<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಇನ್ನಷ್ಟು &#8211; Peepal Media</title>
	<atom:link href="https://peepalmedia.com/category/more/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 27 Feb 2026 08:17:29 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.1</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಇನ್ನಷ್ಟು &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು</title>
		<link>https://peepalmedia.com/supreme-court-grants-bail-to-mla-vinay-kulkarni/</link>
		
		<dc:creator><![CDATA[Peepal Media]]></dc:creator>
		<pubDate>Fri, 27 Feb 2026 08:06:02 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74802</guid>

					<description><![CDATA[ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟದ ನಂತರ, ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಈ ಮೂಲಕ ಜೈಲುವಾಸ ಅನುಭವಿಸುತ್ತಿದ್ದ ಕುಲಕರ್ಣಿಗೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಂತಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಕುಲಕರ್ಣಿ ಪರ ವಕೀಲ ಶರಣಗೌಡ ಪಾಟೀಲ್ ನೇತೃತ್ವದ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ದೀರ್ಘಕಾಲದ ಕಾನೂನು ಹೋರಾಟದ ನಂತರ, ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಈ ಮೂಲಕ ಜೈಲುವಾಸ ಅನುಭವಿಸುತ್ತಿದ್ದ ಕುಲಕರ್ಣಿಗೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಂತಾಗಿದೆ.</p>



<p>ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಕುಲಕರ್ಣಿ ಪರ ವಕೀಲ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ಮಂಜೂರು ಮಾಡಿದೆ.</p>



<p>ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯವು ಒಂದು ಪ್ರಮುಖ ಸೂಚನೆ ನೀಡಿದ್ದು, ಮುಂದಿನ ಎರಡು ತಿಂಗಳ ಒಳಗಾಗಿ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ನ್ಯಾಯಾಲಯಕ್ಕೆ ಆದೇಶಿಸಿದೆ.</p>



<p>ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಸಿಬಿಐ ಮನವಿಯ ಮೇರೆಗೆ ಈ ಹಿಂದೆ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗಿ ಜೈಲು ಸೇರಿದ್ದರು. ಸಾಕ್ಷಿ ನಾಶ ಮತ್ತು ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಸಿಬಿಐ ನಿರಂತರವಾಗಿ ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿತ್ತು.</p>



<p>ಸದ್ಯ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಕ್ಕಿರುವುದು ಅವರ ಬೆಂಬಲಿಗರಲ್ಲಿ ಸಂತಸ ತಂದಿದ್ದು, ಧಾರವಾಡ ರಾಜಕಾರಣದಲ್ಲೂ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.</p>
]]></content:encoded>
					
		
		
			</item>
		<item>
		<title>ನ್ಯಾಯಮೂರ್ತಿ ಯಶವಂತ್ ವರ್ಮಾ ವಜಾ ಪ್ರಕ್ರಿಯೆ ಚುರುಕು: ತನಿಖಾ ಸಮಿತಿಗೆ ಬಿ.ವಿ. ಆಚಾರ್ಯ ಸೇರ್ಪಡೆ, ಅವಧಿ ವಿಸ್ತರಣೆ</title>
		<link>https://peepalmedia.com/high-court-judge-dismissal-process-expedited/</link>
		
		<dc:creator><![CDATA[Peepal Media]]></dc:creator>
		<pubDate>Thu, 26 Feb 2026 14:01:26 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74735</guid>

					<description><![CDATA[ಕಳೆದ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ ನೋಟುಗಳ ಕಂತೆಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಅವರನ್ನು ಪದಚ್ಯುತಗೊಳಿಸುವ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ಮೂವರು ಸದಸ್ಯರ ಸಮಿತಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನರ್ ರಚಿಸಿದ್ದಾರೆ. ಈ ಸಮಿತಿಗೆ ಫೆಬ್ರವರಿ 26 ರಿಂದ ಅನ್ವಯವಾಗುವಂತೆ ಮೂರು ತಿಂಗಳ ಕಾಲಾವಕಾಶವನ್ನೂ ವಿಸ್ತರಿಸಲಾಗಿದೆ ಎಂದು ಲೋಕಸಭಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯವರನ್ನು ತೆಗೆದುಹಾಕಲು ವಿವಿಧ ರಾಜಕೀಯ ಪಕ್ಷಗಳು ನೀಡಿದ್ದ ನೋಟಿಸನ್ನು ಅಂಗೀಕರಿಸಿದ ನಂತರ, [&#8230;]]]></description>
										<content:encoded><![CDATA[
<p>ಕಳೆದ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ ನೋಟುಗಳ ಕಂತೆಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಅವರನ್ನು ಪದಚ್ಯುತಗೊಳಿಸುವ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ಮೂವರು ಸದಸ್ಯರ ಸಮಿತಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನರ್ ರಚಿಸಿದ್ದಾರೆ.</p>



<p>ಈ ಸಮಿತಿಗೆ ಫೆಬ್ರವರಿ 26 ರಿಂದ ಅನ್ವಯವಾಗುವಂತೆ ಮೂರು ತಿಂಗಳ ಕಾಲಾವಕಾಶವನ್ನೂ ವಿಸ್ತರಿಸಲಾಗಿದೆ ಎಂದು ಲೋಕಸಭಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>



<p>ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯವರನ್ನು ತೆಗೆದುಹಾಕಲು ವಿವಿಧ ರಾಜಕೀಯ ಪಕ್ಷಗಳು ನೀಡಿದ್ದ ನೋಟಿಸನ್ನು ಅಂಗೀಕರಿಸಿದ ನಂತರ, ಕಳೆದ ವರ್ಷ ಆಗಸ್ಟ್ 12 ರಂದು ಸ್ಪೀಕರ್ ಈ ಸಮಿತಿಯನ್ನು ರಚಿಸುವ ಮೂಲಕ ವಜಾ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.</p>



<p>ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಬುಧವಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಮಾರ್ಚ್ 6, 2026 ರಿಂದ ಈ ಹೊಸ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಇದರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮುಂಬೈ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಮತ್ತು ಕರ್ನಾಟಕದ ಹಿರಿಯ ವಕೀಲರಾದ ಬಿ.ವಿ. ಆಚಾರ್ಯ ಅವರು ಸದಸ್ಯರಾಗಿದ್ದಾರೆ.</p>



<p>ಹಿಂದಿನ ಸಮಿತಿಯಲ್ಲಿದ್ದ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಅವರು ಮಾರ್ಚ್ 5 ರಂದು ನಿವೃತ್ತರಾಗಲಿರುವ ಕಾರಣ (ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು 62 ವರ್ಷ), ಅವರ ಬದಲಿಗೆ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಉಳಿದಂತೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ಬಿ.ವಿ. ಆಚಾರ್ಯ ಅವರು ಸಮಿತಿಯಲ್ಲಿ ಮುಂದುವರಿಯಲಿದ್ದಾರೆ. ಈ ತನಿಖಾ ಪ್ರಕ್ರಿಯೆಯು ನ್ಯಾಯಾಲಯದಂತೆಯೇ ನಡೆಯಲಿದ್ದು, ಆರೋಪಿಗಳು ತಮ್ಮನ್ನು ಸಮರ್ಥಿಸಿಕೊಳ್ಳಲು ಪೂರ್ಣ ಅವಕಾಶವಿರುತ್ತದೆ.</p>



<p>ನಗದು ಪತ್ತೆಯಾದ ಸಮಯದಲ್ಲಿ ದೆಹಲಿ ಹೈಕೋರ್ಟ್‌ನಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮೂಲ ಹೈಕೋರ್ಟ್ ಆದ ಅಲಹಾಬಾದ್ ಹೈಕೋರ್ಟ್‌ಗೆ ಮರಳಿ ಕಳುಹಿಸಲಾಗಿತ್ತು.</p>



