Monday, January 12, 2026

ಸತ್ಯ | ನ್ಯಾಯ |ಧರ್ಮ

ಸಿಸಿಬಿ ಕಚೇರಿಯಲ್ಲಿ ಮೂರ್ಚೆ ಹೋಗಿ ಕುಸಿದು ಬಿದ್ದ ಚೈತ್ರಾ: ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ

ಬೆಂಗಳೂರು: ಟಿಕೆಟ್‌ ಕೊಡಿಸುತ್ತೇನೆಂದು ವಂಚಿಸಿದ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಮೂರ್ಚೆ ಬಂದು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.

ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರಳನ್ನು ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿ ಬಳಿ ಕರೆ ತರಲಾಗಿತ್ತು. ಆದರೆ ಸಿಸಿಬಿ ಕಚೇರಿ ಬಳಿ ತಲುಪುತ್ತಿದ್ದಂತೆಯೇ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಈ ವೇಳೆ ಆಕೆಯ ಬಾಯಿಯಿಂದ ನೊರೆಯೂ ಬಂದಿದ್ದು, ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಸ್ತುತ ಚೈತ್ರಾಳಿಗೆ ಮೂರ್ಚೆ ರೋಗವೇನಾದರೂ ಇತ್ತೇ ಎಂದು ಪರಿಶೀಲಿಸಲಾಗುತ್ತಿದೆ. ಪ್ರಸ್ತುತ ಚಿಕಿತ್ಸೆ ಮುಂದುವರೆದಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆಯೆಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page