Friday, June 20, 2025

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್ 2 ವರ್ಷದ ಆಡಳಿತ ದಿವಾಳಿ, ಶೂನ್ಯ ಅಭಿವೃದ್ಧಿ, ವ್ಯಾಪಕ ಭ್ರಷ್ಠಾಚಾರ – ಶಾಸಕ ಸಿಮೆಂಟ್ ಮಂಜು

ಹಾಸನ : ರಾಜ್ಯದಲ್ಲಿ ಎರಡು ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಆರ್ಥಿಕ ದಿವಾಳಿಯಾಗಿದ್ದು, ಶೂನ್ಯ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಕುಸಿದಿದೆ. ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ ಎಂದು ಗುಡುಗಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ವರ್ಷಗಳ ಕಾಂಗ್ರೆಸ್ ಆಡಳಿತ ರಾಜ್ಯವನ್ನು ಹಿಂದೆಂದೂ ಕಾಣದ ದುಸ್ಥಿತಿಗೆ ದೂಡಿದೆ. ಇದು ಆಡಳಿತ ನಡೆಸುವ ಸರ್ಕಾರವಲ್ಲ, ಕೇವಲ “ವಸೂಲಿ ಸರ್ಕಾರ”. ಕಾಂಗ್ರೆಸ್ ಆಡಳಿತ ಕನ್ನಡಿಗರ ಬದುಕಿಗೆ ಶಾಪವಾಗಿದೆ. ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೂ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ. ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ತಂದ ಅಪಚಾರ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ ಎಂದರೆ ಭ್ರಷ್ಟಾಚಾರದ ಕೂಪ. ಇದು ಸ್ಪಷ್ಟವಾಗಿ “ಕಮಿಷನ್ ಸರ್ಕಾರ”, ೬೦% ಸರ್ಕಾರ, ಪ್ರತಿಯೊಂದು ಯೋಜನೆಯಲ್ಲೂ, ಪ್ರತಿ ಟೆಂಡರ್‌ನಲ್ಲೂ ಕಮಿಷನ್ ದಂಧೆ ನಡೆಯುತ್ತಿದೆ. ರಾಜ್ಯವನ್ನು ಕಾಂಗ್ರೆಸ್ ಪಕ್ಷದ “ಎಟಿಎಂ” ಆಗಿ ಪರಿವರ್ತಿಸಿದ್ದಾರೆ. ಕರ್ನಾಟಕದಲ್ಲಿ ಲೂಟಿ ಮಾಡಿದ ಕೋಟ್ಯಂತರ ಹಣವನ್ನು ಪಕ್ಷದ ಹೈಕಮಾಂಡ್‌ಗೆ ಮತ್ತು ಇತರ ರಾಜ್ಯಗಳ ಚುನಾವಣೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರೇ ಭ್ರಷ್ಟಾಚಾರದ ಕಿಂಗ್‌ಪಿನ್‌ಗಳು – ವಾಲ್ಮೀಕಿ ನಿಗಮದ ೧೮೭ ಕೋಟಿ ಲೂಟಿ ಇದು ಪರಿಶಿಷ್ಟ ಪಂಗಡ ಸಮುಧಾಯಕ್ಕೆ ಮಾಡಿದ ಘೋರ ವಂಚನೆ. ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ೧೫,೫೬೮ ಕೋಟಿ ಹಗರಣದ ಶಂಕೆ -ಇದರಲ್ಲಿ ಸಚಿವ ಜಾರ್ಜ್, ಸಚಿವ ಪ್ರಿಯಾಂಕ್ ಖರ್ಗೆ ಸಹೋದರರ ಟ್ರಸ್ಟ್ ಗೆ ಮೌಲ್ಯಯುತ ರಕ್ಷಣಾ ಏರೋಸ್ಪೇಸ್ ಪಾರ್ಕ್ನಲ್ಲಿ ಕೆ.ಐ.ಎ.ಡಿ.ಬಿ. ಭೂಮಿ ಅಕ್ರಮ ಮಂಜೂರು. ಕಾರ್ಮಿಕ ಮಕ್ಕಳ ಪೌಷ್ಟಿಕಾಂಶ ಕಿಟ್‌ಗಳ ಖರೀದಿಯಲ್ಲಿ ?೭೫ ಕೋಟಿ ಭಾರಿ ಹಗರಣ – ಕಾರ್ಮಿಕ ಸಚಿವ ಸಂತೋಷ್ ಲಾಡ ಇದರ ನೇರ ಹೊಣೆ ಎಂದರು.


ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರೋಧಿ ನೀತಿಗಳು ಮತ್ತು ಮುಸ್ಲಿಂ ತುಷ್ಟಿಕರಣ ಈ ಸರ್ಕಾರ ಸಂವಿಧಾನದ ಆಶಯಗಳಿಗೆ ದ್ರೋಹ ಬಗೆಯುತ್ತಿದೆ. ಉಪಮುಖ್ಯಮಂತ್ರಿಗಳೇ ಬಹಿರಂಗವಾಗಿ “ಸಂವಿಧಾನ ಬದಲಾಗಲಿದೆ” ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರ ಓಲೈಕೆಗಾಗಿ ಸಂವಿಧಾನವನ್ನೇ ಅಪಮಾನಿಸಿದ್ದಾರೆ. ಎಸ್.ಸಿ., ಎಸ್.ಟಿ. ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಘೋರ ವಂಚನೆ ಮತ್ತು ಅನ್ಯಾಯ. ಅವರ ಅಭಿವೃದ್ಧಿ ಮತ್ತು ಏಳಿಗೆಗೆ ಮೀಸಲಾದ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ನಿಧಿಯನ್ನು ಕೊಳ್ಳೆ ಹೊಡೆದು ಬೇರೆ ಉದ್ದೇಶಗಳಿಗೆ ಬಳಸಿದ್ದಾರೆ. ದಲಿತ ಸಂಘಟನೆಗಳೇ ಸರ್ಕಾರದ ವಿರುದ್ಧ “ಕಾಂಗ್ರೆಸ್ ಹಠಾವೋ ದಲಿತ ಬಚಾವೋ” ಎಂದು ಬೀದಿಗಿಳಿದು ಪ್ರತಿಭಟಿಸುತ್ತಿವೆ. ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುತ್ತಿದ್ದ ವಿದೇಶಿ ಶಿಷ್ಯವೇತನ ಯೋಜನೆಯನ್ನು ಸಹ ನಿಲ್ಲಿಸಿದ್ದಾರೆ. ಒಂದೆಡೆ ಎಸ್.ಸಿ./ ಎಸ್.ಟಿ. ಸಮುದಾಯವನ್ನು ನಿರ್ಲಕ್ಷಿಸಿ ವಂಚಿಸುತ್ತಿರುವ ಸರ್ಕಾರ ಇನ್ನೊಂದೆಡೆ ಕೇವಲ ಮುಸ್ಲಿಂ ಓಲೈಕೆಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು.


ವಿಧಾನಸೌಧದಂತಹ ಪವಿತ್ರ ಸ್ಥಳದಲ್ಲೇ “ಪಾಕಿಸ್ತಾನ್ ಜಿಂದಾಬಾದ್’ ಎಂಬ ದೇಶದ್ರೋಹಿ ಘೋಷಣೆಗಳು ಕೇಳಿಬಂದರೂ, ಸರ್ಕಾರ ಅದನ್ನು ಮರೆಮಾಚಲು ಪ್ರಯತ್ನಿಸುವ ಮೂಲಕ ರಾಷ್ಟç ವಿರೋಧಿಗಳಿಗೆ ಬೆಂಬಲ ನೀಡುತ್ತಿದೆ. ಇವರದು ಕೇವಲ ಮುಸ್ಲಿಂ ಓಲೈಕೆಯ ‘ಹಲಾಲ್ ಬಜೆಟ್’. ಹಿಂದೂಗಳ ತೆರಿಗೆ ಹಣವನ್ನು ಕೇವಲ ಓಲೈಕೆಗಾಗಿ ವಕ್ಸ್, ಉರ್ದು ಶಾಲೆ, ಇಮಾಮ್‌ಗಳಿಗೆ ಕೋಟಿ ಕೋಟಿ ಅನುದಾನ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ವ್ಯಯಿಸುತ್ತಿದ್ದಾರೆ ಎಂದರು. ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲೂ ಹಿಂದೂಗಳಿಗೆ ಅನ್ಯಾಯ – ಮುಸ್ಲಿಮರಿಗೆ ಶೇ.೪ ರಷ್ಟು ಮೀಸಲಾತಿ ಜಾರಿ ಮಾಡಿ ತಾರತಮ್ಯ ಎಸಗಿದ್ದಾರೆ. ವಕ್ಸ್ ಬೋರ್ಡ್ ಮೂಲಕ ಹಿಂದೂ-ರೈತರುಗಳ ಆಸ್ತಿಗಳ ಮೇಲೆ ಅಕ್ರಮ ನೋಟಿಸ್ ನೀಡಲು ಕುಮ್ಮಕ್ಕು, ಅಕ್ರಮ ಗೋಹತ್ಯೆಗೆ ಕುಮ್ಮಕ್ಕು, ಗಲಭೆಕೋರರಿಗೆ ರಕ್ಷಣೆ, ಹಿಂದೂ ಹಬ್ಬಗಳಿಗೆ ಅನುದಾನ ವಿಳಂಬ, ದೇವಾಲಯಗಳ ಬಳಿ ಮದರಸಾ ಅನುಮತಿ, ವಕ್ಸ್ ಅಕ್ರಮಗಳಿಗೆ ಬೆಂಬಲ ನೀಡಿ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ಹುನ್ನಾರ – ಇವೆಲ್ಲವೂ ಸರ್ಕಾರದ ಹಿಂದೂ ವಿರೋಧಿ ನೀತಿಗಳ ಸ್ಪಷ್ಟ ನಿದರ್ಶನಗಳು ಆಗಿದೆ. ಪಹಲ್ಟಾಮ್ ದಾಳಿಯಂತಹ ರಾಷ್ಟಿçÃಯ ಭದ್ರತೆಯ ವಿಷಯದಲ್ಲಿ ಸಚಿವರು ಅಸಂವೇದನಾಶೀಲ ಹೇಳಿಕೆ ನೀಡಿದ್ದಾರೆ. ಶಾಸಕರು ಸೈನಿಕರಿಗೆ ಅಪಮಾನ ಮಾಡುವ ಮೂಲಕ ದೇಶದ್ರೋಹದ ಪರಮಾವಧಿ ತಲುಪಿದ್ದಾರೆ. ಪಾಕಿಸ್ತಾನದಲ್ಲಿ ಸಿದ್ದರಾಮಯ್ಯ ‘ವಝೀರ್-ಏ-ಆಲ’ ಎಂದೇ ಫೇಮಸ್ ಆಗಿದ್ದಾರೆ ಎಂದು ವ್ಯಂಗ್ಯವಾಗಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಖಜಾಂಚಿ ಶೋಭನ್ ಬಾಬು, ನಗರಾಧ್ಯಕ್ಷ ಯೋಗೀಶ್, ಮಂಜು ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page