Home ರಾಜ್ಯ ದಕ್ಷಿಣ ಕನ್ನಡ ಅಕ್ರಮ ದನ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಮೇತ ಆರು ಮಂದಿ ಬಂಧನ

ಅಕ್ರಮ ದನ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಮೇತ ಆರು ಮಂದಿ ಬಂಧನ

0

ಬಿಜೆಪಿ ಪಕ್ಷದ ಕಾರ್ಯಕರ್ತರ ಮೇಲ್ವಿಚಾರಣೆಯಲ್ಲಿ 3 ವಾಹನಗಳಲ್ಲಿ ದನ ಕರುಗಳನ್ನು ಹಿಂಸಾತ್ಮಕ ರೂಪದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ, ಜು.13: ಬಿಜೆಪಿ ಕಾರ್ಯಕರ್ತದ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾದ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್‌ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ:

ಧಮ೯ಸ್ಥಳ ಠಾಣೆಯ ಎಸ್.ಐ ಅನಿಲಕುಮಾರ್‌ ತಂಡದವರು ಬುಧವಾರ  ಖಚಿತ ಮಾಹಿತಿಯಂತೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ರಾತ್ರಿ 8.45 ಗಂಟೆಗೆ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್ ವಾಹನಗಳಾದ ಕೆಎ-21ಬಿ-7389 ಕೆಎ-70-0312 ಮತ್ತು ಕೆಎ670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಜಾನುವಾರು ಸಾಗಾಟದ ಪ್ರಕರಣ ಬೆಳಕಿಗೆ ಬಂದಿತ್ತು.

ಮೂರು ಪಿಕಪ್‌ ಗಾಡಿಗಳಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಶಪಡಿಸಿಕೊಂಡಿರುವ ಜಾನುವಾರುಗಳ ಮೌಲ್ಯವು 65,000 ರೂಪಾಯಿಗಳಾಗಿದ್ದರೆ, ವಾಹನಗಳ ಅಂದಾಜು ಮೊತ್ತ ಏಳು ಲಕ್ಷವೆನ್ನಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೆಳ್ತಂಗಡಿ ಠಾಣೆಯ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

You cannot copy content of this page

Exit mobile version