Home ರಾಜ್ಯ ಶಿವಮೊಗ್ಗ ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಯೋಜನೆಗೆ ಸಿಎಂ ಚಾಲನೆ ನೀಡುವ ಸಾಧ್ಯತೆ: ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಯೋಜನೆಗೆ ಸಿಎಂ ಚಾಲನೆ ನೀಡುವ ಸಾಧ್ಯತೆ: ಮಧು ಬಂಗಾರಪ್ಪ

0

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಗೆ ಚಾಲನೆ ನೀಡುವ ಸಾಧ್ಯತೆಯಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೋಮವಾರ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಧು ಬಂಗಾರಪ್ಪ, ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿಗಳನ್ನು ಒಂದೇ ಸೂರಿನಡಿ ತರುವ 500 ಕೆಪಿಎಸ್ ಸಂಸ್ಥೆಗಳ ಸ್ಥಾಪನೆಗೆ ಸರ್ಕಾರ ಆರಂಭದಲ್ಲಿ ಅನುಮೋದನೆ ನೀಡಿತ್ತು ಎಂದರು.

“ಆದರೆ, ಇದೀಗ ಅಂದಾಜು 3,500 ಕೋಟಿ ರೂಪಾಯಿ ವೆಚ್ಚದಲ್ಲಿ 900 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂತಹ ಹೆಚ್ಚಿನ ಶಾಲೆಗಳನ್ನು ಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಈ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು,” ಎಂದು ಮಧು ಬಂಗಾರಪ್ಪ ಹೇಳಿದರು.

You cannot copy content of this page

Exit mobile version