Tuesday, June 24, 2025

ಸತ್ಯ | ನ್ಯಾಯ |ಧರ್ಮ

ಚನ್ನಪಟ್ಟಣ l ಕೈ ಕೊಟ್ಟ ಜೆಡಿಎಸ್ ನಾಯಕರು: ಪಾದ ಬೆಳೆಸದ ಪಾದಯಾತ್ರೆ

ಚನ್ನಪಟ್ಟಣ: ಸಿದ್ದರಾಮಯ್ಯನವರ ಕುಟುಂಬಕ್ಕೆ ಸಂಬಂಧಿಸಿದ ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯು ಸೋಮವಾರ ಮೂರನೇ ದಿನಕ್ಕೆ‌ ಕಾಲಿಟ್ಟಿದೆ. ಆದರೆ, ನಿಗದಿತ ಸಮಯಕ್ಕೆ ಬಾರದ ಜೆಡಿಎಸ್ ನಾಯಕರು ಬಾರದಿರುವುದರಿಂದಾಗಿ ಪಾದಯಾತ್ರೆ ಇಂದು ಸೋಮವಾರ ಇನ್ನೂ ಶುರುವಾಗಿಲ್ಲ.

ಇಲ್ಲಿನ ಕೆಂಗಲ್ ನಲ್ಲಿರುವ ಆಂಜನೇಯ ದೇವಸ್ಥಾನದ ವೃತ್ತದಿಂದ ಬೆಳಿಗ್ಗೆ 9.30ಕ್ಕೆ ಪಾದಯಾತ್ರೆ ಶುರುವಾಗಬೇಕಿತ್ತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಬೆಳಿಗ್ಗೆಯೇ ಕೆಂಗಲ್ ಗೆ ಬಂದರು.

ವಿವಿಧ ಕಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸಹ ಬಂದಿದ್ದಾರೆ. ಆದರೆ, ಜೆಡಿಎಸ್ ನ ಯಾವ ನಾಯಕರು ಸಹ ಪಾದಯಾತ್ರೆ ಗುಂಪಿನತ್ತ ತಲೆ ಹಾಕಿಲ್ಲ.

ಆಂಜನೇಯ ಸ್ವಾಮಿ ದರ್ಶನ ಪಡೆದ ಬಿಜೆಪಿ ನಾಯಕರು, ಪಾದಯಾತ್ರೆ ಆರಂಭಿಸುವುದಕ್ಕರ ಜೆಡಿಎಸ್ ನಾಯಕರಾದ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಕಾದು ಕರೆ ಮಾಡಿ ಕಾಯುತ್ತಲೇ ಇದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page