Thursday, July 24, 2025

ಸತ್ಯ | ನ್ಯಾಯ |ಧರ್ಮ

ಸಿಎಂ, ಡಿಸಿಎಂ ಚರ್ಚೆ l ಬೇಕಾಬಿಟ್ಟಿ ಹೇಳಿಕೆ ನೀಡಿದರೆ ನೋಟೀಸ್‌ ಜಾರಿ ಮಾಡ್ತಿವಿ: ಡಿಕೆಶಿ

ಬೆಂಗಳೂರು: ʼಸಿಎಂ, ಡಿಸಿಎಂ ಹುದ್ದೆಗಳ ಕುರಿತು ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಇನ್ನು ಮುಂದೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದರೆ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ’ ಎಂದರು.

‘ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರೆಲ್ಲ ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ’ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ನಾನು ಚರ್ಚಿಸಿ, ಪಕ್ಷದ ಹಿತದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಸಚಿವರು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ’ ಎಂದರು.

ಹೈಕಮಾಂಡ್ ಬಳಿ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಆಯಿತೇ ಎಂದು ಕೇಳಿದಾಗ, ‘ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ಕೈಮುಗಿತಿನಿ, ಸ್ವಾಮೀಜಿಗಳು ರಾಜಕೀಯ ಮಾತಾಡಬೇಡಿ: ʼ ಸ್ವಾಮೀಜಿಗಳ ಮಧ್ಯಪ್ರವೇಶದ ಬಗ್ಗೆ ಕೇಳಿದಾಗ ‘ಯಾವ ಸ್ವಾಮೀಜಿಗಳು ಮಾತನಾಡಿಲ್ಲ, ಇವತ್ತೇ ಮಾತನಾಡಿದ್ದು ಅವರು. ಎಲ್ಲ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ಬರಬೇಡಿ’ ಎಂದರು.

ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು. ನಾನು ಮುಖ್ಯಮಂತ್ರಿ ಆಗಲು ಯಾರೂ ಶಿಫಾರಸು ಮಾಡುವುದು ಬೇಡ. ನಾನು ಮಾಡಿರುವ ಕೆಲಸವನ್ನು ನೋಡಿ ನಮ್ಮ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ. ದಯವಿಟ್ಟು ಈ ವಿಚಾರ ಇಲ್ಲಿಗೆ ಮುಗಿಸಿಬಿಡಿ’ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page