Home ರಾಜ್ಯ ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ: ನಿಮಗೆ ವಿಶೇಷ ವಿಮಾನದ ವ್ಯವಸ್ಥೆ...

ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ: ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ: ಮುಖ್ಯಮಂತ್ರಿ ಸಿದ್ಧರಾಮಯ್ಯ

0

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ ಆಗದೆ ಕಾಂಗ್ರೆಸ್ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹಿರಾತು ನೀಡಿದೆ. ಇವರಿಗೆ ನಾಚಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ ಎಂದು ಸವಾಲು ಹಾಕಿದರು.

ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನನ್ನ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ.

ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದರು.

ಮಹಾ ವಿಕಾಸ್ ಆಘಾಡಿ ಮಾತ್ರ ಕೊಟ್ಟ ಭರವಸೆಗಳನ್ನು ಈಡೇರಿಸಿ ಮಹಾರಾಷ್ಟ್ರ ಜನರ ಬದುಕಿಗೆ ಆರ್ಥಿಕ ಶಕ್ತಿ ನೀಡುತ್ತದೆ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಕರೆ ನೀಡಿದರು.

You cannot copy content of this page

Exit mobile version