Tuesday, January 27, 2026

ಸತ್ಯ | ನ್ಯಾಯ |ಧರ್ಮ

ಅದಾನಿಯನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ರಾಹುಲ್‌ ಗಾಂಧಿ

ಹೊಸದೆಹಲಿ: ಸೌರ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಅದಾನಿ ಅಥವಾ ಅದಾನಿ ಸಮೂಹದವರು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂದು ಅಮೆರಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಈ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು.. ‘ವಿಷಯ ಹೊರಬಿದ್ದರೂ… ಯಾಕೆ ಬಂಧಿಸಲಿಲ್ಲ? ಅದಾನಿ ವಿರುದ್ಧ ಆರೋಪಗಳಿದ್ದರೂ ಸಹಜವಾಗಿಯೇ ಅವರು ಎಂದಿನಂತೆ ಈ ಆರೋಪಗಳನ್ನು ನಿರಾಕರಿಸುತ್ತಾರೆ. ಈ ನಿಟ್ಟಿನಲ್ಲಿ ಅದಾನಿಯನ್ನು ಬಂಧಿಸಬೇಕು ಎಂದು ಆಗ್ರಹಿಸುತ್ತೇವೆ’ ಎಂದರು.

ಇದೇ ವೇಳೆ ಸಣ್ಣಪುಟ್ಟ ಆರೋಪಗಳಿಗೆ ಜನರನ್ನು ಬಂಧಿಸಲಾಗುತ್ತಿದೆ. ಇದೇ ಸಂಭಾವಿತ ಗೌತಮ್ ಅದಾನಿಯನ್ನು ಸಾವಿರಾರು ಕೋಟಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಬೇಕಲ್ಲವೇ? ಜೈಲಿನಲ್ಲಿರಬೇಕಾದ ಅದಾನಿಯನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ರಾಹುಲ್ ಆರೋಪಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page