Home ದೇಶ ಅಮೃತಪಾಲ್ ಸಿಂಗ್ ಕುರಿತು ಚನ್ನಿ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್

ಅಮೃತಪಾಲ್ ಸಿಂಗ್ ಕುರಿತು ಚನ್ನಿ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್

0
Congress President Mallikarjun Kharge with party leader Rahul Gandhi during the extended Congress Working Committee meeting, in New Delhi on June 8, 2024 | PTI

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯ ವೇಳೆ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಸ್ವತಂತ್ರ ಸಂಸದ ಅಮೃತಪಾಲ್ ಸಿಂಗ್ ಕುರಿತು ಕಾಂಗ್ರೆಸ್ ಸಂಸದ ಚರಣ್‌ಜಿತ್ ಸಿಂಗ್ ಚನ್ನಿ ಹೇಳಿಕೆಯಿಂದ ಪಕ್ಷವು ದೂರ ಉಳಿದಿದೆ.

ಚನ್ನಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಆದರೆ, ಚನ್ನಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿಲ್ಲ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಅಮೃತಪಾಲ್ ಕುರಿತು ಚನ್ನಿ ನೀಡಿದ ಹೇಳಿಕೆಗೆ ಹಲವು ಕಾಂಗ್ರೆಸ್ ಸಂಸದರು ಕೋಪಗೊಂಡಿದ್ದಾರೆ. ಹೀಗಾಗಿ ಚನ್ನಿ ಹೇಳಿಕೆಯಿಂದ ಪಕ್ಷ ಅಂತರ ಕಾಯ್ದುಕೊಂಡಿದೆ.

ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯ ವೇಳೆ, ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರು ಖಲಿಸ್ತಾನ್ ಪರ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಸ್ವತಂತ್ರ ಸಂಸದ ಅಮೃತಪಾಲ್ ಸಿಂಗ್ ಅವರನ್ನು ಬೆಂಬಲಿಸಿ ಸದನದಲ್ಲಿ ಹೇಳಿಕೆ ನೀಡಿದ್ದರು. ಇದರಲ್ಲಿ ಚರಣ್ಜಿತ್ ಸಿಂಗ್ ಚನ್ನಿ, ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದ ಅಮೃತಪಾಲ್ ಸಿಂಗ್ ಅವರನ್ನು ಉಲ್ಲೇಖಿಸಿ, ‘ನಾವು ಪ್ರತಿದಿನ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತೇವೆ, ಆದರೆ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯ ಬಗ್ಗೆ ಯಾರು ಮಾತನಾಡುತ್ತಾರೆ?” ಎಂದು ಕೇಳಿದ್ದರು.

ಈ ಸಂದರ್ಭದಲ್ಲಿ ಸಂಸದ ಚನ್ನಿ ಅಮೃತಪಾಲ್ ಸಿಂಗ್ ಅವರನ್ನು ಪ್ರಸ್ತಾಪಿಸಿದ್ದರು

ಪಂಜಾಬ್‌ನಲ್ಲಿ 20 ಲಕ್ಷ ಜನರಿಂದ ಸಂಸದರಾಗಿ ಆಯ್ಕೆಯಾದ ವ್ಯಕ್ತಿಯನ್ನು (ಅಮೃತಪಾಲ್ ಸಿಂಗ್) ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿಗೆ ಹಾಕಿರುವುದು ಕೂಡ ಒಂದು ರೀತಿಯ ತುರ್ತು ಪರಿಸ್ಥಿತಿ ಎಂದು ಕಾಂಗ್ರೆಸ್ ಸಂಸದ ಚರಂಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಇದರಿಂದಾಗಿ ಅವರು ತಮ್ಮ ಕ್ಷೇತ್ರದ ಜನರ ಅಭಿಪ್ರಾಯಗಳನ್ನು ಸದನದಲ್ಲಿ ಮಂಡಿಸಲು ಸಾಧ್ಯವಾಗುತ್ತಿಲ್ಲ. ಇದೂ ಕೂಡ ತುರ್ತು ಪರಿಸ್ಥಿತಿಯಲ್ಲವೆ ಎಂದು ಅವರು ಪ್ರಶ್ನಿಸಿದ್ದಾರೆ.

ರವನೀತ್ ಸಿಂಗ್ ಬಿಟ್ಟು ಮಾಜಿ ಸಿಎಂ ಚನ್ನಿ ವಾಗ್ವಾದ

ಗುರುವಾರ (ಜುಲೈ 25) ಲೋಕಸಭೆಯಲ್ಲಿ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯ ವೇಳೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಮತ್ತು ಕಾಂಗ್ರೆಸ್ ಸಂಸದ ಚರಣ್‌ಜಿತ್ ಸಿಂಗ್ ಚನ್ನಿ ನಡುವೆ ಸದನದಲ್ಲಿ ತೀವ್ರ ವಾಗ್ವಾದ ನಡೆಯಿತು. ನಂತರ ಗದ್ದಲ ಹೆಚ್ಚಾದ ಕಾರಣ ಸದನದ ಕಲಾಪವನ್ನು ಸುಮಾರು 35 ನಿಮಿಷಗಳ ಕಾಲ ಮುಂದೂಡಲಾಯಿತು.

You cannot copy content of this page

Exit mobile version