾರ್ಟ್ ನಡೆಸುತ್ತಿರುವುದು, ಅಕ್ರಮ ಕಾಡು ಪ್ರವೇಶ, ಮೋಜು -ಮಸ್ತಿ, ಕಾಳಿಂಗ ಸರ್ಪಗಳನ್ನು ವಾಣಿಜ್ಯಿಕ ಚಟುವಟಿಕೆಗಳಿಗೆ ಬಳಸುತ್ತಿರುವುದು ಮೊದಲಾದ ಹತ್ತು ಹಲವು ಗಂಭೀರ ಆರೋಪಗಳು ಬಂದು, ಅರಣ್ಯ ಇಲಾಖೆಗೆ ಸರಣಿ ದೂರುಗಳು ಸಲ್ಲಿಕೆಯಾಗಿ ತನಿಖೆ ನಡೆಯುತ್ತಿದೆ.</p>



<p>ಈ ಸಂದರ್ಭದಲ್ಲಿ ಆರೋಪಗಳಿಗೆ ಸ್ಪಷ್ಟನೆ ಕೊಡುವ ನೆಪದಲ್ಲಿ ಕಾಳಿಂಗ ಫೌಂಡೇಶನ್ ನವರು ಮಲೆನಾಡಿನಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಧರ್ಮೀಯರೂ ಇದ್ದಾರೆ. ಅವರು ಹಾವಿನೊಂದಿಗೆ ಯಾವುದೇ ರೀತಿಯ ಧಾರ್ಮಿಕ ನಂಬಿಕೆಯನ್ನಾಗಲಿ, ಪೂಜನೀಯ ಭಾವನೆಯನ್ನು ಹೊಂದಿಲ್ಲ. ತಮಗೆ ವಿಪತ್ತು ಬಂದಾಗ ಯಾವುದೇ ಹಾವನ್ನಾದರೂ ಕೊಲ್ಲಲು ಅವರು ಸಿದ್ಧರಾಗುತ್ತಾರೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ಇದು ತೀವ್ರ ಖಂಡನೀಯ ಎಂದು ಪರಿಸರ ಸಂರಕ್ಷಕರು ತಮ್ಮ ಖಂಡನೆ ತಿಳಿಸಿದ್ದಾರೆ.</p>



<p>ಕಾಳಿಂಗ ಫೌಂಡೇಶನ್ ನ ಸಂಶೋಧಕರಾದ &#8216;ಗೌರಿಶಂಕರ್&#8217; ಆಗುಂಬೆಯಲ್ಲಿ ಕಾಳಿಂಗ ಸರ್ಪಗಳ ಬಗೆಗೆ ಅಧ್ಯಯನ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ಸಂಶೋಧನಾ ಪ್ರಬಂಧದಲ್ಲಿ &#8220;ನಮಗೆ ಕಾಳಿಂಗ ಸರ್ಪ ರಕ್ಷಣೆಗೆ ಕರೆಬಂದ 83.8% ಸಂದರ್ಭಗಳಲ್ಲಿ ಜನರು ಹಾವನ್ನು ಕೊಲ್ಲಲು ಬಯಸಿದ್ದರು&#8221; ಎಂದು ಸುಳ್ಳು ಮಾಹಿತಿ ನೀಡಿದ್ದರು. ಮಲೆನಾಡಿನ ಜನರಿಗೆ ಕಾಳಿಂಗ ಸರ್ಪಗಳ ಬಗೆಗೆ ಭಯ, ಭಕ್ತಿ ಇದ್ದು ಪೂಜಿಸುವ ಸಂಸ್ಕೃತಿ ಇದೆ. ಯಾರೂ ಕೂಡಾ ಕಾಳಿಂಗ ಸರ್ಪಗಳನ್ನು ಕೊಲ್ಲುವುದಿಲ್ಲ. ಹೀಗಿರುವಾಗ ಇವರ ಸುಳ್ಳು ಸಂಶೋಧನೆಗೆ ಸಾರ್ವಜನಿಕ ವಲಯಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ಸುಳ್ಳಗಳ ಸಮರ್ಥನೆಗೆ ಪುನಃ ಕಪೋಲಕಲ್ಪಿತ ಕಥೆಗಳನ್ನು ಹೆಣೆಯುತ್ತಾ ಮುಸ್ಲಿಂ ಮತ್ತು ಕ್ರೈಸ್ತ ಧರ್ಮಿಯರನ್ನು ಅಪರಾಧಿಗಳಂತೆ ಬಿಂಬಿಸುತ್ತಿದ್ದಾರೆ ಎಂದು ಮಲೆನಾಡು ಭಾಗದ ಪರಿಸರ ಸಂರಕ್ಷಕರು ಹೇಳಿದ್ದಾರೆ.</p>



<p>ಇಲ್ಲಿಯವರೆಗೆ ಮಲೆನಾಡಿನ ಯಾವುದೇ ಜನರು ಕಾಳಿಂಗ ಸರ್ಪವನ್ನು ಕೊಂದ ಒಂದೇ ಒಂದು ಉದಾಹರಣೆ ಇಲ್ಲ. ಹೀಗಿರುವಾಗ &#8216;ಮಲೆನಾಡಿನ ಮುಸ್ಲಿಂ ಮತ್ತು ಕ್ರೈಸ್ತ ಧರ್ಮಿಯರು ಕಾಳಿಂಗ ಸರ್ಪಗಳನ್ನು ಕೊಲ್ಲಲು ಸಿದ್ಧರಾಗುತ್ತಾರೆ&#8217; ಎಂಬರ್ಥದಲ್ಲಿ ಮಾತನಾಡಿರುವುದು. ತೀವ್ರ ಖಂಡನೀಯ. ಇತರೇ ಸಮುದಾಯಗಳಂತೆ ಮುಸ್ಲಿಂ ಮತ್ತು ಕ್ರೈಸ್ತ ಧರ್ಮಿಯರು ಕೂಡಾ ಹಲವಾರು ವರ್ಷಗಳಿಂದ ಮಲೆನಾಡಿನ ಪ್ರಕೃತಿಯೊಂದಿಗೆ ಸಹಜೀವನ ನಡೆಸುತ್ತಾ ಬಂದಿದ್ದಾರೆ. ಹಾವನ್ನು ಪೂಜಿಸುವ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತಿದ್ದಾರೆ. ವಾಸ್ತವ ಹೀಗಿರುವಾಗ ಯಾವುದೇ ದಾಖಲೆಗಳಿಲ್ಲದೆ ವೈಯಕ್ತಿಕ ಸ್ವಾರ್ಥಕ್ಕಾಗಿ ಸಮುದಾಯಗಳ ಮೇಲೆ ಗೂಬೆ ಕೂರಿಸುವುದು ಹೇಯಕರ. ಧಾರ್ಮಿಕ ದ್ವೇಷ ಬಿತ್ತುವ ಪ್ರಯತ್ನ ಕೂಡಾ ಇಲ್ಲಿ ಕಾಣುತ್ತಿದೆ. ಆ ಮೂಲಕ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ನೋಡಲಾಗುತ್ತಿದೆ. ಸರ್ಕಾರ ಈ ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.</p>



<p>ಈಶ್ವರ್ ಖಂಡ್ರೆಯವರೇ ಸಂಶೋಧನೆಯ ಮುಖವಾಡದಲ್ಲಿ ಬಹಿರಂಗವಾಗಿಯೇ ವಾಣಿಜ್ಯಿಕ ಚಟುವಟಿಕೆಗಳು, ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಕೊಂಡಿರುವ &#8216;ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್&#8217; ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆ ಅಧ್ಯಯನದ ಹೆಸರಿನಲ್ಲಿ ಕಪೋಲಕಲ್ಪಿತ ಕಥೆಗಳನ್ನು ಹೆಣೆಯುತ್ತಿರುವ ಅವರಿಗೆ ಮುಂದೆ ಯಾವುದೇ ಸಂಶೋಧನೆಗೆ ಅವಕಾಶ ಕೊಡಬಾರದು. ಅವರ ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕು. ಈ ಎಲ್ಲದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಪರಿಸರ ಸಂರಕ್ಷಕರು ಆಗ್ರಹಿಸಿದ್ದಾರೆ.</p>



<figure class="wp-block-image size-large"><img fetchpriority="high" decoding="async" width="512" height="1024" src="https://peepalmedia.com/wp-content/uploads/2025/10/1000592071-512x1024.jpg" alt="" class="wp-image-68237" srcset="https://peepalmedia.com/wp-content/uploads/2025/10/1000592071-512x1024.jpg 512w, https://peepalmedia.com/wp-content/uploads/2025/10/1000592071-150x300.jpg 150w, https://peepalmedia.com/wp-content/uploads/2025/10/1000592071-768x1536.jpg 768w, https://peepalmedia.com/wp-content/uploads/2025/10/1000592071-300x600.jpg 300w, https://peepalmedia.com/wp-content/uploads/2025/10/1000592071-696x1392.jpg 696w, https://peepalmedia.com/wp-content/uploads/2025/10/1000592071.jpg 800w" sizes="(max-width: 512px) 100vw, 512px" /></figure>



<p><strong>ಫೋಟೋ: ಇಂದಿನ ಪ್ರಜಾವಾಣಿಯಲ್ಲಿ ಪ್ರಕಟವಾಗಿರುವ ಸುದ್ದಿ ಆಧಾರಿತ</strong></p>
]]></content:encoded>
					
		
		
			</item>
		<item>
		<title>ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಅನುಷ್ಠಾನಗೊಳಿಸುವುದು ಪಕ್ಕಾ: ಸಚಿವ ಕೆ.ಜೆ. ಜಾರ್ಜ್</title>
		<link>https://peepalmedia.com/sharavati-pumped-storage-project-to-be-implemented-minister-k-j-george/</link>
		
		<dc:creator><![CDATA[Peepal Media]]></dc:creator>
		<pubDate>Mon, 06 Oct 2025 13:53:20 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=67436</guid>

					<description><![CDATA[ಶಿವಮೊಗ್ಗ: ಮುಂಬರುವ ದಶಕಗಳ ದೂರದೃಷ್ಟಿ ಮತ್ತು ರಾಜ್ಯದಲ್ಲಿ ಎದುರಾಗಬಹುದಾದ ವಿದ್ಯುತ್ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ₹ 2,000 ಕೋಟಿ ವೆಚ್ಚದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸೋಮವಾರ ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರಾವತಿ ನದಿಯ ಹರಿವಿಗೆ ಯಾವುದೇ ಅಡ್ಡಿಯಾಗದಂತೆ, ಅಸ್ತಿತ್ವದಲ್ಲಿರುವ ನೀರನ್ನು ಬಳಸಿಕೊಂಡು ಅಂದಾಜು 2,000 ಮೆಗಾವ್ಯಾಟ್ (MW) ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು [&#8230;]]]></description>
										<content:encoded><![CDATA[
<p>ಶಿವಮೊಗ್ಗ: ಮುಂಬರುವ ದಶಕಗಳ ದೂರದೃಷ್ಟಿ ಮತ್ತು ರಾಜ್ಯದಲ್ಲಿ ಎದುರಾಗಬಹುದಾದ ವಿದ್ಯುತ್ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ₹ 2,000 ಕೋಟಿ ವೆಚ್ಚದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.</p>



<p>ಸೋಮವಾರ ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರಾವತಿ ನದಿಯ ಹರಿವಿಗೆ ಯಾವುದೇ ಅಡ್ಡಿಯಾಗದಂತೆ, ಅಸ್ತಿತ್ವದಲ್ಲಿರುವ ನೀರನ್ನು ಬಳಸಿಕೊಂಡು ಅಂದಾಜು 2,000 ಮೆಗಾವ್ಯಾಟ್ (MW) ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>



<p>ಪರಿಸರವಾದಿಗಳ ವಿರೋಧಕ್ಕೆ ಸ್ಪಷ್ಟನೆ</p>



<p>ಪ್ರಸ್ತಾವಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರವಾದಿಗಳು ಸೇರಿದಂತೆ ಅನೇಕ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ ಎಂದು ಸಚಿವರು ಹೇಳಿದರು. ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಈ ವಿಷಯದ ಕುರಿತು ವಿರೋಧಿಗಳಿಗೆ ಮನವರಿಕೆ ಮಾಡಿದ್ದಾರೆ. ಅದೇ ರೀತಿ, ಸ್ಥಳೀಯ ಜನರಿಂದ ಮನವಿ ಸ್ವೀಕರಿಸಿದ ನಂತರ, ಪರಿಸರವನ್ನು ಹಾಳು ಮಾಡುವುದಿಲ್ಲ ಮತ್ತು ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅವರಿಗೆ ಭರವಸೆ ನೀಡಲಾಗಿದೆ. ಈ ಯೋಜನೆಗೆ ಬಳಸಲಾಗುವ 120 ಎಕರೆ ಭೂಮಿಯಲ್ಲಿ ಅರಣ್ಯದ ಮೂಲಕ ಹಾದುಹೋಗುವ ಪೈಪ್‌ಲೈನ್‌ನ ಸಮೀಪದಲ್ಲಿ ನೈಸರ್ಗಿಕವಾಗಿ ಗಿಡಗಳನ್ನು ಬೆಳೆಸಲಾಗುವುದು ಎಂದು ಜಾರ್ಜ್ ಹೇಳಿದರು.</p>



<p>ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅನುಮತಿ ಸೇರಿದಂತೆ ಸರ್ಕಾರದ ಎಲ್ಲ ನಿಯಮಗಳನ್ನು ಅನುಸರಿಸಿಯೇ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಪ್ರಸ್ತುತ 1,000 MW ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಈ ಯೋಜನೆಯ ಅನುಷ್ಠಾನದಿಂದ ಸಾರ್ವಜನಿಕ ಬಳಕೆಗೆ ಸುಮಾರು 3,000 MW ವಿದ್ಯುತ್ ಲಭ್ಯವಾಗಲಿದೆ ಎಂದು ಜಾರ್ಜ್ ಹೇಳಿದರು.</p>



<p>ಇದರ ಜೊತೆಗೆ, ಕಡಿಮೆ ವೆಚ್ಚದ ಸೌರಶಕ್ತಿಯನ್ನು ಬಳಸಲಾಗುತ್ತಿದೆ. ಜನರಿಗೆ ಸಕಾಲದಲ್ಲಿ ವಿದ್ಯುತ್ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ, ಕಡಿಯಬೇಕಾದ ಮರಗಳಿಗೆ ಪರ್ಯಾಯವಾಗಿ ಸಸಿಗಳನ್ನು ನೆಡುವ ಗುರಿ ಇದೆ ಎಂದು ಸಚಿವರು ಹೇಳಿದರು. ಇದರಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ ಮತ್ತು ಯಾವುದೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.</p>
]]></content:encoded>
					
		
		
			</item>
		<item>
		<title>ಹಿಂದೂ ಸಮಾಜ ಒಡೆಯಲು ಸರ್ಕಾರ ಯತ್ನಿಸುತ್ತಿರುವುದು ದುರ್ದೈವ: ವಿಜಯೇಂದ್ರ</title>
		<link>https://peepalmedia.com/it-is-unfortunate-that-the-government-is-trying-to-divide-hindu-society-vijayendra/</link>
		
		<dc:creator><![CDATA[Peepal Media]]></dc:creator>
		<pubDate>Tue, 23 Sep 2025 02:31:51 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=66558</guid>

					<description><![CDATA[ಶಿವಮೊಗ್ಗ: ಜಾತಿಗಣತಿ ವಿಷಯ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದೆ. ಆದರೆ, ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟು ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕುತ್ತಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, &#8220;ಜಾತಿಗಣತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಆದರೂ ಸರ್ಕಾರ ಆಟವಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ದಸರಾ ವಿಷಯದಲ್ಲಿಯೂ ಮುಖ್ಯಮಂತ್ರಿಗಳು ಹುಚ್ಚಾಟ ನಡೆಸಿದ್ದು, ರಾಜ್ಯದ ಜನರು ಇದನ್ನು ಮಾತನಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯ ಹೊರತುಪಡಿಸಿ, ದೇಶದ ಬೇರೆಲ್ಲೂ ಹಿಂದೂ ಹಬ್ಬಗಳ ಆಚರಣೆ [&#8230;]]]></description>
										<content:encoded><![CDATA[
<p>ಶಿವಮೊಗ್ಗ: ಜಾತಿಗಣತಿ ವಿಷಯ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದೆ. ಆದರೆ, ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟು ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕುತ್ತಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.</p>



<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, &#8220;ಜಾತಿಗಣತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಆದರೂ ಸರ್ಕಾರ ಆಟವಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ದಸರಾ ವಿಷಯದಲ್ಲಿಯೂ ಮುಖ್ಯಮಂತ್ರಿಗಳು ಹುಚ್ಚಾಟ ನಡೆಸಿದ್ದು, ರಾಜ್ಯದ ಜನರು ಇದನ್ನು ಮಾತನಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯ ಹೊರತುಪಡಿಸಿ, ದೇಶದ ಬೇರೆಲ್ಲೂ ಹಿಂದೂ ಹಬ್ಬಗಳ ಆಚರಣೆ ವಿಷಯದಲ್ಲಿ ಗೊಂದಲವಿಲ್ಲ. ಇದಕ್ಕೆ ಮುಖ್ಯಮಂತ್ರಿಗಳೇ ನೇರ ಕಾರಣ. ದಸರಾವನ್ನು ಯಾರು ಬೇಕಾದರೂ ಉದ್ಘಾಟಿಸಲಿ, ಆದರೆ ರಾಜ್ಯದ ಜನರಿಗೆ ಮುಖ್ಯಮಂತ್ರಿ ಮತ್ತು ಸರ್ಕಾರದ ಮನಸ್ಥಿತಿ ಅರ್ಥವಾಗಿದೆ&#8221; ಎಂದು ಕಿಡಿಕಾರಿದರು.</p>



<p><strong>ಜಿಎಸ್‌ಟಿ ಸುಧಾರಣೆ ಮತ್ತು ಶರಾವತಿ ಯೋಜನೆ</strong></p>



<p>ಜಿಎಸ್‌ಟಿ ಸುಧಾರಣೆ: &#8220;ಜಿಎಸ್‌ಟಿ ಸುಧಾರಣೆಯ ಪರಿಣಾಮಗಳ ಬಗ್ಗೆ ನಾವು ಜನರಿಗೆ ತಿಳಿಸುತ್ತಿದ್ದೇವೆ. ಈ ಐತಿಹಾಸಿಕ ಸುಧಾರಣೆ ಭಾರತದ ಅಭಿವೃದ್ಧಿಗೆ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ವಿಕಸಿತ ಭಾರತದ ಕನಸು ನನಸಾಗಲು ಇದು ಬಲ ತುಂಬಲಿದೆ&#8221; ಎಂದು ವಿಜಯೇಂದ್ರ ಹೇಳಿದರು. ಪ್ರಾರಂಭದಲ್ಲಿ ಕೆಲವು ಗೊಂದಲಗಳು ಉಂಟಾಗಬಹುದು, ಆದರೆ ನಂತರ ಎಲ್ಲವೂ ಸರಿಯಾಗಲಿದೆ ಎಂದು ಅವರು ಭರವಸೆ ನೀಡಿದರು.</p>



<p>ಶರಾವತಿ ಯೋಜನೆ: &#8220;ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಎಲ್ಲರೂ ಸೇರಿ ಚರ್ಚೆ ಮಾಡಬೇಕು. ಶಾಸಕರು ಮತ್ತು ಸಂಸದರು ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡ ನಂತರವೇ ಪಕ್ಷವು ತನ್ನ ತೀರ್ಮಾನ ಪ್ರಕಟಿಸಲಿದೆ&#8221; ಎಂದು ಅವರು ಸ್ಪಷ್ಟಪಡಿಸಿದರು.</p>
]]></content:encoded>
					
		
		
			</item>
		<item>
		<title>ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ನನ್ನದೂ ವಿರೋಧವಿದೆ: ಸಚಿವ ಮಂಕಾಳ ವೈದ್ಯ</title>
		<link>https://peepalmedia.com/i-also-oppose-the-sharavati-pumped-storage-project-mankala-vaidya/</link>
		
		<dc:creator><![CDATA[Peepal Media]]></dc:creator>
		<pubDate>Tue, 23 Sep 2025 01:59:12 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=66547</guid>

