Saturday, June 21, 2025

ಸತ್ಯ | ನ್ಯಾಯ |ಧರ್ಮ

ಕನ್ನಡಿಗರ ಅವಹೇಳನ ; ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ಕನ್ನಡದ ಬಗ್ಗೆ ಲಘುವಾಗಿ ಮಾತನಾಡಿದ ಬಹುಭಾಷಾ ಗಾಯಕ ಸೋನು ನಿಗಮ್ ಅವರ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಡೆಯಿಂದ ದಾಖಲಾದ ಈ ದೂರಲ್ಲಿ ಕನ್ನಡಿಗರ ಭಾವನೆಗೆ ದಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸೋನು ನಿಗಮ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ತಮ್ಮ ಪ್ರದರ್ಶನದ ಸಮಯದಲ್ಲಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದು ಕನ್ನಡಿಗರ ಭಾಷಾ ಭಾವನೆಗೆ ದಕ್ಕೆ ತರುವಂತಾಗಿದೆ‌. ಸೋನು ನಿಗಮ್ ಅವರು, ಕನ್ನಡ ಹಾಡುಗಳು ಎಂದರೆ ತುಂಬ ಇಷ್ಟ. ಕರ್ನಾಟಕ ಎಂದರೆ ತುಂಬ ಇಷ್ಟ ಎಂದು ಹೇಳುತ್ತಾರೆ. ಅದೇ ಸಮಯಕ್ಕೆ ಓರ್ವ ಹುಡುಗ ಕನ್ನಡದಲ್ಲಿ ಹಾಡಿ ಎಂದು ಗದರಿಸುವ ರೀತಿಯಲ್ಲಿ ಒತ್ತಾಯ ಮಾಡಿದ್ದಾನೆ. ಆಗ ಸೋನು ಅವರು ಪಹಲ್ಗಾಮ್ ಘಟನೆಯನ್ನು ನೆನಪಿಸಿಕೊಂಡಿದ್ದಾರೆ..

“ಓರ್ವ ಹುಡುಗ ನನಗೆ ಕನ್ನಡ ಹಾಡು ಹಾಡಿ ಎಂದ. ಅವನು ಹುಟ್ಟುವ ಮೊದಲಿನಿಂದಲೂ ನಾನು ಕನ್ನಡ ಹಾಡುಗಳನ್ನು ಹಾಡುತ್ತಿದ್ದೇನೆ. ಆದರೆ ಆ ಹುಡುಗ ‘ಕನ್ನಡ, ಕನ್ನಡ’ ಎಂದು ಒರಟಾಗಿ ಬೆದರಿಕೆ ಹಾಕಿದ್ದು ನನಗೆ ಇಷ್ಟವಾಗಲಿಲ್ಲ. ಇಂತಹದೇ ವರ್ತನೆಯ ಪರಿಣಾಮ ಪಹಲ್ಗಾಮ್ ದಾಳಿಗೆ ಕಾರಣವಾಗಿದೆ” ಎಂದು ಸೋನು ನಿಗಮ್ ಒರಟಾಗಿ ಪ್ರತಿಕ್ರಿಯಿಸಿದ್ದರು.

ಅವರು ಹುಟ್ಟುವ ಮೊದಲೇ ನಾನು ಕನ್ನಡ ಹಾಡುಗಳನ್ನು ಹಾಡಲು ಪ್ರಾರಂಭಿಸಿದ್ದೆ” ಎಂದು ಸೋನು ನಿಗಮ್ ಹೇಳಿದರು. “ಇದಕ್ಕಾಗಿಯೇ ಪಹಲ್ಗಾಮ್ ದಾಳಿ ನಡೆಯಿತು – ಅಂತಹ ವರ್ತನೆಗಾಗಿ. ಅಂತಹ ಬೇಡಿಕೆಗಳನ್ನು ಇಡುವ ಮೊದಲು ನಿಮ್ಮ ಮುಂದೆ ಯಾರು ಇದ್ದಾರೆ ಎಂದು ನೋಡಿ” ಎಂದು ಅವರು ವೇದಿಕೆಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಕನ್ನಡಿಗರ ಭಾವನೆಗೆ ದಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸೋನು ನಿಗಮ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page