<p>ಭಾರತದಲ್ಲಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ಗಂಭೀರ ಆರೋಪಗಳನ್ನು ತನಿಖೆ ಮಾಡಲು &#8216;ನ್ಯಾಯಾಧೀಶರ (ವಿಚಾರಣೆ) ಕಾಯ್ದೆ, 1968&#8217; ಅಡಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತದೆ. ಭಾರತದ ಇತಿಹಾಸದಲ್ಲಿ ಈವರೆಗೆ ಯಾವುದೇ ನ್ಯಾಯಾಧೀಶರನ್ನು ಅಥವಾ ಮುಖ್ಯ ಚುನಾವಣಾ ಆಯುಕ್ತರನ್ನು ಈ ಕಾಯ್ದೆಯಡಿ ಪದಚ್ಯುತಗೊಳಿಸಿದ ಉದಾಹರಣೆ ಇಲ್ಲ.</p>
]]></content:encoded>
					
		
		
			</item>
		<item>
		<title>‘ನ್ಯಾಯಾಂಗ ಭ್ರಷ್ಟಾಚಾರ’ ಅಧ್ಯಾಯಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಪಠ್ಯಪುಸ್ತಕ ನಿಷೇಧ, ಡಿಜಿಟಲ್ ಪ್ರತಿಗಳಿಗೂ ತಡೆ</title>
		<link>https://peepalmedia.com/textbook-ban-digital-copies-also-banned/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 26 Feb 2026 10:19:24 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<guid isPermaLink="false">https://peepalmedia.com/?p=74720</guid>

					<description><![CDATA[ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಸಂಬಂಧಿತ ಪಠ್ಯಪುಸ್ತಕದ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಆದೇಶಿಸಿದೆ. ಪೀಠವು ಮುದ್ರಿತ ಪ್ರತಿಗಳನ್ನು ಜಪ್ತಿ ಮಾಡುವಂತೆ ಹಾಗೂ ಡಿಜಿಟಲ್ ಆವೃತ್ತಿಗಳನ್ನು ಎಲ್ಲಾ ವೇದಿಕೆಗಳಿಂದ ತೆಗೆದುಹಾಕುವಂತೆ ನಿರ್ದೇಶನ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಬಂಧಿತ ಅಧಿಕಾರಿಗಳು ನ್ಯಾಯಾಲಯದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ. ಯಾವುದೇ ರೀತಿಯ ಉಲ್ಲಂಘನೆ ಕಂಡುಬಂದಲ್ಲಿ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು [&#8230;]]]></description>
										<content:encoded><![CDATA[
<p>ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಸಂಬಂಧಿತ ಪಠ್ಯಪುಸ್ತಕದ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಆದೇಶಿಸಿದೆ.</p>



<p>ಪೀಠವು ಮುದ್ರಿತ ಪ್ರತಿಗಳನ್ನು ಜಪ್ತಿ ಮಾಡುವಂತೆ ಹಾಗೂ ಡಿಜಿಟಲ್ ಆವೃತ್ತಿಗಳನ್ನು ಎಲ್ಲಾ ವೇದಿಕೆಗಳಿಂದ ತೆಗೆದುಹಾಕುವಂತೆ ನಿರ್ದೇಶನ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಬಂಧಿತ ಅಧಿಕಾರಿಗಳು ನ್ಯಾಯಾಲಯದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ. ಯಾವುದೇ ರೀತಿಯ ಉಲ್ಲಂಘನೆ ಕಂಡುಬಂದಲ್ಲಿ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.</p>



<p>ಈ ಪ್ರಕರಣದ ಹಿನ್ನೆಲೆಯಲ್ಲಿ NCERT (ಎನ್‌ಸಿಇಆರ್‌ಟಿ) ನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. “ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬಾರದೆಂದು ಏಕೆ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.</p>



<p>ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, ನ್ಯಾಯಾಂಗದ ಘನತೆಯನ್ನು ಹಾನಿಗೊಳಿಸುವ ಉದ್ದೇಶಪೂರ್ವಕ ಪ್ರಯತ್ನದ ಲಕ್ಷಣಗಳು ಕಾಣಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಕೃತ್ಯವು ಕ್ರಿಮಿನಲ್ ನ್ಯಾಯಾಂಗ ನಿಂದನೆಯ ವ್ಯಾಪ್ತಿಗೆ ಬರಬಹುದೆಂದು ಕೂಡ ಸೂಚಿಸಿದೆ.</p>



<p>“ಈ ವಿಚಾರದಲ್ಲಿ ಸಂಪೂರ್ಣ ತನಿಖೆ ಅಗತ್ಯವಾಗಿದೆ. ಇಂತಹ ಬೆಳವಣಿಗೆಗಳನ್ನು ತಡೆಗಟ್ಟದಿದ್ದರೆ, ನ್ಯಾಯಾಂಗದ ಮೇಲಿನ ಸಾರ್ವಜನಿಕ ನಂಬಿಕೆಗೆ ಧಕ್ಕೆ ಉಂಟಾಗಬಹುದು,” ಎಂದು ಪೀಠ ಹೇಳಿದೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವುದು ನ್ಯಾಯಾಂಗದ ಕರ್ತವ್ಯ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.</p>



<p>ಇನ್ನು, ಬುಧವಾರ ಸಲ್ಲಿಸಲಾದ ಎನ್‌ಸಿಇಆರ್‌ಟಿ ವಿವರಣೆಯಲ್ಲಿ ಕ್ಷಮೆಯಾಚನೆ ಕಾಣಿಸದಿರುವುದರ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಲಾಗಿದೆ.</p>
]]></content:encoded>
					
		
		
			</item>
		<item>
		<title>ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ</title>
		<link>https://peepalmedia.com/supreme-court-orders-action-against-those-responsible/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 26 Feb 2026 06:45:38 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<guid isPermaLink="false">https://peepalmedia.com/?p=74707</guid>

					<description><![CDATA[ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ ವಿವಾದಾತ್ಮಕ ಅಧ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಕ್ಷಮೆಯಾಚನೆ ಸಲ್ಲಿಸುವುದರಿಂದ ವಿಷಯ ಮುಕ್ತಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಈ ವಿಷಯದಲ್ಲಿ ತಪ್ಪು ಮಾಡಿದವರನ್ನು ಗುರುತಿಸಿ ಹೊಣೆಗಾರಿಕೆ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ವಿಚಾರಣೆ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಹಾಗೂ ಬಾಕಿ ಉಳಿದಿರುವ ಪ್ರಕರಣಗಳ ಉಲ್ಲೇಖಗಳನ್ನು ಪುಸ್ತಕದಲ್ಲಿ ಸೇರಿಸಿರುವ ವಿಧಾನ ಪ್ರಶ್ನಾರ್ಹವಾಗಿದೆ ಎಂದು ಅಭಿಪ್ರಾಯಪಟ್ಟರು. “ಇದು [&#8230;]]]></description>
										<content:encoded><![CDATA[
<p>ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ ವಿವಾದಾತ್ಮಕ ಅಧ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಕ್ಷಮೆಯಾಚನೆ ಸಲ್ಲಿಸುವುದರಿಂದ ವಿಷಯ ಮುಕ್ತಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಈ ವಿಷಯದಲ್ಲಿ ತಪ್ಪು ಮಾಡಿದವರನ್ನು ಗುರುತಿಸಿ ಹೊಣೆಗಾರಿಕೆ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.</p>



