ಹೊಸದಿಲ್ಲಿ: ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ದೆಹಲಿಯಲ್ಲಿ ಗುರುವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜಿಹಾದ್ ಕುರಿತು ಹೇಳಿಕೆ ನೀಡಿದ್ದಾರೆ.
ಜಿಹಾದ್ ಪರಿಕಲ್ಪನೆಯನ್ನು ಗೀತೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದ ಅವರು ಮಹಾಭಾರತ ಯುದ್ಧದ ಸಮಯದಲ್ಲಿ ಶ್ರೀಕೃಷ್ಣನು ಅರ್ಜುನನಿಗೆ ಜಿಹಾದ್ ಬಗ್ಗೆ ಪಾಠಗಳನ್ನು ನೀಡಿದ್ದಾನೆ ಎಂದು ಹೇಳಿದರು.
ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ಅವರ ಜೀವನ ಚರಿತ್ರೆಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಪಾಟೀಲ್ ಅವರು “ಇಸ್ಲಾಂನಲ್ಲಿನ ಜಿಹಾದ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ ಎಂದು ಹೇಳಲಾಗಿದೆ. ಇಷ್ಟೆಲ್ಲ ಪ್ರಯತ್ನಗಳ ನಂತರವೂ, ಅಧಿಕಾರವನ್ನು ಬಳಸಿಕೊಳ್ಳಬಹುದು ಎಂಬ ಸ್ಪಷ್ಟ ಆಲೋಚನೆಯೊಂದು ಜನರಿಗೆ ಅರ್ಥವಾಗಬೇಕು. ಇದನ್ನು ಕುರಾನ್ ಮತ್ತು ಗೀತಾದಲ್ಲಿ ಉಲ್ಲೇಖಿಸಲಾಗಿದೆ” ಎಂದಿದ್ದಾರೆ.