Saturday, April 27, 2024

ಸತ್ಯ | ನ್ಯಾಯ |ಧರ್ಮ

ಚಿಕ್ಕಪೇಟೆಗೆ ಬಿಡುಗಡೆಯಾದ ಅನುದಾನದ ಲೆಕ್ಕ ಕೇಳಿ AAPಯಿಂದ ʼಪರಿಶೋಧನಾ ಯಾತ್ರೆʼ

ಬೆಂಗಳೂರು : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚಾಗಿರುವ ಮೊತ್ತದ ಕುರಿತು ಶಾಸಕರು ಲೆಕ್ಕ ನೀಡಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಇಂದು ಬಸವನಗುಡಿಯ ರಾಮಕೃಷ್ಣ ಆಶ್ರಮ ಸಮೀಪದ ವಿವೇಕಾನಂದ ಪ್ರತಿಮೆ ಮುಂಭಾಗದಿಂದ ʼʼಪರಿಶೋಧನಾ ಯಾತ್ರೆ ಹಮ್ಮಿಕೊಂಡಿದೆ.

ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅಧಿಕಾರಾವಧಿಯಲ್ಲಿ ಚಿಕ್ಕಪೇಟೆ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಕಂಡುಬಂದಿದ್ದು, ಈ ವಿರುದ್ದ ಆಮ್‌ ಆದ್ಮಿ ಪಾರ್ಟಿಯು ʼʼಪರಿಶೋಧನಾ ಯಾತ್ರೆ ಹಮ್ಮಿಕೊಂಡಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚಾಗಿರುವ ಮೊತ್ತದ ಕುರಿತು ಶಾಸಕರು ಲೆಕ್ಕ ನೀಡಬೇಕೆಂದು ಆಗ್ರಹಿಸಿ ಇಂದು ಬಸವನಗುಡಿಯ ರಾಮಕೃಷ್ಣ ಆಶ್ರಮ ಸಮೀಪದ ವಿವೇಕಾನಂದ ಪ್ರತಿಮೆ ಮುಂಭಾಗದಿಂದ ಯಾತ್ರೆ ನಡೆಸುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡ ಪ್ರಕಾಶ್‌ ನಾಗರಾಜ್‌, “ಸರ್ಕಾರವು ಕ್ಷೇತ್ರಕ್ಕೆ ಬಿಡುಗಡೆ ಮಾಡಿರುವ ಅನುದಾನವೆಷ್ಟು ಹಾಗೂ ಅದನ್ನು ಶಾಸಕರು ಹೇಗೆ ಖರ್ಚು ಮಾಡಿದ್ದಾರೆ ಎಂದು ತಿಳಿಯುವ ಹಕ್ಕು ಜನರಿಗೆ ಇದೆ. ಶಾಸಕರಿಂದ ಈ ಮಾಹಿತಿಯನ್ನು ಪಡೆದು ಜನರಿಗೆ ತಿಳಿಸುವ ಸಲುವಾಗಿ ಆಮ್‌ ಆದ್ಮಿ ಪಾರ್ಟಿಯು ಲೆಕ್ಕ ಕೇಳಿ ಪರಿಶೋಧನಾ ಯಾತ್ರೆಯನ್ನು ಕ್ಷೇತ್ರದಾದ್ಯಂತ ನಡೆಸಲಿದೆ ” ಎಂದು ತಿಳಿಸಿದರು.

ʼಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅಧಿಕಾರಾವಧಿಯಲ್ಲಿ ಚಿಕ್ಕಪೇಟೆ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಸ್ವಪಕ್ಷದ ಶಾಸಕರೆಂಬ ಕಾರಣಕ್ಕೆ ರಾಜ್ಯ ಸರ್ಕಾರವು ನೂರಾರು ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರೂ ಇಲ್ಲಿನ ರಸ್ತೆಗಳು, ಮೂಲಸೌಕರ್ಯಗಳು ಕಳಪೆಯಾಗಿವೆ. ಇಲ್ಲಿನ ಯಾವ ಸಮಸ್ಯೆಯನ್ನೂ ಶಾಸಕರು ಬಗೆಹರಿಸಿಲ್ಲ. ಹಾಗಾದರೆ ಆ ಹಣವು ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಯು ಜನರನ್ನು ಕಾಡುತ್ತಿದೆ. ಮತ ನೀಡಿ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಈ ಸಂಬಂಧ ಮಾಹಿತಿ ನೀಡುವ ಜವಾಬ್ದಾರಿಯಿಂದ ಶಾಸಕರು ನುಣುಚಿಕೊಳ್ಳಬಾರದುʼಎಂದು ಪ್ರಕಾಶ್‌ ನಾಗರಾಜ್‌ ಹೇಳಿದರು.

ʼಚಿಕ್ಕಪೇಟೆ ಕ್ಷೇತ್ರದ ಹಲವು ಸರ್ಕಾರಿ ಶಾಲೆಗಳು ಶೋಚನೀಯ ಸ್ಥಿತಿಯಲ್ಲಿವೆ. ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಸೇವೆಗಳು ದೊರೆಯುತ್ತಿಲ್ಲ. ಕ್ಷೇತ್ರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಟ್ಟಣೆ ಸಮಸ್ಯೆಯಿಂದ ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಶಾಸಕರು ಇವ್ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೇ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ವಂಚಿಸುತ್ತಿದ್ದಾರೆʼ ಎಂದು ಪ್ರಕಾಶ್‌ ನಾಗರಾಜ್‌ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು