Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಇಂದಿರಾ ಕ್ಯಾಂಟೀನ್ ಮುಚ್ಚುವುದು  ಬಿಜೆಪಿ ಸರ್ಕಾರದ ಹುನ್ನಾರ: ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್ ಮುಚ್ಚುವುದು  ಬಿಜೆಪಿ ಸರ್ಕಾರದ ಹುನ್ನಾರ: ಸಿದ್ದರಾಮಯ್ಯ

0

ಬೆಂಗಳೂರು: ಕಾಂಗ್ರೆಸ್‌  ಸರ್ಕಾರ ಪ್ರಾರಂಭಿಸಿದ್ದ ಇಂದಿರಾ_ಕ್ಯಾಂಟೀನ್ ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 2017-2018, 2018-19ರಲ್ಲಿ ಕ್ರಮವಾಗಿ ರೂ.100 ಮತ್ತು ರೂ.145 ಕೋಟಿ ಅನುದಾನ ನೀಡಿದ್ದ ಬಿಬಿಎಂಪಿ, ಈ ವರ್ಷ ಕೊಟ್ಟಿದ್ದು ಕೇವಲ ರೂ.60 ಕೋಟಿ. ಹಾಗಾದರೆ ಉಳಿದ ಅನುದಾನ ಎಲ್ಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕ್ಯಾಂಟೀನ್‌ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆ. ಹಾಗಾದರೆ ನಗರದ ಬಡವರೆಲ್ಲರೂ ಶ್ರೀಮಂತರಾದರೇ? ಎಂದು ಅವರು ಪ್ರಶ್ನಿಸಿದ್ದು, ಕಳಪೆ ದರ್ಜೆಯ ಊಟ-ತಿಂಡಿ ನೀಡಿ ಜನ ಬರುವುದಿಲ್ಲ ಎಂಬ ನೆಪವೊಡ್ಡಿ ಇಂದಿರಾ_ಕ್ಯಾಂಟೀನ್ ಮುಚ್ಚುವುದು  ಬಿಜೆಪಿ ಸರ್ಕಾರದ ಹುನ್ನಾರ ಎಂದು ಸಿದ್ದರಾಮಯ್ಯ ದೂರಿದ್ದಾರೆ.

You cannot copy content of this page

Exit mobile version