					<description><![CDATA[ಶಿವಮೊಗ್ಗ: &#8216;ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ&#8217;ಯನ್ನು 2006-07ರಲ್ಲಿ ರೂಪಿಸಿದಾಗಿನಿಂದಲೂ ನಾನು ಅದನ್ನು ವಿರೋಧಿಸುತ್ತಿದ್ದೇನೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಸೋಮವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವೈದ್ಯ, &#8220;ಈ ಯೋಜನೆಯನ್ನು 2006-07ರಲ್ಲಿ ಕಲ್ಪಿಸಲಾಗಿತ್ತು. ಮೊದಲ ದಿನದಿಂದಲೂ ನಾನು ಇದನ್ನು ವಿರೋಧಿಸುತ್ತಿದ್ದೇನೆ. ಈ ಯೋಜನೆಯನ್ನು ಕೈಬಿಡುವಂತೆ ನಾನು ಹಿಂದಿನ ಸರ್ಕಾರಗಳಿಗೂ ಮನವಿ ಮಾಡಿದ್ದೆ. ಈಗ ಈ ಯೋಜನೆಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಎರಡು ಸಾರ್ವಜನಿಕ ವಿಚಾರಣೆಗಳು ಪೂರ್ಣಗೊಂಡಿವೆ. [&#8230;]]]></description>
										<content:encoded><![CDATA[
<p>ಶಿವಮೊಗ್ಗ: &#8216;ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ&#8217;ಯನ್ನು 2006-07ರಲ್ಲಿ ರೂಪಿಸಿದಾಗಿನಿಂದಲೂ ನಾನು ಅದನ್ನು ವಿರೋಧಿಸುತ್ತಿದ್ದೇನೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಸೋಮವಾರ ಹೇಳಿದ್ದಾರೆ.</p>



<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವೈದ್ಯ, &#8220;ಈ ಯೋಜನೆಯನ್ನು 2006-07ರಲ್ಲಿ ಕಲ್ಪಿಸಲಾಗಿತ್ತು. ಮೊದಲ ದಿನದಿಂದಲೂ ನಾನು ಇದನ್ನು ವಿರೋಧಿಸುತ್ತಿದ್ದೇನೆ. ಈ ಯೋಜನೆಯನ್ನು ಕೈಬಿಡುವಂತೆ ನಾನು ಹಿಂದಿನ ಸರ್ಕಾರಗಳಿಗೂ ಮನವಿ ಮಾಡಿದ್ದೆ. ಈಗ ಈ ಯೋಜನೆಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಎರಡು ಸಾರ್ವಜನಿಕ ವಿಚಾರಣೆಗಳು ಪೂರ್ಣಗೊಂಡಿವೆ. ಕೇವಲ ವಿರೋಧ ಪಕ್ಷಗಳಲ್ಲ, ಆಡಳಿತಾರೂಢ ಕಾಂಗ್ರೆಸ್‌ನ ಒಂದು ವರ್ಗವೂ ಈ ಯೋಜನೆಯನ್ನು ವಿರೋಧಿಸುತ್ತಿದೆ. ಆದರೆ, ತಜ್ಞರು ಮತ್ತು ಯೋಜನೆಯ ಪರವಾಗಿರುವವರು ಇದರಿಂದ ಜಿಲ್ಲೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳುತ್ತಿದ್ದಾರೆ. ನೋಡೋಣ&#8221; ಎಂದರು.</p>



<p>ಇತರ ಯೋಜನೆಗಳ ಬಗ್ಗೆ ಸಚಿವರ ನಿಲುವು</p>



<p>ಬೇಡ್ತಿ-ವರದಾ ನದಿ ಜೋಡಣೆ ಯೋಜನೆ: ಈ ಯೋಜನೆಯನ್ನು ಕಳೆದ ಎರಡು ದಶಕಗಳಿಂದಲೂ ಜಿಲ್ಲೆಯ ಜನರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. &#8220;ನಾವು ನದಿ ನೀರನ್ನು ತಿರುಗಿಸಲು ಅವಕಾಶ ನೀಡುವುದಿಲ್ಲ. ಈ ಯೋಜನೆ ಜಾರಿಯಾಗುವುದಿಲ್ಲ&#8221; ಎಂದು ಅವರು ಖಚಿತಪಡಿಸಿದರು.</p>



<p>ಜಾತಿ ಸಮೀಕ್ಷೆ: ಇದು ಜಾತಿ ಗಣತಿ ಅಲ್ಲ, ಬದಲಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ. ಕೇಂದ್ರ ಸರ್ಕಾರ ನಡೆಸುವ ಗಣತಿಯಂತಲ್ಲದೆ, ನಮ್ಮ ಸಮೀಕ್ಷೆಯ ಉದ್ದೇಶ ವಿವಿಧ ಜಾತಿಗಳಿಗೆ ಸೇರಿದ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಅರ್ಥಮಾಡಿಕೊಳ್ಳುವುದಾಗಿದೆ. ಶಿಕ್ಷಕರು ಸೇರಿದಂತೆ ಸಮೀಕ್ಷೆ ನಡೆಸಲು ಅಗತ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ. ಸರ್ಕಾರವು ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಉತ್ಸುಕವಾಗಿದೆ. &#8220;ಸಮೀಕ್ಷೆಯನ್ನು ಮುಂದೂಡುವುದರಲ್ಲಿ ಅರ್ಥವಿಲ್ಲ. ಇದು ನಿರ್ಧಾರವಾಗಿದೆ, ಇಂದು ಅಥವಾ ನಾಳೆ ಮಾಡುವುದರಲ್ಲಿ ಏನು ವ್ಯತ್ಯಾಸವಿದೆ?&#8221; ಎಂದು ಅವರು ಪ್ರಶ್ನಿಸಿದರು.</p>



<p>ಸಿದ್ದಾಪುರವನ್ನು ಸಾಗರಕ್ಕೆ ವಿಲೀನಗೊಳಿಸುವ ಪ್ರಸ್ತಾವನೆ: ಈ ಬಗ್ಗೆ ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸಿದ ವೈದ್ಯ, &#8220;ಸಿದ್ದಾಪುರವನ್ನು ಸಾಗರ ತಾಲ್ಲೂಕಿಗೆ (ಶಿವಮೊಗ್ಗ ಜಿಲ್ಲೆಯ) ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ&#8221; ಎಂದು ಸ್ಪಷ್ಟಪಡಿಸಿದರು.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ಆಡಳಿತ ಟಿಪ್ಪು ಆಡಳಿತವನ್ನೂ ನಾಚಿಸುವಂತಿದೆ: ವಿಜಯೇಂದ್ರ</title>
		<link>https://peepalmedia.com/siddaramaiahs-administration-is-putting-tipus-administration-to-shame-vijayendra/</link>
		
		<dc:creator><![CDATA[Peepal Media]]></dc:creator>
		<pubDate>Mon, 22 Sep 2025 04:07:24 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=66459</guid>

