Monday, June 9, 2025

ಸತ್ಯ | ನ್ಯಾಯ |ಧರ್ಮ

ಭದ್ರತಾ ಲೋಪ ಎಂದು ಕೈ ತೊಳೆದುಕೊಳ್ಳುತ್ತಿದೆ ಕೇಂದ್ರ: ರಾಜ್ಯ ಕಾಂಗ್ರೆಸ್

ಬೆಂಗಳೂರು: ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ, ಆದರೂ ಕ ಭದ್ರತಾ ಲೋಪ ಎಂದು ಬಿಂಬಿಸಿ ಸಂಸತ್ ಮೇಲಿನ ದಾಳಿಯನ್ನ ಮರೆಸುವ ಹುನ್ನಾರ ನೆಡೆಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ದೂರಿದೆ.

ಈ ಹಿನ್ನಲೆಯಲ್ಲಿ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ ಎಂದು ತಿಳಿಸುವ ಮೂಲಕ, ಪ್ರತಾಪ್ ಸಿಂಹ ಅವರಿಗೂ ದಾಳಿಕೋರರಿಗೂ ಸಂಬಂಧವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದೆ.

ಪ್ರತಾಪ್ ಸಿಂಹ ಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ?
ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ? ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ.ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ?ಕೇಂದ್ರ ಸರ್ಕಾರ ಕೇವಲ ಭದ್ರತಾ ಲೋಪ ಎನ್ನುವುದನ್ನು ಬಿಂಬಿಸಿ ಕೈ ತೊಳೆದುಕೊಳ್ಳಲು ಹೊರಟಿರುವುದೇಕೆ? ಎಂದು ರಾಜ್ಯ ಕಾಂಗ್ರೆಸ್ ಘಟಕ ಪ್ರೆಶ್ನೆಗಳ ಸುರಿಮಳೆ ಸುರಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page