Thursday, June 19, 2025

ಸತ್ಯ | ನ್ಯಾಯ |ಧರ್ಮ

ಕುಕ್ಕರ್ ಬಾಂಬ್ ಸ್ಫೋಟ: ಆರೋಪಿ ವಿಚಾರಣೆಯೇ ಆರಂಭವಾಗದಿದ್ದರೂ ವದಂತಿ ಹರಡಿದ ಮಾಧ್ಯಮಗಳು

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೀವ್ರ ಸ್ವರೂಪದ ಆರೋಪಿ, ಶಂಕಿತ ಭಯೋತ್ಪಾದಕ ಶಾರಿಕ್ ವಿಚಾರಣೆ ನಡೆದಿದ್ದರೂ, ಮಾಧ್ಯಮಗಳಲ್ಲಿ ಹಲವು ಬಗೆಯ ವದಂತಿಗಳು ಹರಡಿರುವುದು ಬೆಳಕಿಗೆ ಬಂದಿದೆ.

ಆರೋಪಿ ಶಾರಿಕ್ ಮಂಗಳೂರು ಅಲ್ಲದೆ, ಹಲವು ಕಡೆ ಬಾಂಬ್ ಸ್ಫೋಟ ನಡೆಸಲು ಸಂಚು ನಡೆಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಗಾಯಾಳುವಾಗಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಕೀರ್ ಅವರನ್ನು ಈವರೆಗೆ ಪೊಲೀಸರು ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ.

ಈ ವಿಷಯವನ್ನು ಸ್ವತಃ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದ್ದು, ಶಾರೀಕ್ ವಿಚಾರಣೆ ಇನ್ನೂ ಸಾಧ್ಯವಾಗಿಲ್ಲ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ವದಂತಿಗಳನ್ನು ಹರಡಬೇಡಿ ಎಂದು ಮಾಧ್ಯಮಗಳಿಗೆ ಸೂಚಿಸಿದ್ದಾರೆ.

ಶಾರೀಕ್ ಪಡೆಯುತ್ತಿರುವ ಆಸ್ಪತ್ರೆಗೆ ಬಿಗಿಭದ್ರತೆ ಒದಗಿಸಲಾಗಿದೆ ಚಿಕಿತ್ಸೆ, ವೈದ್ಯರು ಮೂರು ಪಾಳಿಗಳಲ್ಲಿ ಭದ್ರತೆ ನೀಡುತ್ತಿದ್ದಾರೆ. ಆರೋಪಿಯನ್ನು ಗುರುತಿಸುವ ಸಲುವಾಗಿ ಆತನ ಪೋಷಕರನ್ನು ಒಮ್ಮೆ ಮಾತ್ರ ಆಸ್ಪತ್ರೆಗೆ ಸೇರಿಸಲಾಯಿತು. ಅದನ್ನು ಹೊಂದಿಲ್ಲದರೆ ಯಾರಿಗೂ ಸಹ ವಸತಿ ಪ್ರವೇಶಿಸಲು ಬಿಟ್ಟಿಲ್ಲ ಎಂದು ಶಶಿಕುಮಾರ್ ಹೇಳಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಘಟನೆ ನಡೆದಾಗಿನಿಂದಲೂ ಕೆಲವು ದೃಶ್ಯಮಾಧ್ಯಮಗಳು ಹಲವಾರು ಬಗೆಯ ಕಪೋಲಕಲ್ಪಿತ ವರದಿಗಳನ್ನು ಪ್ರಸಾರ ಮಾಡುತ್ತಿದ್ದು, ಪ್ರಕರಣವನ್ನು ಅತಿರಂಜಿತಗೊಳಿಸಲು ಪ್ರಯತ್ನಿಸುತ್ತಲೇ ಇವೆ.

ಆರೋಪಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಾಧಿಕಾರಿಗಳು ಹೇಳಿಕೆ ನೀಡುವವರೆಗೆ ಪೊಲೀಸರು ಆತನನ್ನು ವಿಚಾರಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇದುವರೆಗೆ ಆತನ ವಿಚಾರಣೆ ನಡೆದಿಲ್ಲ. ಹೀಗಿರುವಾಗ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸುವ ಔಚಿತ್ಯವೇನು ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page