ಚಾಮರಾಜನಗರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್‌ ಢಿಕ್ಕಿ, ಸ್ಥಳದಲ್ಲೇ ಸಾವು

ಚಾಮರಾಜನಗರ : ವ್ಯಕ್ತಿಯೊಬ್ಬರು ರಾಷ್ಟ್ರೀಯ ಹೆದ್ದಾರಿಯನ್ನುದಾಟುತ್ತಿದ್ದಾಗ ವೇಗವಾಗಿ ಬಸ್ಸೊಂದು ಬಂದು ಗುದ್ದಿದ ಕಾರಣ ವ್ಯಕ್ತಿ ಸ್ಥಳದಲ್ಲೇ ಮರಣ ಹೊಂದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪ ರಾಘವಪುರ ಗೇಟ್ ಬಳಿಯಿಂದ ಘಟನೆಯ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ನಂಜನಗೂಡು ತಾಲ್ಲೂಕಿನ ಹುರ ಗ್ರಾಮದವರೆಂದು ಗುರುತಿಸಲಾಗಿದೆ.

ಅಪಘಾತದ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು