Friday, June 20, 2025

ಸತ್ಯ | ನ್ಯಾಯ |ಧರ್ಮ

NEP ರದ್ದುಗೊಳಿಸುತ್ತೇವೆ ಎಂದ ಕಾಂಗ್ರೆಸ್‌ ನಾಯಕರಿಗೆ: ಬಿಜೆಪಿ ವಿರೋಧ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ರದ್ದುಗೊಳಿಸುತ್ತೇವೆ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

ನಾಗಮಂಗಲ ತಾಲೂಕಿನ ಅಂಚೆಭುವನಹಳ್ಳಿಯಲ್ಲಿ ಶುಕ್ರವಾರ ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶಿಕ್ಷಣ ತಜ್ಞರು ಹಾಗು ಶಾಲಾ ಮಾಲೀಕರ ಜತೆ ಸಂವಾದ ನಡೆಸಿದ ನಂತರ, ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ನಾಯಕರುಗಳು ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಎಜ್ಯುಕೇಶನ್‌ ಎಮರ್ಜೆನ್ಸಿ ಸೃಷ್ಠಿಯಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎನ್‌ಇಪಿ ಯನ್ನು ಕಿತ್ತು ಹಾಕುತ್ತೇವೆ ಎಂದು ಹೇಳಿದ್ದರು.

ಈ ಹೇಳಿಕೆ ಕುರಿತು ರಾಜ್ಯ ಬಿಜೆಪಿ ಘಟಕ ಟ್ವೀಟ್‌ ಮಾಡಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 370ನೇ ವಿಧಿ ಮರುಸ್ಥಾಪನೆ, ಎನ್‌ಇಪಿ, ಮತಾಂತರ ನಿಯಂತ್ರಣ ಕಾಯ್ದೆ, ಗೋಹತ್ಯೆ ನಿಷೇಧ ಕಾನೂನು ಸೇರಿದಂತೆ ದೇಶದ ಪರವಾಗಿರುವ ನಿರ್ಧಾರಗಳನ್ನು ರದ್ದುಗೊಳಿಸುವ ವಾಗ್ದಾನ ನೀಡುತ್ತಿದೆ. ಮತಾಂಧರ ಓಲೈಕೆಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವೇ ಎಂದು ಟೀಕಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page