					<description><![CDATA[ಶಿವಮೊಗ್ಗ: &#8216;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯು ಬ್ರಿಟಿಷರು ಮತ್ತು ಟಿಪ್ಪು ಸುಲ್ತಾನನ ಆಡಳಿತವನ್ನೂ ನಾಚಿಸುವಂತಿದೆ. ಜಾತಿ ಸಮೀಕ್ಷೆಯ ನೆಪವೊಡ್ಡಿ ಅವರು ಸಮಾಜದಲ್ಲಿ ವಿಷ ಬೀಜ ಬಿತ್ತಲು ಹೊರಟಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು ಮಾಡುವುದಿಲ್ಲ&#8217; ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು. ಭಾನುವಾರ ಸುದ್ದಿಗಾರರ ಮುಂದೆ ಮಾತನಾಡಿದ ಅವರು, &#8220;ಮುಖ್ಯಮಂತ್ರಿಯಾಗಿ ಅವರು ಅಭಿವೃದ್ಧಿ ಹಾಗೂ ಮಾನವ ಕಲ್ಯಾಣಕ್ಕೆ ಶ್ರಮಿಸಬೇಕಿತ್ತು. ಆದರೆ, ಧರ್ಮಸ್ಥಳದ ವಿಚಾರದಲ್ಲಿ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಗಣಪತಿ ಹಬ್ಬದ ಸಂದರ್ಭದಲ್ಲಿ [&#8230;]]]></description>
										<content:encoded><![CDATA[
<p>ಶಿವಮೊಗ್ಗ: &#8216;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯು ಬ್ರಿಟಿಷರು ಮತ್ತು ಟಿಪ್ಪು ಸುಲ್ತಾನನ ಆಡಳಿತವನ್ನೂ ನಾಚಿಸುವಂತಿದೆ. ಜಾತಿ ಸಮೀಕ್ಷೆಯ ನೆಪವೊಡ್ಡಿ ಅವರು ಸಮಾಜದಲ್ಲಿ ವಿಷ ಬೀಜ ಬಿತ್ತಲು ಹೊರಟಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು ಮಾಡುವುದಿಲ್ಲ&#8217; ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು.</p>



<p>ಭಾನುವಾರ ಸುದ್ದಿಗಾರರ ಮುಂದೆ ಮಾತನಾಡಿದ ಅವರು, &#8220;ಮುಖ್ಯಮಂತ್ರಿಯಾಗಿ ಅವರು ಅಭಿವೃದ್ಧಿ ಹಾಗೂ ಮಾನವ ಕಲ್ಯಾಣಕ್ಕೆ ಶ್ರಮಿಸಬೇಕಿತ್ತು. ಆದರೆ, ಧರ್ಮಸ್ಥಳದ ವಿಚಾರದಲ್ಲಿ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಗಣಪತಿ ಹಬ್ಬದ ಸಂದರ್ಭದಲ್ಲಿ ಹೊಸ ಕಾನೂನನ್ನು ಜಾರಿಗೊಳಿಸಿ ಅದ್ದೂರಿ ಮೆರವಣಿಗೆಗಳಿಗೆ ಅಡ್ಡಗಾಲು ಹಾಕಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಸಮಾಜ ಒಡೆಯಲು ಹೊರಟಿದ್ದಾರೆ&#8221; ಎಂದು ಕಿಡಿಕಾರಿದರು.</p>



<p>&#8220;ರಾಜ್ಯದಲ್ಲಿನ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ಅವುಗಳ ದುರಸ್ತಿಗೆ ಆಗ್ರಹಿಸಿ ಸೆಪ್ಟೆಂಬರ್ 24ರಂದು ರಾಜ್ಯದಾದ್ಯಂತ ರಸ್ತೆ ತಡೆ ನಡೆಸಿ ಪ್ರತಿಭಟಿಸುತ್ತೇವೆ&#8221; ಎಂದು ಅವರು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ನೀರಾವರಿ ಯೋಜನೆಗಳಿಗೆ ಹಣ ತನ್ನಿ, ಇಲ್ಲವೇ ರಾಜೀನಾಮೆ ಕೊಡಿ: ಬಿಜೆಪಿ ಸಂಸದರಿಗೆ ಡಿಕೆ ಶಿವಕುಮಾರ್ ಆಗ್ರಹ</title>
		<link>https://peepalmedia.com/bring-money-for-irrigation-projects-or-resign-shivakumar-urges-bjp-mps/</link>
		
		<dc:creator><![CDATA[Peepal Media]]></dc:creator>
		<pubDate>Sat, 13 Sep 2025 02:59:02 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=65935</guid>

					<description><![CDATA[ಶಿವಮೊಗ್ಗ: ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದಿಂದ ಹಣ ತರುವಂತೆ ಒತ್ತಡ ಹೇರಿ, ಇಲ್ಲವಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಬಿಜೆಪಿ ಸಂಸದರಿಗೆ ಆಗ್ರಹಿಸಿದ್ದಾರೆ. ಶುಕ್ರವಾರ ಭದ್ರಾವತಿಯ ಬಳಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, &#8220;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದ ₹5300 ಕೋಟಿ ರೂಪಾಯಿಗಳ ಮೇಲ್ದಂಡೆ ಭದ್ರಾ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ [&#8230;]]]></description>
										<content:encoded><![CDATA[
<p>ಶಿವಮೊಗ್ಗ: ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದಿಂದ ಹಣ ತರುವಂತೆ ಒತ್ತಡ ಹೇರಿ, ಇಲ್ಲವಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಬಿಜೆಪಿ ಸಂಸದರಿಗೆ ಆಗ್ರಹಿಸಿದ್ದಾರೆ.</p>



<p>ಶುಕ್ರವಾರ ಭದ್ರಾವತಿಯ ಬಳಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, &#8220;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದ ₹5300 ಕೋಟಿ ರೂಪಾಯಿಗಳ ಮೇಲ್ದಂಡೆ ಭದ್ರಾ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಹಣ ಪಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲ್ಕು ಬಾರಿ ಭೇಟಿಯಾಗಿದ್ದೇನೆ.&#8221;</p>



<p>&#8220;ಆದರೆ, ಅವರು ಒಂದೇ ಒಂದು ದಾಖಲೆಗೂ ಸಹಿ ಹಾಕಿಲ್ಲ. ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಜನರು ನಿಮಗೆ ಮತ ನೀಡಿದ್ದಾರೆ. ಪ್ರಧಾನಿ ಬಳಿ ಹೋಗಿ ಕರ್ನಾಟಕದ ಜನರಿಗೆ ಅವರ ಋಣವನ್ನು ತೀರಿಸುವಂತೆ ಕೇಳಿ. ಅಲ್ಲಿ ನಿಮ್ಮ ಧ್ವನಿ ಎತ್ತಿ&#8221; ಎಂದು ಅವರು ಬಿಜೆಪಿ ಸಂಸದರಿಗೆ ತಿಳಿಸಿದರು.</p>



<p>ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಆಲಮಟ್ಟಿ ಅಣೆಕಟ್ಟಿನ ಪ್ರಸ್ತುತ ಎತ್ತರವನ್ನು 519 ಮೀಟರ್‌ಗಳಿಂದ 524 ಮೀಟರ್‌ಗಳಿಗೆ ಹೆಚ್ಚಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. &#8220;ಅವರು ಹಾಗೆ ಹೇಳಲು ಯಾರು? ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರು ಪಡೆಯುವುದು ನಮ್ಮ ಹಕ್ಕು&#8221; ಎಂದು ಶಿವಕುಮಾರ್ ಹೇಳಿದರು.</p>
]]></content:encoded>
					
		
		
