ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.
“ಸ್ಪಂದನಾ ಅವರು ಅಕಾಲಿಕ ಮರಣಕ್ಕೆ ತುತ್ತಾಗಿದ್ದು ಬಹಳ ಬೇಸರದ ಸಂಗತಿ. ಇನ್ನೂ ಬಹಳ ವರ್ಷ ಬಾಳಿ ಬದುಕಿ, ಜೀವನದಲ್ಲಿ ಇನ್ನೂ ಬೇಕಾದಷ್ಟು ನೋಡಬೇಕಾಗಿತ್ತು. ಹಾಗೆಯೇ ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಇಬ್ಬರದೂ ಖುಷಿ ಹಾಗೂ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಇಷ್ಟು ಬೇಗ ಅಗಲಿರುವುದು ದೊಡ್ಡ ನಷ್ಟ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾಗೂ ಬಿ.ಕೆ ಶಿವರಾಂ ಹಾಗೂ ವಿಜಯ್ ರಾಘವೇಂದ್ರ ಅವರ ಕುಟುಂಬಕ್ಕೆ ಈ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲೆಂದು ಆಶಿಸುತ್ತೇನೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.