ಬೆಳಗಾವಿ : ಇಂದು ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆ, ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಸೇರಿದಂತೆ 22 ಶಾಲೆಗಳನ್ನು ಮುಚ್ಚಲಾಗಿದೆ.
ಚಿರತೆ ಕಾಣಿಸಿಕೊಂಡ ಕಾರಣ ನಿನ್ನೆಯೂ ಶಾಲೆಗಳು ಮುಚ್ಚಿದ್ದವು. ಹಾಗಾಗಿ ಚಿರತೆ ಹಿಡಿಯಲು ಆನೆಗಳನ್ನು ಬಳಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಡಿಸಿಪಿ ರವೀಂದ್ರ ಗಡಾದಿ, ಬೆಂಗಳೂರಿನಿಂದ ಆಗಮಿಸಿರುವ ವಿಶೇಷ ತಂಡವು ಕಾರ್ಯಾಚರಣೆಗೆ ಮುಂದಾಗಿದ್ದು, ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆಯ ಶೋಧ ಕಾರ್ಯಕ್ಕಾಗಿ ಅಲ್ಗೋರಿದಮ್ ತಂತ್ರಜ್ಞಾನದ ಡ್ರೋಣ್ ಬಳಸಲಾಗುತ್ತಿದೆ. ಈ ಡ್ರೋಣ್ ಗಾಲ್ಫ್ ಮೈದಾನದ 250 ಎಕರೆ ಪ್ರದೇಶವನ್ನು ಇಡಿಯಾಗಿ ಸ್ಕ್ಯಾನ್ ಮಾಡಲಿದೆ. ಹಾಗಾಗಿ ಇಂದು ಚಿರತೆಯನ್ನು ಸರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಗಾಲ್ಫ್ ಮೈದಾನಕ್ಕೆ ಶಾಸಕ ಅನಿಲ್ ಬೆನಕೆ ಭೇಟಿ ನೀಡಿ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡರು, ನಂತರ ಕಾರ್ಯಾಚರಣೆ ಮುಗಿಯುವವರೆಗೂ ಶಾಸಕರು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಆದಷ್ಟು ಬೇಗ ಚಿರತೆ ಸರೆಹಿಡಯಲಾಗುತ್ತೆ ಎಂದು ತಿಳಿಸಿದರು.