Sunday, June 8, 2025

ಸತ್ಯ | ನ್ಯಾಯ |ಧರ್ಮ

ಜೂ.9 ರಂದು ಕಲಾಭವನದಲ್ಲಿ ಬಾನು ಮುಷ್ತಾಕ್‌ಅವರಿಗೆ ನಾಗರಿಕ ಸನ್ಮಾನ -ಹೆಚ್.ಕೆ. ಸಂದೇಶ್

ಹಾಸನ : ಜೂನ್ 9ರ ಸೋಮವಾರ ಬೆಳಗ್ಗೆ 10 ಗಂಟೆಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ವಿವಿಧ ಜನಪದ ಕಲಾತಂಡಗಳ ಮೆರವಣಿಗೆಯು ಆರಂಭವಾಗಿ ನಂತರ ಹಾಸನಾಂಭ ಕಲಾಕ್ಷೇತ್ರದಲ್ಲಿ ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್‌ ಅವರಿಗೆ ‘ನಾಗರಿಕ ಸನ್ಮಾನ’ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ದಲಿತ ಮುಖಂಡರಾದ ಹೆಚ್.ಕೆ. ಸಂದೇಶ್ ಮನವಿ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಹಾಸನದ ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ 2025ರ ಬೂಕರ್ ಅಂತರರಾಷ್ಟ್ರೀಯ ಪ್ರಶಸ್ತಿ ಲಭಿಸಿರುವುದು ಕನ್ನಡ, ಕರ್ನಾಟಕ ಮತ್ತು ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿದೆ. ಸಮೃದ್ಧ ಹಾಗೂ ಶಾಸ್ತ್ರೀಯ ಭಾಷೆಯಾದ ನಮ್ಮ ಕನ್ನಡ ಭಾಷೆ ಇಂದು ಹಲವು ಸಮಸ್ಯೆಗಳು ಮತ್ತು ದಾಳಿಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಸತ್ವ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಬಹಳ ಸಂತಸದ ವಿಷಯ. ಬಾನು ಮುಷ್ತಾಕ್ ರವರು ಬಿ.ವಿ ಚಂದ್ರಪ್ರಸಾದ್ ತ್ಯಾಗಿಯವರ ಜೊತೆಯಲ್ಲಿ ಆರಂಭದಿAದಲೂ ದಲಿತ ಚಳುವಳಿಯ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ನಡೆದ ಶೋಷಿತ ಸಮುದಾಯದ ಪರವಾದ ಹೋರಾಟಗಳು ಕಾರ್ಯಕ್ರಮಗಳಿಗೆ ಭಾಗವಹಿಸಿತ್ತಿದ್ದರು. ಅವರು ಈ ಅತ್ಯುನ್ನತ ಪ್ರಶಸ್ತಿ ಪಡೆದಿರುವುದು ನಮಗೆ ಅಪಾರ ಹೆಮ್ಮೆಯ ವಿಷಯವಾಗಿದ್ದು, ಅವರನ್ನು ಮತ್ತು ಅವರ ಕೃತಿಯನ್ನು ಅತ್ಯಂತ ಸಮರ್ಥವಾಗಿ ಅನುವಾದಿಸಿ ಕನ್ನಡಕ್ಕೆ ಜಾಗತಿಕ ಮನ್ನಡೆ ಗಳಿಸಲು ಕಾರಣರಾದ ನಮ್ಮ ಪಕ್ಕದ ಜಿಲ್ಲೆಯವರಾದ ಶ್ರೀಮತಿ ದೀಪಾ ಭಾಸ್ತಿಯವರನ್ನು ಶ್ರೀಮತಿ ದೀಪಾ ಭಾಸ್ತಿ ಅವರಿಗೆ ‘ಒಂದು ನಾಗರಿಕ ಸನ್ಮಾನ’ ಮಾಡಿ ಗೌರವಿಸುವುದು ನಮ್ಮೆಲ್ಲರ ಆಧ್ಯತೆಯ ಕೆಲಸವಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಜೂನ್ 9 ರ ಸೋಮವಾರ ಹಾಸನದ ಹಾಸನಾಂಭ ಕಲಾಕ್ಷೇತ್ರದಲ್ಲಿ ಶ್ರೀಮತಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ‘ನಾಗರಿಕ ಸನ್ಮಾನ’ ಮಾಡಲು ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸAಸ್ಥೆಗಳು ಹಾಗೂ ನಾಗರಿಕ ಸಮಿತಿ ನಿರ್ಧರಿಸಿವೆ ಎಂದು ಹೇಳಿದರು.


ಸನ್ಮಾನ ಕಾರ್ಯಕ್ರಮವನ್ನು ಕನ್ನಡ ನಾಡಿನ ಹಿರಿಯ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಲಿದ್ದಾರೆ ಹಾಗೂ ಡಾ. ಎಚ್.ಎಸ್. ಅನುಪಮಾ ಅವರು ಅಬಿಂಧನಾ ನುಡಿಗಳನ್ನು ಆಡಲಿದ್ದಾರೆ.* ಈ ಕಾರ್ಯಕ್ರಮದಲ್ಲಿ ಮಾನ್ಯ ಸಂಸದರಾದ ಶ್ರೀಯುತ ಶ್ರೇಯಸ್ ಪಟೇಲ್, ಮಾನ್ಯ ಶಾಸಕರಾದ ಶ್ರೀಯುತ ಸ್ವರೂಪ್ ಪ್ರಕಾಶ್, ಹಾಸನ ನಗರಪಾಲಿಕೆ ಅಧ್ಯಕ್ಷರಾದ ಶ್ರೀಯುತ ಎಂ. ಚಂದ್ರೇಗೌಡ, ಮಾನ್ಯ ಜಿಲ್ಲಾಧಿಕಾರಿ ಶ್ರೀಮತಿ ಸಿ. ಸತ್ಯಭಾಮ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಶ್ರೀಮತಿ ಬಿ.ಆರ್. ಪೂರ್ಣಿಮ ಮತ್ತು ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಶ್ರೀಮತಿ ಮೊಹಮದ್ ಸುಜೀತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಈ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು,
ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು. ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್. ವಿಜಯ್ ಕುಮಾರ್, ಸಂವಿಧಾನ ಓದು ಅಭಿಯಾನ ಸಂಚಾಲಕ ರಾಜು ಗೊರೂರು, ದಲಿತ ಮುಖಂಡ ದೇವರಾಜ್ ಪೆನ್ಷನ್ ಮೊಹಲ್ಲಾ, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ರವೀಶ್ ಬಸವಾಪುರ, ಜೈ ಭೀಮ್ ಬ್ರಿಗೇಡ್ ಅಧ್ಯಕ್ಷ ರಾಜೇಶ್, ದಲಿತ ಮುಖಂಡ ಸದಾಶಿವ, ಎಂ.ಜಿ. ಪೃಥ್ವಿ ಇತರರು ಉಪಸ್ಥಿತರಿದ್ರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page