<p>ವಿಚಾರಣೆ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಹಾಗೂ ಬಾಕಿ ಉಳಿದಿರುವ ಪ್ರಕರಣಗಳ ಉಲ್ಲೇಖಗಳನ್ನು ಪುಸ್ತಕದಲ್ಲಿ ಸೇರಿಸಿರುವ ವಿಧಾನ ಪ್ರಶ್ನಾರ್ಹವಾಗಿದೆ ಎಂದು ಅಭಿಪ್ರಾಯಪಟ್ಟರು. “ಇದು ನ್ಯಾಯಾಂಗವನ್ನು ದೂಷಿಸುವ ಉದ್ದೇಶ ಹೊಂದಿದಂತೆ ಕಾಣುತ್ತದೆ. ಕಾರಣರಾದವರನ್ನು ಪತ್ತೆಹಚ್ಚುವವರೆಗೆ ವಿಚಾರಣೆಯನ್ನು ಮುಕ್ತಾಯಗೊಳಿಸುವುದಿಲ್ಲ,” ಎಂದು ಅವರು ಎಚ್ಚರಿಸಿದರು.</p>



<p>ಸಿಜೆಐ ಸೂರ್ಯ ಕಾಂತ್ ಅವರು ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮತ್ತು ಡಾ. ದಿನೇಶ್ ಪ್ರಸಾದ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವ ಕುರಿತು ಸೂಚನೆ ನೀಡಿದರು. “ಈ ಆಕ್ಷೇಪಾರ್ಹ ವಿಷಯಗಳನ್ನು ರಚಿಸಿದವರ ವಿರುದ್ಧ ನ್ಯಾಯಾಂಗ ನಿಂದನೆ ಕಾಯ್ದೆ ಅಥವಾ ಅನ್ವಯಿಸುವ ಇತರ ಕಾನೂನುಗಳಡಿ ಕ್ರಮ ಕೈಗೊಳ್ಳಬಾರದೇ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.</p>



<p>ನ್ಯಾಯಾಂಗದ ಘನತೆಯನ್ನು ಕುಂದಿಸುವ ಪ್ರಯತ್ನವೋ ಎಂಬ ಅನುಮಾನ ವ್ಯಕ್ತಪಡಿಸಿದ ಸಿಜೆಐ, ಇಂತಹ ವಿಷಯಗಳನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವುದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ತಪ್ಪು ಸಂದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು.</p>



<p>ಇದಲ್ಲದೆ, ಈ ಅಧ್ಯಾಯವನ್ನು ಸಮರ್ಥಿಸಲು ಮಾಜಿ ಸಿಜೆಐ ಬಿ.ಆರ್.ಗವಾಯಿ ಅವರ ಭಾಷಣದ ಭಾಗವನ್ನು ಉಲ್ಲೇಖಿಸಿರುವುದನ್ನೂ ನ್ಯಾಯಾಲಯ ಗಮನಿಸಿದೆ. ಆದರೆ ನ್ಯಾಯಾಂಗ ಸುಧಾರಣೆಗೆ ಕಳೆದ ಕೆಲವು ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ NCRT ಯಾವುದೇ ಸ್ಪಷ್ಟನೆ ನೀಡಿಲ್ಲ ಎಂಬುದಾಗಿ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.</p>
]]></content:encoded>
					
		
		
			</item>
		<item>
		<title>&#8216;ನ್ಯಾಯಾಂಗದಲ್ಲಿ ಭ್ರಷ್ಟಾಚಾರ&#8217;ದ ಬಗ್ಗೆ ಪಠ್ಯವೇ? ಎನ್‌ಸಿಇಆರ್‌ಟಿ ವಿರುದ್ಧ ಸಿಜೆಐ ಜಸ್ಟಿಸ್ ಸೂರ್ಯಕಾಂತ್ ಆಕ್ರೋಶ</title>
		<link>https://peepalmedia.com/cji-justice-surya-kants-outburst-against-ncert/</link>
		
		<dc:creator><![CDATA[Peepal Media]]></dc:creator>
		<pubDate>Thu, 26 Feb 2026 03:52:18 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74683</guid>

					<description><![CDATA[ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ &#8216;ನ್ಯಾಯಾಂಗದಲ್ಲಿ ಭ್ರಷ್ಟಾಚಾರ&#8217; ಎಂಬ ವಿಷಯವನ್ನು ಸೇರಿಸಿರುವುದನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ನ್ಯಾಯಾಂಗದ ಸಮಗ್ರತೆಗೆ ಕಳಂಕ ತರಲು ಅಥವಾ ಅಪಕೀರ್ತಿ ಎಸಗಲು ಯಾರನ್ನೂ ಬಿಡುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಜಸ್ಟಿಸ್ ಸೂರ್ಯಕಾಂತ್ ಸ್ಪಷ್ಟಪಡಿಸಿದ್ದಾರೆ. ನ್ಯಾಯಾಂಗವನ್ನು ಕೀಳಾಗಿ ಬಿಂಬಿಸುವ ಈ ಅಧ್ಯಾಯದ ಬಗ್ಗೆ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ ಮತ್ತಿತರರು ಪ್ರಸ್ತಾಪಿಸಿ, ಈ ವಿಷಯವನ್ನು [&#8230;]]]></description>
										<content:encoded><![CDATA[
<p>ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ &#8216;ನ್ಯಾಯಾಂಗದಲ್ಲಿ ಭ್ರಷ್ಟಾಚಾರ&#8217; ಎಂಬ ವಿಷಯವನ್ನು ಸೇರಿಸಿರುವುದನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.</p>



<p>ನ್ಯಾಯಾಂಗದ ಸಮಗ್ರತೆಗೆ ಕಳಂಕ ತರಲು ಅಥವಾ ಅಪಕೀರ್ತಿ ಎಸಗಲು ಯಾರನ್ನೂ ಬಿಡುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಜಸ್ಟಿಸ್ ಸೂರ್ಯಕಾಂತ್ ಸ್ಪಷ್ಟಪಡಿಸಿದ್ದಾರೆ. ನ್ಯಾಯಾಂಗವನ್ನು ಕೀಳಾಗಿ ಬಿಂಬಿಸುವ ಈ ಅಧ್ಯಾಯದ ಬಗ್ಗೆ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ ಮತ್ತಿತರರು ಪ್ರಸ್ತಾಪಿಸಿ, ಈ ವಿಷಯವನ್ನು ತುರ್ತಾಗಿ ಪರಿಶೀಲಿಸಬೇಕು ಎಂದು ಮಾಡಿದ ಮನವಿಯ ಮೇರೆಗೆ, ಸಿಜೆಐ ಜೊತೆಗೆ ನ್ಯಾಯಮೂರ್ತಿಗಳಾದ ಜೋಯ್‌ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಪ್ರಕರಣವನ್ನು ಸ್ವಯಂಪ್ರೇರಿತವಾಗಿ (ಸುಮೋಟೋ) ವಿಚಾರಣೆಗೆ ಸ್ವೀಕರಿಸಿದೆ. ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ನ್ಯಾಯಾಂಗದ ಬಗ್ಗೆ ಇರುವ ಆಕ್ಷೇಪಾರ್ಹ ಹೇಳಿಕೆಗಳನ್ನು ವಕೀಲರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು.</p>



