ಆಂಧ್ರಪ್ರದೇಶ: ರಾಜ್ಯದಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಶ್ರೀಕಾಕುಳಂ ಜಿಲ್ಲೆಯಲ್ಲಿನ ಮನೆಗಳು, ರಸ್ತೆಗಳು ಜಲಾವೃತಗೊಂಡಿವೆ.

ಭಾರಿ ಮಳೆಯಿಂದಾಗಿ ಶ್ರೀಕಾಕುಳಂ ಜಿಲ್ಲೆಯಲ್ಲಿರುವ ನಾಗಾವಳಿ ನದಿ ನೀರು ಉಕ್ಕಿಹರಿಯುತ್ತಿದ್ದು, ನೀರಿನ ರಭಸಕ್ಕೆ ಸರ್ಕಾರಿ ಮತ್ತು ಖಾಸಗಿ ಆಸ್ತಿಗಳು ಕೊಚ್ಚಿಹೋಗಿವೆ. ಈ ಕಾರಣ 100ಕ್ಕೂ ಎಕರೆಗೂ ಹೆಚ್ಚು ಗೋಡಂಬಿ ಬೆಳೆ ನಾಶವಾಗಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು, ಮಳೆಯಿಂದಾಗಿ ರೈತರು ಕಣ್ಣೀರಿಟ್ಟಿದ್ದಾರೆ.