Sunday, June 22, 2025

ಸತ್ಯ | ನ್ಯಾಯ |ಧರ್ಮ

ರಾಜಧಾನಿಯಲ್ಲಿ ಮತಾಂಧರ ಅಟ್ಟಹಾಸ: ಚರ್ಚ್ ಧ್ವಂಸ… ಕ್ರೈಸ್ತರ ಮೇಲೆ ದಾಳಿ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಮತಾಂಧರು ಮತ್ತೆ ರೊಚ್ಚಿಗೆದ್ದಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ದುಷ್ಕರ್ಮಿಗಳು ಭಾನುವಾರ ತಾಹಿರ್‌ಪುರ ಪ್ರದೇಶದಲ್ಲಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ಚರ್ಚ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ.

ಅನೇಕ ಕ್ರಿಶ್ಚಿಯನ್ನರ ಮೇಲೆಯೂ ದಾಳಿ ಮಾಡಲಾಗಿದೆ. ಬೆಳಗ್ಗೆ 10.40ಕ್ಕೆ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಪಾದ್ರಿ ಸತ್ಪಾಲ್ ಭಾಟಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ದಾಖಲಿಸಿದ ಎಫ್‌ಐಆರ್ ಪ್ರಕಾರ, ಮತಾಂಧರು ಘೋಷಣೆಗಳನ್ನು ಕೂಗುತ್ತಾ ಚರ್ಚ್‌ಗೆ ಪ್ರವೇಶಿಸಿದ್ದಾರೆ. ಮಹಿಳೆಯರು ಸೇರಿದಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಕ್ರೈಸ್ತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ.

ಯೇಸುವಿನ ಚಿತ್ರಗಳನ್ನೂ ನಾಶಪಡಿಸಲಾಗಿದೆ. ಬೈಬಲ್ ನ ಪ್ರತಿಗಳನ್ನು ಹರಿದು ಹಾಕಲು ಪ್ರಯತ್ನಿಸಿ. ಕೆಲವರನ್ನು ಹೊರಗೆಳೆದು ತುಳಿದಿದ್ದಾರೆ. ‘ಡೆಮಾಕ್ರಸಿ ನ್ಯೂಸ್ ಇಂಡಿಯಾ’ ಬಿಡುಗಡೆ ಮಾಡಿರುವ ವೀಡಿಯೋ ಪ್ರಕಾರ, ಪುಂಡರ ದಾಳಿಯಲ್ಲಿ ಸಂಗೀತ ಉಪಕರಣಗಳೂ ನಾಶವಾಗಿವೆ.

ಡ್ರಮ್ಸ್ ಉಪಕರಣವನ್ನು ಚಾಕುವಿನಿಂದ ಕತ್ತರಿಸಲಾಗಿದೆ. ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗದಿದ್ದರೆ ಇನ್ಯಾರಾದರೂ ಬಂದು ಹಲ್ಲೆ ನಡೆಸುವ ಸಾಧ್ಯತೆ ಇದೆ ಎಂದು ಪಾದ್ರಿ ಭಾಟಿ ಹೇಳಿದರು.

ತಮ್ಮ ಮೇಲೆ ಬಜರಂಗದಳ ಮತ್ತು ಆರ್‌ಎಸ್‌ಎಸ್ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ. ಇನ್ನು ಕೆಲವರೊಂದಿಗೆ ಜಿಟಿಬಿ ಎನ್‌ಕ್ಲೇವ್ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಬಜರಂಗದಳ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಸೇರಿದ ಸುಮಾರು ನೂರು ಮಂದಿ ಅಲ್ಲಿ ಸೇರಿಕೊಂಡು ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದರು ಎಂದು ಅವರು ವಿವರಿಸಿದರು.

ಕಳೆದೊಂದು ದಶಕದಲ್ಲಿ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ನಾಡಿನ ಜನತೆಗೆ ಅವರ ತಾಯ್ನಾಡಿನಲ್ಲಿ ರಕ್ಷಣೆಯ ಕೊರತೆ ಇದ್ದು, ಬದುಕಲು ಸಾಧ್ಯವೇ ಇಲ್ಲದ ಪರಿಸ್ಥಿತಿ ಎದುರಾಗಿದೆ ಎಂದು ಅವರು ನೋವಿನಿಂದ ನುಡಿದರು. ಅಪರಿಚಿತ ವ್ಯಕ್ತಿಗಳು ಚರ್ಚ್ ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page