<p>ಎನ್‌ಸಿಇಆರ್‌ಟಿ 8ನೇ ತರಗತಿಯ ಸಮಾಜ ವಿಜ್ಞಾನದ ಹೊಸ ಪಠ್ಯಪುಸ್ತಕಗಳಲ್ಲಿ &#8216;ನ್ಯಾಯಾಂಗದಲ್ಲಿ ಭ್ರಷ್ಟಾಚಾರ&#8217; ಹೆಸರಿನಲ್ಲಿ ಒಂದು ಅಧ್ಯಾಯವನ್ನು ಸೇರಿಸಲಾಗಿದೆ. ನ್ಯಾಯಮೂರ್ತಿಗಳು ಕೇವಲ ನ್ಯಾಯಾಲಯದಲ್ಲಿನ ತಮ್ಮ ನಡವಳಿಕೆಗೆ ಮಾತ್ರವಲ್ಲದೆ, ನ್ಯಾಯಾಲಯದ ಹೊರಗೆ ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನೂ ನಿಯಂತ್ರಿಸುವ ನಡವಳಿಕಾ ಸಂಹಿತೆಗೆ ಬದ್ಧರಾಗಿರುತ್ತಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. &#8220;ಈ ವ್ಯವಸ್ಥೆಯ ಸದಸ್ಯರಾಗಿರುವ ನಮಗೆ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ರೀತಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಹೇಳುವುದು ಬಹಳ ಮುಜುಗರ ಉಂಟುಮಾಡಿದೆ. ಈ ಅಧ್ಯಾಯವು ನಮ್ಮ ವ್ಯವಸ್ಥೆಗೆ ಸಂಪೂರ್ಣವಾಗಿ ಅಪಕೀರ್ತಿ ತರುವಂತಿದೆ&#8221; ಎಂದು ಕಪಿಲ್ ಸಿಬಲ್ ತಿಳಿಸಿದರು. </p>



<p>ಈ ಸಂದರ್ಭದಲ್ಲಿ ಎನ್‌ಸಿಇಆರ್‌ಟಿ ವಿಷಯ ಆಯ್ಕೆ ಮಾಡಿಕೊಂಡ ವಿಧಾನವನ್ನು ಸಿಂಘ್ವಿ ಟೀಕಿಸಿದರು. &#8220;ಅವರು ದೇಶದಲ್ಲಿ ಬೇರೆಲ್ಲೂ ಭ್ರಷ್ಟಾಚಾರವೇ ಇಲ್ಲ ಎಂದು ಭಾವಿಸಿದಂತಿದೆ. ಅಧಿಕಾರಶಾಹಿ, ರಾಜಕೀಯ, ಸಾರ್ವಜನಿಕ ಜೀವನ ಅಥವಾ ಇತರ ಸಂಸ್ಥೆಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಒಂದು ಮಾತೂ ಇಲ್ಲ&#8221; ಎಂದು ಅವರು ಹೇಳಿದರು.</p>



<p>ಸಿಬಲ್ ಪ್ರಸ್ತಾಪಿಸಿದ ವಿಷಯದ ಬಗ್ಗೆ ತಮಗೆ ಪೂರ್ಣ ಅರಿವಿದೆ ಎಂದು ಹೇಳಿದ ಸಿಜೆಐ ಸೂರ್ಯಕಾಂತ್, ಈ ಬಗ್ಗೆ ಈಗಾಗಲೇ ಹಲವಾರು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಇತರರಿಂದ ತಮಗೆ ಫೋನ್ ಕರೆಗಳು ಹಾಗೂ ಸಂದೇಶಗಳು ಬಂದಿರುವುದು ಕಳವಳಕಾರಿಯಾಗಿದೆ ಎಂದರು. ಇದನ್ನು ಸುಮೋಟೋ ಆಗಿ ಸ್ವೀಕರಿಸಬೇಕು ಎಂದು ಕಪಿಲ್ ವಿನಂತಿಸಿದಾಗ, &#8220;ಇದರ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಇದು ಇಡೀ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯ. ಇದೊಂದು ಉದ್ದೇಶಪೂರ್ವಕ ಕೃತ್ಯದಂತೆ ಕಾಣುತ್ತಿದೆ. ಎಷ್ಟೇ ಉನ್ನತ ಸ್ಥಾನದಲ್ಲಿರುವವರೇ ಆಗಿರಲಿ, ನ್ಯಾಯಾಂಗವನ್ನು ಅಪಕೀರ್ತಿಗೆ ಒಳಪಡಿಸಲು ನಾನು ಬಿಡುವುದಿಲ್ಲ. ಸ್ವತಃ ನಾನೇ ಈ ವಿಷಯವನ್ನು ಪರಿಶೀಲಿಸುತ್ತೇನೆ&#8221; ಎಂದು ಸಿಜೆಐ ತಿಳಿಸಿದರು. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದು ತಮಗೆ ತಿಳಿದಿದೆ ಎಂದು ಅವರು ಹೇಳಿದರು. ಈ ವಿಷಯವನ್ನು ಎತ್ತಿದ ವಕೀಲರಿಗೆ ಅವರು ಕೃತಜ್ಞತೆ ಸಲ್ಲಿಸಿದರು.</p>



<p><strong>ಮಾರಾಟ ಸ್ಥಗಿತಗೊಳಿಸಿದ ಎನ್‌ಸಿಇಆರ್‌ಟಿ</strong> </p>



<p>ಪಠ್ಯಪುಸ್ತಕದ ಒಂದು ಅಧ್ಯಾಯದ ಬಗ್ಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ, ಎನ್‌ಸಿಇಆರ್‌ಟಿ ಬುಧವಾರದಿಂದ 8ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ ಮಾರಾಟವನ್ನು ಸ್ಥಗಿತಗೊಳಿಸಿದೆ. &#8220;ನ್ಯಾಯಾಂಗದ ವಿವಿಧ ಹಂತಗಳಲ್ಲಿ ಜನರು ಭ್ರಷ್ಟಾಚಾರವನ್ನು ಅನುಭವಿಸುತ್ತಿದ್ದಾರೆ. ಬಡವರು ಮತ್ತು ಹಿಂದುಳಿದವರಿಗೆ ನ್ಯಾಯ ಪಡೆಯುವಲ್ಲಿ ಇದು ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳಿಸುತ್ತದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶ್ವಾಸವನ್ನು ಮೂಡಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ&#8221; ಎಂದು ಆ ಅಧ್ಯಾಯದಲ್ಲಿ ಉಲ್ಲೇಖಿಸಲಾಗಿತ್ತು.</p>
]]></content:encoded>
					
		
		
			</item>
		<item>
		<title>ದೈವಪಾತ್ರ ಅವಹೇಳನ ಆರೋಪ: ರಣ್‌ವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡ – ಹೈಕೋರ್ಟ್</title>
		<link>https://peepalmedia.com/no-coercive-action-against-ranveer-singh/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 25 Feb 2026 02:47:08 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜ್ಯ]]></category>
		<guid isPermaLink="false">https://peepalmedia.com/?p=74647</guid>

					<description><![CDATA[ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರದ ಕುರಿತು ಅವಹೇಳನಕಾರಿ ಸನ್ನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಮುಂದಿನ ವಿಚಾರಣೆಯವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ. ಚಾವುಂಡಿ ದೈವಕ್ಕೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ರಣವೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ [&#8230;]]]></description>
										<content:encoded><![CDATA[
<p>ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರದ ಕುರಿತು ಅವಹೇಳನಕಾರಿ ಸನ್ನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಮುಂದಿನ ವಿಚಾರಣೆಯವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ.</p>



<p>ಚಾವುಂಡಿ ದೈವಕ್ಕೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ರಣವೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.</p>



<p><strong>ತನಿಖೆಗೆ ಸಹಕರಿಸುವಂತೆ ಸೂಚನೆ</strong><br>ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ಗೋವಾದಲ್ಲಿ ಇತ್ತೀಚೆಗೆ ನಡೆದ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್‌ಎಫ್‌ಐ) ಕಾರ್ಯಕ್ರಮದಲ್ಲಿ ‘ಕಾಂತಾರ ಚಾಪ್ಟರ್-1’ ಕುರಿತು ಮಾತನಾಡುವ ವೇಳೆ ಉಂಟಾದ ಹೇಳಿಕೆಗೆ ತಕ್ಷಣವೇ ಕ್ಷಮೆ ಕೋರಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಯಾವುದೇ ಉದ್ದೇಶಪೂರ್ವಕ ಅವಹೇಳನ ಮಾಡಿಲ್ಲ; ನಡೆದ ಪ್ರಮಾದವನ್ನು ಸರಿಪಡಿಸಲು ಸಿದ್ಧರಿದ್ದಾರೆ ಎಂದು ಅವರು ತಿಳಿಸಿದರು.</p>



<p>ಈ ಹಿನ್ನೆಲೆಯಲ್ಲಿ ತನಿಖೆಗೆ ಸಂಪೂರ್ಣ ಸಹಕರಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೆ ರಣವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸ್ಪಷ್ಟಪಡಿಸಿತು. ಜೊತೆಗೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಹಾಗೂ ದೂರುದಾರರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೋಮವಾರ (ಮಾ.2) ಸಂಜೆ 4 ಗಂಟೆಗೆ ಮುಂದೂಡಿತು.</p>



<p><strong>“ಕ್ಷಮೆ ಕೋರಿರಬಹುದು, ಆದರೆ ಇಂಟರ್‌ನೆಟ್ ಮರೆತಿಲ್ಲ”</strong><br>ವಿಚಾರಣೆ ವೇಳೆ ನ್ಯಾಯಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ದೈವಪಾತ್ರವನ್ನು ನಿರ್ವಹಿಸಿರುವ ರಿಷಬ್ ಶೆಟ್ಟಿ ಅವರ ಅಭಿನಯವನ್ನು “ಮಹಿಳಾ ದೆವ್ವ” ಎಂದು ಮಿಮಿಕ್ರಿ ಮಾಡಿರುವುದು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಅಭಿಪ್ರಾಯಪಟ್ಟಿತು. ಜನಪ್ರಿಯ ನಟನಾಗಿ ಸಮಾಜದ ಮೇಲೆ ಪ್ರಭಾವ ಹೊಂದಿರುವ ವ್ಯಕ್ತಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು; ದೈವವನ್ನು ದೆವ್ವ ಎಂದು ಹೇಳುವ ಅಧಿಕಾರ ಯಾರಿಗೂ ಇಲ್ಲ ಎಂದು ಪೀಠ ಸ್ಪಷ್ಟಪಡಿಸಿತು. “ಕ್ಷಮೆ ಕೋರಿರಬಹುದು, ಆದರೆ ಇಂಟರ್‌ನೆಟ್ ಏನನ್ನೂ ಮರೆತುದಿಲ್ಲ” ಎಂದು ನ್ಯಾಯಮೂರ್ತಿ ಹೇಳಿದರು.</p>



<p>ದೂರುದಾರರ ಪರ ವಕೀಲರು, ಘಟನೆ ನಡೆದ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಬೇಡವೆಂದು ಸೂಚಿಸಿದ್ದರೂ ರಣವೀರ್ ಸಿಂಗ್ ತಮ್ಮ ಮಾತು ಮುಂದುವರಿಸಿದ್ದರು ಎಂದು ಆರೋಪಿಸಿದರು. ಜೊತೆಗೆ, ರಣವೀರ್ ಸಿಂಗ್ ಅವರ ಪತ್ನಿ ದೀಪಿಕಾ ಪಡುಕೋಣೆ ಕರ್ನಾಟಕದವರಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಆಚರಣೆಗಳ ಬಗ್ಗೆ ಅರಿವು ಇರಬೇಕೆಂದು ವಾದಿಸಿದರು.</p>
]]></content:encoded>
					
		
		
			</item>
		<item>
		<title>ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್‌ನಲ್ಲಿ ಹಿನ್ನಡೆ: ಬ್ಯಾಂಕ್ ಖಾತೆಗಳನ್ನು &#8216;ಫ್ರಾಡ್&#8217; ಎಂದು ವರ್ಗೀಕರಿಸಲು ಇದ್ದ ತಡೆ ರದ್ದುಪಡಿಸಿದ ನ್ಯಾಯಾಲಯ</title>
		<link>https://peepalmedia.com/bombay-high-court-quashes-order-staying-proceedings-against-anil-ambani/</link>
		
		<dc:creator><![CDATA[Peepal Media]]></dc:creator>
		<pubDate>Mon, 23 Feb 2026 08:27:05 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74542</guid>

					<description><![CDATA[ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಹಿನ್ನಡೆಯುಂಟಾಗಿದ್ದು, ಅವರ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಬ್ಯಾಂಕ್ ಖಾತೆಗಳನ್ನು &#8216;ಮೋಸ&#8217; (Fraud) ಎಂದು ವರ್ಗೀಕರಿಸಲು ಕೈಗೊಂಡಿರುವ ಕ್ರಮಗಳಿಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಬಾಂಬೆ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಖಾಡ್ ಅವರಿದ್ದ ವಿಭಾಗೀಯ ಪೀಠವು, ಮೂರು ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಆಡಿಟರ್ ಸಂಸ್ಥೆ ಬಿಡಿಒ ಇಂಡಿಯಾ ಎಲ್‌ಎಲ್‌ಪಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿ ಈ ತೀರ್ಪು ನೀಡಿದೆ. [&#8230;]]]></description>
										<content:encoded><![CDATA[
<p>ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಹಿನ್ನಡೆಯುಂಟಾಗಿದ್ದು, ಅವರ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಬ್ಯಾಂಕ್ ಖಾತೆಗಳನ್ನು &#8216;ಮೋಸ&#8217; (Fraud) ಎಂದು ವರ್ಗೀಕರಿಸಲು ಕೈಗೊಂಡಿರುವ ಕ್ರಮಗಳಿಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಬಾಂಬೆ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.</p>



<p>ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಖಾಡ್ ಅವರಿದ್ದ ವಿಭಾಗೀಯ ಪೀಠವು, ಮೂರು ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಆಡಿಟರ್ ಸಂಸ್ಥೆ ಬಿಡಿಒ ಇಂಡಿಯಾ ಎಲ್‌ಎಲ್‌ಪಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿ ಈ ತೀರ್ಪು ನೀಡಿದೆ. ಡಿಸೆಂಬರ್ 2025 ರಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠವು ನೀಡಿದ್ದ ಮಧ್ಯಂತರ ಆದೇಶವು &#8220;ಅಕ್ರಮ ಮತ್ತು ದೋಷಪೂರಿತ&#8221; ಎಂದು ವಿಭಾಗೀಯ ಪೀಠವು ಅಭಿಪ್ರಾಯಪಟ್ಟಿದೆ.</p>



<p>ವಿಭಾಗೀಯ ಪೀಠದ ಈ ಆದೇಶಕ್ಕೆ ತಡೆ ನೀಡುವಂತೆ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕಾಲಾವಕಾಶ ನೀಡುವಂತೆ ಅಂಬಾನಿ ಪರ ವಕೀಲರು ಮಾಡಿದ ಮನವಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.</p>



<p><strong>ಪ್ರಕರಣದ ಹಿನ್ನೆಲೆ:</strong> ಕಳೆದ ತಿಂಗಳು ಬ್ಯಾಂಕುಗಳು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿದ್ದವು. ಈ ಹಿಂದೆ ಏಕಸದಸ್ಯ ಪೀಠವು ಆರ್‌ಬಿಐ ನಿಯಮಗಳ ಉಲ್ಲಂಘನೆಯಾಗಿದೆ ಮತ್ತು ಬ್ಯಾಂಕುಗಳು ವರ್ಷಗಳ ನಂತರ ಎಚ್ಚೆತ್ತುಕೊಂಡಿವೆ ಎಂದು ಹೇಳಿ ಅಂಬಾನಿ ಮತ್ತು ಅವರ ಕಂಪನಿಗೆ ಮಧ್ಯಂತರ ಪರಿಹಾರ ನೀಡಿತ್ತು. ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಐಡಿಬಿಐ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಕೈಗೊಂಡಿದ್ದ ಕ್ರಮಗಳು ಕಾನೂನುಬದ್ಧವಾಗಿ ದೋಷಪೂರಿತ ಫೋರೆನ್ಸಿಕ್ ಆಡಿಟ್ ಮೇಲೆ ಆಧಾರಿತವಾಗಿವೆ ಎಂದು ಏಕಸದಸ್ಯ ಪೀಠವು ಈ ಹಿಂದೆ ಕ್ರಮಗಳಿಗೆ ತಡೆ ನೀಡಿತ್ತು.</p>



<p>ಆದರೆ, ಫೋರೆನ್ಸಿಕ್ ಆಡಿಟ್ ಕಾನೂನುಬದ್ಧವಾಗಿ ಸಿಂಧುವಾಗಿದೆ ಮತ್ತು ಹಣ ದುರುಪಯೋಗಕ್ಕೆ ಸಂಬಂಧಿಸಿದ ಗಂಭೀರ ಸಂಶೋಧನೆಗಳನ್ನು ಆಧರಿಸಿದೆ ಎಂದು ಬ್ಯಾಂಕುಗಳು ತಮ್ಮ ಮೇಲ್ಮನವಿಯಲ್ಲಿ ವಾದಿಸಿವೆ. ಆಡಿಟ್ ಸಂಸ್ಥೆ ಬಿಡಿಒ ಎಲ್‌ಎಲ್‌ಪಿ ಸಲ್ಲಿಸಿದ ವರದಿಯಲ್ಲಿ ಇದು ದಾಖಲಾಗಿದೆ ಎಂದು ಬ್ಯಾಂಕುಗಳು ಪ್ರತಿಪಾದಿಸಿವೆ.</p>



<p>ಬಿಡಿಒ ಎಲ್‌ಎಲ್‌ಪಿ ಸಂಸ್ಥೆಯು ಚಾರ್ಟರ್ಡ್ ಅಕೌಂಟೆಂಟ್ ಅಲ್ಲದವರ ಹಸ್ತಾಕ್ಷರವನ್ನು ಹೊಂದಿರುವುದರಿಂದ ಅದು ಆಡಿಟ್ ಮಾಡಲು ಅರ್ಹವಲ್ಲ ಎಂದು ಅಂಬಾನಿ ಈ ಹಿಂದೆ ವಾದಿಸಿದ್ದರು. ಆದರೆ ಈಗ ವಿಭಾಗೀಯ ಪೀಠವು ಏಕಸದಸ್ಯ ಪೀಠದ ತಡೆಯಾಜ್ಞೆಯನ್ನು ರದ್ದುಗೊಳಿಸಿರುವುದರಿಂದ, ಬ್ಯಾಂಕುಗಳು ಅಂಬಾನಿ ಖಾತೆಗಳನ್ನು ವಂಚನೆ ಎಂದು ವರ್ಗೀಕರಿಸುವ ಪ್ರಕ್ರಿಯೆಯನ್ನು ಮುಂದುವರಿಸಬಹುದಾಗಿದೆ.</p>
]]></content:encoded>
					
		
		
			</item>
		<item>
		<title>ಅಕ್ರಮ ಮರಳು ಗಣಿಗಾರಿಕೆ ಕುರಿತ ಪಿಐಎಲ್‌ಗೆ ನಾಲ್ಕು ವಾರಗಳಲ್ಲಿ ಉತ್ತರಿಸಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ</title>
		<link>https://peepalmedia.com/reply-to-pil-on-illegal-sand-mining-within-four-weeks/</link>
		
		<dc:creator><![CDATA[Peepal Media]]></dc:creator>
		<pubDate>Sat, 21 Feb 2026 02:47:47 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74421</guid>

					<description><![CDATA[ರಾಜ್ಯದಾದ್ಯಂತ ವಿವಿಧ ನದಿಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಪ್ರತಿಕ್ರಿಯಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಹೆಚ್ಚಿನ ಪರಿಶೀಲನೆಗಾಗಿ ಏಪ್ರಿಲ್ 7ಕ್ಕೆ ಮುಂದೂಡಿದೆ. ಈ ಪ್ರಕರಣದ ಹಿನ್ನೆಲೆಯನ್ನು ಗಮನಿಸಿದರೆ, ಜನವರಿ 29 ರಂದು ನ್ಯಾಯಮೂರ್ತಿಗಳಾದ ಡಿ.ಕೆ. [&#8230;]]]></description>
										<content:encoded><![CDATA[
<p>ರಾಜ್ಯದಾದ್ಯಂತ ವಿವಿಧ ನದಿಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಪ್ರತಿಕ್ರಿಯಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಹೆಚ್ಚಿನ ಪರಿಶೀಲನೆಗಾಗಿ ಏಪ್ರಿಲ್ 7ಕ್ಕೆ ಮುಂದೂಡಿದೆ.</p>



<p>ಈ ಪ್ರಕರಣದ ಹಿನ್ನೆಲೆಯನ್ನು ಗಮನಿಸಿದರೆ, ಜನವರಿ 29 ರಂದು ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ತಾರಾ ವಿತಸ್ತ ಗಂಜು ಅವರಿದ್ದ ಪೀಠವು ಈ ಸ್ವಯಂ ಪ್ರೇರಿತ ವಿಚಾರಣೆಯನ್ನು ದಾಖಲಿಸುವಂತೆ ನಿರ್ದೇಶಿಸಿತ್ತು. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸದನದಲ್ಲಿ ನೀಡಿದ್ದ ಹೇಳಿಕೆಯೊಂದನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿತ್ತು. ಅಕ್ರಮ ಮರಳು ಗಣಿಗಾರಿಕೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವರು ಒಪ್ಪಿಕೊಂಡಿದ್ದರು, ಇದು ನ್ಯಾಯಾಲಯದ ಕಳವಳಕ್ಕೆ ಕಾರಣವಾಗಿತ್ತು.</p>



<p>ಜನವರಿ 27, 2026 ರಂದು ಸದನದಲ್ಲಿ ಮಾತನಾಡಿದ್ದ ಗೃಹ ಸಚಿವರು, ಅಕ್ರಮ ಮರಳು ಗಣಿಗಾರಿಕೆಯು ಒಂದು ದೊಡ್ಡ ದಂಧೆಯಾಗಿದ್ದು, ಇದರಲ್ಲಿ ಅನೇಕ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವುದು ಮುಜುಗರದ ಸಂಗತಿಯಾಗಿದೆ ಎಂದು ತಿಳಿಸಿದ್ದರು. ಈ ಕಾರಣದಿಂದಲೇ ಅವರು ಹೆಚ್ಚಿನ ವಿವರಗಳನ್ನು ನೀಡಲು ಅಥವಾ ಹೆಸರುಗಳನ್ನು ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಈ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಸಭೆ ಕರೆಯುವುದಾಗಿ ಅವರು ಭರವಸೆ ನೀಡಿದ್ದರು.</p>



<p>ಆದರೆ, ನ್ಯಾಯಮೂರ್ತಿ ಸಿಂಗ್ ನೇತೃತ್ವದ ಪೀಠವು ಈ ಬಗ್ಗೆ ಕಟು ಟೀಕೆ ವ್ಯಕ್ತಪಡಿಸಿತ್ತು. ರಾಜ್ಯದ ಗೃಹ ಸಚಿವರೇ ಮರಳು ಮಾಫಿಯಾವನ್ನು ನಿಯಂತ್ರಿಸಲು ಅಸಹಾಯಕರಾಗಿದ್ದಾರೆ ಎಂದರೆ, ರಾಜ್ಯದ ಆಡಳಿತ ವ್ಯವಸ್ಥೆಯ ಮೇಲೆ ಜನರಿಗೆ ಭರವಸೆ ಇರಲು ಸಾಧ್ಯವಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿತ್ತು. ಇದು ಅತ್ಯಂತ ಗಂಭೀರವಾದ ವಿಷಯವಾಗಿದ್ದು, ಕೇಂದ್ರ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡದಿಂದ (SIT) ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ಪೀಠವು ತನ್ನ ಆದೇಶದಲ್ಲಿ ಒತ್ತಿಹೇಳಿತ್ತು.</p>
]]></content:encoded>
					
		
		
			</item>
		<item>
		<title>ಚುನಾವಣೆಗೂ ಮುನ್ನ ಉಚಿತ ಘೋಷಣೆ: ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ತರಾಟೆ</title>
		<link>https://peepalmedia.com/supreme-court-slams-state-governments/</link>
		
		<dc:creator><![CDATA[Peepal Media]]></dc:creator>
		<pubDate>Fri, 20 Feb 2026 03:42:08 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74386</guid>

					<description><![CDATA[ಚುನಾವಣೆಗೂ ಮುನ್ನ ಸರ್ಕಾರಗಳು ಬೇಜವಾಬ್ದಾರಿಯಾಗಿ ಉಚಿತ ಯೋಜನೆಗಳನ್ನು (Freebies) ಘೋಷಿಸುವುದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯವು ಗುರುವಾರ ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ಟೀಕಿಸಿದೆ. ಇಂತಹ ನಿರ್ಧಾರಗಳನ್ನು ಪ್ರಕಟಿಸುವ ಸಮಯ ಮತ್ತು ಅವುಗಳ ಹಿಂದಿನ ಆರ್ಥಿಕ ತರ್ಕವನ್ನು ನ್ಯಾಯಾಲಯವು ಪ್ರಶ್ನಿಸಿದೆ. ಸರ್ಕಾರದ ಬೊಕ್ಕಸದ ಮೇಲೆ ವಿಪರೀತ ಹೊರೆ ಹೇರುವ ಇಂತಹ ಬೇಜವಾಬ್ದಾರಿಯುತ ಉಚಿತಗಳ ಘೋಷಣೆಯು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಶೇಷವಾಗಿ, ತಮಿಳುನಾಡು ಸರ್ಕಾರವು ಇಷ್ಟು ಹಠಾತ್ತಾಗಿ &#8216;ಉಚಿತ ವಿದ್ಯುತ್&#8217; ಯೋಜನೆಯನ್ನು ಏಕೆ ಘೋಷಿಸಿತು ಎಂದು [&#8230;]]]></description>
										<content:encoded><![CDATA[
<p>ಚುನಾವಣೆಗೂ ಮುನ್ನ ಸರ್ಕಾರಗಳು ಬೇಜವಾಬ್ದಾರಿಯಾಗಿ ಉಚಿತ ಯೋಜನೆಗಳನ್ನು (Freebies) ಘೋಷಿಸುವುದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯವು ಗುರುವಾರ ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ಟೀಕಿಸಿದೆ. ಇಂತಹ ನಿರ್ಧಾರಗಳನ್ನು ಪ್ರಕಟಿಸುವ ಸಮಯ ಮತ್ತು ಅವುಗಳ ಹಿಂದಿನ ಆರ್ಥಿಕ ತರ್ಕವನ್ನು ನ್ಯಾಯಾಲಯವು ಪ್ರಶ್ನಿಸಿದೆ. ಸರ್ಕಾರದ ಬೊಕ್ಕಸದ ಮೇಲೆ ವಿಪರೀತ ಹೊರೆ ಹೇರುವ ಇಂತಹ ಬೇಜವಾಬ್ದಾರಿಯುತ ಉಚಿತಗಳ ಘೋಷಣೆಯು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಶೇಷವಾಗಿ, ತಮಿಳುನಾಡು ಸರ್ಕಾರವು ಇಷ್ಟು ಹಠಾತ್ತಾಗಿ &#8216;ಉಚಿತ ವಿದ್ಯುತ್&#8217; ಯೋಜನೆಯನ್ನು ಏಕೆ ಘೋಷಿಸಿತು ಎಂದು ಪ್ರಶ್ನಿಸಿದೆ.</p>



<p>ಈ ಯೋಜನೆಯಿಂದಾಗಿ ವಿದ್ಯುತ್ ಸರಬರಾಜು ಕಂಪನಿಗಳು (ಡಿಸ್ಕಮ್‌ಗಳು) ಸುಂಕ ಮತ್ತು ಬಜೆಟ್ ಲೆಕ್ಕಾಚಾರಗಳನ್ನು ಸರಿಹೊಂದಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿವೆ ಎಂದು ನ್ಯಾಯಾಲಯ ಹೇಳಿದೆ. ವಿದ್ಯುತ್ ತಿದ್ದುಪಡಿ ಕಾಯ್ದೆ 2024ರ ನಿಬಂಧನೆ 23 ಅನ್ನು ಸವಾಲು ಮಾಡಿ ತಮಿಳುನಾಡು ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.</p>



<p>ಈಗಾಗಲೇ ಹಲವಾರು ರಾಜ್ಯ ಸರ್ಕಾರಗಳು ಆದಾಯದ ಕೊರತೆಯನ್ನು ಎದುರಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಯಾವುದೇ ಮುನ್ಸೂಚಿತ ಆರ್ಥಿಕ ಯೋಜನೆಯಿಲ್ಲದೆ ರಾಜ್ಯಗಳು ಈ ಸಬ್ಸಿಡಿ ಭರವಸೆಗಳನ್ನು ಹೇಗೆ ಈಡೇರಿಸುತ್ತವೆ ಎಂದು ಪೀಠವು ಪ್ರಶ್ನಿಸಿದೆ. ನಿಯಂತ್ರಣವಿಲ್ಲದೆ ನೀಡುವ ಇಂತಹ ಉಚಿತಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಧಕ್ಕೆ ತರುತ್ತವೆ ಎಂದು ನ್ಯಾಯಾಲಯ ಎಚ್ಚರಿಸಿದೆ.</p>



<p>ಚುನಾವಣೆಗೆ ಮುನ್ನ ಅನೇಕ ರಾಜ್ಯಗಳು ಅನಿರೀಕ್ಷಿತವಾಗಿ ಹಲವು ಕಲ್ಯಾಣ ಯೋಜನೆಗಳನ್ನು ಘೋಷಿಸುವುದನ್ನು ನಾವು ನೋಡುತ್ತಿದ್ದೇವೆ. &#8220;ಒಂದು ವೇಳೆ ಜನರಿಗೆ ನೇರವಾಗಿ ನಗದು ವರ್ಗಾವಣೆ ಮಾಡುವ ಯೋಜನೆಗಳನ್ನು ಘೋಷಿಸಿದರೆ, ಅವರು ಮುಂದೆ ಕೆಲಸ ಮಾಡುತ್ತಾರೆಯೇ?&#8221; ಎಂದು ಪೀಠವು ಪ್ರಶ್ನಿಸಿದೆ. &#8220;ಸರ್ಕಾರವು ಉಚಿತ ಹಣದ ಜೊತೆಗೆ ಉಚಿತ ವಿದ್ಯುತ್ ಮತ್ತು ಇತರ ಸೌಲಭ್ಯಗಳನ್ನು ನೀಡಿದರೆ, ಅಂತಿಮವಾಗಿ ಆ ಭಾರವನ್ನು ಹೊರಬೇಕಾದವರು ಯಾರು?&#8221; ಎಂದು ಪ್ರಶ್ನಿಸಿದ ನ್ಯಾಯಾಲಯ, ಅಂತಿಮವಾಗಿ ಈ ಎಲ್ಲಾ ಉಚಿತಗಳ ಹೊರೆ ತೆರಿಗೆದಾರರ ತಲೆಯ ಮೇಲೆ ಬೀಳುತ್ತದೆ ಎಂದು ಅಭಿಪ್ರಾಯಪಟ್ಟಿದೆ.</p>



<p>ಉಚಿತಗಳ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳು, &#8220;ಚುನಾವಣೆಯ ಮುನ್ನವೇ ಈ ಉಚಿತಗಳನ್ನು ಏಕೆ ಘೋಷಿಸಲಾಗುತ್ತಿದೆ? ಎಲ್ಲಾ ರಾಜಕೀಯ ಪಕ್ಷಗಳು, ಸಮಾಜ ಸೇವಕರು ಮತ್ತು ಬುದ್ಧಿಜೀವಿಗಳು ಈ ಬಗ್ಗೆ ಪುನರ್ವಿಮರ್ಶೆ ನಡೆಸಬೇಕು. ಈ ಪದ್ಧತಿ ಇನ್ನು ಎಷ್ಟು ಕಾಲ ಮುಂದುವರಿಯಬೇಕು? ರಾಜ್ಯ ಸರ್ಕಾರಗಳು ತೀವ್ರ ಆರ್ಥಿಕ ಕೊರತೆಯಿಂದ ಬಳಲುತ್ತಿದ್ದರೂ ಉಚಿತಗಳನ್ನು ಮುಂದುವರಿಸುತ್ತಿವೆ. ಒಂದು ವೇಳೆ ನೀವು ವರ್ಷಕ್ಕೆ ಶೇಕಡಾ 25ರಷ್ಟು ಆದಾಯವನ್ನು ಪಡೆಯುತ್ತಿದ್ದರೆ, ಅದನ್ನು ರಾಜ್ಯದ ಅಭಿವೃದ್ಧಿಗೆ ಏಕೆ ಬಳಸಬಾರದು?&#8221; ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.</p>



<hr class="wp-block-separator has-alpha-channel-opacity"/>
]]></content:encoded>
					
		
		
			</item>
		<item>
		<title>ಮಹಿಳೆಯ ಬಟ್ಟೆ ಎಳೆಯುವುದು ಅತ್ಯಾಚಾರ ಯತ್ನಕ್ಕೆ ಸಮಾನ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು</title>
		<link>https://peepalmedia.com/pulling-a-womans-clothes-is-tantamount-to-attempted-rape-supreme-court/</link>
		
		<dc:creator><![CDATA[Peepal Media]]></dc:creator>
		<pubDate>Thu, 19 Feb 2026 03:23:19 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<guid isPermaLink="false">https://peepalmedia.com/?p=74336</guid>

					<description><![CDATA[ಮಹಿಳೆಯ ಬಟ್ಟೆಯನ್ನು ಎಳೆಯುವುದು ಅಥವಾ ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನದ ವ್ಯಾಪ್ತಿಗೇ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ರೀತಿಯ ಕೃತ್ಯಗಳು ಅತ್ಯಾಚಾರದ ಪ್ರಯತ್ನದ ಅಪರಾಧ ಎಂದು ಪರಿಗಣಿಸಲು ಸಾಕಾಗುವುದಿಲ್ಲ ಎಂಬ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಧರ್ಮಾಸನವು ಬುಧವಾರ ಈ ಆದೇಶವನ್ನು ಹೊರಡಿಸಿದ್ದು, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳಲ್ಲಿ ಕಠಿಣ ನಿಲುವು ತಳೆಯಬೇಕೆಂದು ನ್ಯಾಯಾಲಯಗಳಿಗೆ ಸೂಚಿಸಿದೆ. ಈ ಪ್ರಕರಣದ [&#8230;]]]></description>
										<content:encoded><![CDATA[
<p>ಮಹಿಳೆಯ ಬಟ್ಟೆಯನ್ನು ಎಳೆಯುವುದು ಅಥವಾ ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನದ ವ್ಯಾಪ್ತಿಗೇ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ರೀತಿಯ ಕೃತ್ಯಗಳು ಅತ್ಯಾಚಾರದ ಪ್ರಯತ್ನದ ಅಪರಾಧ ಎಂದು ಪರಿಗಣಿಸಲು ಸಾಕಾಗುವುದಿಲ್ಲ ಎಂಬ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಧರ್ಮಾಸನವು ಬುಧವಾರ ಈ ಆದೇಶವನ್ನು ಹೊರಡಿಸಿದ್ದು, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳಲ್ಲಿ ಕಠಿಣ ನಿಲುವು ತಳೆಯಬೇಕೆಂದು ನ್ಯಾಯಾಲಯಗಳಿಗೆ ಸೂಚಿಸಿದೆ.</p>



<p>ಈ ಪ್ರಕರಣದ ವಿವರಗಳನ್ನು ಗಮನಿಸಿದರೆ, 2022ರಲ್ಲಿ ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ಮಹಿಳೆಯೊಬ್ಬರು ತನ್ನ 14 ವರ್ಷದ ಮಗಳ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಮನೆಗೆ ಬಿಡುವುದಾಗಿ ನಂಬಿಸಿದ ಮೂವರು ಯುವಕರು ಬಾಲಕಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಲು ಯತ್ನಿಸಿ ಆಕೆಯ ಉಡುಪಿನ ದಾರವನ್ನು ಹರಿದಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಅತ್ಯಾಚಾರ ಯತ್ನದ ಆರೋಪಗಳನ್ನು ಕೈಬಿಡುವಂತೆ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಎತ್ತಿಕೊಂಡಿತ್ತು.</p>



<p>ಸುಪ್ರೀಂ ಕೋರ್ಟ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಿದ್ದಲ್ಲದೆ, ಆ ತೀರ್ಪಿನ ವಿಧಾನವು ಸಂವೇದನಾ ರಹಿತ ಮತ್ತು ಅಮಾನವೀಯವಾಗಿದೆ ಎಂದು ತೀಕ್ಷ್ಣವಾಗಿ ಟೀಕಿಸಿದೆ. ಹೈಕೋರ್ಟ್ ಮಾಡಿರುವ ಅಂತಹ ಕಾಮೆಂಟ್‌ಗಳು ಅಪರಾಧದ ಗಂಭೀರತೆಯನ್ನು ಕಡಿಮೆ ಮಾಡುವಂತಿದ್ದು, ಸಂತ್ರಸ್ತೆಯನ್ನು ಇನ್ನಷ್ಟು ಭಯಭೀತಿಗೊಳಿಸುತ್ತವೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಈ ರೀತಿಯ ಸೂಕ್ಷ್ಮ ಪ್ರಕರಣಗಳನ್ನು ನಿರ್ವಹಿಸುವಾಗ ಹೈಕೋರ್ಟ್‌ಗಳು ಮತ್ತು ಕೆಳ ಹಂತದ ನ್ಯಾಯಾಲಯಗಳು ಅನುಸರಿಸಬೇಕಾದ ನಿರ್ದಿಷ್ಟ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ.</p>
]]></content:encoded>
					
		
		
			</item>
	</channel>
</rss>
