ತಮಿಳುನಾಡಿಗೆ ಮತ್ತೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಶಿಫಾರಸ್ಸು ಮಾಡಿದೆ.
ಇಂದು ನಡೆದ ಸಭೆಯಲ್ಲಿ ಮಾಡಲಾಗಿರುವ ಈ ಶಿಫಾರಸ್ಸಿನ ಅನ್ವಯ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ಕರ್ನಾಟಕ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗಿ. ತಮಿಳುನಾಡು ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಬಿಡಲು ಒತ್ತಾಯಿಸಿತ್ತು.
ಎಷ್ಟಿದೆ ನೀರು ಕೆಆರ್ಎಸ್ ಜಲಾಶಯದಲ್ಲಿ?
ಜಲಾಶಯದ ಗರಿಷ್ಠಮಟ್ಟ – 124.80 ಅಡಿ, ಇಂದಿನ ಮಟ್ಟ – 96.70 ಅಡಿ, ಒಳಹರಿವು – 5993 ಸಾವಿರ ಕ್ಯೂಸೆಕ್, ಒಟ್ಟ ಹೊರಹರಿವು – 6716 ಸಾವಿರ ಕ್ಯೂಸೆಕ್, ನದಿಗೆ – 4105 ಕ್ಯೂಸೆಕ್.