			</item>
		<item>
		<title>ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದೆಲ್ಲೆಡೆ ಬಿಗಿ ಭದ್ರತೆ; ಅಘೋಷಿತ ಬಂದ್!</title>
		<link>https://peepalmedia.com/shivamogga-hindu-mahasabha-ganpati-immersion/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 06 Sep 2025 07:54:23 +0000</pubDate>
				<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=65410</guid>

					<description><![CDATA[ಬಹುತೇಕ ಸಂದರ್ಭಗಳಲ್ಲಿ ವಿವಾದಿತ ಕೇಂದ್ರಬಿಂದುವಾಗಿರುವ, ಹೆಚ್ಚಿನ ಸಂದರ್ಭಗಳಲ್ಲಿ ಕೋಮುವಾದಿ ಶಕ್ತಿಗಳಿಗೆ ಆಹಾರವಾಗುವ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಗೆ ಈ ಬಾರಿ ಬಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸುಮಾರು 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದಾದ್ಯಂತ ಯಾವುದೇ ಅಹಿತಕರ ದುರ್ಘಟನೆಗಳು ನಡೆಯದಂತೆ ಪೊಲೀಸರು ಶಿವಮೊಗ್ಗ ನಗರದಾದ್ಯಂತ ವಿಶೇಷವಾಗಿ ಗಣಪತಿ ವಿಸರ್ಜನೆಯ ಮೆರವಣಿಗೆ ಹೋಗುವ ಬೀದಿಗಳಲ್ಲಿ ಬಿಗಿಬಂದೋಬಸ್ತ್ ಕೈಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಶಾಲೆ ಕಾಲೇಜುಗಳಿಗೆ (ಅಂಗನವಾಡಿಯಿಂದ ಪಿಯುಸಿ) ರಜೆ ಘೋಷಣೆ ಮಾಡಲಾಗಿದೆ. ಅನೇಕ [&#8230;]]]></description>
										<content:encoded><![CDATA[
<p>ಬಹುತೇಕ ಸಂದರ್ಭಗಳಲ್ಲಿ ವಿವಾದಿತ ಕೇಂದ್ರಬಿಂದುವಾಗಿರುವ, ಹೆಚ್ಚಿನ ಸಂದರ್ಭಗಳಲ್ಲಿ ಕೋಮುವಾದಿ ಶಕ್ತಿಗಳಿಗೆ ಆಹಾರವಾಗುವ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಗೆ ಈ ಬಾರಿ ಬಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸುಮಾರು 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.</p>



<p>ನಗರದಾದ್ಯಂತ ಯಾವುದೇ ಅಹಿತಕರ ದುರ್ಘಟನೆಗಳು ನಡೆಯದಂತೆ ಪೊಲೀಸರು ಶಿವಮೊಗ್ಗ ನಗರದಾದ್ಯಂತ ವಿಶೇಷವಾಗಿ ಗಣಪತಿ ವಿಸರ್ಜನೆಯ ಮೆರವಣಿಗೆ ಹೋಗುವ ಬೀದಿಗಳಲ್ಲಿ ಬಿಗಿಬಂದೋಬಸ್ತ್ ಕೈಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಶಾಲೆ ಕಾಲೇಜುಗಳಿಗೆ (ಅಂಗನವಾಡಿಯಿಂದ ಪಿಯುಸಿ) ರಜೆ ಘೋಷಣೆ ಮಾಡಲಾಗಿದೆ.</p>



<p>ಅನೇಕ ಸಂದರ್ಭಗಳಲ್ಲಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ವೇಳೆ ಗಲಾಟೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಆಗುವವರೆಗೆ ಪೊಲೀಸ್ ಇಲಾಖೆಗೆ ದೊಡ್ಡ ಟೆನ್ಷನ್. ಇಂದಿನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸೇರಿದಂತೆ ಹೊರಜಿಲ್ಲೆಯಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ನಗರದಲ್ಲಿ ಜನಸಾಗರವೇ ಸೇರುವುದರಿಂದ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಲಿವೆ. ಮದ್ಯ ಮಾರಾಟಕ್ಕೆ ಜಿಲ್ಲಾಢಳಿತ ನಿಷೇಧ ಹೇರಿದೆ.</p>



<p>ಪೊಲಿಸರು ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪಥಸಂಚಲನ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ಪೊಲೀಸ್ ಮೈದಾನದಿಂದ ಪಥಸಂಚಲನ ಆರಂಭವಾಗಿದ್ದು, ಅಮೀರ್ ಅಹ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ತೀರ್ಥಹಳ್ಳಿ ರಸ್ತೆಯಲ್ಲಿ ಪಥಸಂಚಲನ ಮಾಡಲಾಗಿದೆ. ಇನ್ನು ಇದರಲ್ಲಿ ಡಿಎಆರ್, ಆರ್​ಎಎಫ್, ಕೆಎಸ್ಆರ್​ಪಿ, ಸಿವಿಲ್ ಪೊಲೀಸರು ಭಾಗಿಯಾಗಿದ್ದರು.</p>



<p>ಗಣೇಶ ಮೆರವಣಿಗೆ ವೇಳೆ ಸಾವಿರಾರು ಜನರು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಐವರು ಎಎಸ್​ಪಿ, 14 ಡಿವೈಎಸ್​ಪಿ, 40 ಪಿಐ, 75 ಪಿಎಸ್ಐ ಸೇರಿದಂತೆ ಶಿವಮೊಗ್ಗದಾದ್ಯಂತ ಭದ್ರತೆಗಾಗಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಶಿವಮೊಗ್ಗಕ್ಕೆ ಪೊಲೀಸರು ಆಗಮಿಸಿದ್ದಾರೆ. 15 ಡಿಎಆರ್ ತುಕಡಿ, 20 ಕೆಎಸ್ಆರ್​ಪಿ ತುಕಡಿ, ಹೋಮ್​ಗಾರ್ಡ್ಸ್ ಬಳಕೆ ಮಾಡಲಾಗಿದೆ. ಇನ್ನು 1 ಸಾವಿರ ಸಿಸಿಕ್ಯಾಮರಾ ಅಳವಡಿಕೆ, 100 ವಿಡಿಯೋ ಕ್ಯಾಮರಾ, ಜನಸಂದಣಿ ಮೇಲೆ ನಿಗಾವಹಿಸಲು 20 ಡ್ರೋನ್ ಕ್ಯಾಮರಾಗಳ ಬಳಕೆ ಮಾಡಲಾಗುತ್ತದೆ.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಸರ್ಕಾರ ಹೆಚ್ಚು ಭ್ರಷ್ಟ: ಕರ್ನಾಟಕ ಗುತ್ತಿಗೆದಾರರ ಸಂಘದ ಆರೋಪ</title>
		<link>https://peepalmedia.com/karnataka-contractors-association-alleges-congress-government-is-more-corrupt/</link>
		
		<dc:creator><![CDATA[Peepal Media]]></dc:creator>
		<pubDate>Thu, 21 Aug 2025 02:02:36 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=64508</guid>

					<description><![CDATA[ಶಿವಮೊಗ್ಗ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಅದರ ಹಿಂದಿನ ಸರ್ಕಾರಕ್ಕಿಂತ &#8220;ಹೆಚ್ಚು ಭ್ರಷ್ಟ&#8221;ವಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.ಆರ್. ಮಂಜುನಾಥ್ ಬುಧವಾರ ಆರೋಪಿಸಿದ್ದಾರೆ. ಸಚಿವರು ಆಯ್ದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಮಲೆನಾಡು ಗುತ್ತಿಗೆದಾರರ ಸಂಘ ಆಯೋಜಿಸಿದ್ದ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಕೆಲವೇ ಕೆಲವು ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ಕರೆದು ಇತರರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿವಮೊಗ್ಗಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಬೆಂಗಳೂರಿನಲ್ಲಿ ಟೆಂಡರ್ [&#8230;]]]></description>
										<content:encoded><![CDATA[
<p>ಶಿವಮೊಗ್ಗ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಅದರ ಹಿಂದಿನ ಸರ್ಕಾರಕ್ಕಿಂತ &#8220;ಹೆಚ್ಚು ಭ್ರಷ್ಟ&#8221;ವಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.ಆರ್. ಮಂಜುನಾಥ್ ಬುಧವಾರ ಆರೋಪಿಸಿದ್ದಾರೆ. ಸಚಿವರು ಆಯ್ದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.</p>



<p>ಮಲೆನಾಡು ಗುತ್ತಿಗೆದಾರರ ಸಂಘ ಆಯೋಜಿಸಿದ್ದ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಕೆಲವೇ ಕೆಲವು ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ಕರೆದು ಇತರರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿವಮೊಗ್ಗಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಬೆಂಗಳೂರಿನಲ್ಲಿ ಟೆಂಡರ್ ಕರೆಯುವ ಪದ್ಧತಿಯನ್ನು ಗುತ್ತಿಗೆದಾರರು ವಿರೋಧಿಸಿದ್ದಾರೆ ಎಂದು ಮಂಜುನಾಥ್ ಹೇಳಿದ್ದಾರೆ.</p>



<p>ಒಂಬತ್ತು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಸರ್ಕಾರ ₹32,000 ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದರಲ್ಲಿ ಸಣ್ಣ ನೀರಾವರಿಯಲ್ಲಿ ₹12,000 ಕೋಟಿ ಮತ್ತು ಪ್ರಮುಖ ನೀರಾವರಿಯಲ್ಲಿ ₹8,000 ಕೋಟಿ ಸೇರಿವೆ. ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪವನ್ನು ನೆನಪಿಸಿಕೊಂಡ ಅವರು, ಈಗ ಕಮಿಷನ್ ದರಗಳು ಇನ್ನೂ ಹೆಚ್ಚಿವೆ ಎಂದು ಆರೋಪಿಸಿದರು. ಕಳಪೆ ಗುಣಮಟ್ಟದ ಕೆಲಸದ ಆರೋಪಗಳನ್ನು ತಳ್ಳಿಹಾಕಿದ ಅವರು, ಪಾವತಿಗಳಲ್ಲಿನ ವಿಳಂಬಕ್ಕೆ ಅಧಿಕಾರಿಗಳನ್ನು ದೂಷಿಸಿದರು.</p>
]]></content:encoded>
					
		
		
			</item>
		<item>
		<title>ಶಾಲೆಯ ಕುಡಿಯುವ ನೀರಿಗೆ ವಿಷ ಬೆರೆಸಿದ ಪ್ರಕರಣ: ಘಟನೆಯನ್ನು ಖಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ</title>
		<link>https://peepalmedia.com/drinking-water-poisoning-case-chief-minister-siddaramaiah-condemns-the-incident/</link>
		
		<dc:creator><![CDATA[Peepal Media]]></dc:creator>
		<pubDate>Sat, 02 Aug 2025 03:22:25 +0000</pubDate>
				<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=63546</guid>

					<description><![CDATA[ಶಿವಮೊಗ್ಗ: ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ಕೀಟನಾಶಕ ಬೆರೆಸಿದ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು &#8216;ಎಕ್ಸ್&#8217; (X) ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, &#8220;ಇದು ಮಕ್ಕಳ ಸಾಮೂಹಿಕ ಹತ್ಯೆ ನಡೆಸುವ ದುರುದ್ದೇಶದಿಂದ ಮಾಡಿದ ಯಾವುದೇ ಭಯೋತ್ಪಾದಕ ಕೃತ್ಯಕ್ಕಿಂತ ಕಡಿಮೆಯದ್ದಲ್ಲ&#8221; ಎಂದು ಹೇಳಿದ್ದಾರೆ. ನೀರಿನಲ್ಲಿ ವಿಚಿತ್ರ ವಾಸನೆ ಗುರುತಿಸಿ ದೊಡ್ಡ ದುರಂತವನ್ನು ತಪ್ಪಿಸಿದ ಶಾಲೆಯ ಅಡುಗೆ ಸಿಬ್ಬಂದಿಯನ್ನು ಶ್ಲಾಘಿಸಿದ [&#8230;]]]></description>
										<content:encoded><![CDATA[
<p>ಶಿವಮೊಗ್ಗ: ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ಕೀಟನಾಶಕ ಬೆರೆಸಿದ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>



<p>ಘಟನೆಯ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು &#8216;ಎಕ್ಸ್&#8217; (X) ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, &#8220;ಇದು ಮಕ್ಕಳ ಸಾಮೂಹಿಕ ಹತ್ಯೆ ನಡೆಸುವ ದುರುದ್ದೇಶದಿಂದ ಮಾಡಿದ ಯಾವುದೇ ಭಯೋತ್ಪಾದಕ ಕೃತ್ಯಕ್ಕಿಂತ ಕಡಿಮೆಯದ್ದಲ್ಲ&#8221; ಎಂದು ಹೇಳಿದ್ದಾರೆ.</p>



<p>ನೀರಿನಲ್ಲಿ ವಿಚಿತ್ರ ವಾಸನೆ ಗುರುತಿಸಿ ದೊಡ್ಡ ದುರಂತವನ್ನು ತಪ್ಪಿಸಿದ ಶಾಲೆಯ ಅಡುಗೆ ಸಿಬ್ಬಂದಿಯನ್ನು ಶ್ಲಾಘಿಸಿದ ಮುಖ್ಯಮಂತ್ರಿ, &#8220;ಅವರ ಸಮಯಪ್ರಜ್ಞೆಯಿಂದಾಗಿ ಒಂದು ದೊಡ್ಡ ದುರಂತ ತಪ್ಪಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಪರಾಧಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುವಂತೆ ನಾನು ಪೊಲೀಸರಿಗೆ ಸೂಚನೆ ನೀಡಿದ್ದೇನೆ&#8221; ಎಂದು ತಿಳಿಸಿದ್ದಾರೆ.</p>



