ಗಾಂಧಿಧಾಮ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮತಪೆಟ್ಟಿಗೆ ತಿರುಚಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುಜರಾತ್ನಲ್ಲಿ ನಡೆದಿದೆ.
12,261 ಮತಗಳ ಅಂತರದಿಂದ ಸೋಲುವುದು ಖಚಿತವಾದಂತೆ ಗಾಂಧಿಧಾಮ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲಂಕಿ, ಕೆಲವೊಂದು ಮತ ಪೆಟ್ಟಿಗೆಗಳನ್ನು ಸರಿಯಾಗಿ ಸೀಲ್ ಮಾಡಿರಲಿಲ್ಲ ಎಂದು ದೂರಿ ಕುತ್ತಿಗೆಗೆ ಕೇಸರಿ ಸಾಲನ್ನು ಗಟ್ಟಿಯಾಗಿ ಸುತ್ತಿ ಉರುಳು ಹಾಕಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಅವರ ಜೊತೆ ಇದ್ದವರು ಅವರನ್ನು ತಡೆದಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ.
182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್ನಲ್ಲಿ ಬಿಜೆಪಿ 157 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿದೆ. ಇಲ್ಲಿ ಕಾಂಗ್ರೆಸ್ 16 ಸೀಟು ಗಳಿಸಿದ್ದರೆ, ಎಎಪಿ ಐದು ಹಾಗೂ ಸ್ವತಂತ್ರ ಅಭ್ಯರ್ಥಿಗಳು ನಾಲ್ಕು ಸೀಟುಗಳನ್ನು ಗಳಿಸಿದ್ದಾರೆ.