Friday, September 27, 2024

ಸತ್ಯ | ನ್ಯಾಯ |ಧರ್ಮ

ಸಿದ್ಧರಾಮಯ್ಯ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ಫ್ರಾಡ್‌ ಕೇಸ್‌ ದಾಖಲು!

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಲೋಕಾಯುಕ್ತ ದೂರು ನೀಡಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಹಣ ಪಡೆದು ವಂಚಿಸಿದ್ದಾಗಿ ಚಾಮರಾಜನಗರ ಮೂಲದ ಆರ್‌ಟಿಐ ಕಾರ್ಯಕರ್ತ ಕರುಣಾಕರ್ ಎನ್ನುವವರು, ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ದೂರು ನೀಡಿದ್ದಾರೆ.

3,ಲಕ್ಷ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.ಈ ಕುರಿತು ಚಾಮರಾಜನಗರದಲ್ಲಿ ದೂರುದಾರ ಕರುಣಾಕರ್ ಹೇಳಿಕೆ ನೀಡಿದ್ದು, ಕೃಷ್ಣ ಮೊದಲಿಗೆ ಸ್ನೇಹ ಸಲುಗೆ ಬೆಳೆಸಿಕೊಂಡು ಸಣ್ಣ ಮೊತ್ತವನ್ನು ಸಾಲವಾಗಿ ಪಡೆಯುತ್ತಾರೆ. ನಂತರ ವಿಶ್ವಾಸ ಬೆಳೆದಂತೆ ದೊಡ್ಡ ಮೊತ್ತದ ಸಾಲ ಕೇಳುತ್ತಾರೆ ಎಂದು ಅವರು ದೂರಿದ್ದಾರೆ.

ಸ್ನೇಹಮಯಿ ಕೃಷ್ಣ ತನ್ನಿಂದ 3,000,00 ರೂಪಾಯಿ ಹಣ ಪಡೆದಿದ್ದು ವಾಪಸ್‌ ಮಾಡದೆ ಸತಾಯಿಸುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ತ್ನಿಗೆ ಹುಷಾರಿಲ್ಲ, ಮಕ್ಕಳ ಸ್ಕೂಲ್ ಫೀಸ್ ಕಟ್ಟಬೇಕು ಎಂದು ಸಾಲ ಪಡೆದಿದ್ದರು. ಯಾರ ಬಳಿಯೂ ಚೆಕ್ ಅಥವಾ ಆರ್ಟಿಜಿಎಸ್ ಮೂಲಕ ಹಣ ಪಡೆಯುವುದಿಲ್ಲ. ಎಲ್ಲಾ ಹಣವನ್ನು ನಗದು ಮೂಲಕವೇ ಸ್ನೇಹಮಯಿ ಕೃಷ್ಣ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದೀಗ ಲೈಸನ್ಸ್ ಇಲ್ಲದೆ ಫೈನಾನ್ಸ್ ಮಾಡುತ್ತಿದ್ದಾರೆಂದು ನಮ್ಮ ವಿರುದ್ಧವೇ ದೂರು ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ 2013ರಲ್ಲಿ ನನ್ನ ವಿರುದ್ಧ ಚೀಟಿಂಗ್ ಕೇಸ್ ದಾಖಲಾಗಿತ್ತು. ಆ ವೇಳೆ ನನ್ನನ್ನು ಬಿಡಿಸಿದ್ದನು. ನಂತರ ನಮ್ಮಿಬ್ಬರ ಸ್ನೇಹ ಬೆಳೆಯಿತು. ಬಳಿಕ ಸ್ನೇಹಮಯಿ ಕೃಷ್ಣ 3 ಲಕ್ಷ ರೂಪಾಯಿ ನನ್ನ ಬಳಿ ಸಾಲ ಪಡೆದಿದ್ದಾರೆ ಎಂದು ಕರುಣಾಕರ್‌ ಹೇಳಿದ್ದಾರೆ.

ಮ್ಮ ವಿರುದ್ಧ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಇದೀಗ ಚಾಮರಾಜನಗರದ ಎಸಿಜಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page