Friday, January 10, 2025

ಸತ್ಯ | ನ್ಯಾಯ |ಧರ್ಮ

ಕೇಂದ್ರ ಸರ್ಕಾರ ದೆಹಲಿಯನ್ನು ಅಪರಾಧಗಳ ರಾಜಧಾನಿಯನ್ನಾಗಿ ಮಾಡುತ್ತಿದೆ: ಕೇಜ್ರಿವಾಲ್

ದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ 25 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿಲ್ಲದ ಕಾರಣ ದೆಹಲಿಯ ಜನರ ಬಗ್ಗೆ ಅದರ ದ್ವೇಷ ಹೆಚ್ಚುತ್ತಿದೆ ಎಂದು ಅವರು ಟೀಕಿಸಿದರು.

ಅದಕ್ಕಾಗಿಯೇ ದೆಹಲಿಯನ್ನು ‘ಭಾರತದ ಅಪರಾಧ ರಾಜಧಾನಿ’ಯನ್ನಾಗಿ ಪರಿವರ್ತಿಸುತ್ತಿದೆ ಎಂದು ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು.

ಇತ್ತೀಚೆಗೆ ದೆಹಲಿಯಲ್ಲಿ ಕಳ್ಳತನ, ಸರಗಳ್ಳತನ ಮತ್ತು ಗ್ಯಾಂಗ್ ವಾರ್ ಗಳು ಸಾಮಾನ್ಯವಾಗಿರುವುದರಿಂದ ಮಹಿಳೆಯರು ಮನೆಯಿಂದ ಹೊರಗೆ ಕಾಲಿಡಲು ಹೆದರುತ್ತಿದ್ದಾರೆ ಎಂದು ಅವರು ಹೇಳಿದರು.

ರೋಹಿಂಗ್ಯಾ ನುಸುಳುಕೋರರ ಹೆಸರಿನಲ್ಲಿ ಸರ್ಕಾರವು ಪೂರ್ವಾಂಚಲಿಗಳು ಮತ್ತು ದಲಿತರ ಮತಗಳನ್ನು ಬೃಹತ್ ಪ್ರಮಾಣದಲ್ಲಿ ಪಟ್ಟಿಯಿಂದ ಅಳಿಸಿಹಾಕುತ್ತಿದೆ ಎಂದು ಅವರು ಆರೋಪಿಸಿದರು. ಈ ಕ್ರಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿವೆ ಎಂದು ಅವರು ಹೇಳಿದರು. ತಾವು ಅಧಿಕಾರಕ್ಕೆ ಬಂದರೆ, ಅಪಾರ್ಟ್‌ಮೆಂಟ್‌ಗಳಿಗೆ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ನಿವಾಸಿ ಕಲ್ಯಾಣ ಸಂಘಕ್ಕೆ ಹಣವನ್ನು ನೀಡುವುದಾಗಿ ಅವರು ಹೇಳಿದರು.

ಮತ್ತೊಂದೆಡೆ, ಪೂರ್ವಾಂಚಲ್ ಮತದಾರರ ಬಗ್ಗೆ ಕೇಜ್ರಿವಾಲ್ ನೀಡಿರುವ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪೂರ್ವಾಂಚಲ್ ಸಮ್ಮಾನ್ ಮಾರ್ಚ್ ಹೆಸರಿನಲ್ಲಿ ಅವರ ನಿವಾಸದ ಹೊರಗೆ ದೊಡ್ಡ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ವಾಟರ್ ಕ್ಯಾನ್‌‌ನ್‌ಗಳನ್ನು ಬಳಸಿದ್ದರಿಂದ ಉದ್ವಿಗ್ನತೆ ಹೆಚ್ಚಾಯಿತು. ಪೊಲೀಸರು ಹಲವರನ್ನು ಬಂಧಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page