<p>ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಶಾಲೆಯಲ್ಲಿರುವ ಹಳೆಯ ಎರಡು ನೀರಿನ ಟ್ಯಾಂಕ್‌ಗಳ ಬದಲಿಗೆ ಹೊಸ ಟ್ಯಾಂಕ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ಶಾಲೆಯ ಸಿಬ್ಬಂದಿ ಮಕ್ಕಳ ಪೋಷಕರೊಂದಿಗೆ ಸಭೆ ನಡೆಸಿ, ಅವರ ಆತಂಕಗಳನ್ನು ದೂರ ಮಾಡುವಂತೆ ಕೋರಿದರು.</p>



<p>&#8220;ಈ ಘಟನೆಗೆ ಯಾರೂ ಹೆದರಬೇಕಿಲ್ಲ. ಅಪರಾಧಿಗಳನ್ನು ಗುರುತಿಸಿ ಶಿಕ್ಷಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ&#8221; ಎಂದು ಅವರು ಹೇಳಿದರು.</p>



<p>ಘಟನೆಯ ಕಾರಣ ಶುಕ್ರವಾರ ಶಾಲೆಗೆ ರಜೆ ಘೋಷಿಸಲಾಗಿದ್ದು, ಶನಿವಾರವೂ ಶಾಲೆ ಮುಚ್ಚಲಿದೆ. ಸೋಮವಾರದಿಂದ ತರಗತಿಗಳು ಪುನರಾರಂಭಗೊಳ್ಳಲಿವೆ.</p>



<p>ಈ ಘಟನೆ ಗುರುವಾರ ನಡೆದಿದ್ದು, ಶಾಲೆಯ ಅಡುಗೆ ಸಿಬ್ಬಂದಿ ಕೈ ತೊಳೆಯುವಾಗ ನೀರಿನಲ್ಲಿ ಕೀಟನಾಶಕದ ವಾಸನೆ ಬಂದಿದೆ. ಅವರು ತಕ್ಷಣವೇ ಶಿಕ್ಷಕರಿಗೆ ವಿಷಯ ತಿಳಿಸಿದ್ದು, ನಂತರ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.</p>



<p>ಹೊಸನಗರ ತಹಶೀಲ್ದಾರ್ ರಶ್ಮಿ ಹಳೇಶ್, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸರು ಶಾಲೆಗೆ ಭೇಟಿ ನೀಡಿ ನೀರನ್ನು ಪರೀಕ್ಷಿಸಿದ್ದಾರೆ. ಪರೀಕ್ಷೆಯಲ್ಲಿ ನೀರಿಗೆ ಕೀಟನಾಶಕ ಬೆರೆಸಿರುವುದು ದೃಢಪಟ್ಟಿದೆ. ಅದೃಷ್ಟವಶಾತ್, ಯಾವುದೇ ವಿದ್ಯಾರ್ಥಿ ನಲ್ಲಿಯಿಂದ ನೀರು ಕುಡಿದಿರಲಿಲ್ಲ.</p>
]]></content:encoded>
					
		
		
			</item>
		<item>
		<title>ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ; ಭಾವೈಕ್ಯತೆ ಮೆರೆದ ಬಂಜಾರ ಸಮುದಾಯ</title>
		<link>https://peepalmedia.com/muharram-celebration-banjara-community-shows-emotional-unity/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 07 Jul 2025 03:36:11 +0000</pubDate>
				<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<guid isPermaLink="false">https://peepalmedia.com/?p=62237</guid>

					<description><![CDATA[ಆ ಊರಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ. ಒಬ್ಬೇ ಒಬ್ಬ ಮುಸಲ್ಮಾನನೂ ಇಲ್ಲ. ಆದರೂ ಆ ಊರಲ್ಲಿ ಪವಿತ್ರ ಮೊಹರಂ ಹಬ್ಬದ ಆಚರಣೆ ಮಾಡಿ ಭಾವೈಕ್ಯತೆ ಮೆರೆಯಲಾಗಿದೆ. ಆ ಊರು ಬೇರಾವ ಊರೂ ಅಲ್ಲ.. ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರೇ ಆಗಿರುವ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಒಂದು ಗ್ರಾಮ. ಹೌದು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಮುಸ್ಲಿಂಮರೇ ಇಲ್ಲದಿದ್ದರೂ ಶ್ರದ್ಧೆ ಭಕ್ತಿಯಿಂದ ಮೊಹರಂ ಹಬ್ಬ ಆಚರಣೆ [&#8230;]]]></description>
										<content:encoded><![CDATA[
<p></p>



<p>ಆ ಊರಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ. ಒಬ್ಬೇ ಒಬ್ಬ ಮುಸಲ್ಮಾನನೂ ಇಲ್ಲ. ಆದರೂ ಆ ಊರಲ್ಲಿ ಪವಿತ್ರ ಮೊಹರಂ ಹಬ್ಬದ ಆಚರಣೆ ಮಾಡಿ ಭಾವೈಕ್ಯತೆ ಮೆರೆಯಲಾಗಿದೆ. ಆ ಊರು ಬೇರಾವ ಊರೂ ಅಲ್ಲ.. ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರೇ ಆಗಿರುವ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಒಂದು ಗ್ರಾಮ.</p>



<p>ಹೌದು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಮುಸ್ಲಿಂಮರೇ ಇಲ್ಲದಿದ್ದರೂ ಶ್ರದ್ಧೆ ಭಕ್ತಿಯಿಂದ ಮೊಹರಂ ಹಬ್ಬ ಆಚರಣೆ ಮಾಡಿದ ಬಂಜಾರ ಸಮುದಾಯ ಭಾವೈಕ್ಯತೆ ಮೆರೆದಿದ್ದಾರೆ.</p>



<p>ಒಂದೇ ಒಂದು ಮುಸ್ಲಿಂ ಮನೆ ಇಲ್ಲದಿದ್ದರೂ ಬಂಜಾರ ಸಮುದಾಯದವರು ಅದ್ದೂರಿಯಾಗಿ ಮೊಹರಂ ಆಚರಿಸಿ ಭಾವೈಕ್ಯತೆ ಮೆರೆದಿದ್ದಾರೆ. ಶೀರಿಹಳ್ಳಿ ತಾಂಡಾದಲ್ಲಿ ಶ್ರದ್ಧಾಭಕ್ತಿಯಿಂದ ಮೊಹರಂ ಆಚರಿಸಲಾಗಿದೆ.</p>



<p>ಮೂರು ದಿನಗಳ ಕಾಲ ಅಲೈದೇವರನ್ನ ಇಟ್ಟು ಪೂಜೆ ಮಾಡುವ ಬಂಜಾರರು ಮೂರನೇ ದಿನದಂದು ಅದ್ದೂರಿಯಾಗಿ ಮೆರವಣಿಗೆ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದ್ದಾರೆ. ಮೆರವಣಿಗೆ ವೇಳೆ ಬಂಜಾರ ಸಂಪ್ರದಾಯದಂತೆ ಹಾಡು, ಭಜನೆ ಮೂಲಕ ಮೊಹರಂ ಆಚರಿಸುವ ಮೂಲಕ ಭಾವೈಕತೆ ಸಾರಿದ್ದಾರೆ.</p>
]]></content:encoded>
					
		
		
			</item>
	</channel>
</rss>
