ಬೆಂಗಳೂರು : ಕೆಲ ತಿಂಗಳ ಹಿಂದೆ ಮೆಟ್ರೋ ದರ ಏರಿಕೆ ವಿಚಾರವು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ನಿಯಮ ಬಾಹಿರವಾಗಿ ಶೇ.71ರಷ್ಟು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ದರ ಏರಿಕೆಗೆ ರಚನೆಯಾಗಿದ್ದ ಸಮಿತಿ ಎಲ್ಲ ಆಯಾಮಗಳಲ್ಲಿ ಅಧ್ಯಯನ ಮಾಡಿ ದರ ಏರಿಕೆಗೆ ಶಿಫಾರಸು ಮಾಡಿತ್ತು. ತಜ್ಞರು ಪರಿಶೀಲಿಸಿ ಆದೇಶಿಸಿರುವ ಅಂಶಗಳನ್ನು ಕೋರ್ಟ್ ಮರುಪರಿಶೀಲನೆಗೆ ಅವಕಾಶವಿಲ್ಲ. ಶಾಸನಬದ್ಧ ಉಲ್ಲಂಘನೆಯನ್ನು ಹೊರತುಪಡಿಸಿ ಇತರೆ ನಿರ್ಧಾರದ ವಿಚಾರಗಳಲ್ಲಿ ಕೋರ್ಟ್ ಮಧ್ಯಪ್ರವೇಶಿಸಲ್ಲ, ಅದಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.
ಬೆಂಗಳೂರಿನ ಚೈತನ್ಯ ಸುಬ್ರಹ್ಮಣ್ಯ, ಚೇತನ್ ಗಾಣಿಗೇರ ಮತ್ತು ಸನತ್ ಕುಮಾರ್ ಶೆಟ್ಟಿ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ಮುಖ್ಯ ನ್ಯಾ.ಎನ್.ವಿ ಅಂಜಾರಿಯಾ & ನ್ಯಾ.ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿ ವಜಾಗೊಳಿಸಿದೆ.