ಜೈಪುರ ಪ್ರತಿಭಟನೆ ವೇಳೆ ಭಾರಿ ಹೈಡ್ರಾಮಾ: ‘ಸಿಜೆಪಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮೇಲೆ ಮುಗಿಬಿದ್ದು ನಾಲ್ಕು ಬಾರಿ ಕಪಾಳಮೋಕ್ಷ ಮಾಡಿದ ದುಷ್ಕರ್ಮಿ

ಜೈಪುರ: ಜೈಪುರದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವ ಮುನ್ನವೇ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮೇಲೆ ದೈಹಿಕ ಹಲ್ಲೆ ನಡೆಸಿ, ದುಷ್ಕರ್ಮಿಗಳು ನಾಲ್ಕು ಬಾರಿ ಕಪಾಳಮೋಕ್ಷ ಮಾಡಿರುವ ಅತ್ಯಂತ ಗಂಭೀರ ಘಟನೆ ನಡೆದಿದೆ. ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ದಿಪ್ಕೆ ಅವರು ವೇದಿಕೆಯತ್ತ ತೆರಳುತ್ತಿದ್ದಾಗ ಈ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿಭಟನಾ ನಿರತ ಬೆಂಬಲಿಗರ ಸಮ್ಮುಖದಲ್ಲಿ ಅಭಿಜೀತ್ ದಿಪ್ಕೆ ಅವರನ್ನು ಕಾರ್ಯಕರ್ತರೊಬ್ಬರು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಸಾಗುತ್ತಿದ್ದಾಗ, ಹಠಾತ್ತನೆ ನುಗ್ಗಿದ ಕೆಲವು ದುಷ್ಕರ್ಮಿಗಳು ಅವರ ಕೊರಳಿನಲ್ಲಿದ್ದ ಸ್ಕಾರ್ಫ್ (ಶಲ್ಯ) ಹಿಡಿದು ಬಲವಾಗಿ ಎಳೆದಿದ್ದಾರೆ. ಅಷ್ಟೇ ಅಲ್ಲದೆ, ಅವರ ಕೆನ್ನೆಗೆ ಸರಣಿಯಾಗಿ ನಾಲ್ಕು ಬಾರಿ ಬಾರಿಸಿದ್ದು, ಅವರನ್ನು ಕೆಳಗೆ ಜಗ್ಗಲು ಪ್ರಯತ್ನಿಸಿದ್ದಾರೆ.

ಈ ಹಲ್ಲೆಯಿಂದಾಗಿ ಸಮಾವೇಶದ ಸ್ಥಳದಲ್ಲಿ ತೀವ್ರ ಗದ್ದಲ ಮತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂದು ವಿಡಿಯೋ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಈ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು